Homeಮುಖಪುಟಹರಿಯಾಣಕ್ಕೆ ಒಂದು ಹನಿ ನೀರನ್ನು ಸಹ ನೀಡಲ್ಲ: ಪಂಜಾಬ್ ಸರ್ಕಾರ ತೀರ್ಮಾನ

ಹರಿಯಾಣಕ್ಕೆ ಒಂದು ಹನಿ ನೀರನ್ನು ಸಹ ನೀಡಲ್ಲ: ಪಂಜಾಬ್ ಸರ್ಕಾರ ತೀರ್ಮಾನ

- Advertisement -
- Advertisement -

ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಸರ್ಕಾರ ಸೋಮವಾರ ವಿಧಾನಸಭೆಯಲ್ಲಿ ನೆರೆಯ ಹರಿಯಾಣಕ್ಕೆ ತನ್ನ ಕಡೆಯಿಂದ “ಒಂದು ಹನಿ ನೀರನ್ನು ಸಹ” ಬಿಡುವುದಿಲ್ಲ ಎಂದು ನಿರ್ಣಯ ಕೈಗೊಂಡಿದೆ ಎಂದು ದಿ ಹಿಂದೂ ವರದಿ ಮಾಡಿದೆ. ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ರಾಜ್ಯಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಇದು ಪಂಜಾಬ್ ಈ ತೀರ್ಮಾನ ಮಾಡಿದೆ. ಹರಿಯಾಣಕ್ಕೆ ಒಂದು ಹನಿ

ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಮತ್ತು ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿಯ ಮೂಲಕ ಬಿಜೆಪಿ ಪಕ್ಷವೂ ಪಂಜಾಬ್‌ನ ಹಕ್ಕುಗಳನ್ನು “ಕಿತ್ತುಕೊಳ್ಳಲು” ಪ್ರಯತ್ನಿಸುತ್ತಿದೆ ಎಂದು ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವ ಬರಿಂದರ್ ಕುಮಾರ್ ಗೋಯಲ್ ಮಂಡಿಸಿದ ನಿರ್ಣಯದ ವೇಳೆ ಆರೋಪಿಸಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ.

ಭಾಕ್ರಾ ನಂಗಲ್ ಮತ್ತು ಭಾಕ್ರಾ ಬಿಯಾಸ್ ಯೋಜನೆಗಳ ಆಡಳಿತ ಮತ್ತು ನಿರ್ವಹಣೆಯನ್ನು ಅದರ ಮಂಡಳಿಯು ಮಾಡುತ್ತದೆ. ಇದು ಪಂಜಾಬ್, ಹರಿಯಾಣ, ರಾಜಸ್ಥಾನ, ಹಿಮಾಚಲ ಪ್ರದೇಶ, ದೆಹಲಿ ಮತ್ತು ಚಂಡೀಗಢಕ್ಕೆ ನೀರು ಮತ್ತು ವಿದ್ಯುತ್ ಸರಬರಾಜನ್ನು ನಿಯಂತ್ರಿಸುತ್ತದೆ.

ಭಾಕ್ರಾ ನಂಗಲ್ ಯೋಜನೆಯು ಸತ್ಲೆಜ್ ನದಿಯ ಮೇಲೆ ಎರಡು ಅಣೆಕಟ್ಟುಗಳನ್ನು ಒಳಗೊಂಡಿದೆ. ಹಿಮಾಚಲ ಪ್ರದೇಶದ ಭಾಕ್ರಾ ಅಣೆಕಟ್ಟು ಮತ್ತು ಪಂಜಾಬ್‌ನ ನಂಗಲ್ ಅಣೆಕಟ್ಟು ಇದರಲ್ಲಿ ಸೇರಿವೆ. ಬಿಯಾಸ್ ಯೋಜನೆಯು ಬಿಯಾಸ್-ಸತ್ಲೆಜ್ ಲಿಂಕ್ ಕಾಲುವೆ ಮತ್ತು ಬಿಯಾಸ್ ಅಣೆಕಟ್ಟುಗಳನ್ನು ಒಳಗೊಂಡಿರುವ ಬಹುಪಯೋಗಿ ನದಿ ಕಣಿವೆ ಯೋಜನೆಯಾಗಿದೆ.

ಭಾಕ್ರಾ ನಂಗಲ್‌ನಿಂದ ನೀರು ಬಿಡುಗಡೆ ಮಾಡುವಂತೆ ಹರಿಯಾಣ ಸಲ್ಲಿಸಿದ ಮನವಿಯ ಮೇಲೆ ಪ್ರಸ್ತುತ ಗದ್ದಲ ಭುಗಿಲೆದ್ದಿದ್ದು, ಇದನ್ನು ಪಂಜಾಬ್ ವಿರೋಧಿಸಿದೆ. ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿಯು ನೀರಿನ ವಿತರಣೆಯ ಕುರಿತು ತೆಗೆದುಕೊಂಡ ನಿರ್ಧಾರಗಳನ್ನು ಪಂಜಾಬ್ ಸರ್ಕಾರ ಇನ್ನು ಮುಂದೆ ಸ್ವೀಕರಿಸುವುದಿಲ್ಲ ಎಂದು ನಿರ್ಣಯದಲ್ಲಿ ಹೇಳಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಪಂಜಾಬ್‌ನ ನೀರನ್ನು ಮಂಡಳಿಯು ವರ್ಷಗಳಿಂದ ಇತರ ರಾಜ್ಯಗಳಿಗೆ ತಿರುಗಿಸುತ್ತಿತ್ತು ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ವಿಧಾನಸಭೆಯಲ್ಲಿ ಹೇಳಿಕೊಂಡಿದ್ದಾರೆ. “ಈಗ ಬಿಜೆಪಿ ಸರ್ಕಾರವು ತನ್ನ ರಾಜಕೀಯ ಹಿತಾಸಕ್ತಿಗಳಿಗಾಗಿ ಈ ಮಂಡಳಿಯನ್ನು ಬಳಸಲು ಪ್ರಾರಂಭಿಸಿದೆ” ಎಂದು ಅವರು ಹೇಳಿದ್ದಾರೆ.

“ಪಂಜಾಬ್‌ನೊಂದಿಗೆ ಸಮಾಲೋಚಿಸದೆ, ಮಧ್ಯರಾತ್ರಿಯಲ್ಲಿ ಸಭೆಗಳನ್ನು ಕರೆಯಲಾಗುತ್ತಿದೆ ಮತ್ತು ಇತರ ರಾಜ್ಯಗಳ ಒತ್ತಡದ ಮೇರೆಗೆ ಪಂಜಾಬ್‌ನ ನ್ಯಾಯಯುತ ಪಾಲನ್ನು ಕಸಿದುಕೊಳ್ಳಲಾಗುತ್ತಿದೆ.” ಎಂದು ಅವರು ಹೇಳಿದ್ದಾರೆ.

ಈ ನಡೆಯನ್ನು “ಅಸಂವಿಧಾನಿಕ” ಮತ್ತು “ಕಾನೂನುಬಾಹಿರ” ಎಂದು ಕರೆದ ಮುಖ್ಯಮಂತ್ರಿ, ಪಂಜಾಬ್‌ನ ನೀರನ್ನು ಹರಿಯಾಣಕ್ಕೆ ಬಲವಂತವಾಗಿ ತಿರುಗಿಸಲು ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿ ಸಭೆಗಳನ್ನು ಕರೆಯಲಾಗುತ್ತಿದೆ ಎಂದು ಹೇಳಿದ್ದಾರೆ. ಮಾರ್ಚ್ 31 ರ ವೇಳೆಗೆ ಹರಿಯಾಣ ತನ್ನ ವಾರ್ಷಿಕ ಹಂಚಿಕೆಯ ನೀರನ್ನು ಈಗಾಗಲೇ ಬಳಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.

ಸಟ್ಲೆಜ್ ಮತ್ತು ಬಿಯಾಸ್ ನದಿಗಳ ನೀರು ಸಂಪೂರ್ಣವಾಗಿ ಪಂಜಾಬ್‌ಗೆ ಸೇರಿತ್ತು ಎಂದು ಸಿಎಂ ಹೇಳಿದ್ದು, “ಈಗ ನಾವು ಈ ನೀರನ್ನು ಸಂಪೂರ್ಣವಾಗಿ ನಮಗಾಗಿ ಬಳಸುತ್ತೇವೆ” ಎಂದು ಅವರು ಹೇಳಿದ್ದಾರೆ. ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನು ಪಂಜಾಬ್ ಮತ್ತು ಅದರ ಹಕ್ಕುಗಳ ಮೇಲಿನ “ಗಂಭೀರ ದಾಳಿ” ಎಂದು ಇದೇ ವೇಳೆ ಸಿಎಂ ಕರೆದಿದ್ದಾರೆ.

ಈ ಕಾಯ್ದೆಯು ಅಣೆಕಟ್ಟುಗಳ ಕಣ್ಗಾವಲು, ಪರಿಶೀಲನೆ, ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಒಂದು ಚೌಕಟ್ಟನ್ನು ಒದಗಿಸುತ್ತದೆ. “ಈ ಸದನವು 2021 ರ ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನು ಪಂಜಾಬ್‌ನ ಹಕ್ಕುಗಳ ಮೇಲಿನ ದಾಳಿ ಎಂದು ಪರಿಗಣಿಸುತ್ತದೆ” ಎಂದು ನಿರ್ಣಯವು ಹೇಳಿದೆ ಎಂದು ದಿ ಹಿಂದೂ ವರದಿ ಮಾಡಿದೆ.

“ಅಣೆಕಟ್ಟು ಸಂಪೂರ್ಣವಾಗಿ ರಾಜ್ಯದ ಗಡಿಯೊಳಗೆ ಇದ್ದರೂ ಸಹ, ರಾಜ್ಯಗಳ ನದಿಗಳು ಮತ್ತು ಅಣೆಕಟ್ಟುಗಳನ್ನು ನೇರವಾಗಿ ನಿಯಂತ್ರಿಸಲು ಕೇಂದ್ರ ಸರ್ಕಾರಕ್ಕೆ ಈ ಕಾನೂನು ಸಂಪೂರ್ಣ ಅಧಿಕಾರ ನೀಡುತ್ತದೆ. ಈ ಕಾಯ್ದೆಯು ದೇಶದ ಫೆಡರಲ್ ರಚನೆಗೆ ವಿರುದ್ಧವಾಗಿದ್ದು, ಪಂಜಾಬ್‌ನಂತಹ ರಾಜ್ಯಗಳ ನೀರಿನ ಮೇಲಿನ ಸಾರ್ವಭೌಮ ಹಕ್ಕನ್ನು ದುರ್ಬಲಗೊಳಿಸಿದೆ” ಎಂದು ನಿರ್ಣಯ ಹೇಳಿದೆ.

“ಆದ್ದರಿಂದ, ಈ ಸದನವು ಕೇಂದ್ರ ಸರ್ಕಾರದಿಂದ ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತದೆ. ಪಂಜಾಬ್ ಸರ್ಕಾರವು ಈ ಕಾಯ್ದೆಯನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ನಿರ್ಣಯವು ಹೇಳಿದೆ.

ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪರ್ತಾಪ್ ಸಿಂಗ್ ಬಾಜ್ವಾ ಕೂಡ ಈ ನಿರ್ಣಯವನ್ನು ಬೆಂಬಲಿಸಿದ್ದಾರೆ. “ಒಂದು ಹನಿ ನೀರು ಕೂಡ ಬಿಡಲು ಇಲ್ಲ” ಎಂದು ಕಾಂಗ್ರೆಸ್ ನಾಯಕಿ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ. ಹರಿಯಾಣಕ್ಕೆ ಒಂದು ಹನಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಮಿಳುನಾಡು| ಎರಡು ಸಮುದಾಯಗಳ ನಡುವೆ ಘರ್ಷಣೆ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ

ತಮಿಳುನಾಡು| ಎರಡು ಸಮುದಾಯಗಳ ನಡುವೆ ಘರ್ಷಣೆ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...