Homeಮುಖಪುಟಪ್ರವಾಹಕ್ಕೆ ನಲುಗಿದ ಪಂಜಾಬ್: ಇದುವರೆಗೆ 37 ಮಂದಿ ಸಾವು, ಸಂಕಷ್ಟದಲ್ಲಿ 23 ಜಿಲ್ಲೆಗಳ ಜನತೆ

ಪ್ರವಾಹಕ್ಕೆ ನಲುಗಿದ ಪಂಜಾಬ್: ಇದುವರೆಗೆ 37 ಮಂದಿ ಸಾವು, ಸಂಕಷ್ಟದಲ್ಲಿ 23 ಜಿಲ್ಲೆಗಳ ಜನತೆ

- Advertisement -
- Advertisement -

ಪಂಜಾಬ್‌ನಲ್ಲಿ ಭಾರೀ ಪ್ರವಾಹದಿಂದ ಇದುವರೆಗೆ 37 ಜನರು ಪ್ರಾಣ ಕಳೆದುಕೊಂಡಿದ್ದು, 23 ಜಿಲ್ಲೆಗಳಲ್ಲಿ ಜನ ಜೀವನ ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿದೆ. ವರದಿಗಳ ಪ್ರಕಾರ, 1988ರ ನಂತರ ರಾಜ್ಯ ಎದುರಿಸಿದ ಅತ್ಯಂತ ಭೀಕರ ಪ್ರವಾಹ ಇದಾಗಿದೆ. ನಿರಂತರ ಸುರಿಯುತ್ತಿರುವ ಮಳೆ ಪರಿಸ್ಥಿತಿಯನ್ನು ಇನ್ನಷ್ಟು ಹದೆಗೆಡಿಸಿದೆ.

ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರದ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಮತ್ತು ಕಾಲೋಚಿತ ಹೊಳೆಗಳು ಉಕ್ಕಿ ಹರಿದಿವೆ. ಇದರಿಂದ ಭೀಕರ ಪ್ರವಾಹ ಉಂಟಾಗಿದೆ.

ಗುರುದಾಸ್ಪುರ, ಪಠಾಣ್‌ಕೋಟ್‌ ಫಝಿಲ್ಕಾ, ಕಪುರ್ಥಲಾ, ತರಣ್ ತರಣ್, ಫಿರೋಝ್‌ಪುರ, ಹೋಶಿಯಾರ್‌ಪುರ್‌ ಮತ್ತು ಅಮೃತಸರ ಜಿಲ್ಲೆಗಳಲ್ಲಿ ಹಲವು ಗ್ರಾಮಗಳು ಮುಳುಗಡೆಯಾಗಿವೆ.

ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತೆ ದೃಷ್ಠಿಯಿಂದ ಸರ್ಕಾರಿ, ಅನುದಾನಿತ, ಮತ್ತು ಖಾಸಗಿ ಶಾಲಾ- ಕಾಲೇಜುಗಳು, ವಿಶ್ವವಿದ್ಯಾಲಯಗಳು ಮತ್ತು ಪಾಲಿಟೆಕ್ನಿಕ್ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸೆಪ್ಟೆಂಬರ್ 7 ರವರೆಗೆ ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಪಂಜಾಬ್ ಸಚಿವ ಸಂಪುಟದ ಸಚಿವರು, ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೊಂದಿಗೆ ತರಣ್ ತರಣ್ ಜಿಲ್ಲೆಯಲ್ಲಿ ಬಿಯಾಸ್ ನದಿ ತೀರದ ಹಳ್ಳಿಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಪರಿಹಾರ ಕಾರ್ಯಗಳ ಕುರಿತು ಸ್ಥಳೀಯ ಜನರೊಂದಿಗೆ ಸಂಪುಟ ಸಚಿವರು ಮತ್ತು ಎಎಪಿ ನಾಯಕರು ಚರ್ಚೆ ನಡೆಸಿದ್ದಾರೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸಚಿವರು ಅಮೃತಸರ, ಗುರುದಾಸ್ಪುರ ಮತ್ತು ಕಪುರ್ಥಲಾ ಜಿಲ್ಲೆಗಳ ಹಳ್ಳಿಗಳಿಗೆ ಭೇಟಿ ನೀಡಿ ಸಂತ್ರಸ್ತ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸಚಿವ ಚೌಹಾಣ್ ಅವರು ರಾಜ್ಯದ ಅಧಿಕಾರಿಗಳೊಂದಿಗೆ ಬೆಳೆ ಹಾನಿಯ ಪ್ರಮಾಣವನ್ನು ಪರಿಶೀಲಿಸಲಿದ್ದಾರೆ ಮತ್ತು ರೈತರಿಗೆ ನೆರವು ನೀಡಲು ಕ್ರಮಗಳನ್ನು ರೂಪಿಸಲಿದ್ದಾರೆ ಎಂದು ವರದಿಗಳು ವಿವರಿಸಿವೆ.

ಪ್ರವಾಹದಿಂದ 1.48 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಭೂಮಿಯ ಬೆಳೆಗಳು ನಾಶವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾ ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ. ಹಳ್ಳಿಗಳಿಗೆ ಆಹಾರ, ಮೇವನ್ನು ಸಾಗಿಸುವ ಮತ್ತು ಮತ್ತಷ್ಟು ಪ್ರವಾಹವನ್ನು ತಡೆಗಟ್ಟಲು ಪ್ರಮುಖ ನೀರಿನ ಕಾಲುವೆಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತವಾಗಿವೆ.

ಅಂಗೋಸ್ ಮತ್ತು ಸಿಖ್ ಸಂಘಟನೆಗಳು ಅಕ್ಕಿ, ಬೇಳೆಕಾಳುಗಳು, ಸಾಸಿವೆ ಎಣ್ಣೆ, ಬಿಸ್ಕತ್ತುಗಳು, ಗೋಧಿ ಹಿಟ್ಟು, ಔಷಧಿ ಮತ್ತು ಜಾನುವಾರು ಮೇವು ಸೇರಿದಂತೆ ಒಣ ಪಡಿತರವನ್ನು ಒದಗಿಸುತ್ತಿವೆ.

ಜಿಲ್ಲಾಡಳಿತಗಳು ಸಂತ್ರಸ್ತರಿಗಾಗಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದರೂ, ಅನೇಕ ಗ್ರಾಮಸ್ಥರು ತಮ್ಮ ಮನೆಗಳಲ್ಲಿಯೇ ಉಳಿಯುವ ನಿರ್ಧಾರ ಮಾಡಿಕೊಂಡಿದ್ದಾರೆ. ಜಾನುವಾರು ಆಶ್ರಯಗಳು ಪ್ರವಾಹಕ್ಕೆ ಸಿಲುಕಿರುವ ಪ್ರದೇಶಗಳಲ್ಲಿ ಜನರು ತಮ್ಮ ಮನೆಗಳ ಛಾವಣಿ ಸೇರಿದಂತೆ ಎತ್ತರದ ಪ್ರದೇಶಗಳಿಗೆ ಜಾನುವಾರುಗಳನ್ನು ಸ್ಥಳಾಂತರಿಸಿದ್ದಾರೆ.

ಪಂಜಾಬ್ ಸರ್ಕಾರವು ಹಾನಿಯನ್ನು ನಿರ್ಣಯಿಸಲು ವಿಶೇಷ ‘ಗಿರ್ದಾವರಿ’ (ನಷ್ಟದ ಮೌಲ್ಯಮಾಪನ) ಅನ್ನು ಪ್ರಾರಂಭಿಸಿದೆ ಮತ್ತು ಪ್ರತೀ ಹಾನಿಗೂ ನಷ್ಟ ಪರಿಹಾರ ನೀಡುವುದಾಗಿ ಹೇಳಿದೆ.

“ದೇಶವು ಬಿಕ್ಕಟ್ಟನ್ನು ಎದುರಿಸಿದಾಗಲೆಲ್ಲಾ, ಪಂಜಾಬ್ ದೇಶದ ಜೊತೆ ನಿಂತಿದೆ. ಅದು ಹಸಿರು ಕ್ರಾಂತಿಯ ಸಮಯವಾಗಿರಬಹುದು ಅಥವಾ ಸ್ವಾತಂತ್ರ್ಯ ಹೋರಾಟದ ಸಮಯವಾಗಿರಬಹುದು. ನಾವು ಗರಿಷ್ಠ ತ್ಯಾಗಗಳನ್ನು ಮಾಡಿದ್ದೇವೆ. ಇಂದು, ಪಂಜಾಬ್ ಬಿಕ್ಕಟ್ಟಿನಲ್ಲಿದೆ, ದೇಶವು ನಮ್ಮ ಬೆಂಬಲಕ್ಕೆ ನಿಲ್ಲುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಫಿರೋಜ್‌ಪುರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದ್ದಾರೆ.

ಉತ್ತರಾಖಂಡ: ಮಳೆಯಿಂದ 5,000 ಕೋಟಿ ರೂ. ನಷ್ಟ, ಕೇದಾರನಾಥ ದುರಂತದ ನಂತರದ ಅತಿ ದೊಡ್ಡ ಆರ್ಥಿಕ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...

‘ದೆಹಲಿ ಖಾಲಿಸ್ತಾನವಾಗಲಿದೆ’: 10 ಶಾಲೆಗಳು, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ವಿದ್ಯಾರ್ಥಿಗಳ ಸ್ಥಳಾಂತರ

ಸೋಮವಾರ ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿನ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭಾರಿ ಭದ್ರತಾ ಪ್ರತಿಕ್ರಿಯೆ ನೀಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ತಿಳಿಸಿವೆ. ಡಿಎಫ್‌ಎಸ್ ಪ್ರಕಾರ, ಬೆಳಿಗ್ಗೆ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...

ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ. 20 ರ ಹರೆಯದ...

ಮಣಿಪುರದ ಉಖ್ರುಲ್‌ನಲ್ಲಿ ಬುಡಕಟ್ಟು ಸಮುದಾಯಗಳ ನಡುವೆ ಉದ್ವಿಗ್ನತೆ: ಸಶಸ್ತ್ರ ಗುಂಪುಗಳಿಂದ ನಾಗಾ, ಕುಕಿ ಮನೆಗಳಿಗೆ ಬೆಂಕಿ

ಮಣಿಪುರದ ತಂಗ್ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಸೋಮವಾರ ಉಖ್ರುಲ್ ಜಿಲ್ಲೆಯಲ್ಲಿ ಹಲವಾರು ಸಶಸ್ತ್ರ ಉಗ್ರಗಾಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಲಿಟಾನ್ ಸರೈಖಾಂಗ್ ಗ್ರಾಮದಲ್ಲಿ ಎರಡೂ...