Homeಮುಖಪುಟಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ - ರೈತರ ಪ್ರತಿಭಟನೆ

ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

- Advertisement -
- Advertisement -

ಖಾಸಗಿ ಕಂಪನಿಗಳು ಮಂಡಿಗಳಲ್ಲಿ ಹತ್ತಿಯನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲು ಒತ್ತಾಯಿಸುತ್ತಿವೆ ಎಂದು ಆರೋಪಿಸಿ ರೈತರು ಪಂಜಾಬ್‌ನ ಬಟಿಂಡಾದ ಮಾರುಕಟ್ಟೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

ಮಾಳ್ವಾ ಜಿಲ್ಲೆಯ ಕೆಲವು ಮಂಡಿಗಳಲ್ಲಿ ಹತ್ತಿ ಬೆಳೆಗಾರರಿಗೆ ಎಂಎಸ್ಪಿ ಕೂಡ ಸಿಗುತ್ತಿಲ್ಲ. ರೈತರ ಬೆಳೆದ ಹತ್ತಿಯನ್ನು ಕಳಪೆ ಗುಣಮಟ್ಟ ಎಂದು ಉಲ್ಲೇಖಿಸುತ್ತಿರುವ ಖಾಸಗಿ ಕಂಪನಿಗಳು, ಬೆಳೆಗೆ ಕಡಿಮೆ ಬೆಲೆ (ಎಂಎಸ್ಪಿಗಿಂತ) ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಳ್ವಾ ಪ್ರದೇಶದಲ್ಲಿನ ರೈತರು ಬೆಳೆದ ಹತ್ತಿಗೆ ಈ ಋತುವಿನಲ್ಲಿ ಸಾರ್ವಕಾಲಿಕ ಹೆಚ್ಚಿನ ಬೆಲೆ ಅಂದರೆ ಕ್ವಿಂಟಾಲ್‌ಗೆ 9,400 ರೂ ಇದೆ. ಅಕಾಲಿಕ ಮಳೆ ಹಾಗೂ ಗುಲಾಬಿ ಬೂದಿ ಹುಳುವಿನ ದಾಳಿಯಿಂದಾಗಿ ಈ ಪ್ರದೇಶದಲ್ಲಿ ಹತ್ತಿ ಬೆಳೆಗೆ ಗಣನೀಯ ಹಾನಿ ಉಂಟಾಗಿದ್ದು, ಇದು ಹತ್ತಿ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ.

ಬಟಿಂಡಾ ಜಿಲ್ಲೆಯ ಶೇರ್ಗಡ ಗ್ರಾಮದ ರೈತ ಸಂದೀಪ್ ಸಿಂಗ್ ಮಾತನಾಡಿ, ‘ಒಂದು ವಾರದ ಹಿಂದೆಯಷ್ಟೆ ಹತ್ತಿ ಪ್ರತಿ ಕ್ವಿಂಟಾಲ್‌ಗೆ 8,500 ರೂಗೆ ಮಾರಾಟವಾಗಿತ್ತು. ಆದರೆ ಪ್ರಸ್ತುತ ಉತ್ತಮ ಗುಣಮಟ್ಟದ ಹತ್ತಿಯು 7,500 ರೂಗಿಂತ ಹೆಚ್ಚು ದರಕ್ಕೆ ಮಾರಾಟವಾಗುತ್ತಿಲ್ಲ. ಹತ್ತಿಯು ಉತ್ತಮ ಗುಣಮಟ್ಟದ್ದಾಗಿದ್ದು, ಕಡಿಮೆ ದರಕ್ಕೆ ನಾವು ಮಾರಾಟ ಮಾಡಲು ನಾವು ಸಿದ್ಧರಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೈ ಸಿಂಗ್ವಾಲ ಗ್ರಾಮದ ಮತ್ತೊಬ್ಬ ರೈತರಾದ ಜಗದೇವ್ ಸಿಂಗ್ ಮಾತನಾಡಿ, ‘ಕೆಲ ಸಮಯದ ಹಿಂದೆ ಹತ್ತಿ ಪ್ರತಿ ಕ್ವಿಂಟಾಲ್ಗೆ 9,400 ರೂಗೆ ಖರೀದಿಸಲಾಗಿತ್ತು. ಆದರೆ ಈಗ ಉದ್ದೇಶಪೂರ್ವಕವಾಗಿ ಖಾಸಗಿಯವರು ಬೆಲೆಯನ್ನು ಕಡಿಮೆ ಮಾಡಿದ್ದಾರೆ. ನಾನು ತಂದ ಉತ್ತಮ ಗುಣಮಟ್ಟದ ಹತ್ತಿಗೆ ಅವರು ಕೇವಲ 7,490 ರೂ ಕೊಡುತ್ತೇವೆ ಎಂದರು ನಾನು ಮಾರಲು ನಿರಾಕರಿಸಿದೆ. ಅವರು ಬೆಲೆ ಏರಿಸದಿದ್ದರೆ, ನಾನು ಬೇರೆ ಮಂಡಿಗೆ ಹೋಗಿ ಅಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತೇನೆ’ ಎಂದು ಬೇಸರ ವ್ಯಕ್ತಪಡಿಸಿದರು.

ಮಾನ್ಸಾ ಜಿಲ್ಲೆಯಲ್ಲಿ, ಖಾಸಗಿಯವರು ಹತ್ತಿಯನ್ನು ಕ್ವಿಂಟಲ್ಗೆ 5,200 ರೂಗೆ ಖರೀದಿಸಿದ್ದಾರೆ. ಇದು ಈ ವರ್ಷ ನಿಗದಿಪಡಿಸಿರುವ ಎಂಎಸ್ಪಿ (ಕನಿಷ್ಟ ಬೆಂಬಲ ಬೆಲೆ) 5,925 ರೂ ಗಿಂತ ಕಡಿಮೆಯಾಗಿದೆ.
ಖಾಸಗಿಯವರ ಈ ನಿರಂಕುಶ ಧೋರಣೆ ವಿರುದ್ಧ ಹತ್ತಿ ಬೆಳೆಗಾರರು ಕೆಲ ಗ್ರಾಮಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಖಾಸಗಿ ಕಂಪನಿಗಳು ಖರೀದಿಸುತ್ತಿರುವ ಹತ್ತಿಯ ಬೆಲೆಯಲ್ಲಿ ಖಂಡಿತವಾಗಿಯೂ ಇಳಿಕೆಯಾಗಿದೆ ಎಂದು ಭಾರತೀಯ ಹತ್ತಿ ನಿಗಮದ (ಸಿಸಿಐ) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಖಾಸಗಿ ಕಂಪನಿಗಳು ಒಟ್ಟುಗೂಡಿ ‘ಪೂಲ್’ ಅನ್ನು ರಚಿಸಿಕೊಂಡಿವೆ. ಅವರು ಮುಂಚೆಯೇ ಮಾತಾಡಿಕೊಂಡಿದ್ದು ಉತ್ತಮ ಗುಣಮಟ್ಟದ ಹತ್ತಿಗೆ ನಿಗದಿತ ಬೆಲೆಗಿಂತ ಹೆಚ್ಚಿನ ದರವನ್ನು ಉಲ್ಲೇಖಿಸದಿರಲು ನಿರ್ಧರಿಸಿದ್ದಾರೆ’ ಎಂದು ಅವರು ಹೇಳಿದರು.

ಮಾನ್ಸಾ ಜಿಲ್ಲೆಯ ಬಿಕೆಯು (ದಕೌಂಡ)ದ ಮುಖಂಡ ಗೋರಾ ಸಿಂಗ್ ಭೈನಿ ಬಾಘಾ ಮಾತನಾಡಿ, ‘ಕೆಲವೇ ದಿನಗಳ ಹಿಂದೆ ಉತ್ತಮ ಗುಣಮಟ್ಟದ ಹತ್ತಿ ಕ್ವಿಂಟಲ್‌ಗೆ 8,500 ರಿಂದ 9,400 ರೂ ಸಿಗುತ್ತಿತ್ತು. ಈಗ ಇದ್ದಕ್ಕಿದ್ದಂತೆ ಬೆಲೆ ಕುಸಿದಿರುವುದು ಹೇಗೆ? ಕೀಟಬಾಧೆ ಹಾಗೂ ಅಕಾಲಿಕ ಮಳೆಯಿಂದ ಹತ್ತಿ ಬೆಳೆಗಾರರು ಈಗಾಗಲೇ ನಷ್ಟ ಅನುಭವಿಸಿದ್ದಾರೆ. ಅವರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನೀಡದಿದ್ದರೆ, ನಾವು ಶೀಘ್ರದಲ್ಲೇ ಅನಿರ್ದಿಷ್ಟ ಹೋರಾಟವನ್ನು ಪ್ರಾರಂಭಿಸುತ್ತೇವೆ’ ಎಂದು ಅವರು ಎಚ್ಚರಿಕೆ ನೀಡಿದರು.


ಇದನ್ನೂ ಓದಿ: ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...