Homeಮುಖಪುಟಪೆಟ್ರೋಲ್ ಬೆಲೆಯಲ್ಲಿ 10 ರೂ ಕಡಿತಗೊಳಿಸಿದ ಪಂಜಾಬ್ ಸರ್ಕಾರ

ಪೆಟ್ರೋಲ್ ಬೆಲೆಯಲ್ಲಿ 10 ರೂ ಕಡಿತಗೊಳಿಸಿದ ಪಂಜಾಬ್ ಸರ್ಕಾರ

- Advertisement -
- Advertisement -

ಕರ್ನಾಟಕವು ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳು ಪೆಟ್ರೊಲ್‌ ಮತ್ತು ಡೀಸೆಲ್‌ ಮೇಲಿನ ಸುಂಕವನ್ನು 7 ರೂವರೆಗೆ ಕಡಿಮೆಗೊಳಿಸಿದ್ದರ ಬೆನ್ನಲ್ಲೆ ಕಾಂಗ್ರೆಸ್ ಆಡಳಿತವಿರುವ ಪಂಜಾಬ್‌ ಸರ್ಕಾರವು ಲೀಟರ್ ಪೆಟ್ರೊಲ್‌ಗೆ 10 ರೂ ಹಾಗೂ ಡೀಸೆಲ್‌ಗೆ 5 ರೂ ಕಡಿತಗೊಳಿಸಿದೆ.

‘ಪಂಜಾಬ್‌ನಲ್ಲಿ ಪೆಟ್ರೊಲ್‌ ಅಗ್ಗವಾಗಿದೆ. ದೆಹಲಿಗೆ ಹೋಲಿಸಿದರೆ ಪಂಜಾಬ್‌ನಲ್ಲಿ ಪೆಟ್ರೊಲ್‌ ಬೆಲೆ ಈಗ 9 ರೂ ಕಡಿಮೆಯಾಗಿದೆ’ ಎಂದಿರುವ ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ, ’ಪಂಜಾಬ್‌ನಲ್ಲಿ ಪೆಟ್ರೋಲ್ ಬೆಲೆಯನ್ನು ₹ 10 ಮತ್ತು ಡೀಸೆಲ್‌ಗೆ ₹ 5 ಕಡಿತಗೊಳಿಸಲಾಗುವುದು. ಕಳೆದ 70 ವರ್ಷಗಳಲ್ಲಿ ಇದು ಸಂಭವಿಸಿಲ್ಲ’ ಎಂದು ತಿಳಿಸಿದ್ದಾರೆ.

ಕಳೆದ ವಾರವಷ್ಟೆ ಪ್ರತಿದಿನ 35 ಪೈಸೆಗಳಂತೆ ಆರು ದಿನಗಳ ಕಾಲ ಸತತವಾಗಿ ಪೆಟ್ರೋಲ್‌ ಬೆಲೆ ಏರಿಕೆಯಾಗಿತ್ತು. 2020ರ ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಪೆಟ್ರೊಲ್‌ ಬೆಲೆ  86.47 ರೂ ಆಗಿತ್ತು. ಒಂದು ವರ್ಷದ ಅವಧಿಯಲ್ಲಿ ಅದು 113 ರೂ ತಲುಪಿತ್ತು. ಅಂದರೆ ಒಂದು ವರ್ಷದ ಅವಧಿಯಲ್ಲಿ ಸುಮಾರು 30 ರೂಗಳಷ್ಟು ಬೆಲೆ ಏರಿಕೆಯಾಗಿದೆ.

ಒಕ್ಕೂಟ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಶುಂಕವನ್ನು ಪ್ರತಿ ಲೀಟರ್ ಮೇಲೆ 5 ರೂ ಮತ್ತು ಡೀಸೆಲ್ ಮೇಲೆ 10 ರೂ ಕಡಿತಗೊಳಿಸಿದೆ. ಇದರ ಬೆನ್ನಲ್ಲೆ ಬಿಜೆಪಿ ಆಡಳಿತದ 10 ರಾಜ್ಯಗಳು ಮತ್ತು ಇತರ ಎರಡು ರಾಜ್ಯಗಳು ಸಹ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ ಮಾಡಿವೆ.

ಕರ್ನಾಟಕ, ಹಿಮಾಚಲ ಪ್ರದೇಶ, ತ್ರಿಪುರ, ಮಣಿಪುರ, ಅಸ್ಸಾಂ, ಗೋವಾ, ಉತ್ತರ ಪ್ರದೇಶ, ಗುಜರಾತ್, ಹರಿಯಾಣ ಉತ್ತರಖಂಡ, ಬಿಹಾರ ಮತ್ತು ಓರಿಸ್ಸಾ ರಾಜ್ಯಗಳು ತಮ್ಮ ವ್ಯಾಟ್ ಕಡಿತ ಮಾಡಿವೆ. ಕರ್ನಾಟಕ, ತ್ರಿಪುರ, ಮಣಿಪುರ, ಅಸ್ಸಾಂ, ಹರಿಯಾಣ, ಗೋವಾ ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್‌ಗೆ ತಲಾ 7 ರೂ ಕಡಿತಗೊಳಿಸಿವೆ. ಉಳಿದ ರಾಜ್ಯಗಳು ತಲಾ 2 ರೂನಷ್ಟು ಕಡಿತಗೊಳಿಸಿವೆ.

ಬಿಹಾರ

ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿಕೂಟ ಅಧಿಕಾರದಲ್ಲಿದೆ. ಅಲ್ಲಿನ ಮುಖ್ಯಮಂತ್ರಿ ನಿತೀಶ್ ಕುಮಾರ್‌ರವರು ಲೀಟರ್ ಪೆಟ್ರೋಲ್ ಮೇಲೆ 3.20 ರೂ ಮತ್ತು ಡೀಸೆಲ್ ಮೇಲೆ 3.90ರೂ ವ್ಯಾಟ್ ಕಡಿತ ಮಾಡಿದ್ದಾರೆ.

ಓರಿಸ್ಸಾ

ಓರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ರವರು ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ 3 ರೂ ಕಡಿತಗೊಳಿಸುವುದಾಗಿ ತಿಳಿಸಿದ್ದಾರೆ.

ತಮಿಳುನಾಡು ಸರ್ಕಾರವು ಆಗಸ್ಟ್ 6 ರಂದೇ ಲೀಟರ್‌ ಪೆಟ್ರೋಲ್ ಮೇಲೆ ತಲಾ 3 ರೂ ತೆರಿಗೆ ಕಡಿತ ಘೋಷಿಸಿತ್ತು.

ಈ ಬೆಲೆ ಇಳಿಕೆಯಿಂದ ದೊಡ್ಡ ಮಟ್ಟದ ಪ್ರಯೋಜನವಿಲ್ಲ. ಕಳೆದ ಒಂದು ವರ್ಷದಿಂದ ಪ್ರತಿ ಲೀಟರ್ ಮೇಲೆ ನಿರಂತರವಾಗಿ 35 – 40 ರೂಗಳಷ್ಟು ಬೆಲೆ ಏರಿಕೆ ಮಾಡಲಾಗಿದೆ. ಅಲ್ಲದೇ ಅಂತರಾಷ್ಟ್ರೀಯ ಕಚ್ಛಾ ತೈಲದ ಬೆಲೆಯೂ ಇಳಿಕೆಯಾಗಿದೆ. ಹಾಗಾಗಿ ಸಣ್ಣ ಮಟ್ಟದ ಬೆಲೆ ಇಳಿಕೆಗಿಂತ ದೊಡ್ಡ ಮಟ್ಟದ ಬೆಲೆ ಇಳಿಕೆಯಾಗಬೇಕೆಂದು ಹಲವಾರು ಜನರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬಿಜೆಪಿಯ ಕಪಾಳಕ್ಕೆ ಭಾರಿಸಿದೆ: ರೈತ ಮುಖಂಡ ಹರ್ನೇಕ್ ಸಿಂಗ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...