Homeಚಳವಳಿಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

ಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

ಮೋದಿ ಸರ್ಕಾರವು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕಾನೂನುಗಳನ್ನು ಜಾರಿಗೊಳಿಸಿದ್ದರಿಂದ, ಅಕ್ಟೋಬರ್ 1 ರಿಂದ ಬಹುರಾಷ್ಟ್ರೀಯ ಕಂಪನಿಗಳು ನಡೆಸುತ್ತಿರುವ ಎಲ್ಲಾ ವ್ಯವಹಾರಗಳನ್ನು ಅನಿರ್ದಿಷ್ಟಾವಧಿಗೆ ಘೆರಾವ್ ಮಾಡಲು ನಾವು ನಿರ್ಧರಿಸಿದ್ದೇವೆ ಎಂದು ಸುಖದೇವ್ ಸಿಂಗ್ ಕೊಕ್ರಿಕಲನ್ ಹೇಳಿದರು.

- Advertisement -
- Advertisement -

ಕೃಷಿ ಮಸೂದೆಗಳ ವಿರುದ್ಧದ ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಜಾಬ್‌ನಲ್ಲಿರುವ ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಅಕ್ಟೋಬರ್ 2 ರಂದು ರೈತರು ಮುತ್ತಿಗೆ ಹಾಕಲಿದ್ದು, ಈ ಹೋರಾಟಕ್ಕೆ ರಾಹುಲ್ ಗಾಂಧಿ ಬೆಂಬಲ ನೀಡುವ ನಿರೀಕ್ಷೆಯಿದೆ.

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪ್ರಾರಂಭವಾಗಲಿರುವ ಅನಿರ್ದಿಷ್ಟ ರೈಲ್ ರೊಕೊದಲ್ಲಿ ಪಂಜಾಬಿನ ಸುಮಾರು 12,000 ಕ್ಕೂ ಹೆಚ್ಚು ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟಿಸಲಿದ್ದಾರೆ.

ಇದನ್ನೂ ಓದಿ: ಉತ್ತರದಾದ್ಯಂತ ಪ್ರಶ್ನೆ ಕೇಳುತ್ತಿರುವ ರೈತರು

ಮೂರು ವಿವಾದಾತ್ಮಕ ಕೃಷಿ ಮಸೂದೆಗಳು ಈಗ ರಾಷ್ಟ್ರಪತಿಗಳ ಅಂಕಿತದ ನಂತರ ಕಾನೂನುಗಳಾಗಿವೆ. ಹಾಗಾಗಿ, ‘ಘೆರಾವ್ ಕಾರ್ಪೊರೇಟ್ ವ್ಯವಹಾರಗಳು(Gherao Corporate Businesses)’ ಎಂಬ ಹೊಸ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ರಾಹುಲ್ ಗಾಂಧಿ ಅವರು ಕೃಷಿ ಶಾಸನಗಳ ಬಗ್ಗೆ ಕೇಂದ್ರವನ್ನು ಗುರಿಯಾಗಿಸಿಕೊಂಡಿದ್ದು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೈತರೊಂದಿಗೆ ಸಂವಹನ ನಡೆಸಿದ್ದಾರೆ. ಹೊಸ ಕಾನೂನುಗಳ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, 2 ಕೋಟಿ ರೈತರ ಸಹಿಯನ್ನು ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರಿಗೆ ಸಲ್ಲಿಸುವುದಾಗಿ ಘೋಷಿಸಿದೆ.

ಈ ರೈತ ವಿರೋಧಿ ಶಾಸನಗಳ ಸಮಗ್ರ ವಿರೋಧದ ಭಾಗವಾಗಿ, ಪಕ್ಷವು ಅಕ್ಟೋಬರ್ 2 ರಂದು ದೇಶದಾದ್ಯಂತದ ಪ್ರತಿ ವಿಧಾನಸಭೆ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಧರಣಿ ಮತ್ತು ಮೆರವಣಿಗೆಗಳನ್ನು ನಡೆಸುವ ಮೂಲಕ ‘ಕಿಸಾನ್-ಮಜ್ದೂರ್ ಬಚಾವೊ ದಿವಸ್’ ಆಚರಿಸಲಿದೆ.

ಇದನ್ನೂ ಓದಿ: ಮೋದಿ ವಿರುದ್ಧ ರೈತರು, ಯೋಧರ ಸ್ಪರ್ಧೆಯು ಜಡಗೊಂಡ ನೈತಿಕ ಪ್ರಜ್ಞೆಗೆ ಚಾಟಿ ಏಟು

ಫಿರೋಜ್‌ಪುರದಲ್ಲಿ ನಡೆದ ಬೃಹತ್ ಸಭೆಯಲ್ಲಿ, ಶಹೀದ್ ಭಗತ್ ಸಿಂಗ್ 113 ನೇ ಜನ್ಮ ದಿನಾಚರಣೆಯಂದು ಮತ್ತು ಭಗತ್ ಸಿಂಗ್ ಪೋಸ್ಟರ್ ಅನ್ನು ರೈಲ್ವೆ ಟ್ರ್ಯಾಕ್‌ನಲ್ಲಿ ನೇತುಹಾಕಲಾಗಿತ್ತು. ಸತ್ನಮ್ ಸಿಂಗ್ ಪನ್ನು ಬಿಕು (ಪನ್ನು ಗ್ರೂಪ್ ಅಧ್ಯಕ್ಷ), ಅಕ್ಟೋಬರ್ 2 ರವರೆಗೆ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಘೋಷಿಸಿದ್ದು, ಅಕ್ಟೋಬರ್ ತಿಂಗಳನ್ನು ಜಂಟಿ ಪ್ರತಿಭಟನೆಯಾಗಿ ಅರ್ಪಿಸಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಉಗ್ರಾಹನ್ ಗ್ರೂಪ್) ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೊಕ್ರಿಕಲನ್, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತಾ, “ಮೋದಿ ಸರ್ಕಾರವು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕಾನೂನುಗಳನ್ನು ಜಾರಿಗೊಳಿಸಿದ್ದರಿಂದ, ಅಕ್ಟೋಬರ್ 1 ರಿಂದ ಬಹುರಾಷ್ಟ್ರೀಯ ಕಂಪನಿಗಳು ನಡೆಸುತ್ತಿರುವ ಎಲ್ಲಾ ವ್ಯವಹಾರಗಳನ್ನು ಅನಿರ್ದಿಷ್ಟಾವಧಿಗೆ ಘೆರಾವ್ ಮಾಡಲು ನಾವು ನಿರ್ಧರಿಸಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

“ಮಂಗಳವಾರ, ನಮ್ಮ ರಾಜ್ಯ ಮಟ್ಟದ ಸಭೆಯಲ್ಲಿ, ರಾಜ್ಯದಲ್ಲಿ ಮುತ್ತಿಗೆ ಹಾಕಬೇಕಾದ 18 ರಿಂದ 20 ಬಿಂದುಗಳನ್ನು ಗುರುತಿಸಿದ ನಂತರ ನಾವು ಈ ಪ್ರತಿಭಟನೆಗಳಿಗೆ ಅಂತಿಮ ಆಕಾರವನ್ನು ನೀಡುತ್ತೇವೆ. ಪ್ರತಿಯೊಂದು ಪ್ರತಿಭಟನಾ ಸ್ಥಳವು 2,000 ದಿಂದ 15,000 ಪ್ರತಿಭಟನಾಕಾರರನ್ನು ಒಟ್ಟುಗೂಡಿಸುವ ನಿರೀಕ್ಷೆಯಿದೆ” ಎಂದು ಹೇಳಿದರು.

ಪಂಜಾಬ್ ಯೂತ್ ಕಾಂಗ್ರೆಸ್ ನಾಯಕರು ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಅನ್ನು ಸುಟ್ಟುಹಾಕಿದ್ದರಿಂದ ರೈತರ ಪ್ರತಿಭಟನೆ ರಾಷ್ಟ್ರ ರಾಜಧಾನಿಯನ್ನು ತಲುಪಿದೆ. ನಂತರ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ರಾಜ್ಯಾದ್ಯಂತ ಸಿಡಿದೆದ್ದ ರೈತರು: ಕರ್ನಾಟಕ ಬಂದ್ ಯಶಸ್ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...