Homeಚಳವಳಿಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

ಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

ಮೋದಿ ಸರ್ಕಾರವು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕಾನೂನುಗಳನ್ನು ಜಾರಿಗೊಳಿಸಿದ್ದರಿಂದ, ಅಕ್ಟೋಬರ್ 1 ರಿಂದ ಬಹುರಾಷ್ಟ್ರೀಯ ಕಂಪನಿಗಳು ನಡೆಸುತ್ತಿರುವ ಎಲ್ಲಾ ವ್ಯವಹಾರಗಳನ್ನು ಅನಿರ್ದಿಷ್ಟಾವಧಿಗೆ ಘೆರಾವ್ ಮಾಡಲು ನಾವು ನಿರ್ಧರಿಸಿದ್ದೇವೆ ಎಂದು ಸುಖದೇವ್ ಸಿಂಗ್ ಕೊಕ್ರಿಕಲನ್ ಹೇಳಿದರು.

- Advertisement -
- Advertisement -

ಕೃಷಿ ಮಸೂದೆಗಳ ವಿರುದ್ಧದ ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಜಾಬ್‌ನಲ್ಲಿರುವ ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಅಕ್ಟೋಬರ್ 2 ರಂದು ರೈತರು ಮುತ್ತಿಗೆ ಹಾಕಲಿದ್ದು, ಈ ಹೋರಾಟಕ್ಕೆ ರಾಹುಲ್ ಗಾಂಧಿ ಬೆಂಬಲ ನೀಡುವ ನಿರೀಕ್ಷೆಯಿದೆ.

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪ್ರಾರಂಭವಾಗಲಿರುವ ಅನಿರ್ದಿಷ್ಟ ರೈಲ್ ರೊಕೊದಲ್ಲಿ ಪಂಜಾಬಿನ ಸುಮಾರು 12,000 ಕ್ಕೂ ಹೆಚ್ಚು ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟಿಸಲಿದ್ದಾರೆ.

ಇದನ್ನೂ ಓದಿ: ಉತ್ತರದಾದ್ಯಂತ ಪ್ರಶ್ನೆ ಕೇಳುತ್ತಿರುವ ರೈತರು

ಮೂರು ವಿವಾದಾತ್ಮಕ ಕೃಷಿ ಮಸೂದೆಗಳು ಈಗ ರಾಷ್ಟ್ರಪತಿಗಳ ಅಂಕಿತದ ನಂತರ ಕಾನೂನುಗಳಾಗಿವೆ. ಹಾಗಾಗಿ, ‘ಘೆರಾವ್ ಕಾರ್ಪೊರೇಟ್ ವ್ಯವಹಾರಗಳು(Gherao Corporate Businesses)’ ಎಂಬ ಹೊಸ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ರಾಹುಲ್ ಗಾಂಧಿ ಅವರು ಕೃಷಿ ಶಾಸನಗಳ ಬಗ್ಗೆ ಕೇಂದ್ರವನ್ನು ಗುರಿಯಾಗಿಸಿಕೊಂಡಿದ್ದು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೈತರೊಂದಿಗೆ ಸಂವಹನ ನಡೆಸಿದ್ದಾರೆ. ಹೊಸ ಕಾನೂನುಗಳ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, 2 ಕೋಟಿ ರೈತರ ಸಹಿಯನ್ನು ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರಿಗೆ ಸಲ್ಲಿಸುವುದಾಗಿ ಘೋಷಿಸಿದೆ.

ಈ ರೈತ ವಿರೋಧಿ ಶಾಸನಗಳ ಸಮಗ್ರ ವಿರೋಧದ ಭಾಗವಾಗಿ, ಪಕ್ಷವು ಅಕ್ಟೋಬರ್ 2 ರಂದು ದೇಶದಾದ್ಯಂತದ ಪ್ರತಿ ವಿಧಾನಸಭೆ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಧರಣಿ ಮತ್ತು ಮೆರವಣಿಗೆಗಳನ್ನು ನಡೆಸುವ ಮೂಲಕ ‘ಕಿಸಾನ್-ಮಜ್ದೂರ್ ಬಚಾವೊ ದಿವಸ್’ ಆಚರಿಸಲಿದೆ.

ಇದನ್ನೂ ಓದಿ: ಮೋದಿ ವಿರುದ್ಧ ರೈತರು, ಯೋಧರ ಸ್ಪರ್ಧೆಯು ಜಡಗೊಂಡ ನೈತಿಕ ಪ್ರಜ್ಞೆಗೆ ಚಾಟಿ ಏಟು

ಫಿರೋಜ್‌ಪುರದಲ್ಲಿ ನಡೆದ ಬೃಹತ್ ಸಭೆಯಲ್ಲಿ, ಶಹೀದ್ ಭಗತ್ ಸಿಂಗ್ 113 ನೇ ಜನ್ಮ ದಿನಾಚರಣೆಯಂದು ಮತ್ತು ಭಗತ್ ಸಿಂಗ್ ಪೋಸ್ಟರ್ ಅನ್ನು ರೈಲ್ವೆ ಟ್ರ್ಯಾಕ್‌ನಲ್ಲಿ ನೇತುಹಾಕಲಾಗಿತ್ತು. ಸತ್ನಮ್ ಸಿಂಗ್ ಪನ್ನು ಬಿಕು (ಪನ್ನು ಗ್ರೂಪ್ ಅಧ್ಯಕ್ಷ), ಅಕ್ಟೋಬರ್ 2 ರವರೆಗೆ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಘೋಷಿಸಿದ್ದು, ಅಕ್ಟೋಬರ್ ತಿಂಗಳನ್ನು ಜಂಟಿ ಪ್ರತಿಭಟನೆಯಾಗಿ ಅರ್ಪಿಸಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಉಗ್ರಾಹನ್ ಗ್ರೂಪ್) ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೊಕ್ರಿಕಲನ್, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತಾ, “ಮೋದಿ ಸರ್ಕಾರವು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕಾನೂನುಗಳನ್ನು ಜಾರಿಗೊಳಿಸಿದ್ದರಿಂದ, ಅಕ್ಟೋಬರ್ 1 ರಿಂದ ಬಹುರಾಷ್ಟ್ರೀಯ ಕಂಪನಿಗಳು ನಡೆಸುತ್ತಿರುವ ಎಲ್ಲಾ ವ್ಯವಹಾರಗಳನ್ನು ಅನಿರ್ದಿಷ್ಟಾವಧಿಗೆ ಘೆರಾವ್ ಮಾಡಲು ನಾವು ನಿರ್ಧರಿಸಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

“ಮಂಗಳವಾರ, ನಮ್ಮ ರಾಜ್ಯ ಮಟ್ಟದ ಸಭೆಯಲ್ಲಿ, ರಾಜ್ಯದಲ್ಲಿ ಮುತ್ತಿಗೆ ಹಾಕಬೇಕಾದ 18 ರಿಂದ 20 ಬಿಂದುಗಳನ್ನು ಗುರುತಿಸಿದ ನಂತರ ನಾವು ಈ ಪ್ರತಿಭಟನೆಗಳಿಗೆ ಅಂತಿಮ ಆಕಾರವನ್ನು ನೀಡುತ್ತೇವೆ. ಪ್ರತಿಯೊಂದು ಪ್ರತಿಭಟನಾ ಸ್ಥಳವು 2,000 ದಿಂದ 15,000 ಪ್ರತಿಭಟನಾಕಾರರನ್ನು ಒಟ್ಟುಗೂಡಿಸುವ ನಿರೀಕ್ಷೆಯಿದೆ” ಎಂದು ಹೇಳಿದರು.

ಪಂಜಾಬ್ ಯೂತ್ ಕಾಂಗ್ರೆಸ್ ನಾಯಕರು ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಅನ್ನು ಸುಟ್ಟುಹಾಕಿದ್ದರಿಂದ ರೈತರ ಪ್ರತಿಭಟನೆ ರಾಷ್ಟ್ರ ರಾಜಧಾನಿಯನ್ನು ತಲುಪಿದೆ. ನಂತರ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ರಾಜ್ಯಾದ್ಯಂತ ಸಿಡಿದೆದ್ದ ರೈತರು: ಕರ್ನಾಟಕ ಬಂದ್ ಯಶಸ್ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...