Homeಮುಖಪುಟಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ - ರೈತರ ಪ್ರತಿಭಟನೆ

ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

- Advertisement -
- Advertisement -

ಖಾಸಗಿ ಕಂಪನಿಗಳು ಮಂಡಿಗಳಲ್ಲಿ ಹತ್ತಿಯನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲು ಒತ್ತಾಯಿಸುತ್ತಿವೆ ಎಂದು ಆರೋಪಿಸಿ ರೈತರು ಪಂಜಾಬ್‌ನ ಬಟಿಂಡಾದ ಮಾರುಕಟ್ಟೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

ಮಾಳ್ವಾ ಜಿಲ್ಲೆಯ ಕೆಲವು ಮಂಡಿಗಳಲ್ಲಿ ಹತ್ತಿ ಬೆಳೆಗಾರರಿಗೆ ಎಂಎಸ್ಪಿ ಕೂಡ ಸಿಗುತ್ತಿಲ್ಲ. ರೈತರ ಬೆಳೆದ ಹತ್ತಿಯನ್ನು ಕಳಪೆ ಗುಣಮಟ್ಟ ಎಂದು ಉಲ್ಲೇಖಿಸುತ್ತಿರುವ ಖಾಸಗಿ ಕಂಪನಿಗಳು, ಬೆಳೆಗೆ ಕಡಿಮೆ ಬೆಲೆ (ಎಂಎಸ್ಪಿಗಿಂತ) ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಳ್ವಾ ಪ್ರದೇಶದಲ್ಲಿನ ರೈತರು ಬೆಳೆದ ಹತ್ತಿಗೆ ಈ ಋತುವಿನಲ್ಲಿ ಸಾರ್ವಕಾಲಿಕ ಹೆಚ್ಚಿನ ಬೆಲೆ ಅಂದರೆ ಕ್ವಿಂಟಾಲ್‌ಗೆ 9,400 ರೂ ಇದೆ. ಅಕಾಲಿಕ ಮಳೆ ಹಾಗೂ ಗುಲಾಬಿ ಬೂದಿ ಹುಳುವಿನ ದಾಳಿಯಿಂದಾಗಿ ಈ ಪ್ರದೇಶದಲ್ಲಿ ಹತ್ತಿ ಬೆಳೆಗೆ ಗಣನೀಯ ಹಾನಿ ಉಂಟಾಗಿದ್ದು, ಇದು ಹತ್ತಿ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ.

ಬಟಿಂಡಾ ಜಿಲ್ಲೆಯ ಶೇರ್ಗಡ ಗ್ರಾಮದ ರೈತ ಸಂದೀಪ್ ಸಿಂಗ್ ಮಾತನಾಡಿ, ‘ಒಂದು ವಾರದ ಹಿಂದೆಯಷ್ಟೆ ಹತ್ತಿ ಪ್ರತಿ ಕ್ವಿಂಟಾಲ್‌ಗೆ 8,500 ರೂಗೆ ಮಾರಾಟವಾಗಿತ್ತು. ಆದರೆ ಪ್ರಸ್ತುತ ಉತ್ತಮ ಗುಣಮಟ್ಟದ ಹತ್ತಿಯು 7,500 ರೂಗಿಂತ ಹೆಚ್ಚು ದರಕ್ಕೆ ಮಾರಾಟವಾಗುತ್ತಿಲ್ಲ. ಹತ್ತಿಯು ಉತ್ತಮ ಗುಣಮಟ್ಟದ್ದಾಗಿದ್ದು, ಕಡಿಮೆ ದರಕ್ಕೆ ನಾವು ಮಾರಾಟ ಮಾಡಲು ನಾವು ಸಿದ್ಧರಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೈ ಸಿಂಗ್ವಾಲ ಗ್ರಾಮದ ಮತ್ತೊಬ್ಬ ರೈತರಾದ ಜಗದೇವ್ ಸಿಂಗ್ ಮಾತನಾಡಿ, ‘ಕೆಲ ಸಮಯದ ಹಿಂದೆ ಹತ್ತಿ ಪ್ರತಿ ಕ್ವಿಂಟಾಲ್ಗೆ 9,400 ರೂಗೆ ಖರೀದಿಸಲಾಗಿತ್ತು. ಆದರೆ ಈಗ ಉದ್ದೇಶಪೂರ್ವಕವಾಗಿ ಖಾಸಗಿಯವರು ಬೆಲೆಯನ್ನು ಕಡಿಮೆ ಮಾಡಿದ್ದಾರೆ. ನಾನು ತಂದ ಉತ್ತಮ ಗುಣಮಟ್ಟದ ಹತ್ತಿಗೆ ಅವರು ಕೇವಲ 7,490 ರೂ ಕೊಡುತ್ತೇವೆ ಎಂದರು ನಾನು ಮಾರಲು ನಿರಾಕರಿಸಿದೆ. ಅವರು ಬೆಲೆ ಏರಿಸದಿದ್ದರೆ, ನಾನು ಬೇರೆ ಮಂಡಿಗೆ ಹೋಗಿ ಅಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತೇನೆ’ ಎಂದು ಬೇಸರ ವ್ಯಕ್ತಪಡಿಸಿದರು.

ಮಾನ್ಸಾ ಜಿಲ್ಲೆಯಲ್ಲಿ, ಖಾಸಗಿಯವರು ಹತ್ತಿಯನ್ನು ಕ್ವಿಂಟಲ್ಗೆ 5,200 ರೂಗೆ ಖರೀದಿಸಿದ್ದಾರೆ. ಇದು ಈ ವರ್ಷ ನಿಗದಿಪಡಿಸಿರುವ ಎಂಎಸ್ಪಿ (ಕನಿಷ್ಟ ಬೆಂಬಲ ಬೆಲೆ) 5,925 ರೂ ಗಿಂತ ಕಡಿಮೆಯಾಗಿದೆ.
ಖಾಸಗಿಯವರ ಈ ನಿರಂಕುಶ ಧೋರಣೆ ವಿರುದ್ಧ ಹತ್ತಿ ಬೆಳೆಗಾರರು ಕೆಲ ಗ್ರಾಮಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಖಾಸಗಿ ಕಂಪನಿಗಳು ಖರೀದಿಸುತ್ತಿರುವ ಹತ್ತಿಯ ಬೆಲೆಯಲ್ಲಿ ಖಂಡಿತವಾಗಿಯೂ ಇಳಿಕೆಯಾಗಿದೆ ಎಂದು ಭಾರತೀಯ ಹತ್ತಿ ನಿಗಮದ (ಸಿಸಿಐ) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಖಾಸಗಿ ಕಂಪನಿಗಳು ಒಟ್ಟುಗೂಡಿ ‘ಪೂಲ್’ ಅನ್ನು ರಚಿಸಿಕೊಂಡಿವೆ. ಅವರು ಮುಂಚೆಯೇ ಮಾತಾಡಿಕೊಂಡಿದ್ದು ಉತ್ತಮ ಗುಣಮಟ್ಟದ ಹತ್ತಿಗೆ ನಿಗದಿತ ಬೆಲೆಗಿಂತ ಹೆಚ್ಚಿನ ದರವನ್ನು ಉಲ್ಲೇಖಿಸದಿರಲು ನಿರ್ಧರಿಸಿದ್ದಾರೆ’ ಎಂದು ಅವರು ಹೇಳಿದರು.

ಮಾನ್ಸಾ ಜಿಲ್ಲೆಯ ಬಿಕೆಯು (ದಕೌಂಡ)ದ ಮುಖಂಡ ಗೋರಾ ಸಿಂಗ್ ಭೈನಿ ಬಾಘಾ ಮಾತನಾಡಿ, ‘ಕೆಲವೇ ದಿನಗಳ ಹಿಂದೆ ಉತ್ತಮ ಗುಣಮಟ್ಟದ ಹತ್ತಿ ಕ್ವಿಂಟಲ್‌ಗೆ 8,500 ರಿಂದ 9,400 ರೂ ಸಿಗುತ್ತಿತ್ತು. ಈಗ ಇದ್ದಕ್ಕಿದ್ದಂತೆ ಬೆಲೆ ಕುಸಿದಿರುವುದು ಹೇಗೆ? ಕೀಟಬಾಧೆ ಹಾಗೂ ಅಕಾಲಿಕ ಮಳೆಯಿಂದ ಹತ್ತಿ ಬೆಳೆಗಾರರು ಈಗಾಗಲೇ ನಷ್ಟ ಅನುಭವಿಸಿದ್ದಾರೆ. ಅವರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನೀಡದಿದ್ದರೆ, ನಾವು ಶೀಘ್ರದಲ್ಲೇ ಅನಿರ್ದಿಷ್ಟ ಹೋರಾಟವನ್ನು ಪ್ರಾರಂಭಿಸುತ್ತೇವೆ’ ಎಂದು ಅವರು ಎಚ್ಚರಿಕೆ ನೀಡಿದರು.


ಇದನ್ನೂ ಓದಿ: ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...