Homeಮುಖಪುಟಪಂಜಾಬ್ | ಪಾಲಿಕೆ ಚುನಾವಣೆಗಳಲ್ಲಿ ಎಎಪಿಗೆ ಭಾರಿ ಹಿನ್ನಡೆ

ಪಂಜಾಬ್ | ಪಾಲಿಕೆ ಚುನಾವಣೆಗಳಲ್ಲಿ ಎಎಪಿಗೆ ಭಾರಿ ಹಿನ್ನಡೆ

- Advertisement -
- Advertisement -

ಪಂಜಾಬ್‌ನಲ್ಲಿ ಶನಿವಾರ ನಡೆದ ಪಾಲಿಕೆ ಮತ್ತು ಪುರಸಭೆ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಕಳಪೆ ಪ್ರದರ್ಶನ ನೀಡಿದ್ದು, ಐದರಲ್ಲಿ ಒಂದು ಪಾಲಿಕೆಯಲ್ಲಿ ಮಾತ್ರ ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ. ಜೊತೆಗೆ, 44 ಮುನ್ಸಿಪಲ್ ಮತ್ತು ನಗರ ಪಂಚಾಯತ್‌ಗಳಲ್ಲಿ ಎಎಪಿ 26 ಅನ್ನು ಅಷ್ಟೆ ಗೆದ್ದುಕೊಂಡಿದೆ. ಪಂಜಾಬ್

ಪಟಿಯಾಲ ಮುನಿಸಿಪಲ್ ಕಾರ್ಪೊರೇಶನ್ ಅನ್ನು ಎಎಪಿ ಗೆದ್ದುಕೊಂಡಿದ್ದು, ಲುಧಿಯಾನ ಮತ್ತು ಜಲಂಧರ್ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಮೃತಸರ ಮತ್ತು ಫಗ್ವಾರಾ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ಬಹುಮತ ಸಾಧಿಸಲು ಸೋತುಹೋಗಿದೆ. ಕಾಂಗ್ರೆಸ್ ಅಮೃತಸರ ಮುನ್ಸಿಪಲ್ ಕಾರ್ಪೋರೇಶನ್ ಅನ್ನು ಗೆದ್ದಿದ್ದು, ಫಗ್ವಾರದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 3,300 ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದರು ಮತ್ತು ಒಟ್ಟು 37.32 ಲಕ್ಷ ಮತದಾರರು ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರು. ಚುನಾವಣೆಯಲ್ಲಿ 65.85% ದಷ್ಟು ಮತದಾನವಾಗಿತ್ತು. ಪಂಜಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ತವರು ಕ್ಷೇತ್ರವಾದ 60 ಸದಸ್ಯ ಬಲದ ಪಟಿಯಾಲಾ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಎಎಪಿ 53 ಸ್ಥಾನಗಳಲ್ಲಿ 43 ಸ್ಥಾನಗಳನ್ನು ಗೆದ್ದುಕೊಂಡಿದೆ. ಅಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ನಾಲ್ಕು ಸ್ಥಾನಗಳನ್ನು ಗೆದ್ದರೆ, ಎಸ್‌ಎಡಿ ಎರಡು ಸ್ಥಾನಗಳನ್ನು ಗೆದ್ದಿದೆ. ಉಳಿದಂತೆ ಪಾಲಿಕೆಯ ಏಳು ವಾರ್ಡ್‌ಗಳಿಗೆ ಚುನಾವಣೆ ಮುಂದೂಡಲಾಗಿದೆ.

ಲುಧಿಯಾನದಲ್ಲಿ ಎಎಪಿ 95 ರಲ್ಲಿ 41 ಸ್ಥಾನಗಳನ್ನು ಗೆದ್ದುಕೊಂಡಿತು, ಬಹುಮತಕ್ಕೆ ಏಳು ಸ್ಥಾನಗಳ ಕೊರತೆಯಿದೆ. ಕಾಂಗ್ರೆಸ್ 30, ಬಿಜೆಪಿ 19, ಎಸ್‌ಎಡಿ 2 ಮತ್ತು ಸ್ವತಂತ್ರ ಅಭ್ಯರ್ಥಿಗಳು 3 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಎಎಪಿಯ ಇಬ್ಬರು ಹಾಲಿ ಶಾಸಕರ ಪತ್ನಿಯರು ಲುಧಿಯಾನ ಚುನಾವಣೆಯಲ್ಲಿ ಸೋತಿದ್ದು ಎಎಪಿಗೆ ದೊಡ್ಡ ಹಿನ್ನಡೆಯಾಗಿದೆ.  ಜೊತೆಗೆ ಕಾಂಗ್ರೆಸ್ ನ ಮಾಜಿ ಸಚಿವ ಭರತ್ ಭೂಷಣ್ ಆಶು ಅವರ ಪತ್ನಿ ಮಮತಾ ಆಶು ಕೂಡ ಸೋತಿದ್ದಾರೆ.

ಜಲಂಧರ್‌ನಲ್ಲಿ ಎಎಪಿ 85 ರಲ್ಲಿ 38 ರಲ್ಲಿ ಗೆದ್ದಿದೆ. ಇಲ್ಲಿ ಕಾಂಗ್ರೆಸ್ 25, ಬಿಜೆಪಿ 19, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಒಂದರಲ್ಲಿ ಗೆಲುವು ಸಾಧಿಸಿದೆ. ಎರಡು ವಾರ್ಡ್‌ಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅಮೃತಸರದಲ್ಲಿ 85 ವಾರ್ಡ್‌ಗಳಲ್ಲಿ ಕಾಂಗ್ರೆಸ್ 43, ಎಎಪಿ 24, ಬಿಜೆಪಿ ಒಂಬತ್ತು, ಎಸ್‌ಎಡಿ ನಾಲ್ಕು ಮತ್ತು ಸ್ವತಂತ್ರ ಅಭ್ಯರ್ಥಿಗಳು ಐದು ವಾರ್ಡ್‌ಗಳನ್ನು ಗೆದ್ದಿದ್ದಾರೆ.

ಫಗ್ವಾರಾದಲ್ಲಿ ಕಾಂಗ್ರೆಸ್ 22, ಎಎಪಿ 12, ಬಿಜೆಪಿ 4, ಬಿಎಸ್‌ಪಿ ಮೂರು, ಎಸ್‌ಎಡಿ ಮೂರು ಮತ್ತು ಸ್ವತಂತ್ರ ಅಭ್ಯರ್ಥಿಗಳು 6 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಯಾವ ಪಕ್ಷವೂ ಬಹುಮತದ 26 ಸ್ಥಾನಗಳನ್ನು ಮುಟ್ಟಲಿಲ್ಲ. ಆದಾಗ್ಯೂ, ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 50 ಸದಸ್ಯರಿರುವ ಪಾಲಿಕೆಯಲ್ಲಿ ಬಿಎಸ್ಪಿ ಕಾಂಗ್ರೆಸ್‌ ಅನ್ನು ಬೆಂಬಲಿಸುವ ಸಾಧ್ಯತೆಯಿದೆ.

ರಾಜ್ಯದ ಐದು ದೊಡ್ಡ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಸಿಗದಿದ್ದು ಮಾತ್ರವಲ್ಲದೆ, ಪಕ್ಷವು ತನ್ನ ಭದ್ರಕೋಟೆಯಾದ ಸಂಗ್ರೂರ್‌ನಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದೆ. ಏಕೆಂದರೆ ಸ್ಥಳೀಯ ಪುರಸಭೆಯ 29 ಸ್ಥಾನಗಳಲ್ಲಿ ಏಳನ್ನು ಮಾತ್ರ ಗೆಲ್ಲಲು ಪಕ್ಷಕ್ಕೆ ಸಾಧ್ಯವಾಯಿತು. ಮುಖ್ಯಮಂತ್ರಿ ಭಗವಂತ್ ಮಾನ್, ಎಎಪಿ ಪಂಜಾಬ್ ಅಧ್ಯಕ್ಷ ಅಮನ್ ಅರೋರಾ ಮತ್ತು ರಾಜ್ಯ ಹಣಕಾಸು ಸಚಿವ ಹರ್ಪಾಲ್ ಚೀಮಾ ಅವರ ತವರು ಜಿಲ್ಲೆ ಬರ್ನಾಲಾ ವಿಧಾನಸಭಾ ಉಪಚುನಾವಣೆಯ ನಂತರ ಪಕ್ಷಕ್ಕೆ ಇದು ಸತತ ಎರಡನೇ ಸೋಲಾಗಿದೆ.

ಈ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಅಕಾಲಿದಳ ಹೀನಾಯ ಸೋಲು ಕಂಡಿವೆ. ಬಿಜೆಪಿ ಕೇವಲ 7 ಪ್ರತಿಶತದಷ್ಟು ಸ್ಥಾನಗಳನ್ನು ಗೆದ್ದಿದೆ, ಅದರ 69 ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದಾರೆ. ಅದೇ ರೀತಿ, ಅಕಾಲಿದಳ ಕೇವಲ 3 ಪ್ರತಿಶತದಷ್ಟು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಅದರ 31 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಎಸ್ಪಿ 5 ವಿಜೇತರನ್ನು ಹೊಂದಿತ್ತು ಮತ್ತು ಕೇವಲ 0.5 ಶೇಕಡಾ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು.

ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...