Homeಮುಖಪುಟಪಂಜಾಬ್ | ಪಾಲಿಕೆ ಚುನಾವಣೆಗಳಲ್ಲಿ ಎಎಪಿಗೆ ಭಾರಿ ಹಿನ್ನಡೆ

ಪಂಜಾಬ್ | ಪಾಲಿಕೆ ಚುನಾವಣೆಗಳಲ್ಲಿ ಎಎಪಿಗೆ ಭಾರಿ ಹಿನ್ನಡೆ

- Advertisement -
- Advertisement -

ಪಂಜಾಬ್‌ನಲ್ಲಿ ಶನಿವಾರ ನಡೆದ ಪಾಲಿಕೆ ಮತ್ತು ಪುರಸಭೆ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಕಳಪೆ ಪ್ರದರ್ಶನ ನೀಡಿದ್ದು, ಐದರಲ್ಲಿ ಒಂದು ಪಾಲಿಕೆಯಲ್ಲಿ ಮಾತ್ರ ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ. ಜೊತೆಗೆ, 44 ಮುನ್ಸಿಪಲ್ ಮತ್ತು ನಗರ ಪಂಚಾಯತ್‌ಗಳಲ್ಲಿ ಎಎಪಿ 26 ಅನ್ನು ಅಷ್ಟೆ ಗೆದ್ದುಕೊಂಡಿದೆ. ಪಂಜಾಬ್

ಪಟಿಯಾಲ ಮುನಿಸಿಪಲ್ ಕಾರ್ಪೊರೇಶನ್ ಅನ್ನು ಎಎಪಿ ಗೆದ್ದುಕೊಂಡಿದ್ದು, ಲುಧಿಯಾನ ಮತ್ತು ಜಲಂಧರ್ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಮೃತಸರ ಮತ್ತು ಫಗ್ವಾರಾ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ಬಹುಮತ ಸಾಧಿಸಲು ಸೋತುಹೋಗಿದೆ. ಕಾಂಗ್ರೆಸ್ ಅಮೃತಸರ ಮುನ್ಸಿಪಲ್ ಕಾರ್ಪೋರೇಶನ್ ಅನ್ನು ಗೆದ್ದಿದ್ದು, ಫಗ್ವಾರದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 3,300 ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದರು ಮತ್ತು ಒಟ್ಟು 37.32 ಲಕ್ಷ ಮತದಾರರು ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರು. ಚುನಾವಣೆಯಲ್ಲಿ 65.85% ದಷ್ಟು ಮತದಾನವಾಗಿತ್ತು. ಪಂಜಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ತವರು ಕ್ಷೇತ್ರವಾದ 60 ಸದಸ್ಯ ಬಲದ ಪಟಿಯಾಲಾ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಎಎಪಿ 53 ಸ್ಥಾನಗಳಲ್ಲಿ 43 ಸ್ಥಾನಗಳನ್ನು ಗೆದ್ದುಕೊಂಡಿದೆ. ಅಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ನಾಲ್ಕು ಸ್ಥಾನಗಳನ್ನು ಗೆದ್ದರೆ, ಎಸ್‌ಎಡಿ ಎರಡು ಸ್ಥಾನಗಳನ್ನು ಗೆದ್ದಿದೆ. ಉಳಿದಂತೆ ಪಾಲಿಕೆಯ ಏಳು ವಾರ್ಡ್‌ಗಳಿಗೆ ಚುನಾವಣೆ ಮುಂದೂಡಲಾಗಿದೆ.

ಲುಧಿಯಾನದಲ್ಲಿ ಎಎಪಿ 95 ರಲ್ಲಿ 41 ಸ್ಥಾನಗಳನ್ನು ಗೆದ್ದುಕೊಂಡಿತು, ಬಹುಮತಕ್ಕೆ ಏಳು ಸ್ಥಾನಗಳ ಕೊರತೆಯಿದೆ. ಕಾಂಗ್ರೆಸ್ 30, ಬಿಜೆಪಿ 19, ಎಸ್‌ಎಡಿ 2 ಮತ್ತು ಸ್ವತಂತ್ರ ಅಭ್ಯರ್ಥಿಗಳು 3 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಎಎಪಿಯ ಇಬ್ಬರು ಹಾಲಿ ಶಾಸಕರ ಪತ್ನಿಯರು ಲುಧಿಯಾನ ಚುನಾವಣೆಯಲ್ಲಿ ಸೋತಿದ್ದು ಎಎಪಿಗೆ ದೊಡ್ಡ ಹಿನ್ನಡೆಯಾಗಿದೆ.  ಜೊತೆಗೆ ಕಾಂಗ್ರೆಸ್ ನ ಮಾಜಿ ಸಚಿವ ಭರತ್ ಭೂಷಣ್ ಆಶು ಅವರ ಪತ್ನಿ ಮಮತಾ ಆಶು ಕೂಡ ಸೋತಿದ್ದಾರೆ.

ಜಲಂಧರ್‌ನಲ್ಲಿ ಎಎಪಿ 85 ರಲ್ಲಿ 38 ರಲ್ಲಿ ಗೆದ್ದಿದೆ. ಇಲ್ಲಿ ಕಾಂಗ್ರೆಸ್ 25, ಬಿಜೆಪಿ 19, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಒಂದರಲ್ಲಿ ಗೆಲುವು ಸಾಧಿಸಿದೆ. ಎರಡು ವಾರ್ಡ್‌ಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅಮೃತಸರದಲ್ಲಿ 85 ವಾರ್ಡ್‌ಗಳಲ್ಲಿ ಕಾಂಗ್ರೆಸ್ 43, ಎಎಪಿ 24, ಬಿಜೆಪಿ ಒಂಬತ್ತು, ಎಸ್‌ಎಡಿ ನಾಲ್ಕು ಮತ್ತು ಸ್ವತಂತ್ರ ಅಭ್ಯರ್ಥಿಗಳು ಐದು ವಾರ್ಡ್‌ಗಳನ್ನು ಗೆದ್ದಿದ್ದಾರೆ.

ಫಗ್ವಾರಾದಲ್ಲಿ ಕಾಂಗ್ರೆಸ್ 22, ಎಎಪಿ 12, ಬಿಜೆಪಿ 4, ಬಿಎಸ್‌ಪಿ ಮೂರು, ಎಸ್‌ಎಡಿ ಮೂರು ಮತ್ತು ಸ್ವತಂತ್ರ ಅಭ್ಯರ್ಥಿಗಳು 6 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಯಾವ ಪಕ್ಷವೂ ಬಹುಮತದ 26 ಸ್ಥಾನಗಳನ್ನು ಮುಟ್ಟಲಿಲ್ಲ. ಆದಾಗ್ಯೂ, ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 50 ಸದಸ್ಯರಿರುವ ಪಾಲಿಕೆಯಲ್ಲಿ ಬಿಎಸ್ಪಿ ಕಾಂಗ್ರೆಸ್‌ ಅನ್ನು ಬೆಂಬಲಿಸುವ ಸಾಧ್ಯತೆಯಿದೆ.

ರಾಜ್ಯದ ಐದು ದೊಡ್ಡ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಸಿಗದಿದ್ದು ಮಾತ್ರವಲ್ಲದೆ, ಪಕ್ಷವು ತನ್ನ ಭದ್ರಕೋಟೆಯಾದ ಸಂಗ್ರೂರ್‌ನಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದೆ. ಏಕೆಂದರೆ ಸ್ಥಳೀಯ ಪುರಸಭೆಯ 29 ಸ್ಥಾನಗಳಲ್ಲಿ ಏಳನ್ನು ಮಾತ್ರ ಗೆಲ್ಲಲು ಪಕ್ಷಕ್ಕೆ ಸಾಧ್ಯವಾಯಿತು. ಮುಖ್ಯಮಂತ್ರಿ ಭಗವಂತ್ ಮಾನ್, ಎಎಪಿ ಪಂಜಾಬ್ ಅಧ್ಯಕ್ಷ ಅಮನ್ ಅರೋರಾ ಮತ್ತು ರಾಜ್ಯ ಹಣಕಾಸು ಸಚಿವ ಹರ್ಪಾಲ್ ಚೀಮಾ ಅವರ ತವರು ಜಿಲ್ಲೆ ಬರ್ನಾಲಾ ವಿಧಾನಸಭಾ ಉಪಚುನಾವಣೆಯ ನಂತರ ಪಕ್ಷಕ್ಕೆ ಇದು ಸತತ ಎರಡನೇ ಸೋಲಾಗಿದೆ.

ಈ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಅಕಾಲಿದಳ ಹೀನಾಯ ಸೋಲು ಕಂಡಿವೆ. ಬಿಜೆಪಿ ಕೇವಲ 7 ಪ್ರತಿಶತದಷ್ಟು ಸ್ಥಾನಗಳನ್ನು ಗೆದ್ದಿದೆ, ಅದರ 69 ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದಾರೆ. ಅದೇ ರೀತಿ, ಅಕಾಲಿದಳ ಕೇವಲ 3 ಪ್ರತಿಶತದಷ್ಟು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಅದರ 31 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಎಸ್ಪಿ 5 ವಿಜೇತರನ್ನು ಹೊಂದಿತ್ತು ಮತ್ತು ಕೇವಲ 0.5 ಶೇಕಡಾ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು.

ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...