Homeಮುಖಪುಟಪಂಜಾಬ್ | ಪಾಲಿಕೆ ಚುನಾವಣೆಗಳಲ್ಲಿ ಎಎಪಿಗೆ ಭಾರಿ ಹಿನ್ನಡೆ

ಪಂಜಾಬ್ | ಪಾಲಿಕೆ ಚುನಾವಣೆಗಳಲ್ಲಿ ಎಎಪಿಗೆ ಭಾರಿ ಹಿನ್ನಡೆ

- Advertisement -
- Advertisement -

ಪಂಜಾಬ್‌ನಲ್ಲಿ ಶನಿವಾರ ನಡೆದ ಪಾಲಿಕೆ ಮತ್ತು ಪುರಸಭೆ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಕಳಪೆ ಪ್ರದರ್ಶನ ನೀಡಿದ್ದು, ಐದರಲ್ಲಿ ಒಂದು ಪಾಲಿಕೆಯಲ್ಲಿ ಮಾತ್ರ ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ. ಜೊತೆಗೆ, 44 ಮುನ್ಸಿಪಲ್ ಮತ್ತು ನಗರ ಪಂಚಾಯತ್‌ಗಳಲ್ಲಿ ಎಎಪಿ 26 ಅನ್ನು ಅಷ್ಟೆ ಗೆದ್ದುಕೊಂಡಿದೆ. ಪಂಜಾಬ್

ಪಟಿಯಾಲ ಮುನಿಸಿಪಲ್ ಕಾರ್ಪೊರೇಶನ್ ಅನ್ನು ಎಎಪಿ ಗೆದ್ದುಕೊಂಡಿದ್ದು, ಲುಧಿಯಾನ ಮತ್ತು ಜಲಂಧರ್ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಮೃತಸರ ಮತ್ತು ಫಗ್ವಾರಾ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ಬಹುಮತ ಸಾಧಿಸಲು ಸೋತುಹೋಗಿದೆ. ಕಾಂಗ್ರೆಸ್ ಅಮೃತಸರ ಮುನ್ಸಿಪಲ್ ಕಾರ್ಪೋರೇಶನ್ ಅನ್ನು ಗೆದ್ದಿದ್ದು, ಫಗ್ವಾರದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 3,300 ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದರು ಮತ್ತು ಒಟ್ಟು 37.32 ಲಕ್ಷ ಮತದಾರರು ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರು. ಚುನಾವಣೆಯಲ್ಲಿ 65.85% ದಷ್ಟು ಮತದಾನವಾಗಿತ್ತು. ಪಂಜಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ತವರು ಕ್ಷೇತ್ರವಾದ 60 ಸದಸ್ಯ ಬಲದ ಪಟಿಯಾಲಾ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಎಎಪಿ 53 ಸ್ಥಾನಗಳಲ್ಲಿ 43 ಸ್ಥಾನಗಳನ್ನು ಗೆದ್ದುಕೊಂಡಿದೆ. ಅಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ನಾಲ್ಕು ಸ್ಥಾನಗಳನ್ನು ಗೆದ್ದರೆ, ಎಸ್‌ಎಡಿ ಎರಡು ಸ್ಥಾನಗಳನ್ನು ಗೆದ್ದಿದೆ. ಉಳಿದಂತೆ ಪಾಲಿಕೆಯ ಏಳು ವಾರ್ಡ್‌ಗಳಿಗೆ ಚುನಾವಣೆ ಮುಂದೂಡಲಾಗಿದೆ.

ಲುಧಿಯಾನದಲ್ಲಿ ಎಎಪಿ 95 ರಲ್ಲಿ 41 ಸ್ಥಾನಗಳನ್ನು ಗೆದ್ದುಕೊಂಡಿತು, ಬಹುಮತಕ್ಕೆ ಏಳು ಸ್ಥಾನಗಳ ಕೊರತೆಯಿದೆ. ಕಾಂಗ್ರೆಸ್ 30, ಬಿಜೆಪಿ 19, ಎಸ್‌ಎಡಿ 2 ಮತ್ತು ಸ್ವತಂತ್ರ ಅಭ್ಯರ್ಥಿಗಳು 3 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಎಎಪಿಯ ಇಬ್ಬರು ಹಾಲಿ ಶಾಸಕರ ಪತ್ನಿಯರು ಲುಧಿಯಾನ ಚುನಾವಣೆಯಲ್ಲಿ ಸೋತಿದ್ದು ಎಎಪಿಗೆ ದೊಡ್ಡ ಹಿನ್ನಡೆಯಾಗಿದೆ.  ಜೊತೆಗೆ ಕಾಂಗ್ರೆಸ್ ನ ಮಾಜಿ ಸಚಿವ ಭರತ್ ಭೂಷಣ್ ಆಶು ಅವರ ಪತ್ನಿ ಮಮತಾ ಆಶು ಕೂಡ ಸೋತಿದ್ದಾರೆ.

ಜಲಂಧರ್‌ನಲ್ಲಿ ಎಎಪಿ 85 ರಲ್ಲಿ 38 ರಲ್ಲಿ ಗೆದ್ದಿದೆ. ಇಲ್ಲಿ ಕಾಂಗ್ರೆಸ್ 25, ಬಿಜೆಪಿ 19, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಒಂದರಲ್ಲಿ ಗೆಲುವು ಸಾಧಿಸಿದೆ. ಎರಡು ವಾರ್ಡ್‌ಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅಮೃತಸರದಲ್ಲಿ 85 ವಾರ್ಡ್‌ಗಳಲ್ಲಿ ಕಾಂಗ್ರೆಸ್ 43, ಎಎಪಿ 24, ಬಿಜೆಪಿ ಒಂಬತ್ತು, ಎಸ್‌ಎಡಿ ನಾಲ್ಕು ಮತ್ತು ಸ್ವತಂತ್ರ ಅಭ್ಯರ್ಥಿಗಳು ಐದು ವಾರ್ಡ್‌ಗಳನ್ನು ಗೆದ್ದಿದ್ದಾರೆ.

ಫಗ್ವಾರಾದಲ್ಲಿ ಕಾಂಗ್ರೆಸ್ 22, ಎಎಪಿ 12, ಬಿಜೆಪಿ 4, ಬಿಎಸ್‌ಪಿ ಮೂರು, ಎಸ್‌ಎಡಿ ಮೂರು ಮತ್ತು ಸ್ವತಂತ್ರ ಅಭ್ಯರ್ಥಿಗಳು 6 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಯಾವ ಪಕ್ಷವೂ ಬಹುಮತದ 26 ಸ್ಥಾನಗಳನ್ನು ಮುಟ್ಟಲಿಲ್ಲ. ಆದಾಗ್ಯೂ, ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 50 ಸದಸ್ಯರಿರುವ ಪಾಲಿಕೆಯಲ್ಲಿ ಬಿಎಸ್ಪಿ ಕಾಂಗ್ರೆಸ್‌ ಅನ್ನು ಬೆಂಬಲಿಸುವ ಸಾಧ್ಯತೆಯಿದೆ.

ರಾಜ್ಯದ ಐದು ದೊಡ್ಡ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಸಿಗದಿದ್ದು ಮಾತ್ರವಲ್ಲದೆ, ಪಕ್ಷವು ತನ್ನ ಭದ್ರಕೋಟೆಯಾದ ಸಂಗ್ರೂರ್‌ನಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದೆ. ಏಕೆಂದರೆ ಸ್ಥಳೀಯ ಪುರಸಭೆಯ 29 ಸ್ಥಾನಗಳಲ್ಲಿ ಏಳನ್ನು ಮಾತ್ರ ಗೆಲ್ಲಲು ಪಕ್ಷಕ್ಕೆ ಸಾಧ್ಯವಾಯಿತು. ಮುಖ್ಯಮಂತ್ರಿ ಭಗವಂತ್ ಮಾನ್, ಎಎಪಿ ಪಂಜಾಬ್ ಅಧ್ಯಕ್ಷ ಅಮನ್ ಅರೋರಾ ಮತ್ತು ರಾಜ್ಯ ಹಣಕಾಸು ಸಚಿವ ಹರ್ಪಾಲ್ ಚೀಮಾ ಅವರ ತವರು ಜಿಲ್ಲೆ ಬರ್ನಾಲಾ ವಿಧಾನಸಭಾ ಉಪಚುನಾವಣೆಯ ನಂತರ ಪಕ್ಷಕ್ಕೆ ಇದು ಸತತ ಎರಡನೇ ಸೋಲಾಗಿದೆ.

ಈ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಅಕಾಲಿದಳ ಹೀನಾಯ ಸೋಲು ಕಂಡಿವೆ. ಬಿಜೆಪಿ ಕೇವಲ 7 ಪ್ರತಿಶತದಷ್ಟು ಸ್ಥಾನಗಳನ್ನು ಗೆದ್ದಿದೆ, ಅದರ 69 ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದಾರೆ. ಅದೇ ರೀತಿ, ಅಕಾಲಿದಳ ಕೇವಲ 3 ಪ್ರತಿಶತದಷ್ಟು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಅದರ 31 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಎಸ್ಪಿ 5 ವಿಜೇತರನ್ನು ಹೊಂದಿತ್ತು ಮತ್ತು ಕೇವಲ 0.5 ಶೇಕಡಾ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು.

ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...