Homeಮುಖಪುಟ’ನಿಜವಾದ ಜನ ಸಾಮಾನ್ಯರ ಪಕ್ಷ ಕಾಂಗ್ರೆಸ್’: ಆಪ್ ತೊರೆದ ಪಂಜಾಬ್ ಶಾಸಕಿ ರೂಪಿಂದರ್ ಕೌರ್ ರೂಬಿ

’ನಿಜವಾದ ಜನ ಸಾಮಾನ್ಯರ ಪಕ್ಷ ಕಾಂಗ್ರೆಸ್’: ಆಪ್ ತೊರೆದ ಪಂಜಾಬ್ ಶಾಸಕಿ ರೂಪಿಂದರ್ ಕೌರ್ ರೂಬಿ

- Advertisement -
- Advertisement -

“ನಿಜವಾದ ಜನ ಸಾಮಾನ್ಯರ (ಆಮ್ ಆದ್ಮಿ) ಪಕ್ಷವೆಂದರೆ ಕಾಂಗ್ರೆಸ್. ಆಮ್ ಆದ್ಮಿ ಪಕ್ಷ ಹೇಳುವುದಕ್ಕೂ ಮಾಡುವ ಕೆಲಸಕ್ಕೂ ಭೂಮಿ, ಆಕಾಶದಷ್ಟು ಅಂತರವಿದೆ” ಎಂದು ಆಪ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ಪಂಜಾಬ್ ಶಾಸಕಿ ರೂಪಿಂದರ್ ಕೌರ್ ರೂಬಿ ಹೇಳಿದ್ದಾರೆ.

ಪಂಜಾಬ್‌ನ ಬಟಿಂಡಾ ಗ್ರಾಮಾಂತರ ಶಾಸಕಿ ರೂಪಿಂದರ್ ಕೌರ್ ರೂಬಿ, ನವೆಂಬರ್ 9 ರಂದು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿ, ನವೆಂಬರ್ 10 ರಂದು ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್‌ ಸಿಂಗ್ ಸಿದು ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ.

’ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯಿಂದ ಪಂಜಾಬ್ ಘಟಕವನ್ನು ನಿಯಂತ್ರಿಸುತ್ತಿದ್ದಾರೆ. ಎಎಪಿ ಪಂಜಾಬ್ ಅಧ್ಯಕ್ಷ, ಸಂಗ್ರೂರ್ ಸಂಸದ ಭಗವಂತ್ ಮಾನ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ಮೃತಪಟ್ಟ ಹೆಚ್ಚಿನ ರೈತರು 3 ಎಕರೆಗಿಂಲೂ ಕಡಿಮೆ ಜಮೀನು ಹೊಂದಿರುವವರು!

 

ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರೂಪಿಂದರ್ ಕೌರ್ ರೂಬಿ, “ಆಮ್ ಆದ್ಮಿ ಪಕ್ಷ ಎಂದು ಎಎಪಿ ಹೇಳಿಕೊಂಡರೂ, ಆಮ್ ಆದ್ಮಿಯ ನಿಜವಾದ ಅಜೆಂಡಾವನ್ನು ಕಾಂಗ್ರೆಸ್ ಅನುಸರಿಸುತ್ತಿದೆ. ಕಳೆದ 50 ದಿನಗಳಲ್ಲಿ ಕಾಂಗ್ರೆಸ್‌ನ ಸಾಧನೆಯಿಂದ ನಾನು ಪ್ರಭಾವಿತಳಾಗಿದ್ದೇನೆ” ಎಂದಿದ್ದಾರೆ.

“ಪಂಜಾಬ್ ಎಎಪಿ ಘಟಕವನ್ನು ದೆಹಲಿಯಿಂದ ಕೇಜ್ರಿವಾಲ್ ನಿಯಂತ್ರಿಸುತ್ತಿದ್ದಾರೆ. ಭಗವಂತ್ ಮಾನ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ನಾನು ಒತ್ತಾಯಿಸುತ್ತಿದ್ದೆ. ಆದರೆ ಯಾರೂ ಕೇಳಲಿಲ್ಲ, ಆದ್ದರಿಂದ ನಾನು ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿದ್ದೇನೆ” ಎಂದು ತಿಳಿಸಿದ್ದಾರೆ.

ಶಾಸಕಿ ರೂಪಿಂದರ್ ಕೌರ್ ರೂಬಿಯ ಹೊರತಾಗಿ ಮೂರರಿಂದ ನಾಲ್ಕು ಮಂದಿ ಶಾಸಕರು ಕೂಡ ಮುಂದಿನ ದಿನಗಳಲ್ಲಿ ಎಎಪಿ ತೊರೆದು ಕಾಂಗ್ರೆಸ್ ಸೇರಲು ಸರತಿ ಸಾಲಿನಲ್ಲಿದ್ದಾರೆ ಎಂದು ಮೂಲಗಳು ಹೇಳಿವೆ. ಹೆಚ್ಚಿನ ಶಾಸಕರು ಪಕ್ಷ ತೊರೆದರೆ, ಆಪ್ ಪಂಜಾಬ್ ವಿಧಾನಸಭೆಯಲ್ಲಿ ಪ್ರಮುಖ ವಿರೋಧ ಪಕ್ಷದ ಸ್ಥಾನಮಾನವನ್ನು ಕಳೆದುಕೊಳ್ಳುತ್ತದೆ ಎನ್ನಲಾಗಿದೆ.

2017 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 20 ಸ್ಥಾನಗಳನ್ನು ಗೆದ್ದು ವಿಧಾನಸಭೆಯಲ್ಲಿ ಪ್ರಮುಖ ಪ್ರತಿಪಕ್ಷವಾಯಿತು. ಶಿರೋಮಣಿ ಅಕಾಲಿದಳ (ಎಸ್‌ಎಡಿ) ಕೇವಲ 15 ಶಾಸಕರೊಂದಿಗೆ ಮೂರನೇ ಸ್ಥಾನದಲ್ಲಿದೆ.

 


ಇದನ್ನೂ ಓದಿ: ಬಹುಜನ ಭಾರತ; ದೆಹಲಿಯಲ್ಲೊಂದು ಅಜ್ಞಾತ ತಮಿಳ್ಕನ್ನಡಿಗ ಲೋಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...