Homeಚಳವಳಿಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

ಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

ಮೋದಿ ಸರ್ಕಾರವು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕಾನೂನುಗಳನ್ನು ಜಾರಿಗೊಳಿಸಿದ್ದರಿಂದ, ಅಕ್ಟೋಬರ್ 1 ರಿಂದ ಬಹುರಾಷ್ಟ್ರೀಯ ಕಂಪನಿಗಳು ನಡೆಸುತ್ತಿರುವ ಎಲ್ಲಾ ವ್ಯವಹಾರಗಳನ್ನು ಅನಿರ್ದಿಷ್ಟಾವಧಿಗೆ ಘೆರಾವ್ ಮಾಡಲು ನಾವು ನಿರ್ಧರಿಸಿದ್ದೇವೆ ಎಂದು ಸುಖದೇವ್ ಸಿಂಗ್ ಕೊಕ್ರಿಕಲನ್ ಹೇಳಿದರು.

- Advertisement -
- Advertisement -

ಕೃಷಿ ಮಸೂದೆಗಳ ವಿರುದ್ಧದ ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಜಾಬ್‌ನಲ್ಲಿರುವ ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಅಕ್ಟೋಬರ್ 2 ರಂದು ರೈತರು ಮುತ್ತಿಗೆ ಹಾಕಲಿದ್ದು, ಈ ಹೋರಾಟಕ್ಕೆ ರಾಹುಲ್ ಗಾಂಧಿ ಬೆಂಬಲ ನೀಡುವ ನಿರೀಕ್ಷೆಯಿದೆ.

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪ್ರಾರಂಭವಾಗಲಿರುವ ಅನಿರ್ದಿಷ್ಟ ರೈಲ್ ರೊಕೊದಲ್ಲಿ ಪಂಜಾಬಿನ ಸುಮಾರು 12,000 ಕ್ಕೂ ಹೆಚ್ಚು ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟಿಸಲಿದ್ದಾರೆ.

ಇದನ್ನೂ ಓದಿ: ಉತ್ತರದಾದ್ಯಂತ ಪ್ರಶ್ನೆ ಕೇಳುತ್ತಿರುವ ರೈತರು

ಮೂರು ವಿವಾದಾತ್ಮಕ ಕೃಷಿ ಮಸೂದೆಗಳು ಈಗ ರಾಷ್ಟ್ರಪತಿಗಳ ಅಂಕಿತದ ನಂತರ ಕಾನೂನುಗಳಾಗಿವೆ. ಹಾಗಾಗಿ, ‘ಘೆರಾವ್ ಕಾರ್ಪೊರೇಟ್ ವ್ಯವಹಾರಗಳು(Gherao Corporate Businesses)’ ಎಂಬ ಹೊಸ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ರಾಹುಲ್ ಗಾಂಧಿ ಅವರು ಕೃಷಿ ಶಾಸನಗಳ ಬಗ್ಗೆ ಕೇಂದ್ರವನ್ನು ಗುರಿಯಾಗಿಸಿಕೊಂಡಿದ್ದು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೈತರೊಂದಿಗೆ ಸಂವಹನ ನಡೆಸಿದ್ದಾರೆ. ಹೊಸ ಕಾನೂನುಗಳ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, 2 ಕೋಟಿ ರೈತರ ಸಹಿಯನ್ನು ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರಿಗೆ ಸಲ್ಲಿಸುವುದಾಗಿ ಘೋಷಿಸಿದೆ.

ಈ ರೈತ ವಿರೋಧಿ ಶಾಸನಗಳ ಸಮಗ್ರ ವಿರೋಧದ ಭಾಗವಾಗಿ, ಪಕ್ಷವು ಅಕ್ಟೋಬರ್ 2 ರಂದು ದೇಶದಾದ್ಯಂತದ ಪ್ರತಿ ವಿಧಾನಸಭೆ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಧರಣಿ ಮತ್ತು ಮೆರವಣಿಗೆಗಳನ್ನು ನಡೆಸುವ ಮೂಲಕ ‘ಕಿಸಾನ್-ಮಜ್ದೂರ್ ಬಚಾವೊ ದಿವಸ್’ ಆಚರಿಸಲಿದೆ.

ಇದನ್ನೂ ಓದಿ: ಮೋದಿ ವಿರುದ್ಧ ರೈತರು, ಯೋಧರ ಸ್ಪರ್ಧೆಯು ಜಡಗೊಂಡ ನೈತಿಕ ಪ್ರಜ್ಞೆಗೆ ಚಾಟಿ ಏಟು

ಫಿರೋಜ್‌ಪುರದಲ್ಲಿ ನಡೆದ ಬೃಹತ್ ಸಭೆಯಲ್ಲಿ, ಶಹೀದ್ ಭಗತ್ ಸಿಂಗ್ 113 ನೇ ಜನ್ಮ ದಿನಾಚರಣೆಯಂದು ಮತ್ತು ಭಗತ್ ಸಿಂಗ್ ಪೋಸ್ಟರ್ ಅನ್ನು ರೈಲ್ವೆ ಟ್ರ್ಯಾಕ್‌ನಲ್ಲಿ ನೇತುಹಾಕಲಾಗಿತ್ತು. ಸತ್ನಮ್ ಸಿಂಗ್ ಪನ್ನು ಬಿಕು (ಪನ್ನು ಗ್ರೂಪ್ ಅಧ್ಯಕ್ಷ), ಅಕ್ಟೋಬರ್ 2 ರವರೆಗೆ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಘೋಷಿಸಿದ್ದು, ಅಕ್ಟೋಬರ್ ತಿಂಗಳನ್ನು ಜಂಟಿ ಪ್ರತಿಭಟನೆಯಾಗಿ ಅರ್ಪಿಸಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಉಗ್ರಾಹನ್ ಗ್ರೂಪ್) ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೊಕ್ರಿಕಲನ್, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತಾ, “ಮೋದಿ ಸರ್ಕಾರವು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕಾನೂನುಗಳನ್ನು ಜಾರಿಗೊಳಿಸಿದ್ದರಿಂದ, ಅಕ್ಟೋಬರ್ 1 ರಿಂದ ಬಹುರಾಷ್ಟ್ರೀಯ ಕಂಪನಿಗಳು ನಡೆಸುತ್ತಿರುವ ಎಲ್ಲಾ ವ್ಯವಹಾರಗಳನ್ನು ಅನಿರ್ದಿಷ್ಟಾವಧಿಗೆ ಘೆರಾವ್ ಮಾಡಲು ನಾವು ನಿರ್ಧರಿಸಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

“ಮಂಗಳವಾರ, ನಮ್ಮ ರಾಜ್ಯ ಮಟ್ಟದ ಸಭೆಯಲ್ಲಿ, ರಾಜ್ಯದಲ್ಲಿ ಮುತ್ತಿಗೆ ಹಾಕಬೇಕಾದ 18 ರಿಂದ 20 ಬಿಂದುಗಳನ್ನು ಗುರುತಿಸಿದ ನಂತರ ನಾವು ಈ ಪ್ರತಿಭಟನೆಗಳಿಗೆ ಅಂತಿಮ ಆಕಾರವನ್ನು ನೀಡುತ್ತೇವೆ. ಪ್ರತಿಯೊಂದು ಪ್ರತಿಭಟನಾ ಸ್ಥಳವು 2,000 ದಿಂದ 15,000 ಪ್ರತಿಭಟನಾಕಾರರನ್ನು ಒಟ್ಟುಗೂಡಿಸುವ ನಿರೀಕ್ಷೆಯಿದೆ” ಎಂದು ಹೇಳಿದರು.

ಪಂಜಾಬ್ ಯೂತ್ ಕಾಂಗ್ರೆಸ್ ನಾಯಕರು ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಅನ್ನು ಸುಟ್ಟುಹಾಕಿದ್ದರಿಂದ ರೈತರ ಪ್ರತಿಭಟನೆ ರಾಷ್ಟ್ರ ರಾಜಧಾನಿಯನ್ನು ತಲುಪಿದೆ. ನಂತರ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ರಾಜ್ಯಾದ್ಯಂತ ಸಿಡಿದೆದ್ದ ರೈತರು: ಕರ್ನಾಟಕ ಬಂದ್ ಯಶಸ್ವಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...