Homeಮುಖಪುಟಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ - ರೈತರ ಪ್ರತಿಭಟನೆ

ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

- Advertisement -
- Advertisement -

ಖಾಸಗಿ ಕಂಪನಿಗಳು ಮಂಡಿಗಳಲ್ಲಿ ಹತ್ತಿಯನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲು ಒತ್ತಾಯಿಸುತ್ತಿವೆ ಎಂದು ಆರೋಪಿಸಿ ರೈತರು ಪಂಜಾಬ್‌ನ ಬಟಿಂಡಾದ ಮಾರುಕಟ್ಟೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

ಮಾಳ್ವಾ ಜಿಲ್ಲೆಯ ಕೆಲವು ಮಂಡಿಗಳಲ್ಲಿ ಹತ್ತಿ ಬೆಳೆಗಾರರಿಗೆ ಎಂಎಸ್ಪಿ ಕೂಡ ಸಿಗುತ್ತಿಲ್ಲ. ರೈತರ ಬೆಳೆದ ಹತ್ತಿಯನ್ನು ಕಳಪೆ ಗುಣಮಟ್ಟ ಎಂದು ಉಲ್ಲೇಖಿಸುತ್ತಿರುವ ಖಾಸಗಿ ಕಂಪನಿಗಳು, ಬೆಳೆಗೆ ಕಡಿಮೆ ಬೆಲೆ (ಎಂಎಸ್ಪಿಗಿಂತ) ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಳ್ವಾ ಪ್ರದೇಶದಲ್ಲಿನ ರೈತರು ಬೆಳೆದ ಹತ್ತಿಗೆ ಈ ಋತುವಿನಲ್ಲಿ ಸಾರ್ವಕಾಲಿಕ ಹೆಚ್ಚಿನ ಬೆಲೆ ಅಂದರೆ ಕ್ವಿಂಟಾಲ್‌ಗೆ 9,400 ರೂ ಇದೆ. ಅಕಾಲಿಕ ಮಳೆ ಹಾಗೂ ಗುಲಾಬಿ ಬೂದಿ ಹುಳುವಿನ ದಾಳಿಯಿಂದಾಗಿ ಈ ಪ್ರದೇಶದಲ್ಲಿ ಹತ್ತಿ ಬೆಳೆಗೆ ಗಣನೀಯ ಹಾನಿ ಉಂಟಾಗಿದ್ದು, ಇದು ಹತ್ತಿ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ.

ಬಟಿಂಡಾ ಜಿಲ್ಲೆಯ ಶೇರ್ಗಡ ಗ್ರಾಮದ ರೈತ ಸಂದೀಪ್ ಸಿಂಗ್ ಮಾತನಾಡಿ, ‘ಒಂದು ವಾರದ ಹಿಂದೆಯಷ್ಟೆ ಹತ್ತಿ ಪ್ರತಿ ಕ್ವಿಂಟಾಲ್‌ಗೆ 8,500 ರೂಗೆ ಮಾರಾಟವಾಗಿತ್ತು. ಆದರೆ ಪ್ರಸ್ತುತ ಉತ್ತಮ ಗುಣಮಟ್ಟದ ಹತ್ತಿಯು 7,500 ರೂಗಿಂತ ಹೆಚ್ಚು ದರಕ್ಕೆ ಮಾರಾಟವಾಗುತ್ತಿಲ್ಲ. ಹತ್ತಿಯು ಉತ್ತಮ ಗುಣಮಟ್ಟದ್ದಾಗಿದ್ದು, ಕಡಿಮೆ ದರಕ್ಕೆ ನಾವು ಮಾರಾಟ ಮಾಡಲು ನಾವು ಸಿದ್ಧರಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೈ ಸಿಂಗ್ವಾಲ ಗ್ರಾಮದ ಮತ್ತೊಬ್ಬ ರೈತರಾದ ಜಗದೇವ್ ಸಿಂಗ್ ಮಾತನಾಡಿ, ‘ಕೆಲ ಸಮಯದ ಹಿಂದೆ ಹತ್ತಿ ಪ್ರತಿ ಕ್ವಿಂಟಾಲ್ಗೆ 9,400 ರೂಗೆ ಖರೀದಿಸಲಾಗಿತ್ತು. ಆದರೆ ಈಗ ಉದ್ದೇಶಪೂರ್ವಕವಾಗಿ ಖಾಸಗಿಯವರು ಬೆಲೆಯನ್ನು ಕಡಿಮೆ ಮಾಡಿದ್ದಾರೆ. ನಾನು ತಂದ ಉತ್ತಮ ಗುಣಮಟ್ಟದ ಹತ್ತಿಗೆ ಅವರು ಕೇವಲ 7,490 ರೂ ಕೊಡುತ್ತೇವೆ ಎಂದರು ನಾನು ಮಾರಲು ನಿರಾಕರಿಸಿದೆ. ಅವರು ಬೆಲೆ ಏರಿಸದಿದ್ದರೆ, ನಾನು ಬೇರೆ ಮಂಡಿಗೆ ಹೋಗಿ ಅಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತೇನೆ’ ಎಂದು ಬೇಸರ ವ್ಯಕ್ತಪಡಿಸಿದರು.

ಮಾನ್ಸಾ ಜಿಲ್ಲೆಯಲ್ಲಿ, ಖಾಸಗಿಯವರು ಹತ್ತಿಯನ್ನು ಕ್ವಿಂಟಲ್ಗೆ 5,200 ರೂಗೆ ಖರೀದಿಸಿದ್ದಾರೆ. ಇದು ಈ ವರ್ಷ ನಿಗದಿಪಡಿಸಿರುವ ಎಂಎಸ್ಪಿ (ಕನಿಷ್ಟ ಬೆಂಬಲ ಬೆಲೆ) 5,925 ರೂ ಗಿಂತ ಕಡಿಮೆಯಾಗಿದೆ.
ಖಾಸಗಿಯವರ ಈ ನಿರಂಕುಶ ಧೋರಣೆ ವಿರುದ್ಧ ಹತ್ತಿ ಬೆಳೆಗಾರರು ಕೆಲ ಗ್ರಾಮಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಖಾಸಗಿ ಕಂಪನಿಗಳು ಖರೀದಿಸುತ್ತಿರುವ ಹತ್ತಿಯ ಬೆಲೆಯಲ್ಲಿ ಖಂಡಿತವಾಗಿಯೂ ಇಳಿಕೆಯಾಗಿದೆ ಎಂದು ಭಾರತೀಯ ಹತ್ತಿ ನಿಗಮದ (ಸಿಸಿಐ) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಖಾಸಗಿ ಕಂಪನಿಗಳು ಒಟ್ಟುಗೂಡಿ ‘ಪೂಲ್’ ಅನ್ನು ರಚಿಸಿಕೊಂಡಿವೆ. ಅವರು ಮುಂಚೆಯೇ ಮಾತಾಡಿಕೊಂಡಿದ್ದು ಉತ್ತಮ ಗುಣಮಟ್ಟದ ಹತ್ತಿಗೆ ನಿಗದಿತ ಬೆಲೆಗಿಂತ ಹೆಚ್ಚಿನ ದರವನ್ನು ಉಲ್ಲೇಖಿಸದಿರಲು ನಿರ್ಧರಿಸಿದ್ದಾರೆ’ ಎಂದು ಅವರು ಹೇಳಿದರು.

ಮಾನ್ಸಾ ಜಿಲ್ಲೆಯ ಬಿಕೆಯು (ದಕೌಂಡ)ದ ಮುಖಂಡ ಗೋರಾ ಸಿಂಗ್ ಭೈನಿ ಬಾಘಾ ಮಾತನಾಡಿ, ‘ಕೆಲವೇ ದಿನಗಳ ಹಿಂದೆ ಉತ್ತಮ ಗುಣಮಟ್ಟದ ಹತ್ತಿ ಕ್ವಿಂಟಲ್‌ಗೆ 8,500 ರಿಂದ 9,400 ರೂ ಸಿಗುತ್ತಿತ್ತು. ಈಗ ಇದ್ದಕ್ಕಿದ್ದಂತೆ ಬೆಲೆ ಕುಸಿದಿರುವುದು ಹೇಗೆ? ಕೀಟಬಾಧೆ ಹಾಗೂ ಅಕಾಲಿಕ ಮಳೆಯಿಂದ ಹತ್ತಿ ಬೆಳೆಗಾರರು ಈಗಾಗಲೇ ನಷ್ಟ ಅನುಭವಿಸಿದ್ದಾರೆ. ಅವರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನೀಡದಿದ್ದರೆ, ನಾವು ಶೀಘ್ರದಲ್ಲೇ ಅನಿರ್ದಿಷ್ಟ ಹೋರಾಟವನ್ನು ಪ್ರಾರಂಭಿಸುತ್ತೇವೆ’ ಎಂದು ಅವರು ಎಚ್ಚರಿಕೆ ನೀಡಿದರು.


ಇದನ್ನೂ ಓದಿ: ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...