Homeಮುಖಪುಟಡ್ರಗ್ಸ್‌ ಮಾಫಿಯಾ ವಿರುದ್ಧ 'ಬುಲ್ಡೋಜರ್ ನ್ಯಾಯ' ಬಳಸುತ್ತಿರುವ ಪಂಜಾಬ್‌ ಸರ್ಕಾರ

ಡ್ರಗ್ಸ್‌ ಮಾಫಿಯಾ ವಿರುದ್ಧ ‘ಬುಲ್ಡೋಜರ್ ನ್ಯಾಯ’ ಬಳಸುತ್ತಿರುವ ಪಂಜಾಬ್‌ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶ ಮಾಡೆಲ್ ಬಳಸುತ್ತಿರುವ ಪಂಜಾಬ್ ಪೊಲೀಸರು, ಲುಧಿಯಾನ ಮತ್ತು ಸುತ್ತಮುತ್ತಲಿನ ಮಾದಕ ದ್ರವ್ಯ ಮಾಫಿಯಾ ಸೋನು ಮತ್ತು ರಾಹುಲ್ ಹನ್ಸ್ ಅವರ ಮನೆಗಳನ್ನು ಕೆಡವಿದ್ದಾರೆ.

ಇದು ರಾಜ್ಯ ಸರ್ಕಾರದ ಮಾದಕ ದ್ರವ್ಯಗಳ ವಿರುದ್ಧದ ಯುದ್ಧದ ಭಾಗವಾಗಿದೆ. ಪೊಲೀಸ್ ಸಿಬ್ಬಂದಿ ಬುಲ್ಡೋಜರ್‌ಗಳೊಂದಿಗೆ ಬಂದು ಮಾದಕ ದ್ರವ್ಯ ಮಾಫಿಯಾದ ಇಬ್ಬರು ವ್ಯಕ್ತಿಗಳೊಂದಿಗೆ ಸಂಬಂಧ ಹೊಂದಿದ್ದ ಅಕ್ರಮ ಆಸ್ತಿಗಳನ್ನು ನೆಲಸಮ ಮಾಡಿದ್ದಾರೆ.

ಸೋಮವಾರ ರಾತ್ರಿ, ಪೊಲೀಸರು ತಲ್ವಂಡಿ ಗ್ರಾಮದಲ್ಲಿ ಮಾದಕ ದ್ರವ್ಯ ಮಾಫಿಯಾ ಸೋನು ಅವರ ಮನೆಯ ಅಕ್ರಮ ನಿರ್ಮಾಣವನ್ನು ಬುಲ್ಡೋಜರ್‌ಗಳೊಂದಿಗೆ ನೆಲಸಮ ಮಾಡಿದ್ದಾರೆ. ಸೋನು ಮೂರು ವರ್ಷಗಳಿಂದ ಮಾದಕ ದ್ರವ್ಯ ಕಳ್ಳಸಾಗಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಆತನ ವಿರುದ್ಧ ಆರು ಎಫ್‌ಐಆರ್‌ಗಳು ದಾಖಲಾಗಿವೆ.

ಇಂದು ಮುಂಜಾನೆ ಮತ್ತೊಂದು ಘಟನೆಯಲ್ಲಿ, ಪೊಲೀಸರು ಲುಧಿಯಾನದಲ್ಲಿರುವ ರಾಹುಲ್ ಹನ್ಸ್ ಅವರ ಮೆನಯನ್ನು ಸಹ ನೆಲಸಮ ಮಾಡಿದ್ದಾರೆ. ಹನ್ಸ್ ಅವರ ಭವನವು ₹47 ಲಕ್ಷ ಮೌಲ್ಯದ್ದಾಗಿತ್ತು. ಪಂಜಾಬ್ ಸರ್ಕಾರವು ಅಕ್ರಮ ಚಟುವಟಿಕೆಗಳ ವಿರುದ್ಧ ಉತ್ತರ ಪ್ರದೇಶ ಮತ್ತು ಹರಿಯಾಣ ಸರ್ಕಾರಗಳ ಶೈಲಿಯನ್ನು ಅನುಸರಿಸುತ್ತಿರುವಂತೆ ತೋರುತ್ತಿದೆ.

ಪಂಜಾಬ್ ಸರ್ಕಾರವು ರಾಜ್ಯದಲ್ಲಿ ಮಾದಕ ದ್ರವ್ಯ ದುರುಪಯೋಗದ ವಿರುದ್ಧ ಕಠಿಣ ಕ್ರಮವನ್ನು ಘೋಷಿಸಿದೆ. ಸಾಕಷ್ಟು ಪುನರ್ವಸತಿ ಮತ್ತು ವ್ಯಸನ ಮುಕ್ತಿ ಸೌಲಭ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.

ಸರ್ಕಾರವು ತನ್ನ ಕ್ರಮವು ಮಾದಕ ವಸ್ತುಗಳ ಅಭ್ಯಾಸವಿರುವ ಬಳಕೆದಾರರಲ್ಲಿ ತೊಂದರೆಯನ್ನು ಉಂಟುಮಾಡಬಹುದು ಎಂದು ಹೇಳಿಕೆಯಲ್ಲಿ ತಿಳಿಸಿದೆ. “ಮಾದಕ ವಸ್ತುಗಳ ಸೇವನೆಯಿಂದ ನಿಧಾನವಾಗಿ ದೂರವಾಗಲು, ಬುಪ್ರೆನಾರ್ಫಿನ್ ಔಷಧ, ಪರೀಕ್ಷಾ ಕಿಟ್‌ಗಳು, ಅಗತ್ಯವಿರುವ ಸಿಬ್ಬಂದಿ ಇತ್ಯಾದಿ ಸೇರಿದಂತೆ ಅಗತ್ಯ ಉಪಕರಣಗಳು ಮತ್ತು ಔಷಧಿಗಳೊಂದಿಗೆ ಸಾಕಷ್ಟು ಸಂಖ್ಯೆಯ ಪುನರ್ವಸತಿ ಮತ್ತು ಮಾದಕ ವಸ್ತುಗಳ ವ್ಯಸನ ನಿರ್ಮೂಲನಾ ಕೇಂದ್ರಗಳನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಈ ಮೂಲಕ ನಿರ್ದೇಶನ ನೀಡಲಾಗಿದೆ. ಸಿದ್ಧತೆಗಳನ್ನು ಯುದ್ಧೋಪಾದಿಯಲ್ಲಿ ಮಾಡಬೇಕು ಮತ್ತು ಪ್ರತಿ ಜಿಲ್ಲಾ ಪೊಲೀಸ್ ಮುಂದಿನ ಎರಡು ದಿನಗಳಲ್ಲಿ ಸಿದ್ಧರಾಗಿರಬೇಕು” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಕಳೆದ ವಾರ, ಪಂಜಾಬ್ ಪೊಲೀಸರು ನಾಲ್ವರು ಮಾದಕ ವಸ್ತುಗಳ ಕಳ್ಳಸಾಗಣೆದಾರರನ್ನು ಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಐದು ಕಿಲೋಗ್ರಾಂಗಳಿಗಿಂತ ಹೆಚ್ಚು ಹೆರಾಯಿನ್ ವಶಪಡಿಸಿಕೊಂಡರು. ಆರೋಪಿಗಳನ್ನು ಅಮೃತಸರದ ನಿವಾಸಿಗಳಾದ ಗುರ್ಜಂತ್ ಸಿಂಗ್ ಅಲಿಯಾಸ್ ಕಲು ಮತ್ತು ತರಣ್ ತರಣ್‌ನ ಸಾಹಿಲ್ ಕುಮಾರ್ ಅಲಿಯಾಸ್ ಸಾಹಿಲ್ ಮತ್ತು ಫಿರೋಜ್‌ಪುರದ ರಿಂಕು ಎಂದು ಗುರುತಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ; ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್, ತೇಜಸ್ವಿ-ತೇಜ್ ಪ್ರತಾಪ್‌ಗೆ ನ್ಯಾಯಾಲಯದಿಂದ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...