Homeಚಳವಳಿಸರ್ಕಾರಕ್ಕೆ 15 ದಿನ ಗಡುವು ಕೊಟ್ಟು ’ರೈಲ್ ರೋಕೋ’ ವಾಪಾಸ್ ಪಡೆದ ಪಂಜಾಬ್ ರೈತ ಸಂಘಟನೆಗಳು!

ಸರ್ಕಾರಕ್ಕೆ 15 ದಿನ ಗಡುವು ಕೊಟ್ಟು ’ರೈಲ್ ರೋಕೋ’ ವಾಪಾಸ್ ಪಡೆದ ಪಂಜಾಬ್ ರೈತ ಸಂಘಟನೆಗಳು!

ಮುಂದಿನ 15 ದಿನಗಳಲ್ಲಿ ರೈತರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ವಿಫಲವಾದರೆ ಮತ್ತೆ ಪ್ರತಿಭಟನೆ ಪುನರಾರಂಭಿಸುವ ಬಗ್ಗೆ ಕಿಸಾನ್ ಯೂನಿಯನ್ಸ್ ಎಚ್ಚರಿಸಿದೆ.

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಆದರೆ ಪಂಜಾಬ್‌ನಲ್ಲಿ ತೀವ್ರತರಹದ ಪ್ರತಿಭಟನೆ ನಡೆಯುತ್ತಿದ್ದು, ರೈತ ಸಂಘಗಳ ನಿರಂತರ ’ರೈಲ್ ರೋಕೋ’ ಚಳುವಳಿ ಪಂಜಾಬ್ ಆರ್ಥಿಕತೆಗೆ ಪೆಟ್ಟು ನೀಡಿತ್ತು. ಇಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರೈತ ಸಂಘಟನೆಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ನವೆಂಬರ್‌ 23 ರಿಂದ ರೈಲು ಸಂಚಾರ ಆರಂಭವಾಗಲಿದೆ.

ಕಿಸಾನ್ ಯೂನಿಯನ್ಸ್ ಜೊತೆ ನಡೆದ ಸಭೆಯಲ್ಲಿ ಸರ್ಕಾರದ ಮನವಿಗೆ ಒಪ್ಪಿಗೆ ನೀಡಿದ ಸಂಘಟನೆ, ನವೆಂಬರ್ 23 ಸೋಮವಾರದಿಂದ ರೈಲ್ವೆ ದಿಗ್ಬಂಧನವನ್ನು ಸಂಪೂರ್ಣವಾಗಿ ತೆಗೆದುಹಾಕುವ ಘೋಷಣೆ ಮಾಡಿದೆ. ರಾಜ್ಯದಲ್ಲಿ ಎರಡು ತಿಂಗಳ ನಂತರ ಸರಕು ಮತ್ತು ಪ್ರಯಾಣಿಕ ರೈಲು ಸೇವೆಗಳೆರಡೂ ಆರಂಭವಾಗಲಿವೆ.

ಆದರೆ, ಕೃಷಿ ಸಂಘಟನೆ ರಾಜ್ಯ ಸರ್ಕಾರಕ್ಕೆ ನೀಡಿರುವುದು ಕೇವಲ 15 ದಿನಗಳು ಮಾತ್ರ. ಮುಂದಿನ 15 ದಿನಗಳಲ್ಲಿ ರೈತರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ವಿಫಲವಾದರೆ ಮತ್ತೆ ಪ್ರತಿಭಟನೆ ಪುನರಾರಂಭಿಸುವ ಬಗ್ಗೆ ಕಿಸಾನ್ ಯೂನಿಯನ್ಸ್ ಅಧ್ಯಕ್ಷ ರಾಜೇವಾಲ್ ಎಚ್ಚರಿಸಿದ್ದಾರೆ.

ಈ ವಿಷಯವನ್ನು ರಾಜಕೀಯಗೊಳಿಸುವ ಬದಲು ಕೇಂದ್ರ ಕೃಷಿ ಮಸೂದೆಗಳ ವಿರುದ್ಧದ ಹೋರಾಟದಲ್ಲಿ ರೈತ ಸಂಘಟನೆಗಳನ್ನು ಬೆಂಬಲಿಸಲು ಪಂಜಾಬ್‌ನ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗೂಡಿರಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

ಇದನ್ನೂ ಓದಿ: ಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ರೈಲು ಸಂಚಾರಕ್ಕೆ ಅನುಮತಿ ನೀಡಿ, ರೈಲ್ ರೋಕೋ ಪ್ರತಿಭಟನೆ ವಾಪಸ್ ಪಡೆದ ರೈತರ ನಿರ್ಧಾರವನ್ನು ಸಿಎಂ ಅಮರಿಂದರ್ ಸಿಂಗ್ ಅವರು ಟ್ವೀಟ್‌ನಲ್ಲಿ ಸ್ವಾಗತಿಸಿದ್ದಾರೆ.

ಮನವಿಯನ್ನು ಅಂಗೀಕರಿಸಿದ್ದಕ್ಕಾಗಿ ಕಿಸಾನ್ ಒಕ್ಕೂಟಗಳಿಗೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ, ರೈತ ಮುಖಂಡರಿಗೆ ಶೀಘ್ರದಲ್ಲೇ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡುವುದಾಗಿ ಭರವಸೆ ನೀಡಿದರು.

“ನಮ್ಮ ದೃಷ್ಟಿಕೋನ ಮತ್ತು ಕೇಂದ್ರದ ಕೃಷಿ ಕಾನೂನುಗಳು ಪಂಜಾಬ್ ಅನ್ನು ಹೇಗೆ ಹಾಳುಮಾಡುತ್ತವೆ ಎಂಬುದನ್ನು ಅರ್ಥಮಾಡಿಸಲು ನಾವು ಒಟ್ಟಾಗಿ ಕೇಂದ್ರದ ಮೇಲೆ ಒತ್ತಡ ಹೇರೋಣ” ಎಂದು ಕ್ಯಾಪ್ಟನ್ ಅಮರಿಮದರ್ ಸಿಂಗ್ ಹೇಳಿದ್ದಾರೆ. “ರೈತ ಹೋರಾಟದಲ್ಲಿ ರೈತರೊಂದಿಗೆ ನಾವಿದ್ದೇವೆ, ನಮ್ಮ ದೇಹದ ರಕ್ತನಾಳಗಳಲ್ಲಿ ಹರಿಯುತ್ತಿರುವುದು ರೈತರ ರಕ್ತ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಕಬ್ಬಿನ ಬೆಲೆ ಏರಿಕೆ ಮತ್ತು ಬಾಕಿ ತೆರವು, ಕೃಷಿ ತ್ಯಾಜ್ಯ ಸುಡುವ ಪ್ರಕರಣಗಳಲ್ಲಿ ರೈತರ ಮೇಲೆ ದಾಖಲಾದ ಎಫ್‌ಐಆರ್‌ಗಳನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ಇತರ ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಕ್ಯಾಪ್ಟನ್ ಅಮರಿಂದರ್ ರೈತ ಪ್ರತಿನಿಧಿಗಳಿಗೆ ಭರವಸೆ ನೀಡಿದರು. ಮುಂದಿನ ಒಂದು ವಾರದೊಳಗೆ ಈ ವಿಷಯಗಳ ಕುರಿತು ಅವರೊಂದಿಗೆ ಮಾತುಕತೆ ನಡೆಸಲಿದ್ದು, ಈ ಬಗ್ಗೆ ಚರ್ಚಿಸಲು ಅಧಿಕಾರಿಗಳ ಸಮಿತಿಯನ್ನೂ ರಚಿಸುವುದಾಗಿ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ಕುರಿತು ಚರ್ಚೆಗೆ ನಿರಾಕರಣೆ: ರಾಷ್ಟ್ರಪತಿಗಳ ವಿರುದ್ಧ ಪ್ರತಿಭಟನೆಗೆ ಮುಂದಾದ ಪಂಜಾಬ್ ಸಿಎಂ ಅಮರಿಂದರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...