Homeಮುಖಪುಟಪ್ರವಾಹಕ್ಕೆ ನಲುಗಿದ ಪಂಜಾಬ್: ಇದುವರೆಗೆ 37 ಮಂದಿ ಸಾವು, ಸಂಕಷ್ಟದಲ್ಲಿ 23 ಜಿಲ್ಲೆಗಳ ಜನತೆ

ಪ್ರವಾಹಕ್ಕೆ ನಲುಗಿದ ಪಂಜಾಬ್: ಇದುವರೆಗೆ 37 ಮಂದಿ ಸಾವು, ಸಂಕಷ್ಟದಲ್ಲಿ 23 ಜಿಲ್ಲೆಗಳ ಜನತೆ

- Advertisement -
- Advertisement -

ಪಂಜಾಬ್‌ನಲ್ಲಿ ಭಾರೀ ಪ್ರವಾಹದಿಂದ ಇದುವರೆಗೆ 37 ಜನರು ಪ್ರಾಣ ಕಳೆದುಕೊಂಡಿದ್ದು, 23 ಜಿಲ್ಲೆಗಳಲ್ಲಿ ಜನ ಜೀವನ ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿದೆ. ವರದಿಗಳ ಪ್ರಕಾರ, 1988ರ ನಂತರ ರಾಜ್ಯ ಎದುರಿಸಿದ ಅತ್ಯಂತ ಭೀಕರ ಪ್ರವಾಹ ಇದಾಗಿದೆ. ನಿರಂತರ ಸುರಿಯುತ್ತಿರುವ ಮಳೆ ಪರಿಸ್ಥಿತಿಯನ್ನು ಇನ್ನಷ್ಟು ಹದೆಗೆಡಿಸಿದೆ.

ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರದ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಮತ್ತು ಕಾಲೋಚಿತ ಹೊಳೆಗಳು ಉಕ್ಕಿ ಹರಿದಿವೆ. ಇದರಿಂದ ಭೀಕರ ಪ್ರವಾಹ ಉಂಟಾಗಿದೆ.

ಗುರುದಾಸ್ಪುರ, ಪಠಾಣ್‌ಕೋಟ್‌ ಫಝಿಲ್ಕಾ, ಕಪುರ್ಥಲಾ, ತರಣ್ ತರಣ್, ಫಿರೋಝ್‌ಪುರ, ಹೋಶಿಯಾರ್‌ಪುರ್‌ ಮತ್ತು ಅಮೃತಸರ ಜಿಲ್ಲೆಗಳಲ್ಲಿ ಹಲವು ಗ್ರಾಮಗಳು ಮುಳುಗಡೆಯಾಗಿವೆ.

ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತೆ ದೃಷ್ಠಿಯಿಂದ ಸರ್ಕಾರಿ, ಅನುದಾನಿತ, ಮತ್ತು ಖಾಸಗಿ ಶಾಲಾ- ಕಾಲೇಜುಗಳು, ವಿಶ್ವವಿದ್ಯಾಲಯಗಳು ಮತ್ತು ಪಾಲಿಟೆಕ್ನಿಕ್ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸೆಪ್ಟೆಂಬರ್ 7 ರವರೆಗೆ ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಪಂಜಾಬ್ ಸಚಿವ ಸಂಪುಟದ ಸಚಿವರು, ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೊಂದಿಗೆ ತರಣ್ ತರಣ್ ಜಿಲ್ಲೆಯಲ್ಲಿ ಬಿಯಾಸ್ ನದಿ ತೀರದ ಹಳ್ಳಿಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಪರಿಹಾರ ಕಾರ್ಯಗಳ ಕುರಿತು ಸ್ಥಳೀಯ ಜನರೊಂದಿಗೆ ಸಂಪುಟ ಸಚಿವರು ಮತ್ತು ಎಎಪಿ ನಾಯಕರು ಚರ್ಚೆ ನಡೆಸಿದ್ದಾರೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸಚಿವರು ಅಮೃತಸರ, ಗುರುದಾಸ್ಪುರ ಮತ್ತು ಕಪುರ್ಥಲಾ ಜಿಲ್ಲೆಗಳ ಹಳ್ಳಿಗಳಿಗೆ ಭೇಟಿ ನೀಡಿ ಸಂತ್ರಸ್ತ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸಚಿವ ಚೌಹಾಣ್ ಅವರು ರಾಜ್ಯದ ಅಧಿಕಾರಿಗಳೊಂದಿಗೆ ಬೆಳೆ ಹಾನಿಯ ಪ್ರಮಾಣವನ್ನು ಪರಿಶೀಲಿಸಲಿದ್ದಾರೆ ಮತ್ತು ರೈತರಿಗೆ ನೆರವು ನೀಡಲು ಕ್ರಮಗಳನ್ನು ರೂಪಿಸಲಿದ್ದಾರೆ ಎಂದು ವರದಿಗಳು ವಿವರಿಸಿವೆ.

ಪ್ರವಾಹದಿಂದ 1.48 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಭೂಮಿಯ ಬೆಳೆಗಳು ನಾಶವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾ ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ. ಹಳ್ಳಿಗಳಿಗೆ ಆಹಾರ, ಮೇವನ್ನು ಸಾಗಿಸುವ ಮತ್ತು ಮತ್ತಷ್ಟು ಪ್ರವಾಹವನ್ನು ತಡೆಗಟ್ಟಲು ಪ್ರಮುಖ ನೀರಿನ ಕಾಲುವೆಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತವಾಗಿವೆ.

ಅಂಗೋಸ್ ಮತ್ತು ಸಿಖ್ ಸಂಘಟನೆಗಳು ಅಕ್ಕಿ, ಬೇಳೆಕಾಳುಗಳು, ಸಾಸಿವೆ ಎಣ್ಣೆ, ಬಿಸ್ಕತ್ತುಗಳು, ಗೋಧಿ ಹಿಟ್ಟು, ಔಷಧಿ ಮತ್ತು ಜಾನುವಾರು ಮೇವು ಸೇರಿದಂತೆ ಒಣ ಪಡಿತರವನ್ನು ಒದಗಿಸುತ್ತಿವೆ.

ಜಿಲ್ಲಾಡಳಿತಗಳು ಸಂತ್ರಸ್ತರಿಗಾಗಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದರೂ, ಅನೇಕ ಗ್ರಾಮಸ್ಥರು ತಮ್ಮ ಮನೆಗಳಲ್ಲಿಯೇ ಉಳಿಯುವ ನಿರ್ಧಾರ ಮಾಡಿಕೊಂಡಿದ್ದಾರೆ. ಜಾನುವಾರು ಆಶ್ರಯಗಳು ಪ್ರವಾಹಕ್ಕೆ ಸಿಲುಕಿರುವ ಪ್ರದೇಶಗಳಲ್ಲಿ ಜನರು ತಮ್ಮ ಮನೆಗಳ ಛಾವಣಿ ಸೇರಿದಂತೆ ಎತ್ತರದ ಪ್ರದೇಶಗಳಿಗೆ ಜಾನುವಾರುಗಳನ್ನು ಸ್ಥಳಾಂತರಿಸಿದ್ದಾರೆ.

ಪಂಜಾಬ್ ಸರ್ಕಾರವು ಹಾನಿಯನ್ನು ನಿರ್ಣಯಿಸಲು ವಿಶೇಷ ‘ಗಿರ್ದಾವರಿ’ (ನಷ್ಟದ ಮೌಲ್ಯಮಾಪನ) ಅನ್ನು ಪ್ರಾರಂಭಿಸಿದೆ ಮತ್ತು ಪ್ರತೀ ಹಾನಿಗೂ ನಷ್ಟ ಪರಿಹಾರ ನೀಡುವುದಾಗಿ ಹೇಳಿದೆ.

“ದೇಶವು ಬಿಕ್ಕಟ್ಟನ್ನು ಎದುರಿಸಿದಾಗಲೆಲ್ಲಾ, ಪಂಜಾಬ್ ದೇಶದ ಜೊತೆ ನಿಂತಿದೆ. ಅದು ಹಸಿರು ಕ್ರಾಂತಿಯ ಸಮಯವಾಗಿರಬಹುದು ಅಥವಾ ಸ್ವಾತಂತ್ರ್ಯ ಹೋರಾಟದ ಸಮಯವಾಗಿರಬಹುದು. ನಾವು ಗರಿಷ್ಠ ತ್ಯಾಗಗಳನ್ನು ಮಾಡಿದ್ದೇವೆ. ಇಂದು, ಪಂಜಾಬ್ ಬಿಕ್ಕಟ್ಟಿನಲ್ಲಿದೆ, ದೇಶವು ನಮ್ಮ ಬೆಂಬಲಕ್ಕೆ ನಿಲ್ಲುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಫಿರೋಜ್‌ಪುರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದ್ದಾರೆ.

ಉತ್ತರಾಖಂಡ: ಮಳೆಯಿಂದ 5,000 ಕೋಟಿ ರೂ. ನಷ್ಟ, ಕೇದಾರನಾಥ ದುರಂತದ ನಂತರದ ಅತಿ ದೊಡ್ಡ ಆರ್ಥಿಕ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....