Homeಮುಖಪುಟಪಂಜಾಬ್‌: ಪಾರ್ಕ್‌ನಲ್ಲಿ ಕುಳಿತ್ತಿದ್ದ ವಿದ್ಯಾರ್ಥಿನಿಯರಿಗೆ ಥಳಿಸಿದ ಮಹಿಳಾ ಪೊಲೀಸರು; ನೆಟ್ಟಿಗರ ಖಂಡನೆ

ಪಂಜಾಬ್‌: ಪಾರ್ಕ್‌ನಲ್ಲಿ ಕುಳಿತ್ತಿದ್ದ ವಿದ್ಯಾರ್ಥಿನಿಯರಿಗೆ ಥಳಿಸಿದ ಮಹಿಳಾ ಪೊಲೀಸರು; ನೆಟ್ಟಿಗರ ಖಂಡನೆ

- Advertisement -
- Advertisement -

ಪಂಜಾಬ್‌ನ ಇಬ್ಬರು ಮಹಿಳಾ ಪೊಲೀಸರು ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಥಳಿಸಿದ ವಿಡಿಯೋ ವೈರಲ್‌ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಕಾನ್‌ಸ್ಟೆಬಲ್‌ಗಳು ಕಪಾಳಮೋಕ್ಷ ಮಾಡುವುದು, ಗದರಿಸುವುದು ಮತ್ತು ವಿದ್ಯಾರ್ಥಿಗಳ ಫೋನ್‌ಗಳನ್ನು ಕಸಿದುಕೊಳ್ಳುವುದನ್ನು ವಿಡಿಯೊ ತುಣುಕಿನಲ್ಲಿ ಕಾಣಬಹುದು. ನಿಮ್ಮ ಪೋಷಕರಿಗೆ ಕರೆ ಮಾಡಿ ಎಂದು ಪೊಲೀಸರು ಹೆದರಿಸುವುದನ್ನು ನೋಡಬಹುದು.

ವೀಡಿಯೊಗಳನ್ನು ಅಪ್‌ಲೋಡ್ ಮಾಡಿದ ಪತ್ರಕರ್ತ ಗಗನ್‌ದೀಪ್ ಸಿಂಗ್ ಅವರು ಪೊಲೀಸರನ್ನು ಪ್ರಶ್ನಿಸಿದರು ಹಾಗೂ ಅವರ ಕ್ರಮಗಳನ್ನು ಟೀಕಿಸಿದರು.

ಅವರು ಅಪ್‌ಲೋಡ್ ಮಾಡಿದ ಮತ್ತೊಂದು ವೀಡಿಯೊದಲ್ಲಿ, ಸ್ಥಳೀಯ ನಿವಾಸಿಗಳಿಂದ ಬಂದ ದೂರುಗಳ ಆಧಾರದಲ್ಲಿ ಕಾರ್ಯನಿರ್ವಹಿಸಿರುವುದಾಗಿ ಪೊಲೀಸರು ತಮ್ಮ ಕ್ರಮಗಳನ್ನು ಸಮರ್ಥಿಸಿಕೊಳ್ಳುವುದನ್ನು ಕಾಣಬಹುದು.

‘“ವಿದ್ಯಾರ್ಥಿಗಳು ತಮ್ಮ ಪೋಷಕರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ, ಕಾಲೇಜಿಗೆ ಹೋಗುತ್ತಿಲ್ಲ. ತರಗತಿಗೆ ಗೈರು ಹಾಜರಾಗಿ ಪಾರ್ಕ್‌ಗಳಲ್ಲಿ ಕುಳಿತುಕೊಳ್ಳುತ್ತಾರೆ” ಎಂದು ಪೊಲೀಸರು ದೂರಿದ್ದಾರೆ.

“ಯುವಕರು ಉದ್ಯಾನವನಗಳಿಗೆ ಬಂದು ಕೆಟ್ಟ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಹಾಗಾಗಿ ಪಾರ್ಕ್‌ನಲ್ಲಿ ಕುಳಿತಿದ್ದ ವಿದ್ಯಾರ್ಥಿಗಳನ್ನು ಕಂಡು ಮೊದಲು ಸಮಾಧಾನದಿಂದ ತಿಳಿಸಿ ಹೇಳಲು ಯತ್ನಿಸಿದರೂ ವಿದ್ಯಾರ್ಥಿಗಳು ಕಿವಿಗೊಡದೇ ಇದ್ದಾಗ ಈ ಕ್ರಮಕ್ಕೆ ಮುಂದಾಗಬೇಕಾಯಿತು” ಎಂದು ತಮ್ಮ ಮಾರಲ್‌ ಪೊಲೀಸಿಂಗ್ಅನ್ನು ಸಮರ್ಥಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿರುವ ಪೊಲೀಸ್ ಅಧಿಕಾರಿಗಳು ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ವಿಡಿಯೋ ವೈರಲ್ ಆದ ನಂತರ ವಿವಾದ ಸೃಷ್ಟಿಸಿದ ಪೊಲೀಸರನ್ನು ಸರ್ಕಾರ ವರ್ಗಾಯಿಸಿದೆ ಮತ್ತು ತನಿಖೆಯನ್ನು ಪ್ರಾರಂಭಿಸಿದೆ ಎಂದು ವರದಿಯಾಗಿದೆ.

ಯುವಜನರಿಗೆ ಪೊಲೀಸರು ಕಿರುಕುಳ ನೀಡಿದ್ದನ್ನು ಹಲವು ನೆಟ್ಟಿಗರು ಟೀಕಿಸಿದ್ದಾರೆ. ಸರಿಯಾದ ಕ್ರಮವನ್ನು ಅನುಸರಿಸುವ ಬದಲು ಮಾರಲ್ ಪೊಲೀಸಿಂಗ್ ಮಾಡಿರುವುದನ್ನು ಖಂಡಿಸಿದ್ದಾರೆ.

ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ, “ವಿಷಯದ ಕುರಿತು ಗಮನ ಹರಿಸಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಮತ್ತು ವಿಚಾರಣೆಯನ್ನು ಪ್ರಾರಂಭಿಸಲಾಗಿದೆ” ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...