Homeಚಳವಳಿಪಂಜಾಬ್: 1500 ಕ್ಕೂ ಹೆಚ್ಚು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ ರೈತ ಹೋರಾಟಗಾರರು

ಪಂಜಾಬ್: 1500 ಕ್ಕೂ ಹೆಚ್ಚು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ ರೈತ ಹೋರಾಟಗಾರರು

"ಭಾನುವಾರದವರೆಗೆ 1,411 ಟೆಲಿಕಾಂ ಟವರ್‌ಗಳಿಗೆ ಹಾನಿಯಾಗಿದೆ. ಸೋಮವಾರ ಈ ಸಂಖ್ಯೆ 1,500ನ್ನು ದಾಟಿದೆ. ಜಲಂಧರ್‌ನಲ್ಲಿ ಜಿಯೊ ಸಂಸ್ಥೆಗೆ ಸೇರಿದ ಕೇಬಲ್‌ಗಳ ಮೂಟೆಗೆ ಬೆಂಕಿ ಹಚ್ಚಲಾಗಿದೆ"

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಪಂಜಾಬ್‌ನಲ್ಲಿ 1,500ಕ್ಕೂ ಅಧಿಕ ಜಿಯೋ ಟೆಲಿಕಾಂ ಟವರ್‌ಗಳಿಗೆ ಹಾನಿ ಮಾಡಿದ್ದು, ಇದರಿಂದ ಕೆಲವು ಪ್ರದೇಶಗಳಲ್ಲಿ ಸಂಪರ್ಕ ಸೇವೆಗೆ ತೊಡಕಾಗಿದೆ. ಈ ಮೂಲಕ ರೈತರು ತಮ್ಮ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತಿದ್ದಾರೆ.

ಟೆಲಿಕಾಂ ಸೇವೆಯ ಟವರ್‌ಗಳಿಗೆ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡುವುದರ ಮೂಲಕ ಮುಖೇಶ್ ಅಂಬಾನಿಯವರ ಜಿಯೋ ಸಂಸ್ಥೆ ಹಾಗೂ ಉದ್ಯಮಿ ಗೌತಮ್ ಅದಾನಿಗೆ ಸೇರಿದ ಸಂಸ್ಥೆಗಳ ಮೂಲಸೌಕರ್ಯಕ್ಕೆ ತೊಂದರೆಯುಂಟುಮಾಡಲಾಗಿದೆ.

ಭಾನುವಾರದವರೆಗೆ 1,411 ಟೆಲಿಕಾಂ ಟವರ್‌ಗಳಿಗೆ ಹಾನಿಯಾಗಿದೆ. ಸೋಮವಾರ ಈ ಸಂಖ್ಯೆ 1,500ನ್ನು ದಾಟಿದೆ. ಜಲಂಧರ್‌ನಲ್ಲಿ ಜಿಯೊ ಸಂಸ್ಥೆಗೆ ಸೇರಿದ ಕೇಬಲ್‌ಗಳ ಮೂಟೆಗೆ ಬೆಂಕಿ ಹಚ್ಚಲಾಗಿದೆ. ಪಂಜಾಬ್‌ನಲ್ಲಿ ಜಿಯೋ ಮೊಬೈಲ್ ಸಂಸ್ಥೆಯ 9,000ಕ್ಕೂ ಅಧಿಕ ಟವರ್‌ಗಳಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: TRP ಹಗರಣ: ಅರ್ನಾಬ್ ಲಕ್ಷಗಟ್ಟಲೆ ಲಂಚ ನೀಡಿದ್ದರು ಎಂದು ಒಪ್ಪಿಕೊಂಡ ಬಾರ್ಕ್ ಮಾಜಿ ಮುಖ್ಯಸ್ಥ

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು, ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡಿದ್ದಾರೆ. ಇದು ದೇಶಾದ್ಯಂತ ವ್ಯಾಪಕ ಮೆಚ್ಚುಗೆ ಗಳಿಸಿ ಜಿಯೋ ಕಂಪನಿಗೆ ಹೊಡೆತ ಕೊಟ್ಟಿತ್ತು.

ಸೋಮವಾರ (ಡಿ.28) ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಆಂದೋಲನ ಆರಂಭವಾಗಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್‌ನಿಂದ ಏರ್‌ಟೆಲ್‌ ಸಿಮ್‌ಗೆ ಪೋರ್ಟ್ ಆಗಿದ್ದಾರೆ.

ಇದನ್ನೂ ಓದಿ: ನಾನು ದನದ ಮಾಂಸ ತಿನ್ನುತ್ತೇನೆ, ನೀನು ಯಾವನಯ್ಯ ನನ್ನನ್ನು ಕೇಳೋಕೆ: ಸಿದ್ದರಾಮಯ್ಯ

ಈಗಾಗಲೇ ಕಳೆದೊಂದು ತಿಂಗಳಿನಿಂದ #BoycottJio ಅಭಿಯಾನ ನಡೆಯುತ್ತಿದ್ದು ಲಕ್ಷಾಂತರ ರೈತರು-ಯುವಜನರು ಜಿಯೋದಿಂದ ಹೊರಬಂದಿದ್ದಾರೆ. ಡಿಸೆಂಬರ್ ಎರಡನೇ ವಾರದಲ್ಲಿ ಬರೋಬ್ಬರಿ 26 ಲಕ್ಷ ಜನ ಜಿಯೋ ಸಿಮ್‌ನಿಂದ ಪೋರ್ಟ್ ಆಗಿದ್ದರು. ಹಾಗಾಗಿ ಜಿಯೋ ಕಂಪನಿ ಏರ್‌ಟೆಲ್ ಮತ್ತು ವೋಡೋಪೋನ್ ಐಡಿಯಾ ವಿರುದ್ಧ ಟ್ರಾಯ್ (Telecom Regulator Authority of India) ಬಳಿ ದೂರು ನೀಡಿ, ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ‘ಬಾಯ್ಕಾಟ್ ಜಿಯೋ’ ಹಿಂದೆ ಈ ಕಂಪನಿಗಳ ಪಿತೂರಿಯಿದೆ ಎಂದು ಆರೋಪಿಸಿತ್ತು.

ಈಗ ಹೊರಬಿದ್ದಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಸಕ್ರಿಯ ಬಳಕೆದಾರರಿದ್ದರೆ ಜಿಯೋಗೆ 33.2% ಸಕ್ರಿಯ ಬಳಕೆದಾರರಿದ್ದಾರೆ. ಅಲ್ಲದೇ ನಿರಂತರವಾಗಿ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್‌ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು ಜಿಯೋವನ್ನು ಆತಂಕಕ್ಕೆ ದೂಡಿದೆ. ಇಂತಹ ಸಂದರ್ಭದಲ್ಲಿ ಮತ್ತಷ್ಟು ಜನರು ಜಿಯೋದಿಂದ ಪೋರ್ಟ್ ಆಗಲು ಸಿದ್ದರಾಗಿದ್ದಾರೆ.


ಇದನ್ನೂ ಓದಿ: ಕಳಚಿಕೊಳ್ಳುತ್ತಿದೆ NDA ನ ಒಂದೊಂದೇ ಕೊಂಡಿ – BJP ಗೆ ಆಘಾತ ನೀಡಿದ ತಮಿಳುನಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...