ಭಾನುವಾರ ಪಂಜಾಬ್ ರಾಜ್ಯದ 117 ಸ್ಥಳೀಯ ನಗರ ಪಂಚಾಯತ್ ಮತ್ತು 8 ಮುನಿಸಿಪಲ್ ಕಾರ್ಪೋರೇಷನ್ ಗಳಲ್ಲಿ ಚುನಾವಣೆ ನಡೆದಿದೆ. ರೈತ ಹೋರಾಟದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಿಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಒಟ್ಟು 18,000 ಪೊಲೀಸರನ್ನು ನಿಯೋಜಿಸಲಾಗಿತ್ತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿ ಮಾಡಿದ್ದಾಗಿನಿಂದ ಬಿಜೆಪಿ ಮುಖಂಡರು ರೈತರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಹಲವಾರು ಕಡೆ ಬಿಜೆಪಿ ಮುಖಂಡರಿಗೆ ರೈತರು ಘೇರಾವ್ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸ್ಥಳೀಯ ಚುನಾವಣೆಯಲ್ಲಿ ಅವಘಡ ಸಂಭವಿಸದಂತೆ ತಡೆಯಲು ಬಿಜೆಪಿ ಅಭ್ಯರ್ಥಿಗಳಿಗೆ ವಿಶೇಷ ರಕ್ಷಣೆ ನೀಡಲಾಗಿದೆ.
4,102 ಮತದಾನ ಕೇಂದ್ರಗಳನ್ನು ಸ್ಥಾಪಿಸಿದ್ದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದೆ. ಚುನಾವಣೆ ಬಹುತೇಕ ಶಾಂತಿಯುತವಾಗಿ ನಡೆದಿದ್ದು ಫೆಬ್ರವರಿ 17 ರಂದು ಫಲಿತಾಂಶ ಘೋಷಣೆಯಾಗಲಿದೆ.
ಆಡಳಿತರೂಢ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಶಿರೋಮಣಿ ಅಕಾಲಿ ದಳ ಮತ್ತು ಬಿಜೆಪಿ ಸ್ಪರ್ಧೆಯಲ್ಲಿವೆ. ಈ ಮೊದಲು ಶಿರೋಮಣಿ ಅಕಾಲಿ ದಳ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಎನ್ಡಿಎ ಒಕ್ಕೂಟದ ಭಾಗವಾಗಿತ್ತು. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ ನಂತರ ಅದು ಮೈತ್ರಿ ಮುರಿದುಕೊಂಡಿದೆ.
ಇದನ್ನೂ ಓದಿ; ರೈತ ಹೋರಾಟಕ್ಕೆ ಮಹಾತ್ಮಾ ಗಾಂಧಿ ಮೊಮ್ಮಗಳ ಬೆಂಬಲ: ಅವರು ಹೇಳಿದ್ದೇನು?