Homeಚಳವಳಿಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

ಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

ಮೋದಿ ಸರ್ಕಾರವು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕಾನೂನುಗಳನ್ನು ಜಾರಿಗೊಳಿಸಿದ್ದರಿಂದ, ಅಕ್ಟೋಬರ್ 1 ರಿಂದ ಬಹುರಾಷ್ಟ್ರೀಯ ಕಂಪನಿಗಳು ನಡೆಸುತ್ತಿರುವ ಎಲ್ಲಾ ವ್ಯವಹಾರಗಳನ್ನು ಅನಿರ್ದಿಷ್ಟಾವಧಿಗೆ ಘೆರಾವ್ ಮಾಡಲು ನಾವು ನಿರ್ಧರಿಸಿದ್ದೇವೆ ಎಂದು ಸುಖದೇವ್ ಸಿಂಗ್ ಕೊಕ್ರಿಕಲನ್ ಹೇಳಿದರು.

- Advertisement -
- Advertisement -

ಕೃಷಿ ಮಸೂದೆಗಳ ವಿರುದ್ಧದ ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಜಾಬ್‌ನಲ್ಲಿರುವ ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಅಕ್ಟೋಬರ್ 2 ರಂದು ರೈತರು ಮುತ್ತಿಗೆ ಹಾಕಲಿದ್ದು, ಈ ಹೋರಾಟಕ್ಕೆ ರಾಹುಲ್ ಗಾಂಧಿ ಬೆಂಬಲ ನೀಡುವ ನಿರೀಕ್ಷೆಯಿದೆ.

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪ್ರಾರಂಭವಾಗಲಿರುವ ಅನಿರ್ದಿಷ್ಟ ರೈಲ್ ರೊಕೊದಲ್ಲಿ ಪಂಜಾಬಿನ ಸುಮಾರು 12,000 ಕ್ಕೂ ಹೆಚ್ಚು ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟಿಸಲಿದ್ದಾರೆ.

ಇದನ್ನೂ ಓದಿ: ಉತ್ತರದಾದ್ಯಂತ ಪ್ರಶ್ನೆ ಕೇಳುತ್ತಿರುವ ರೈತರು

ಮೂರು ವಿವಾದಾತ್ಮಕ ಕೃಷಿ ಮಸೂದೆಗಳು ಈಗ ರಾಷ್ಟ್ರಪತಿಗಳ ಅಂಕಿತದ ನಂತರ ಕಾನೂನುಗಳಾಗಿವೆ. ಹಾಗಾಗಿ, ‘ಘೆರಾವ್ ಕಾರ್ಪೊರೇಟ್ ವ್ಯವಹಾರಗಳು(Gherao Corporate Businesses)’ ಎಂಬ ಹೊಸ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ರಾಹುಲ್ ಗಾಂಧಿ ಅವರು ಕೃಷಿ ಶಾಸನಗಳ ಬಗ್ಗೆ ಕೇಂದ್ರವನ್ನು ಗುರಿಯಾಗಿಸಿಕೊಂಡಿದ್ದು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೈತರೊಂದಿಗೆ ಸಂವಹನ ನಡೆಸಿದ್ದಾರೆ. ಹೊಸ ಕಾನೂನುಗಳ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, 2 ಕೋಟಿ ರೈತರ ಸಹಿಯನ್ನು ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರಿಗೆ ಸಲ್ಲಿಸುವುದಾಗಿ ಘೋಷಿಸಿದೆ.

ಈ ರೈತ ವಿರೋಧಿ ಶಾಸನಗಳ ಸಮಗ್ರ ವಿರೋಧದ ಭಾಗವಾಗಿ, ಪಕ್ಷವು ಅಕ್ಟೋಬರ್ 2 ರಂದು ದೇಶದಾದ್ಯಂತದ ಪ್ರತಿ ವಿಧಾನಸಭೆ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಧರಣಿ ಮತ್ತು ಮೆರವಣಿಗೆಗಳನ್ನು ನಡೆಸುವ ಮೂಲಕ ‘ಕಿಸಾನ್-ಮಜ್ದೂರ್ ಬಚಾವೊ ದಿವಸ್’ ಆಚರಿಸಲಿದೆ.

ಇದನ್ನೂ ಓದಿ: ಮೋದಿ ವಿರುದ್ಧ ರೈತರು, ಯೋಧರ ಸ್ಪರ್ಧೆಯು ಜಡಗೊಂಡ ನೈತಿಕ ಪ್ರಜ್ಞೆಗೆ ಚಾಟಿ ಏಟು

ಫಿರೋಜ್‌ಪುರದಲ್ಲಿ ನಡೆದ ಬೃಹತ್ ಸಭೆಯಲ್ಲಿ, ಶಹೀದ್ ಭಗತ್ ಸಿಂಗ್ 113 ನೇ ಜನ್ಮ ದಿನಾಚರಣೆಯಂದು ಮತ್ತು ಭಗತ್ ಸಿಂಗ್ ಪೋಸ್ಟರ್ ಅನ್ನು ರೈಲ್ವೆ ಟ್ರ್ಯಾಕ್‌ನಲ್ಲಿ ನೇತುಹಾಕಲಾಗಿತ್ತು. ಸತ್ನಮ್ ಸಿಂಗ್ ಪನ್ನು ಬಿಕು (ಪನ್ನು ಗ್ರೂಪ್ ಅಧ್ಯಕ್ಷ), ಅಕ್ಟೋಬರ್ 2 ರವರೆಗೆ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಘೋಷಿಸಿದ್ದು, ಅಕ್ಟೋಬರ್ ತಿಂಗಳನ್ನು ಜಂಟಿ ಪ್ರತಿಭಟನೆಯಾಗಿ ಅರ್ಪಿಸಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಉಗ್ರಾಹನ್ ಗ್ರೂಪ್) ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೊಕ್ರಿಕಲನ್, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತಾ, “ಮೋದಿ ಸರ್ಕಾರವು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕಾನೂನುಗಳನ್ನು ಜಾರಿಗೊಳಿಸಿದ್ದರಿಂದ, ಅಕ್ಟೋಬರ್ 1 ರಿಂದ ಬಹುರಾಷ್ಟ್ರೀಯ ಕಂಪನಿಗಳು ನಡೆಸುತ್ತಿರುವ ಎಲ್ಲಾ ವ್ಯವಹಾರಗಳನ್ನು ಅನಿರ್ದಿಷ್ಟಾವಧಿಗೆ ಘೆರಾವ್ ಮಾಡಲು ನಾವು ನಿರ್ಧರಿಸಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

“ಮಂಗಳವಾರ, ನಮ್ಮ ರಾಜ್ಯ ಮಟ್ಟದ ಸಭೆಯಲ್ಲಿ, ರಾಜ್ಯದಲ್ಲಿ ಮುತ್ತಿಗೆ ಹಾಕಬೇಕಾದ 18 ರಿಂದ 20 ಬಿಂದುಗಳನ್ನು ಗುರುತಿಸಿದ ನಂತರ ನಾವು ಈ ಪ್ರತಿಭಟನೆಗಳಿಗೆ ಅಂತಿಮ ಆಕಾರವನ್ನು ನೀಡುತ್ತೇವೆ. ಪ್ರತಿಯೊಂದು ಪ್ರತಿಭಟನಾ ಸ್ಥಳವು 2,000 ದಿಂದ 15,000 ಪ್ರತಿಭಟನಾಕಾರರನ್ನು ಒಟ್ಟುಗೂಡಿಸುವ ನಿರೀಕ್ಷೆಯಿದೆ” ಎಂದು ಹೇಳಿದರು.

ಪಂಜಾಬ್ ಯೂತ್ ಕಾಂಗ್ರೆಸ್ ನಾಯಕರು ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಅನ್ನು ಸುಟ್ಟುಹಾಕಿದ್ದರಿಂದ ರೈತರ ಪ್ರತಿಭಟನೆ ರಾಷ್ಟ್ರ ರಾಜಧಾನಿಯನ್ನು ತಲುಪಿದೆ. ನಂತರ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ರಾಜ್ಯಾದ್ಯಂತ ಸಿಡಿದೆದ್ದ ರೈತರು: ಕರ್ನಾಟಕ ಬಂದ್ ಯಶಸ್ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...