Homeಮುಖಪುಟಪ್ರವಾಹಕ್ಕೆ ನಲುಗಿದ ಪಂಜಾಬ್: ಇದುವರೆಗೆ 37 ಮಂದಿ ಸಾವು, ಸಂಕಷ್ಟದಲ್ಲಿ 23 ಜಿಲ್ಲೆಗಳ ಜನತೆ

ಪ್ರವಾಹಕ್ಕೆ ನಲುಗಿದ ಪಂಜಾಬ್: ಇದುವರೆಗೆ 37 ಮಂದಿ ಸಾವು, ಸಂಕಷ್ಟದಲ್ಲಿ 23 ಜಿಲ್ಲೆಗಳ ಜನತೆ

- Advertisement -
- Advertisement -

ಪಂಜಾಬ್‌ನಲ್ಲಿ ಭಾರೀ ಪ್ರವಾಹದಿಂದ ಇದುವರೆಗೆ 37 ಜನರು ಪ್ರಾಣ ಕಳೆದುಕೊಂಡಿದ್ದು, 23 ಜಿಲ್ಲೆಗಳಲ್ಲಿ ಜನ ಜೀವನ ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿದೆ. ವರದಿಗಳ ಪ್ರಕಾರ, 1988ರ ನಂತರ ರಾಜ್ಯ ಎದುರಿಸಿದ ಅತ್ಯಂತ ಭೀಕರ ಪ್ರವಾಹ ಇದಾಗಿದೆ. ನಿರಂತರ ಸುರಿಯುತ್ತಿರುವ ಮಳೆ ಪರಿಸ್ಥಿತಿಯನ್ನು ಇನ್ನಷ್ಟು ಹದೆಗೆಡಿಸಿದೆ.

ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರದ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಮತ್ತು ಕಾಲೋಚಿತ ಹೊಳೆಗಳು ಉಕ್ಕಿ ಹರಿದಿವೆ. ಇದರಿಂದ ಭೀಕರ ಪ್ರವಾಹ ಉಂಟಾಗಿದೆ.

ಗುರುದಾಸ್ಪುರ, ಪಠಾಣ್‌ಕೋಟ್‌ ಫಝಿಲ್ಕಾ, ಕಪುರ್ಥಲಾ, ತರಣ್ ತರಣ್, ಫಿರೋಝ್‌ಪುರ, ಹೋಶಿಯಾರ್‌ಪುರ್‌ ಮತ್ತು ಅಮೃತಸರ ಜಿಲ್ಲೆಗಳಲ್ಲಿ ಹಲವು ಗ್ರಾಮಗಳು ಮುಳುಗಡೆಯಾಗಿವೆ.

ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತೆ ದೃಷ್ಠಿಯಿಂದ ಸರ್ಕಾರಿ, ಅನುದಾನಿತ, ಮತ್ತು ಖಾಸಗಿ ಶಾಲಾ- ಕಾಲೇಜುಗಳು, ವಿಶ್ವವಿದ್ಯಾಲಯಗಳು ಮತ್ತು ಪಾಲಿಟೆಕ್ನಿಕ್ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸೆಪ್ಟೆಂಬರ್ 7 ರವರೆಗೆ ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಪಂಜಾಬ್ ಸಚಿವ ಸಂಪುಟದ ಸಚಿವರು, ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೊಂದಿಗೆ ತರಣ್ ತರಣ್ ಜಿಲ್ಲೆಯಲ್ಲಿ ಬಿಯಾಸ್ ನದಿ ತೀರದ ಹಳ್ಳಿಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಪರಿಹಾರ ಕಾರ್ಯಗಳ ಕುರಿತು ಸ್ಥಳೀಯ ಜನರೊಂದಿಗೆ ಸಂಪುಟ ಸಚಿವರು ಮತ್ತು ಎಎಪಿ ನಾಯಕರು ಚರ್ಚೆ ನಡೆಸಿದ್ದಾರೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸಚಿವರು ಅಮೃತಸರ, ಗುರುದಾಸ್ಪುರ ಮತ್ತು ಕಪುರ್ಥಲಾ ಜಿಲ್ಲೆಗಳ ಹಳ್ಳಿಗಳಿಗೆ ಭೇಟಿ ನೀಡಿ ಸಂತ್ರಸ್ತ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸಚಿವ ಚೌಹಾಣ್ ಅವರು ರಾಜ್ಯದ ಅಧಿಕಾರಿಗಳೊಂದಿಗೆ ಬೆಳೆ ಹಾನಿಯ ಪ್ರಮಾಣವನ್ನು ಪರಿಶೀಲಿಸಲಿದ್ದಾರೆ ಮತ್ತು ರೈತರಿಗೆ ನೆರವು ನೀಡಲು ಕ್ರಮಗಳನ್ನು ರೂಪಿಸಲಿದ್ದಾರೆ ಎಂದು ವರದಿಗಳು ವಿವರಿಸಿವೆ.

ಪ್ರವಾಹದಿಂದ 1.48 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಭೂಮಿಯ ಬೆಳೆಗಳು ನಾಶವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾ ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ. ಹಳ್ಳಿಗಳಿಗೆ ಆಹಾರ, ಮೇವನ್ನು ಸಾಗಿಸುವ ಮತ್ತು ಮತ್ತಷ್ಟು ಪ್ರವಾಹವನ್ನು ತಡೆಗಟ್ಟಲು ಪ್ರಮುಖ ನೀರಿನ ಕಾಲುವೆಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತವಾಗಿವೆ.

ಅಂಗೋಸ್ ಮತ್ತು ಸಿಖ್ ಸಂಘಟನೆಗಳು ಅಕ್ಕಿ, ಬೇಳೆಕಾಳುಗಳು, ಸಾಸಿವೆ ಎಣ್ಣೆ, ಬಿಸ್ಕತ್ತುಗಳು, ಗೋಧಿ ಹಿಟ್ಟು, ಔಷಧಿ ಮತ್ತು ಜಾನುವಾರು ಮೇವು ಸೇರಿದಂತೆ ಒಣ ಪಡಿತರವನ್ನು ಒದಗಿಸುತ್ತಿವೆ.

ಜಿಲ್ಲಾಡಳಿತಗಳು ಸಂತ್ರಸ್ತರಿಗಾಗಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದರೂ, ಅನೇಕ ಗ್ರಾಮಸ್ಥರು ತಮ್ಮ ಮನೆಗಳಲ್ಲಿಯೇ ಉಳಿಯುವ ನಿರ್ಧಾರ ಮಾಡಿಕೊಂಡಿದ್ದಾರೆ. ಜಾನುವಾರು ಆಶ್ರಯಗಳು ಪ್ರವಾಹಕ್ಕೆ ಸಿಲುಕಿರುವ ಪ್ರದೇಶಗಳಲ್ಲಿ ಜನರು ತಮ್ಮ ಮನೆಗಳ ಛಾವಣಿ ಸೇರಿದಂತೆ ಎತ್ತರದ ಪ್ರದೇಶಗಳಿಗೆ ಜಾನುವಾರುಗಳನ್ನು ಸ್ಥಳಾಂತರಿಸಿದ್ದಾರೆ.

ಪಂಜಾಬ್ ಸರ್ಕಾರವು ಹಾನಿಯನ್ನು ನಿರ್ಣಯಿಸಲು ವಿಶೇಷ ‘ಗಿರ್ದಾವರಿ’ (ನಷ್ಟದ ಮೌಲ್ಯಮಾಪನ) ಅನ್ನು ಪ್ರಾರಂಭಿಸಿದೆ ಮತ್ತು ಪ್ರತೀ ಹಾನಿಗೂ ನಷ್ಟ ಪರಿಹಾರ ನೀಡುವುದಾಗಿ ಹೇಳಿದೆ.

“ದೇಶವು ಬಿಕ್ಕಟ್ಟನ್ನು ಎದುರಿಸಿದಾಗಲೆಲ್ಲಾ, ಪಂಜಾಬ್ ದೇಶದ ಜೊತೆ ನಿಂತಿದೆ. ಅದು ಹಸಿರು ಕ್ರಾಂತಿಯ ಸಮಯವಾಗಿರಬಹುದು ಅಥವಾ ಸ್ವಾತಂತ್ರ್ಯ ಹೋರಾಟದ ಸಮಯವಾಗಿರಬಹುದು. ನಾವು ಗರಿಷ್ಠ ತ್ಯಾಗಗಳನ್ನು ಮಾಡಿದ್ದೇವೆ. ಇಂದು, ಪಂಜಾಬ್ ಬಿಕ್ಕಟ್ಟಿನಲ್ಲಿದೆ, ದೇಶವು ನಮ್ಮ ಬೆಂಬಲಕ್ಕೆ ನಿಲ್ಲುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಫಿರೋಜ್‌ಪುರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದ್ದಾರೆ.

ಉತ್ತರಾಖಂಡ: ಮಳೆಯಿಂದ 5,000 ಕೋಟಿ ರೂ. ನಷ್ಟ, ಕೇದಾರನಾಥ ದುರಂತದ ನಂತರದ ಅತಿ ದೊಡ್ಡ ಆರ್ಥಿಕ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...