Homeಮುಖಪುಟಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ಬಟಿಂಡಾ ಜಿಲ್ಲೆಯಲ್ಲಿ ಕಳೆದ ಅಕ್ಟೋಬರ್ ತಿಂಗಳಿನಿಂದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಯುತ್ತಲೇ ಇದೆ. ಇಂದಿಗೂ ಅಲ್ಲಿನ ಟೋಲ್ ಪ್ಲಾಜಾ, ರೈಲು ನಿಲ್ದಾಣದಳ ಬಳಿ ಪ್ರತಿಭಟನೆ ನಡೆಯುತ್ತಿದೆ.

- Advertisement -
- Advertisement -

ರೈತ ಹೋರಾಟದ ನಾಯಕತ್ವ ವಹಿಸಿರುವ ಪಂಜಾಬ್ ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಏಣಿಕೆ ನಡೆದು ಫಲಿತಾಂಶ ಪ್ರಕಟವಾಗುತ್ತಿದೆ. ವಿವಾದಿತ ಕೃಷಿ ಕಾನೂನುಗಳು ಕೇಂದ್ರದ ಆಡಳಿತರೂಢ ಬಿಜೆಪಿಗೆ ಭಾರಿ ಹಿನ್ನಡೆ ಉಂಟುಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅದ್ಭುತ ಸಾಧನೆ ಮಾಡಿದೆ.

ಪಂಜಾಬಿನ ಮೊಗ್ಗ, ಹೋಶಿಯಾರ್‌ಪುರ್, ಕಪುರ್ಥಾಲಾ, ಅಬೋಹರ್, ಪಠಾಣ್‌ಕೋಟ್ ಮತ್ತು ಬಟಿಂಡಾ ಜಿಲ್ಲೆಗಳಲ್ಲಿ ಕಾಂಗ್ರೆಸ್ ಬರ್ಜರಿ ಯಶಸ್ಸು ಪಡೆದಿದೆ. ಇವುಗಳಲ್ಲಿ ಬಟಿಂಡಾ ಜಿಲ್ಲೆಯಲ್ಲಿ ಕಳೆದ 53 ವರ್ಷಗಳ ನಂತರ ಕಾಂಗ್ರೆಸ್ ಪಾಲಿಗೆ ಮೇಯರ್ ಸ್ಥಾನ ಒಲಿದಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಒಂದು ಅದ್ಭುತ ಗೆಲುವು ಎಂದು ಬಿಂಬಿಸಲಾಗುತ್ತಿದೆ.

ಬಟಿಂಡಾ ಜಿಲ್ಲೆಯಲ್ಲಿ ಕಳೆದ ಅಕ್ಟೋಬರ್ ತಿಂಗಳಿನಿಂದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಯುತ್ತಲೇ ಇದೆ. ಇಂದಿಗೂ ಅಲ್ಲಿನ ಟೋಲ್ ಪ್ಲಾಜಾ, ರೈಲು ನಿಲ್ದಾಣದಳ ಬಳಿ ಪ್ರತಿಭಟನೆ ನಡೆಯುತ್ತಿದೆ. ಅಕ್ಕ ಪಕ್ಕದ ಹಳ್ಳಿಯ ಜನರು ಜಿಲ್ಲಾ ಕೇಂದ್ರ ಮತ್ತು ರಾಮಪುರ ಪುಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ಬಟಿಂಡಾದಲ್ಲಿ ಕಾಂಗ್ರೆಸ್‌ಗೆ ಗೆದ್ದ ಗೆಲುವಿನ ಕುರಿತು ಟ್ವೀಟ್ ಮಾಡಿರುವ ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್, ” ಇಂದು ಇತಿಹಾಸ ಸೃಷ್ಟಿಯಾಗಿದೆ. 53 ವರ್ಷಗಳಲ್ಲಿ ಮೊದಲ ಬಾರಿಗೆ ಬಟಿಂಡಾ ಕಾಂಗ್ರೆಸ್ ಮೇಯರ್ ಪಡೆಯಲಿದೆ. ಅದ್ಭುತ ಗೆಲುವು ನೀಡಿದ ಬಟಿಂಡಾ ಜನರಿಗೆ ಅಭಿನಂದನೆಗಳು. ಈ ದಿನಕ್ಕಾಗಿ ಶ್ರಮಿಸಿದ ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರಿಗೆ ಶುಭಾಷಯಗಳು” ಎಂದಿದ್ದಾರೆ.

ಕಾಂಗ್ರೆಸ್ ಶಾಸಕ ಮತ್ತು ಪಂಜಾಬ್ ರಾಜ್ಯ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಅವರು ಬಟಿಂಡಾ ನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮನ್‌ಪ್ರೀತ್ ಸಿಂಗ್ ಬಾದಲ್ ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರ ಸೋದರಸಂಬಂಧಿಯಾಗಿದ್ದು, ಈ ಬಾರಿ ಪುರಸಭೆ ಚುನಾವಣೆಯನ್ನು ಪ್ರತಿಷ್ಠಿತ ಕಣವನ್ನಾಗಿಸಿಕೊಂಡಿದ್ದರು.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಬಟಿಂಡಾ ಲೋಕಸಭಾ ಕ್ಷೇತ್ರವನ್ನು ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಹರ್ಸಿಮ್ರತ್ ಬಾದಲ್ ಪ್ರತಿನಿಧಿಸುತ್ತಿದ್ದಾರೆ. ಅಕಾಲಿದಳ ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳಿಂದ ರಾಜ್ಯದ ರೈತರಲ್ಲಿ ಉಂಟಾದ ಪ್ರತಿಭಟನೆಯ ನಂತರ ತನ್ನ ದೀರ್ಘಕಾಲದ ಮಿತ್ರ ಬಿಜೆಪಿಯೊಂದಿಗೆ ಇತ್ತೀಚೆಗೆ ಬೇರ್ಪಟ್ಟಿದೆ.

PC: twitter@Manpreet Singh Badal

ಬಟಿಂಡಾ ಜಿಲ್ಲೆಯಲ್ಲಿ ಫೆಬ್ರವರಿ 7 ರಂದು ನಾನುಗೌರಿ.ಕಾಂ ತಂಡ ಕೆಲವು ಸ್ಥಳಿಯರೊಂದಿಗೆ ಮಾತುಕತೆ ನಡೆಸಿತ್ತು. ರಾಮಪುರ ಪುಲ್ ನಗರದ ರೈಲು ನಿಲ್ದಾಣದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಹಲವು ಮಂದಿ ರೈತರು ಹೇಳಿದ್ದು, ನಾವು ಈ ಬಾರಿ ಬಿಜೆಪಿಗೆ ಮತ ನೀಡುವುದಿಲ್ಲ. ನಮ್ಮ ಪರವಾಗಿ ನಿಂತವರಿಗೆ, ನಮ್ಮ ರೈತರ ನೋವುಗಳಿಗೆ ಜೊತೆಯಾದವರಿಗೆ ಮತ ನೀಡುತ್ತೇವೆ ಎಂದು ತಿಳಿಸಿದ್ದರು.

ಇದುವರೆಗಿನ ಚುನಾವಣಾ ಎಣಿಕೆಯಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ ಅನುಭವಿಸಿದ್ದು, ಮತ ಎಣಿಕೆಯಾಗುತ್ತಿರುವ 7 ಮುನ್ಸಿಪಲ್ ಕಾರ್ಪೋರೇಷನ್‌ಗಳಲ್ಲಿ 6 ನ್ನು ಕಾಂಗ್ರೆಸ್ ಗೆದ್ದುಕೊಂಡಿದ್ದು, ಒಂದು ಮುನ್ಸಿಪಲ್‌ ಕಾರ್ಪೋರೇಷನ್‌ನಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.


ಇದನ್ನೂ ಓದಿ: ‘ಮೋದಿ ಅಳಿಯಂದಿರು ಬಂದರು ಹುಷಾರು’: ರೈತ ಬೂಟಾ ಸಿಂಗ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...