Homeಮುಖಪುಟಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ - ರೈತರ ಪ್ರತಿಭಟನೆ

ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

- Advertisement -
- Advertisement -

ಖಾಸಗಿ ಕಂಪನಿಗಳು ಮಂಡಿಗಳಲ್ಲಿ ಹತ್ತಿಯನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲು ಒತ್ತಾಯಿಸುತ್ತಿವೆ ಎಂದು ಆರೋಪಿಸಿ ರೈತರು ಪಂಜಾಬ್‌ನ ಬಟಿಂಡಾದ ಮಾರುಕಟ್ಟೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

ಮಾಳ್ವಾ ಜಿಲ್ಲೆಯ ಕೆಲವು ಮಂಡಿಗಳಲ್ಲಿ ಹತ್ತಿ ಬೆಳೆಗಾರರಿಗೆ ಎಂಎಸ್ಪಿ ಕೂಡ ಸಿಗುತ್ತಿಲ್ಲ. ರೈತರ ಬೆಳೆದ ಹತ್ತಿಯನ್ನು ಕಳಪೆ ಗುಣಮಟ್ಟ ಎಂದು ಉಲ್ಲೇಖಿಸುತ್ತಿರುವ ಖಾಸಗಿ ಕಂಪನಿಗಳು, ಬೆಳೆಗೆ ಕಡಿಮೆ ಬೆಲೆ (ಎಂಎಸ್ಪಿಗಿಂತ) ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಳ್ವಾ ಪ್ರದೇಶದಲ್ಲಿನ ರೈತರು ಬೆಳೆದ ಹತ್ತಿಗೆ ಈ ಋತುವಿನಲ್ಲಿ ಸಾರ್ವಕಾಲಿಕ ಹೆಚ್ಚಿನ ಬೆಲೆ ಅಂದರೆ ಕ್ವಿಂಟಾಲ್‌ಗೆ 9,400 ರೂ ಇದೆ. ಅಕಾಲಿಕ ಮಳೆ ಹಾಗೂ ಗುಲಾಬಿ ಬೂದಿ ಹುಳುವಿನ ದಾಳಿಯಿಂದಾಗಿ ಈ ಪ್ರದೇಶದಲ್ಲಿ ಹತ್ತಿ ಬೆಳೆಗೆ ಗಣನೀಯ ಹಾನಿ ಉಂಟಾಗಿದ್ದು, ಇದು ಹತ್ತಿ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ.

ಬಟಿಂಡಾ ಜಿಲ್ಲೆಯ ಶೇರ್ಗಡ ಗ್ರಾಮದ ರೈತ ಸಂದೀಪ್ ಸಿಂಗ್ ಮಾತನಾಡಿ, ‘ಒಂದು ವಾರದ ಹಿಂದೆಯಷ್ಟೆ ಹತ್ತಿ ಪ್ರತಿ ಕ್ವಿಂಟಾಲ್‌ಗೆ 8,500 ರೂಗೆ ಮಾರಾಟವಾಗಿತ್ತು. ಆದರೆ ಪ್ರಸ್ತುತ ಉತ್ತಮ ಗುಣಮಟ್ಟದ ಹತ್ತಿಯು 7,500 ರೂಗಿಂತ ಹೆಚ್ಚು ದರಕ್ಕೆ ಮಾರಾಟವಾಗುತ್ತಿಲ್ಲ. ಹತ್ತಿಯು ಉತ್ತಮ ಗುಣಮಟ್ಟದ್ದಾಗಿದ್ದು, ಕಡಿಮೆ ದರಕ್ಕೆ ನಾವು ಮಾರಾಟ ಮಾಡಲು ನಾವು ಸಿದ್ಧರಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೈ ಸಿಂಗ್ವಾಲ ಗ್ರಾಮದ ಮತ್ತೊಬ್ಬ ರೈತರಾದ ಜಗದೇವ್ ಸಿಂಗ್ ಮಾತನಾಡಿ, ‘ಕೆಲ ಸಮಯದ ಹಿಂದೆ ಹತ್ತಿ ಪ್ರತಿ ಕ್ವಿಂಟಾಲ್ಗೆ 9,400 ರೂಗೆ ಖರೀದಿಸಲಾಗಿತ್ತು. ಆದರೆ ಈಗ ಉದ್ದೇಶಪೂರ್ವಕವಾಗಿ ಖಾಸಗಿಯವರು ಬೆಲೆಯನ್ನು ಕಡಿಮೆ ಮಾಡಿದ್ದಾರೆ. ನಾನು ತಂದ ಉತ್ತಮ ಗುಣಮಟ್ಟದ ಹತ್ತಿಗೆ ಅವರು ಕೇವಲ 7,490 ರೂ ಕೊಡುತ್ತೇವೆ ಎಂದರು ನಾನು ಮಾರಲು ನಿರಾಕರಿಸಿದೆ. ಅವರು ಬೆಲೆ ಏರಿಸದಿದ್ದರೆ, ನಾನು ಬೇರೆ ಮಂಡಿಗೆ ಹೋಗಿ ಅಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತೇನೆ’ ಎಂದು ಬೇಸರ ವ್ಯಕ್ತಪಡಿಸಿದರು.

ಮಾನ್ಸಾ ಜಿಲ್ಲೆಯಲ್ಲಿ, ಖಾಸಗಿಯವರು ಹತ್ತಿಯನ್ನು ಕ್ವಿಂಟಲ್ಗೆ 5,200 ರೂಗೆ ಖರೀದಿಸಿದ್ದಾರೆ. ಇದು ಈ ವರ್ಷ ನಿಗದಿಪಡಿಸಿರುವ ಎಂಎಸ್ಪಿ (ಕನಿಷ್ಟ ಬೆಂಬಲ ಬೆಲೆ) 5,925 ರೂ ಗಿಂತ ಕಡಿಮೆಯಾಗಿದೆ.
ಖಾಸಗಿಯವರ ಈ ನಿರಂಕುಶ ಧೋರಣೆ ವಿರುದ್ಧ ಹತ್ತಿ ಬೆಳೆಗಾರರು ಕೆಲ ಗ್ರಾಮಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಖಾಸಗಿ ಕಂಪನಿಗಳು ಖರೀದಿಸುತ್ತಿರುವ ಹತ್ತಿಯ ಬೆಲೆಯಲ್ಲಿ ಖಂಡಿತವಾಗಿಯೂ ಇಳಿಕೆಯಾಗಿದೆ ಎಂದು ಭಾರತೀಯ ಹತ್ತಿ ನಿಗಮದ (ಸಿಸಿಐ) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಖಾಸಗಿ ಕಂಪನಿಗಳು ಒಟ್ಟುಗೂಡಿ ‘ಪೂಲ್’ ಅನ್ನು ರಚಿಸಿಕೊಂಡಿವೆ. ಅವರು ಮುಂಚೆಯೇ ಮಾತಾಡಿಕೊಂಡಿದ್ದು ಉತ್ತಮ ಗುಣಮಟ್ಟದ ಹತ್ತಿಗೆ ನಿಗದಿತ ಬೆಲೆಗಿಂತ ಹೆಚ್ಚಿನ ದರವನ್ನು ಉಲ್ಲೇಖಿಸದಿರಲು ನಿರ್ಧರಿಸಿದ್ದಾರೆ’ ಎಂದು ಅವರು ಹೇಳಿದರು.

ಮಾನ್ಸಾ ಜಿಲ್ಲೆಯ ಬಿಕೆಯು (ದಕೌಂಡ)ದ ಮುಖಂಡ ಗೋರಾ ಸಿಂಗ್ ಭೈನಿ ಬಾಘಾ ಮಾತನಾಡಿ, ‘ಕೆಲವೇ ದಿನಗಳ ಹಿಂದೆ ಉತ್ತಮ ಗುಣಮಟ್ಟದ ಹತ್ತಿ ಕ್ವಿಂಟಲ್‌ಗೆ 8,500 ರಿಂದ 9,400 ರೂ ಸಿಗುತ್ತಿತ್ತು. ಈಗ ಇದ್ದಕ್ಕಿದ್ದಂತೆ ಬೆಲೆ ಕುಸಿದಿರುವುದು ಹೇಗೆ? ಕೀಟಬಾಧೆ ಹಾಗೂ ಅಕಾಲಿಕ ಮಳೆಯಿಂದ ಹತ್ತಿ ಬೆಳೆಗಾರರು ಈಗಾಗಲೇ ನಷ್ಟ ಅನುಭವಿಸಿದ್ದಾರೆ. ಅವರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನೀಡದಿದ್ದರೆ, ನಾವು ಶೀಘ್ರದಲ್ಲೇ ಅನಿರ್ದಿಷ್ಟ ಹೋರಾಟವನ್ನು ಪ್ರಾರಂಭಿಸುತ್ತೇವೆ’ ಎಂದು ಅವರು ಎಚ್ಚರಿಕೆ ನೀಡಿದರು.


ಇದನ್ನೂ ಓದಿ: ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...