Homeಮುಖಪುಟಪಂಜಾಬ್ | ಪಾಲಿಕೆ ಚುನಾವಣೆಗಳಲ್ಲಿ ಎಎಪಿಗೆ ಭಾರಿ ಹಿನ್ನಡೆ

ಪಂಜಾಬ್ | ಪಾಲಿಕೆ ಚುನಾವಣೆಗಳಲ್ಲಿ ಎಎಪಿಗೆ ಭಾರಿ ಹಿನ್ನಡೆ

- Advertisement -
- Advertisement -

ಪಂಜಾಬ್‌ನಲ್ಲಿ ಶನಿವಾರ ನಡೆದ ಪಾಲಿಕೆ ಮತ್ತು ಪುರಸಭೆ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಕಳಪೆ ಪ್ರದರ್ಶನ ನೀಡಿದ್ದು, ಐದರಲ್ಲಿ ಒಂದು ಪಾಲಿಕೆಯಲ್ಲಿ ಮಾತ್ರ ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ. ಜೊತೆಗೆ, 44 ಮುನ್ಸಿಪಲ್ ಮತ್ತು ನಗರ ಪಂಚಾಯತ್‌ಗಳಲ್ಲಿ ಎಎಪಿ 26 ಅನ್ನು ಅಷ್ಟೆ ಗೆದ್ದುಕೊಂಡಿದೆ. ಪಂಜಾಬ್

ಪಟಿಯಾಲ ಮುನಿಸಿಪಲ್ ಕಾರ್ಪೊರೇಶನ್ ಅನ್ನು ಎಎಪಿ ಗೆದ್ದುಕೊಂಡಿದ್ದು, ಲುಧಿಯಾನ ಮತ್ತು ಜಲಂಧರ್ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಮೃತಸರ ಮತ್ತು ಫಗ್ವಾರಾ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ಬಹುಮತ ಸಾಧಿಸಲು ಸೋತುಹೋಗಿದೆ. ಕಾಂಗ್ರೆಸ್ ಅಮೃತಸರ ಮುನ್ಸಿಪಲ್ ಕಾರ್ಪೋರೇಶನ್ ಅನ್ನು ಗೆದ್ದಿದ್ದು, ಫಗ್ವಾರದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 3,300 ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದರು ಮತ್ತು ಒಟ್ಟು 37.32 ಲಕ್ಷ ಮತದಾರರು ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರು. ಚುನಾವಣೆಯಲ್ಲಿ 65.85% ದಷ್ಟು ಮತದಾನವಾಗಿತ್ತು. ಪಂಜಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ತವರು ಕ್ಷೇತ್ರವಾದ 60 ಸದಸ್ಯ ಬಲದ ಪಟಿಯಾಲಾ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಎಎಪಿ 53 ಸ್ಥಾನಗಳಲ್ಲಿ 43 ಸ್ಥಾನಗಳನ್ನು ಗೆದ್ದುಕೊಂಡಿದೆ. ಅಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ನಾಲ್ಕು ಸ್ಥಾನಗಳನ್ನು ಗೆದ್ದರೆ, ಎಸ್‌ಎಡಿ ಎರಡು ಸ್ಥಾನಗಳನ್ನು ಗೆದ್ದಿದೆ. ಉಳಿದಂತೆ ಪಾಲಿಕೆಯ ಏಳು ವಾರ್ಡ್‌ಗಳಿಗೆ ಚುನಾವಣೆ ಮುಂದೂಡಲಾಗಿದೆ.

ಲುಧಿಯಾನದಲ್ಲಿ ಎಎಪಿ 95 ರಲ್ಲಿ 41 ಸ್ಥಾನಗಳನ್ನು ಗೆದ್ದುಕೊಂಡಿತು, ಬಹುಮತಕ್ಕೆ ಏಳು ಸ್ಥಾನಗಳ ಕೊರತೆಯಿದೆ. ಕಾಂಗ್ರೆಸ್ 30, ಬಿಜೆಪಿ 19, ಎಸ್‌ಎಡಿ 2 ಮತ್ತು ಸ್ವತಂತ್ರ ಅಭ್ಯರ್ಥಿಗಳು 3 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಎಎಪಿಯ ಇಬ್ಬರು ಹಾಲಿ ಶಾಸಕರ ಪತ್ನಿಯರು ಲುಧಿಯಾನ ಚುನಾವಣೆಯಲ್ಲಿ ಸೋತಿದ್ದು ಎಎಪಿಗೆ ದೊಡ್ಡ ಹಿನ್ನಡೆಯಾಗಿದೆ.  ಜೊತೆಗೆ ಕಾಂಗ್ರೆಸ್ ನ ಮಾಜಿ ಸಚಿವ ಭರತ್ ಭೂಷಣ್ ಆಶು ಅವರ ಪತ್ನಿ ಮಮತಾ ಆಶು ಕೂಡ ಸೋತಿದ್ದಾರೆ.

ಜಲಂಧರ್‌ನಲ್ಲಿ ಎಎಪಿ 85 ರಲ್ಲಿ 38 ರಲ್ಲಿ ಗೆದ್ದಿದೆ. ಇಲ್ಲಿ ಕಾಂಗ್ರೆಸ್ 25, ಬಿಜೆಪಿ 19, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಒಂದರಲ್ಲಿ ಗೆಲುವು ಸಾಧಿಸಿದೆ. ಎರಡು ವಾರ್ಡ್‌ಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅಮೃತಸರದಲ್ಲಿ 85 ವಾರ್ಡ್‌ಗಳಲ್ಲಿ ಕಾಂಗ್ರೆಸ್ 43, ಎಎಪಿ 24, ಬಿಜೆಪಿ ಒಂಬತ್ತು, ಎಸ್‌ಎಡಿ ನಾಲ್ಕು ಮತ್ತು ಸ್ವತಂತ್ರ ಅಭ್ಯರ್ಥಿಗಳು ಐದು ವಾರ್ಡ್‌ಗಳನ್ನು ಗೆದ್ದಿದ್ದಾರೆ.

ಫಗ್ವಾರಾದಲ್ಲಿ ಕಾಂಗ್ರೆಸ್ 22, ಎಎಪಿ 12, ಬಿಜೆಪಿ 4, ಬಿಎಸ್‌ಪಿ ಮೂರು, ಎಸ್‌ಎಡಿ ಮೂರು ಮತ್ತು ಸ್ವತಂತ್ರ ಅಭ್ಯರ್ಥಿಗಳು 6 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಯಾವ ಪಕ್ಷವೂ ಬಹುಮತದ 26 ಸ್ಥಾನಗಳನ್ನು ಮುಟ್ಟಲಿಲ್ಲ. ಆದಾಗ್ಯೂ, ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 50 ಸದಸ್ಯರಿರುವ ಪಾಲಿಕೆಯಲ್ಲಿ ಬಿಎಸ್ಪಿ ಕಾಂಗ್ರೆಸ್‌ ಅನ್ನು ಬೆಂಬಲಿಸುವ ಸಾಧ್ಯತೆಯಿದೆ.

ರಾಜ್ಯದ ಐದು ದೊಡ್ಡ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಸಿಗದಿದ್ದು ಮಾತ್ರವಲ್ಲದೆ, ಪಕ್ಷವು ತನ್ನ ಭದ್ರಕೋಟೆಯಾದ ಸಂಗ್ರೂರ್‌ನಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದೆ. ಏಕೆಂದರೆ ಸ್ಥಳೀಯ ಪುರಸಭೆಯ 29 ಸ್ಥಾನಗಳಲ್ಲಿ ಏಳನ್ನು ಮಾತ್ರ ಗೆಲ್ಲಲು ಪಕ್ಷಕ್ಕೆ ಸಾಧ್ಯವಾಯಿತು. ಮುಖ್ಯಮಂತ್ರಿ ಭಗವಂತ್ ಮಾನ್, ಎಎಪಿ ಪಂಜಾಬ್ ಅಧ್ಯಕ್ಷ ಅಮನ್ ಅರೋರಾ ಮತ್ತು ರಾಜ್ಯ ಹಣಕಾಸು ಸಚಿವ ಹರ್ಪಾಲ್ ಚೀಮಾ ಅವರ ತವರು ಜಿಲ್ಲೆ ಬರ್ನಾಲಾ ವಿಧಾನಸಭಾ ಉಪಚುನಾವಣೆಯ ನಂತರ ಪಕ್ಷಕ್ಕೆ ಇದು ಸತತ ಎರಡನೇ ಸೋಲಾಗಿದೆ.

ಈ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಅಕಾಲಿದಳ ಹೀನಾಯ ಸೋಲು ಕಂಡಿವೆ. ಬಿಜೆಪಿ ಕೇವಲ 7 ಪ್ರತಿಶತದಷ್ಟು ಸ್ಥಾನಗಳನ್ನು ಗೆದ್ದಿದೆ, ಅದರ 69 ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದಾರೆ. ಅದೇ ರೀತಿ, ಅಕಾಲಿದಳ ಕೇವಲ 3 ಪ್ರತಿಶತದಷ್ಟು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಅದರ 31 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಎಸ್ಪಿ 5 ವಿಜೇತರನ್ನು ಹೊಂದಿತ್ತು ಮತ್ತು ಕೇವಲ 0.5 ಶೇಕಡಾ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು.

ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...