Homeಮುಖಪುಟಪಂಜಾಬ್‌‌: ‘ನಿಶಾನ್‌ ಶಾಹಿಬ್‌’ಗೆ ಅಗೌರವ ಆರೋಪ; ಮತ್ತೊಬ್ಬ ವ್ಯಕ್ತಿಯ ಹತ್ಯೆ

ಪಂಜಾಬ್‌‌: ‘ನಿಶಾನ್‌ ಶಾಹಿಬ್‌’ಗೆ ಅಗೌರವ ಆರೋಪ; ಮತ್ತೊಬ್ಬ ವ್ಯಕ್ತಿಯ ಹತ್ಯೆ

- Advertisement -
- Advertisement -

ಅಮೃತಸರದ ಸ್ವರ್ಣಮಂದಿರದಲ್ಲಿ ಪವಿತ್ರ ಗ್ರಂಥಕ್ಕೆ ಅಗೌರವ ತೋರಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದ ಒಂದು ದಿನದ ನಂತರ, ಭಾನುವಾರ ಬೆಳಿಗ್ಗೆ ಕಪುರ್ತಲದ ಗುರುದ್ವಾರವೊಂದರಲ್ಲಿ ‘ನಿಶಾನ್ ಸಾಹಿಬ್’ (ಸಿಖ್ ಧಾರ್ಮಿಕ ಧ್ವಜ) ಗೆ ಅಗೌರವ ತೋರಿದ ಆರೋಪದ ಮೇಲೆ ಇನ್ನೊಬ್ಬ ವ್ಯಕ್ತಿಯನ್ನು ಕೊಲ್ಲಲಾಗಿದೆ ಎಂದು ವರದಿಯಾಗಿದೆ.

ಕೊಲೆಗೀಡಾದ ವ್ಯಕ್ತಿ ನಿಶಾನ್ ಸಾಹಿಬ್‌ಗೆ ಅಗೌರವ ತೋರಿ, ಓಡಿಹೋಗಲು ಪ್ರಯತ್ನಿಸಿದಾಗ ಬೆನ್ನಟ್ಟಿ ಹಿಡಿಯಲಾಗಿದೆ ಎಂದು ನಿಜಾಂಪುರ್ ಗ್ರಾಮದ ಕೆಲವು ನಿವಾಸಿಗಳು ಹೇಳಿದ್ದಾರೆ. ಪೊಲೀಸರ ಪ್ರಕಾರ, ವ್ಯಕ್ತಿಯನ್ನು ಹೊಡೆದು ಸಾಯಿಸಲಾಗಿದೆ.

ಇದನ್ನೂ ಓದಿ: ಗೋಲ್ಡನ್ ಟೆಂಪಲ್‌ ಅಪವಿತ್ರತೆ ಆರೋಪ: ವ್ಯಕ್ತಿಯೊಬ್ಬನನ್ನು ಕ್ರೂರವಾಗಿ ಥಳಿಸಿ ಕೊಲೆ

ಶನಿವಾರದಂದು ಅಮೃತಸರದ ಸ್ವರ್ಣ ಮಂದಿರದಲ್ಲಿ ನಡೆದ ‘ಅನಾಹುತ’ದಲ್ಲಿ ಆಪಾದಿತ ವ್ಯಕ್ತಿಯನ್ನುಉದ್ರಿಕ್ತ ಜನಸಮೂಹ ಹತ್ಯೆ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ದಿನನಿತ್ಯದ ರೆಹ್ರಾಸ್ ಪಥ (ಸಾಮಾನ್ಯ ಸಂಜೆ ಪ್ರಾರ್ಥನೆ) ಸಮಯದಲ್ಲಿ ವ್ಯಕ್ತಿಯೊಬ್ಬ ಸ್ವರ್ಣ ಮಂದಿರದ ಗರ್ಭಗುಡಿಯೊಳಗಿನ ಕಂಬಿಯ ಮೇಲೆ ಹಾರಿ, ಪವಿತ್ರ ಕತ್ತಿಯನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದನು ಎಂದು ಮೂಲಗಳು ತಿಳಿಸಿವೆ. ವ್ಯಕ್ತಿಯು ಕ್ಲೀನ್ ಶೇವ್ ಆಗಿದ್ದು, ತಲೆಗೆ ಹಳದಿ ಬಟ್ಟೆಯನ್ನು ಕಟ್ಟಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ತವ್ಯ ನಿರತ ಶಿರೋಮಣಿ ಗುರುದ್ವಾರ ಪರ್ಬಂಡಕ್ ಸಮಿತಿ (SGPC) ನೌಕರರು ಅವರನ್ನು ಬಂಧಿಸಿದ್ದಾರೆ. ಇಷ್ಟೆಲ್ಲ ನಡೆಯುವಾಗ ಪ್ರಾರ್ಥನೆ ಸಲ್ಲಿಸುತ್ತಿದ್ದ ಧಾರ್ಮಿಕ ಗುರು ತನ್ನ ಪ್ರಾರ್ಥನೆಯನ್ನು ಮುಂದುವರಿಸಿದ್ದರು.

ಇದನ್ನೂ ಓದಿ: ದೆಹಲಿ ಗಡಿಗಳಲ್ಲಿನ ಹೋರಾಟಕ್ಕೆ ತೆರೆ: ವಿಜಯೀ ಮೆರವಣಿಗೆ ಮೂಲಕ ಪಂಜಾಬ್‌ಗೆ ತೆರಳಲಿರುವ ರೈತರು

ಆಪಾದಿತ ವ್ಯಕ್ತಿಯನ್ನು ಎಸ್‌ಜಿಪಿಸಿಯ ನೌಕರರು ಮಂದಿರದ ಆವರಣದೊಳಗಿನ ಕೋಣೆಗೆ ಕರೆದೊಯ್ದಿದ್ದರು. ಅಲ್ಲಿ ವಿಚಾರಣೆಯ ಸಮಯದಲ್ಲಿ ಥಳಿಸಲಾಯಿದ್ದು, ನಂತರ ಗಾಲಿಕುರ್ಚಿಯಲ್ಲಿ ಎಸ್‌ಜಿಪಿಸಿ ಪ್ರಧಾನ ಕಚೇರಿಗೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ ಎಂದು TNIE ವರದಿ ಮಾಡಿದೆ.

ಟಿವಿ ಚಾನೆಲ್‌ವೊಂದು ಸ್ವರ್ಣ ಮಂದಿರದ ಸಂಜೆಯ ಪ್ರಾರ್ಥನೆಯನ್ನು ನೇರ ಪ್ರಸಾರವನ್ನು ಮಾಡುತ್ತಿತ್ತು. ಹೀಗಾಗಿ ಘಟನೆಯ ವಿಡಿಯೊಗಳು ಶೀಘ್ರವೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದು ತಿಳಿಯುತ್ತಿದ್ದಂತೆ ನಿಹಾಂಗ್ಸ್ (ಸಿಖ್ ಯೋಧರು) ಸೇರಿದಂತೆ ಸಾರ್ವಜನಿಕರು ಸ್ವರ್ಣ ಮಂದಿರಕ್ಕೆ ಧಾವಿಸಿದ್ದರು.

ಇದರ ನಂತರ, ಸ್ವರ್ಣ ಮಂದಿರದ ಕಾಂಪ್ಲೆಕ್ಸ್‌ನಲ್ಲಿ ನೆಲದ ಮೇಲೆ ಮಲಗಿರುವ ಆರೋಪಿಯ ಮೃತದೇಹದ ವಿಡಿಯೊ ವೈರಲ್‌ ಆಗಿದೆ. ಮೃತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ:ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ; ಸಾಕ್ಷ್ಯಗಳು ಹೀಗಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...