Homeಮುಖಪುಟಪಂಜಾಬ್‌ | ಪಂಚಾಯತ್ ಚುನಾವಣೆಗೆ ತಡೆ ಹೇರಿದ ಹೈಕೋರ್ಟ್

ಪಂಜಾಬ್‌ | ಪಂಚಾಯತ್ ಚುನಾವಣೆಗೆ ತಡೆ ಹೇರಿದ ಹೈಕೋರ್ಟ್

- Advertisement -
- Advertisement -

ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್ ಪಂಜಾಬ್‌ನ ಕೆಲವು ಭಾಗಗಳಲ್ಲಿ ಪಂಚಾಯತ್ ಚುನಾವಣೆಗಳನ್ನು ತಡೆಹಿಡಿದಿದ್ದು, ರಾಜ್ಯದ ಆಮ್ ಆದ್ಮಿ ಪಕ್ಷದ ಸರ್ಕಾರವು ಅಧಿಕಾರವನ್ನು ಸ್ಪಷ್ಟವಾಗಿ ದುರುಪಯೋಗ ಮಾಡಿದೆ ಎಂದು ಆರೋಪಿಸಿ ನಾಮಪತ್ರ ಸಲ್ಲಿಸುವ ಹಂತದಲ್ಲಿ ಚುನಾವಣೆಗಳನ್ನು ತಡೆಹಿಡಿದಿದೆ ಎಂದು ಗುರುವಾರ ಲೈವ್ ಲಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 15 ರಂದು ಚುನಾವಣೆ ನಿಗದಿಯಾಗಿತ್ತು. ಚುನಾವಣೆ ವಿರುದ್ದ ಸುಮಾರು 250 ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಈ ಹಿನ್ನಲೆಯಲ್ಲಿ ನ್ಯಾಯಾಲಯದ ನಿರ್ದೇಶನ ನೀಡಿದೆ.

ಚುನಾವಣಾಧಿಕಾರಿಗಳು ತಮ್ಮ ಎದುರಾಳಿಗಳ ನಾಮಪತ್ರಗಳನ್ನು ವಿನಾಕಾರಣ ಅಥವಾ ದುರ್ಬಲ ಆಧಾರದ ಮೇಲೆ ತಿರಸ್ಕರಿಸಿದ್ದು, ಹಾಗಾಗಿ ಮತದಾನ ಪ್ರಾರಂಭವಾಗುವ ಮೊದಲೇ ಕೆಲವು ಅಭ್ಯರ್ಥಿಗಳು “ಅವಿರೋಧ”ವಾಗಿ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ನ್ಯಾಯಮೂರ್ತಿಗಳಾದ ಸಂದೀಪ್ ಮೌದ್ಗಿಲ್ ಮತ್ತು ದೀಪಕ್ ಗುಪ್ತಾ ಅವರ ಪೀಠವು ಹೇಳಿದೆ.

ಇದನ್ನೂಓದಿ: ಉತ್ತರ ಪ್ರದೇಶ ಉಪಚುನಾವಣೆ | ಕಾಂಗ್ರೆಸ್ ಜೊತೆ ಒಗ್ಗಟ್ಟಿನ ಹೋರಾಟ ಎಂದ ಅಖಿಲೇಶ್; ಏಕಾಂಗಿಯಾಗಿ ಅಭ್ಯರ್ಥಿ ಘೋಷಣೆ!

ಕೆಲವು ಸಂದರ್ಭಗಳಲ್ಲಿ, “ರಾಜ್ಯದಲ್ಲಿ ಆಡಳಿತ ಪಕ್ಷದ” ಅಧಿಕಾರಿಗಳು ನಿರೀಕ್ಷಿತ ಅಭ್ಯರ್ಥಿಗಳ ನಾಮನಿರ್ದೇಶನ ಪತ್ರಗಳನ್ನು ಹರಿದು ಹಾಕಿದ್ದು, ಹಾಗಾಗಿ ಅವರು ಸೋತಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ ಎಂದು ಕೋರ್ಟ್ ಹೇಳಿದೆ.

ಇಂತಹ ಅಕ್ರಮಗಳ ಮೂಲಕ ಚುನಾವಣೆ ಗೆದ್ದವರು ನಂತರ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅಥವಾ ಅವರ ಪಕ್ಷದ ಶಾಸಕರೊಂದಿಗೆ ಗೆಲುವು ಆಚರಿಸಿದ್ದಾರೆ ಎಂದು ನ್ಯಾಯಾಲಯವು ತನಗೆ ಸಲ್ಲಿಸಿದ ಛಾಯಾಚಿತ್ರಗಳನ್ನು ಆಧರಿಸಿ ಹೇಳಿದೆ.

ಯಾವುದೇ ಅಭ್ಯರ್ಥಿಯನ್ನು “ಅವಿರೋಧವಾಗಿ” ವಿಜೇತ ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಏಕೆಂದರೆ ಅವಿರೋಧ ಅಯ್ಕೆಯು ಅವರಿಗೆ ಮತ ಚಲಾಯಿಸುವ ನಾಗರಿಕನ ಶಾಸನಬದ್ಧ ಹಕ್ಕನ್ನು ಕಸಿದುಕೊಳ್ಳುತ್ತದೆ ಎಂದು ನ್ಯಾಯಾಲಯ ಹೇಳಿದೆ.ಪಂಜಾಬ್‌

ಇದನ್ನೂಓದಿ: ‘ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವೈದ್ಯರ ಬಗ್ಗೆ ತಕ್ಷಣ ಗಮನ ಹರಿಸಿ..’; ಬಂಗಾಳ ಸಿಎಂಗೆ ಪತ್ರ ಬರೆದ ಐಎಂಎ

ಅಭ್ಯರ್ಥಿಯನ್ನು ತಿರಸ್ಕರಿಸಲು ಮತದಾರರು ನೋಟಾ [ಮೇಲಿನ ಯಾವುದೂ ಅಲ್ಲ] ಆಯ್ಕೆಯನ್ನು ಚಲಾಯಿಸಬಹುದು. ರಾಜ್ಯ ಸರ್ಕಾರದ ಈ ಕ್ರಮಗಳನ್ನು “ಅಸಂವಿಧಾನಿಕ ಮತ್ತು ಕಾನೂನು ಪ್ರಕ್ರಿಯೆಯ ದುರುಪಯೋಗ” ಎಂದು ನ್ಯಾಯಾಲಯ ವಿವರಿಸಿದೆ.

“ಪಂಜಾಬ್ ಸರ್ಕಾರದ ಕ್ರಮವು ಮತದಾರರು ಮತ್ತು ಮತದಾರರ ಹಕ್ಕುಗಳ ಮೇಲೆ ನಿರ್ಬಂಧಗಳನ್ನು ಹೇರಿದೆ. ಮಾತ್ರವಲ್ಲದೆ, ಇದು ನಮ್ಮ ಸಂವಿಧಾನದ ಮೂಲ ರಚನೆಯನ್ನು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಅದರ ಸಾರವಾಗಿ ನಾಶಪಡಿಸುವ ಪ್ರಯತ್ನವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ನಾಮನಿರ್ದೇಶನಗಳನ್ನು ತಿರಸ್ಕರಿಸಿದ ವ್ಯಕ್ತಿಗಳಿಗೆ ವಿಚಾರಣೆಯ ಅವಕಾಶವನ್ನು ಒದಗಿಸಲಾಗಿಲ್ಲ ಅಥವಾ ಅವರ ನಾಮಪತ್ರಗಳ ಬಗ್ಗೆ ಅನುಮಾನಗಳನ್ನು ನಿವಾರಿಸಲು ಯಾವುದೇ ವಿಚಾರಣೆಯನ್ನು ಮಾಡಲಾಗಿಲ್ಲ ಎಂದು ನ್ಯಾಯಾಲಯವು ಹೇಳಿದೆ. ಅಕ್ಟೋಬರ್ 16 ರಂದು ಮುಂದಿನ ವಿಚಾರಣೆ ನಡೆಯಲಿದೆ.

ವಿಡಿಯೊ ನೊಡಿ: ಪುನೀತ್ ಕೆರೆಹಳ್ಳಿ ಬಂಧನಕ್ಕೆ ನಾಲ್ಕು ತಂಡಗಳನ್ನು ರಚಿಸಿದ್ದೇವೆ: ರಾಮನಗರ SP ಕಾರ್ತಿಕ್ ರೆಡ್ಡಿ| Puneeth Kerehalli

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...