Homeಮುಖಪುಟಪಂಜಾಬ್ | ಪಾಲಿಕೆ ಚುನಾವಣೆಗಳಲ್ಲಿ ಎಎಪಿಗೆ ಭಾರಿ ಹಿನ್ನಡೆ

ಪಂಜಾಬ್ | ಪಾಲಿಕೆ ಚುನಾವಣೆಗಳಲ್ಲಿ ಎಎಪಿಗೆ ಭಾರಿ ಹಿನ್ನಡೆ

- Advertisement -
- Advertisement -

ಪಂಜಾಬ್‌ನಲ್ಲಿ ಶನಿವಾರ ನಡೆದ ಪಾಲಿಕೆ ಮತ್ತು ಪುರಸಭೆ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಕಳಪೆ ಪ್ರದರ್ಶನ ನೀಡಿದ್ದು, ಐದರಲ್ಲಿ ಒಂದು ಪಾಲಿಕೆಯಲ್ಲಿ ಮಾತ್ರ ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ. ಜೊತೆಗೆ, 44 ಮುನ್ಸಿಪಲ್ ಮತ್ತು ನಗರ ಪಂಚಾಯತ್‌ಗಳಲ್ಲಿ ಎಎಪಿ 26 ಅನ್ನು ಅಷ್ಟೆ ಗೆದ್ದುಕೊಂಡಿದೆ. ಪಂಜಾಬ್

ಪಟಿಯಾಲ ಮುನಿಸಿಪಲ್ ಕಾರ್ಪೊರೇಶನ್ ಅನ್ನು ಎಎಪಿ ಗೆದ್ದುಕೊಂಡಿದ್ದು, ಲುಧಿಯಾನ ಮತ್ತು ಜಲಂಧರ್ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಮೃತಸರ ಮತ್ತು ಫಗ್ವಾರಾ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ಬಹುಮತ ಸಾಧಿಸಲು ಸೋತುಹೋಗಿದೆ. ಕಾಂಗ್ರೆಸ್ ಅಮೃತಸರ ಮುನ್ಸಿಪಲ್ ಕಾರ್ಪೋರೇಶನ್ ಅನ್ನು ಗೆದ್ದಿದ್ದು, ಫಗ್ವಾರದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 3,300 ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದರು ಮತ್ತು ಒಟ್ಟು 37.32 ಲಕ್ಷ ಮತದಾರರು ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರು. ಚುನಾವಣೆಯಲ್ಲಿ 65.85% ದಷ್ಟು ಮತದಾನವಾಗಿತ್ತು. ಪಂಜಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ತವರು ಕ್ಷೇತ್ರವಾದ 60 ಸದಸ್ಯ ಬಲದ ಪಟಿಯಾಲಾ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಎಎಪಿ 53 ಸ್ಥಾನಗಳಲ್ಲಿ 43 ಸ್ಥಾನಗಳನ್ನು ಗೆದ್ದುಕೊಂಡಿದೆ. ಅಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ನಾಲ್ಕು ಸ್ಥಾನಗಳನ್ನು ಗೆದ್ದರೆ, ಎಸ್‌ಎಡಿ ಎರಡು ಸ್ಥಾನಗಳನ್ನು ಗೆದ್ದಿದೆ. ಉಳಿದಂತೆ ಪಾಲಿಕೆಯ ಏಳು ವಾರ್ಡ್‌ಗಳಿಗೆ ಚುನಾವಣೆ ಮುಂದೂಡಲಾಗಿದೆ.

ಲುಧಿಯಾನದಲ್ಲಿ ಎಎಪಿ 95 ರಲ್ಲಿ 41 ಸ್ಥಾನಗಳನ್ನು ಗೆದ್ದುಕೊಂಡಿತು, ಬಹುಮತಕ್ಕೆ ಏಳು ಸ್ಥಾನಗಳ ಕೊರತೆಯಿದೆ. ಕಾಂಗ್ರೆಸ್ 30, ಬಿಜೆಪಿ 19, ಎಸ್‌ಎಡಿ 2 ಮತ್ತು ಸ್ವತಂತ್ರ ಅಭ್ಯರ್ಥಿಗಳು 3 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಎಎಪಿಯ ಇಬ್ಬರು ಹಾಲಿ ಶಾಸಕರ ಪತ್ನಿಯರು ಲುಧಿಯಾನ ಚುನಾವಣೆಯಲ್ಲಿ ಸೋತಿದ್ದು ಎಎಪಿಗೆ ದೊಡ್ಡ ಹಿನ್ನಡೆಯಾಗಿದೆ.  ಜೊತೆಗೆ ಕಾಂಗ್ರೆಸ್ ನ ಮಾಜಿ ಸಚಿವ ಭರತ್ ಭೂಷಣ್ ಆಶು ಅವರ ಪತ್ನಿ ಮಮತಾ ಆಶು ಕೂಡ ಸೋತಿದ್ದಾರೆ.

ಜಲಂಧರ್‌ನಲ್ಲಿ ಎಎಪಿ 85 ರಲ್ಲಿ 38 ರಲ್ಲಿ ಗೆದ್ದಿದೆ. ಇಲ್ಲಿ ಕಾಂಗ್ರೆಸ್ 25, ಬಿಜೆಪಿ 19, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಒಂದರಲ್ಲಿ ಗೆಲುವು ಸಾಧಿಸಿದೆ. ಎರಡು ವಾರ್ಡ್‌ಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅಮೃತಸರದಲ್ಲಿ 85 ವಾರ್ಡ್‌ಗಳಲ್ಲಿ ಕಾಂಗ್ರೆಸ್ 43, ಎಎಪಿ 24, ಬಿಜೆಪಿ ಒಂಬತ್ತು, ಎಸ್‌ಎಡಿ ನಾಲ್ಕು ಮತ್ತು ಸ್ವತಂತ್ರ ಅಭ್ಯರ್ಥಿಗಳು ಐದು ವಾರ್ಡ್‌ಗಳನ್ನು ಗೆದ್ದಿದ್ದಾರೆ.

ಫಗ್ವಾರಾದಲ್ಲಿ ಕಾಂಗ್ರೆಸ್ 22, ಎಎಪಿ 12, ಬಿಜೆಪಿ 4, ಬಿಎಸ್‌ಪಿ ಮೂರು, ಎಸ್‌ಎಡಿ ಮೂರು ಮತ್ತು ಸ್ವತಂತ್ರ ಅಭ್ಯರ್ಥಿಗಳು 6 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಯಾವ ಪಕ್ಷವೂ ಬಹುಮತದ 26 ಸ್ಥಾನಗಳನ್ನು ಮುಟ್ಟಲಿಲ್ಲ. ಆದಾಗ್ಯೂ, ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 50 ಸದಸ್ಯರಿರುವ ಪಾಲಿಕೆಯಲ್ಲಿ ಬಿಎಸ್ಪಿ ಕಾಂಗ್ರೆಸ್‌ ಅನ್ನು ಬೆಂಬಲಿಸುವ ಸಾಧ್ಯತೆಯಿದೆ.

ರಾಜ್ಯದ ಐದು ದೊಡ್ಡ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಸಿಗದಿದ್ದು ಮಾತ್ರವಲ್ಲದೆ, ಪಕ್ಷವು ತನ್ನ ಭದ್ರಕೋಟೆಯಾದ ಸಂಗ್ರೂರ್‌ನಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದೆ. ಏಕೆಂದರೆ ಸ್ಥಳೀಯ ಪುರಸಭೆಯ 29 ಸ್ಥಾನಗಳಲ್ಲಿ ಏಳನ್ನು ಮಾತ್ರ ಗೆಲ್ಲಲು ಪಕ್ಷಕ್ಕೆ ಸಾಧ್ಯವಾಯಿತು. ಮುಖ್ಯಮಂತ್ರಿ ಭಗವಂತ್ ಮಾನ್, ಎಎಪಿ ಪಂಜಾಬ್ ಅಧ್ಯಕ್ಷ ಅಮನ್ ಅರೋರಾ ಮತ್ತು ರಾಜ್ಯ ಹಣಕಾಸು ಸಚಿವ ಹರ್ಪಾಲ್ ಚೀಮಾ ಅವರ ತವರು ಜಿಲ್ಲೆ ಬರ್ನಾಲಾ ವಿಧಾನಸಭಾ ಉಪಚುನಾವಣೆಯ ನಂತರ ಪಕ್ಷಕ್ಕೆ ಇದು ಸತತ ಎರಡನೇ ಸೋಲಾಗಿದೆ.

ಈ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಅಕಾಲಿದಳ ಹೀನಾಯ ಸೋಲು ಕಂಡಿವೆ. ಬಿಜೆಪಿ ಕೇವಲ 7 ಪ್ರತಿಶತದಷ್ಟು ಸ್ಥಾನಗಳನ್ನು ಗೆದ್ದಿದೆ, ಅದರ 69 ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದಾರೆ. ಅದೇ ರೀತಿ, ಅಕಾಲಿದಳ ಕೇವಲ 3 ಪ್ರತಿಶತದಷ್ಟು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಅದರ 31 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಎಸ್ಪಿ 5 ವಿಜೇತರನ್ನು ಹೊಂದಿತ್ತು ಮತ್ತು ಕೇವಲ 0.5 ಶೇಕಡಾ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು.

ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...