Homeಮುಖಪುಟಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ - ರೈತರ ಪ್ರತಿಭಟನೆ

ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

- Advertisement -
- Advertisement -

ಖಾಸಗಿ ಕಂಪನಿಗಳು ಮಂಡಿಗಳಲ್ಲಿ ಹತ್ತಿಯನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲು ಒತ್ತಾಯಿಸುತ್ತಿವೆ ಎಂದು ಆರೋಪಿಸಿ ರೈತರು ಪಂಜಾಬ್‌ನ ಬಟಿಂಡಾದ ಮಾರುಕಟ್ಟೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

ಮಾಳ್ವಾ ಜಿಲ್ಲೆಯ ಕೆಲವು ಮಂಡಿಗಳಲ್ಲಿ ಹತ್ತಿ ಬೆಳೆಗಾರರಿಗೆ ಎಂಎಸ್ಪಿ ಕೂಡ ಸಿಗುತ್ತಿಲ್ಲ. ರೈತರ ಬೆಳೆದ ಹತ್ತಿಯನ್ನು ಕಳಪೆ ಗುಣಮಟ್ಟ ಎಂದು ಉಲ್ಲೇಖಿಸುತ್ತಿರುವ ಖಾಸಗಿ ಕಂಪನಿಗಳು, ಬೆಳೆಗೆ ಕಡಿಮೆ ಬೆಲೆ (ಎಂಎಸ್ಪಿಗಿಂತ) ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಳ್ವಾ ಪ್ರದೇಶದಲ್ಲಿನ ರೈತರು ಬೆಳೆದ ಹತ್ತಿಗೆ ಈ ಋತುವಿನಲ್ಲಿ ಸಾರ್ವಕಾಲಿಕ ಹೆಚ್ಚಿನ ಬೆಲೆ ಅಂದರೆ ಕ್ವಿಂಟಾಲ್‌ಗೆ 9,400 ರೂ ಇದೆ. ಅಕಾಲಿಕ ಮಳೆ ಹಾಗೂ ಗುಲಾಬಿ ಬೂದಿ ಹುಳುವಿನ ದಾಳಿಯಿಂದಾಗಿ ಈ ಪ್ರದೇಶದಲ್ಲಿ ಹತ್ತಿ ಬೆಳೆಗೆ ಗಣನೀಯ ಹಾನಿ ಉಂಟಾಗಿದ್ದು, ಇದು ಹತ್ತಿ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ.

ಬಟಿಂಡಾ ಜಿಲ್ಲೆಯ ಶೇರ್ಗಡ ಗ್ರಾಮದ ರೈತ ಸಂದೀಪ್ ಸಿಂಗ್ ಮಾತನಾಡಿ, ‘ಒಂದು ವಾರದ ಹಿಂದೆಯಷ್ಟೆ ಹತ್ತಿ ಪ್ರತಿ ಕ್ವಿಂಟಾಲ್‌ಗೆ 8,500 ರೂಗೆ ಮಾರಾಟವಾಗಿತ್ತು. ಆದರೆ ಪ್ರಸ್ತುತ ಉತ್ತಮ ಗುಣಮಟ್ಟದ ಹತ್ತಿಯು 7,500 ರೂಗಿಂತ ಹೆಚ್ಚು ದರಕ್ಕೆ ಮಾರಾಟವಾಗುತ್ತಿಲ್ಲ. ಹತ್ತಿಯು ಉತ್ತಮ ಗುಣಮಟ್ಟದ್ದಾಗಿದ್ದು, ಕಡಿಮೆ ದರಕ್ಕೆ ನಾವು ಮಾರಾಟ ಮಾಡಲು ನಾವು ಸಿದ್ಧರಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೈ ಸಿಂಗ್ವಾಲ ಗ್ರಾಮದ ಮತ್ತೊಬ್ಬ ರೈತರಾದ ಜಗದೇವ್ ಸಿಂಗ್ ಮಾತನಾಡಿ, ‘ಕೆಲ ಸಮಯದ ಹಿಂದೆ ಹತ್ತಿ ಪ್ರತಿ ಕ್ವಿಂಟಾಲ್ಗೆ 9,400 ರೂಗೆ ಖರೀದಿಸಲಾಗಿತ್ತು. ಆದರೆ ಈಗ ಉದ್ದೇಶಪೂರ್ವಕವಾಗಿ ಖಾಸಗಿಯವರು ಬೆಲೆಯನ್ನು ಕಡಿಮೆ ಮಾಡಿದ್ದಾರೆ. ನಾನು ತಂದ ಉತ್ತಮ ಗುಣಮಟ್ಟದ ಹತ್ತಿಗೆ ಅವರು ಕೇವಲ 7,490 ರೂ ಕೊಡುತ್ತೇವೆ ಎಂದರು ನಾನು ಮಾರಲು ನಿರಾಕರಿಸಿದೆ. ಅವರು ಬೆಲೆ ಏರಿಸದಿದ್ದರೆ, ನಾನು ಬೇರೆ ಮಂಡಿಗೆ ಹೋಗಿ ಅಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತೇನೆ’ ಎಂದು ಬೇಸರ ವ್ಯಕ್ತಪಡಿಸಿದರು.

ಮಾನ್ಸಾ ಜಿಲ್ಲೆಯಲ್ಲಿ, ಖಾಸಗಿಯವರು ಹತ್ತಿಯನ್ನು ಕ್ವಿಂಟಲ್ಗೆ 5,200 ರೂಗೆ ಖರೀದಿಸಿದ್ದಾರೆ. ಇದು ಈ ವರ್ಷ ನಿಗದಿಪಡಿಸಿರುವ ಎಂಎಸ್ಪಿ (ಕನಿಷ್ಟ ಬೆಂಬಲ ಬೆಲೆ) 5,925 ರೂ ಗಿಂತ ಕಡಿಮೆಯಾಗಿದೆ.
ಖಾಸಗಿಯವರ ಈ ನಿರಂಕುಶ ಧೋರಣೆ ವಿರುದ್ಧ ಹತ್ತಿ ಬೆಳೆಗಾರರು ಕೆಲ ಗ್ರಾಮಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಖಾಸಗಿ ಕಂಪನಿಗಳು ಖರೀದಿಸುತ್ತಿರುವ ಹತ್ತಿಯ ಬೆಲೆಯಲ್ಲಿ ಖಂಡಿತವಾಗಿಯೂ ಇಳಿಕೆಯಾಗಿದೆ ಎಂದು ಭಾರತೀಯ ಹತ್ತಿ ನಿಗಮದ (ಸಿಸಿಐ) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಖಾಸಗಿ ಕಂಪನಿಗಳು ಒಟ್ಟುಗೂಡಿ ‘ಪೂಲ್’ ಅನ್ನು ರಚಿಸಿಕೊಂಡಿವೆ. ಅವರು ಮುಂಚೆಯೇ ಮಾತಾಡಿಕೊಂಡಿದ್ದು ಉತ್ತಮ ಗುಣಮಟ್ಟದ ಹತ್ತಿಗೆ ನಿಗದಿತ ಬೆಲೆಗಿಂತ ಹೆಚ್ಚಿನ ದರವನ್ನು ಉಲ್ಲೇಖಿಸದಿರಲು ನಿರ್ಧರಿಸಿದ್ದಾರೆ’ ಎಂದು ಅವರು ಹೇಳಿದರು.

ಮಾನ್ಸಾ ಜಿಲ್ಲೆಯ ಬಿಕೆಯು (ದಕೌಂಡ)ದ ಮುಖಂಡ ಗೋರಾ ಸಿಂಗ್ ಭೈನಿ ಬಾಘಾ ಮಾತನಾಡಿ, ‘ಕೆಲವೇ ದಿನಗಳ ಹಿಂದೆ ಉತ್ತಮ ಗುಣಮಟ್ಟದ ಹತ್ತಿ ಕ್ವಿಂಟಲ್‌ಗೆ 8,500 ರಿಂದ 9,400 ರೂ ಸಿಗುತ್ತಿತ್ತು. ಈಗ ಇದ್ದಕ್ಕಿದ್ದಂತೆ ಬೆಲೆ ಕುಸಿದಿರುವುದು ಹೇಗೆ? ಕೀಟಬಾಧೆ ಹಾಗೂ ಅಕಾಲಿಕ ಮಳೆಯಿಂದ ಹತ್ತಿ ಬೆಳೆಗಾರರು ಈಗಾಗಲೇ ನಷ್ಟ ಅನುಭವಿಸಿದ್ದಾರೆ. ಅವರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನೀಡದಿದ್ದರೆ, ನಾವು ಶೀಘ್ರದಲ್ಲೇ ಅನಿರ್ದಿಷ್ಟ ಹೋರಾಟವನ್ನು ಪ್ರಾರಂಭಿಸುತ್ತೇವೆ’ ಎಂದು ಅವರು ಎಚ್ಚರಿಕೆ ನೀಡಿದರು.


ಇದನ್ನೂ ಓದಿ: ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...