Homeಮುಖಪುಟಪಂಜಾಬ್: ಪ್ರಧಾನಿ ಕಾರ್ಯಕ್ರಮ ರದ್ದು; ಏನಂತಾರೆ ನೆಟ್ಟಿಗರು?

ಪಂಜಾಬ್: ಪ್ರಧಾನಿ ಕಾರ್ಯಕ್ರಮ ರದ್ದು; ಏನಂತಾರೆ ನೆಟ್ಟಿಗರು?

- Advertisement -
- Advertisement -

ಪಂಜಾಬ್‌ ರೈತರು ಗೋ ಬ್ಯಾಕ್ ಮೋದಿ ಎಂಬ ಘೋಷಣೆಗಳೊಂದಿಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಫ್ಲೈ ಓವರ್‌ ಮೇಲೆಯೇ 15 ರಿಂದ 20 ನಿಮಿಷ ಕಾಲ ಪ್ರಧಾನಿ ನರೇಂದ್ರ ಮೋದಿಯವರು ಸಿಲುಕಿಕೊಂಡರು. ಬಳಿಕ ಫಿರೋಜ್‌ಪುರದ ರ್‍ಯಾಲಿಯನ್ನು ರದ್ದುಗೊಳಿಸಿ ದೆಹಲಿಗೆ ವಾಪಸ್ ತೆರಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಪಂಜಾಭ್ ಭೇಟಿಗೆ ಮೊದಲಿನಿಂದಲೂ ರೈತರು ವಿರೋಧ ವ್ಯಕ್ತಪಡಿಸಿದ್ದರು. ಎರಡು ವರ್ಷಗಳ ನಂತರ ರಾಜ್ಯಕ್ಕೆ ಇದು ಮೋದಿಯವರ ಮೊದಲ ಭೇಟಿಯಾಗಿತ್ತು. ಪಾಕಿಸ್ತಾನದ ಗಡಿಯಲ್ಲಿರುವ ಫಿರೋಜ್‌ಪುರಕ್ಕೆ ಪ್ರಮುಖ ಧಾರ್ಮಿಕ ಕೇಂದ್ರಗಳು ಮತ್ತು ಮೂರು ಆರೋಗ್ಯ ಸಂಸ್ಥೆಗಳಿಗೆ ಹೋಗಲು ಸಹಾಯಕವಾಗುವ ಮೆಗಾ ರೋಡ್ ಕಾರಿಡಾರ್‌ಗಳು ಸೇರಿದಂತೆ 42,000 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲು ನಿರ್ಧರಿಸಲಾಗಿತ್ತು. ಈ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.

ಮೋದಿ ಆಗಮನದ ಸುದ್ದಿಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ #GoBackModi #FarmersProtest ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗಲು ಶುರುವಾಗಿದ್ದವು.

ಪಂಜಾಬ್‌ನ ಫಿರೋಜ್‌ಪುರದಲ್ಲಿ ಇಂದು ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರ್‍ಯಾಲಿಯನ್ನು “ಕೆಲವು ಕಾರಣಗಳಿಗಾಗಿ” ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ಹೇಳಿದರು. 15-20 ನಿಮಿಷ ಪ್ರಧಾನಿ ಮೋದಿ ಫ್ಲೈ ಓವರ್‌ ಮೇಲೆ ಅಷ್ಟು ಹೊತ್ತು ಸಿಲುಕಿಕೊಳ್ಳಲು ರಾಜ್ಯ ಸರ್ಕಾರದ ಭದ್ರತಾ ಲೋಪವೇ ಕಾರಣ ಎಂದು ಗೃಹ ಸಚಿವಾಲಯ ಆರೋಪಿಸಿತು.

ಲಖಿಂಪುರ್‌ ಖೇರಿ ಹತ್ಯಾಕಾಂಡದ ಆರೋಪಿ ಆಶಿಶ್ ಮಿಶ್ರಾ ತಂದೆ ಸಚಿವ ಅಜಯ್ ಮಿಶ್ರಾ ತೇನಿಯನ್ನು ಸಂಪುಟದಿಂದ ವಜಾಗೊಳಿಸದೇ ಇರುವುದು, ರೈತರ ಮೇಲೆ ಎಫ್‌ಐಆರ್‌ ದಾಖಲಿಸಿರುವುದು, ಎಂಎಸ್‌ಪಿ ಕಾನೂನು ಶೀಘ್ರ ಜಾರಿ ಮಾಡದಿರುವುದು ಸೇರಿದಂತೆ ಹಲವು ಘಟನೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ನಾಯಕರು ‘ಭದ್ರತಾ ಲೋಪ’ ಎಂಬುದನ್ನೇ ಹೆಚ್ಚು ಪ್ರಚಾರ ಮಾಡುತ್ತಿದ್ದಾರೆ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಖಾಲಿ ಕುರ್ಚಿಗಳು ಹರಿದಾಡಿವೆ. ಈ ಫೋಟೋಗಳನ್ನು ಕಿಸಾನ್‌ ಏಕ್ತಾ ಮೋರ್ಚಾ ಟ್ವಿಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಮೋದಿ ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮದಲ್ಲಿ ಖಾಲಿ ಕುರ್ಚಿಗಳು ರಾರಾಜಿಸಿವೆ ಎಂದು ನೆಟ್ಟಿಗರು ವ್ಯಂಗ್ಯ ಮಾಡಿ, ‘ಇದೇ ಭದ್ರತಾ ಲೋಪ’ ಎಂದಿದ್ದಾರೆ.

ಇದರ ಜೊತೆಗೆ ರೈತ ಚಳವಳಿಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರೊಂದಿಗೆ ಕಟುವಾಗಿ ವರ್ತಿಸಿದ ಚಿತ್ರಗಳನ್ನು ಅನೇಕರು ಹಂಚಿಕೊಂಡಿದ್ದಾರೆ. ಬಿಜೆಪಿ ನಾಯಕರು ‘ಕಾಂಗ್ರೆಸ್‌’ ಪಕ್ಷವನ್ನು ದೂಷಿಸುತ್ತಿದ್ದರೂ ರೈತರ ಹೋರಾಟವನ್ನು ಪ್ರಸ್ತಾಪಿಸುತ್ತಿಲ್ಲ. ಆದರೆ ನೆಟ್ಟಿಗರು ರೈತರ ಹೋರಾಟವನ್ನು ನೆಪಿಸುತ್ತಿರುವುದನ್ನು ಕಾಣಬಹುದು.

ಬರಹಗಾರ್ತಿ ಗಾಯತ್ರಿ ಎಚ್‌.ಎನ್‌. ಹೀಗೆ ಬರೆದಿದ್ದಾರೆ: “ಮೇಘಾಲಯದ ಹಾಲಿ ರಾಜ್ಯಪಾಲ ಹಾಗೂ ಹಿರಿಯ ಬಿಜೆಪಿ ನಾಯಕ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಪ್ರಧಾನಮಂತ್ರಿ ಮೋದಿಯವರು “ರೈತರೇನು ನಮಗಾಗಿ ಸತ್ತರೇ?” ಅಂದುಬಿಟ್ಟರು ಅನ್ನುತ್ತಾ, ಈ ಬಗ್ಗೆ ಅಮಿತ್ ಷಾ`ಗೆ ಹೇಳಿದಾಗ ಅವರು “ಅವನಿಗೆ ತಲೆ ತಿರುಗಿದೆ, ನೀವೇನೂ ಯೋಚನೆ ಮಾಡಬೇಡಿ” ಅನ್ನುವರ್ಥದಲ್ಲಿ ಮಾತಾಡಿದರು ಎಂದು ಮೋದಿಯನ್ನು ದೂರಿಕೊಂಡ (ಅದೇವೇಳೆಗೆ ಷಾ`ರನ್ನು ಒಪ್ಪವಿಟ್ಟುಕೊಂಡ) ವಿಡಿಯೋ ತುಣುಕು ಮೊನ್ನೆ ಮೊನ್ನೆ ಸಖತ್ ವೈರಲ್ ಆಯಿತು. ಅದರ ಬೆನ್ನಲ್ಲೇ ಇವತ್ತು ಪಂಜಾಬಿನಲ್ಲಿ ‘ಭದ್ರತಾ ಲೋಪ’ದ ಸುದ್ದಿ ಬಂದಿದೆ. ಇದ್ದಕ್ಕಿದ್ದ ಹಾಗೇ ಬಿಜೆಪಿಯ ಹಿರಿತಲೆಯೊಂದು ಮೋದಿ ವಿರುದ್ಧ ಬಹಿರಂಗವಾಗಿ ಮಾತಾಡಿದ್ದು, ಅಮಿತ್‌ಷಾರನ್ನು ಒಪ್ಪ ಇಟ್ಟುಕೊಂಡಿದ್ದು ಟ್ರೋಲ್ ಮಾಡಿ ಬಿಸಾಡುವ ಸಂಗತಿ ಅಲ್ಲವೇ ಅಲ್ಲ. ಅದು ಮೋದಿಗೆ ಅದರ ಸಾಕುತಾಯಿ ಕೊಟ್ಟ ಸ್ಪಷ್ಟ ಸಂದೇಶವಾಗಿರಬಹುದು. ನೀನು ಎಷ್ಟು ಜನಪ್ರಿಯನಾದರೂ ಎಷ್ಟು ಭಕ್ತರನ್ನು ಬೆಳೆಸಿದರೂ ನಿನ್ನ ಜುಟ್ಟು ನಮ್ಮ ಕೈಲಿದೆ ಅನ್ನುವ ಎಚ್ಚರಿಕೆಯಾಗಿರಬಹುದು. ಇದೇ ಹಿನ್ನೆಲೆಯಲ್ಲಿ ಇವತ್ತಿನ ಭದ್ರತಾಲೋಪವನ್ನೂ ನೋಡುವ ಮನಸಾಗುತ್ತಿದೆ. ಪಂಜಾಬ್ ಮುಖ್ಯಮಂತ್ರಿ ಇದಕ್ಕೆ ಹೊಣೆಗಾರರೇನೋ ಹೌದು. ಆದರೆ ಚುನಾವಣೆಗೆ ಎದುರಾಗಿ ರಾಜ್ಯದ ಮುಖ್ಯಮಂತ್ರಿಯೊಬ್ಬರು ಇಂಥಾ ಮೂರ್ಖತನ ಮಾಡಲಾರರು ಎಂದೇ ಬಲವಾಗಿ ಅನಿಸುತ್ತಿದೆ. ಆದರೂ ಹೀಗಾಗಿದೆ ಅಂದರೆ ಇದರ ಒಳಮರ್ಮ ಏನೋ ಗಹನವಾದ್ದೇ ಇರಬೇಕು. ಮತ್ತು, ಅದು ನೇರವಾಗಿ ಮೋದಿ ಮತ್ತವರ ಪಕ್ಷಕ್ಕೆ ಸಂಬಂಧಿಸಿದ್ದಿರಬೇಕು. ಎಷ್ಟೆಂದರೂ ಇದು ರಾಜಕಾರಣ. ಕೆಲಸ ಮುಗಿದ ಮೇಲೆ ಆಯುಧವನ್ನು ಮುರಿದು ಬಿಸಾಡುವುದು ಹಳೇಹಪ್ಪಟ್ಟು ರಾಜನೀತಿ. ನನಗೇಕೋ ಆ ವ್ಯಕ್ತಿ, ಸಂಸ್ಥೆಯೊಂದರ ಅಜೆಂಡಾ ಸಾಕಾರಗೊಳಿಸುವ ಸಂಚಿಗೆ ಬಳಕೆಯಾದ ಹೆಡ್ಡನಂತೆ ಕಾಣತೊಡಗಿದ್ದಾರೆ”

ಸಿನಿಮಾ ವಿಮರ್ಶಕ ಹರಿಪರಾಕ್‌ ಹೀಗೆ ಬರೆದಿದ್ದಾರೆ:

ಯುವಬರಹಗಾರ ಭುವನ್‌ ಅವರು ರೈತ ಹೋರಾಟದ ಚಿತ್ರವನ್ನು ಹಂಚಿಕೊಂಡು ಇಂದಿನ ಘಟನೆಯನ್ನು ವಿಶ್ಲೇಷಿಸಿದ್ದಾರೆ.

ಚಿತ್ರ 1: ಒಕ್ಕೂಟ ಸರ್ಕಾರ ಜಾರಿ ತರಲು ಹೊರಟಿದ್ದ 3 ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ರೈತರನ್ನು ತಡೆಯಲು ಸರ್ಕಾರ ರಸ್ತೆಯಲ್ಲಿ ಮೊಳೆಗಳನ್ನು ನೆಟ್ಟಿತು. ಚಿತ್ರ 2:ಪಂಜಾಬ್ ರೈತರಿಂದ ರಸ್ತೆ ತಡೆ, ಫ್ಲೈ ಓವರ್ ನಲ್ಲಿ ಸುಮಾರು 15 ಕ್ಕೂ ಹೆಚ್ಚು ನಿಮಿಷ ಸಿಲುಕಿ, ಫಿರೋಜ್ಹ್ ಪುರ ರ್ಯಾಲಿ ರದ್ದು ಗೊಳಿಸಲಾಯಿತು.

ಎನ್‌.ಎಸ್‌.ಆರ್‌. ಅವರು “ಪಂಜಾಬಿನ ಜನತೆ ಮೋದಿಯವರ ಇಂದಿನ ಚುನಾವಣೆ ರ್‍ಯಾಲಿ ರದ್ದು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ದೆಹಲಿಯಲ್ಲಿ ರೈತರು ಒಂದು ವರ್ಷ ಬಿಸಿಲು, ಮಳೆ, ಚಳಿಯನ್ನು ಲೆಕ್ಕಿಸದೆ ಕೂತಿದ್ದಾಗ ಅವರನ್ನು ಭೇಟಿಯಾಗಿ ಏನ್ ನಿಮ್ಮ ಸಮಸ್ಯೆ ಎಂದು ವಿಚಾರಿಸದೆ ಈಗ ಪಕ್ಷದ ಪರವಾಗಿ ಮತ ಕೇಳಲು ಹೋಗುವುದು ಹಾಸ್ಯಾಸ್ಪದವಾಗಿದೆ. ಪ್ರಧಾನಿ ಹುದ್ದೆಯಲ್ಲಿರುವವರು ಪಕ್ಷದ ಅಧ್ಯಕ್ಷರ ಹಾಗೆ ಸದಾಕಾಲವೂ ಒಂದಿಲ್ಲೊಂದು ರಾಜ್ಯದ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳುವುದು ಸರಿಯಲ್ಲ” ಎಂದು ಪೋಸ್ಟ್‌ ಮಾಡಿದ್ದಾರೆ.

ಚಿಂತಕ ಕೆ.ಎಲ್‌.ಚಂದ್ರಶೇಖರ್‌ ಐಜೂರು ಅವರು ಪಿ.ಲಂಕೇಶ್ ಅವರ ನೀಲು ಕಾವ್ಯದ ಸಾಲುಗಳನ್ನು ಹಂಚಿಕೊಂಡು ಇಂದಿನ ಘಟನೆಯನ್ನು ವಿಮರ್ಶಿಸಿದ್ದಾರೆ.

“ಚಪ್ಪಾಳೆಗಳ ಸ್ಫೂರ್ತಿಯಿಂದ ಹುಟ್ಟಿದ ನಾಯಕಚಪ್ಪಾಳೆಗಳ ನಡುವೆಯೇ ಹೀನಾಯವಾಗಿಸಾಯುವನು”-ನೀಲು

ಅನೇಕರು ವ್ಯಂಗ್ಯ ಮಾಡಿರುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ನೋಡಬಹುದಾಗಿದೆ.


ಇದನ್ನೂ ಓದಿರಿ: ನಗರಸಭೆಗೆ ಸ್ಪರ್ಧಿಸಿದ್ದ ಪ್ರತಿ ಅಭ್ಯರ್ಥಿಗೆ ಸಿ.ಟಿ.ರವಿ 15 ಲಕ್ಷ ರೂ. ನೀಡಿದ್ದರು: ಆಡಿಯೊ ರಿಲೀಸ್ ಮಾಡಿದ ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...