Homeಮುಖಪುಟಪಂಜಾಬ್ | ರೈತ ನಾಯಕರನ್ನು ಬಂಧಿಸಿದ ಪೊಲೀಸರು; ಶಂಭು-ಖಾನೌರಿ ಗಡಿಗಳಲ್ಲಿ ಪ್ರತಿಭಟನಾ ಸ್ಥಳ ತೆರವು

ಪಂಜಾಬ್ | ರೈತ ನಾಯಕರನ್ನು ಬಂಧಿಸಿದ ಪೊಲೀಸರು; ಶಂಭು-ಖಾನೌರಿ ಗಡಿಗಳಲ್ಲಿ ಪ್ರತಿಭಟನಾ ಸ್ಥಳ ತೆರವು

- Advertisement -
- Advertisement -

ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪಂಜಾಬ್- ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಬುಧವಾರ (ಮಾ.19) ತಡರಾತ್ರಿ ಪೊಲೀಸರು ತೆರವುಗೊಳಿಸಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ನಾಯಕರಾದ ಕಿಸಾನ್ ಮಜ್ದೂರ್ ಮೋರ್ಚಾದ (ಕೆಎಂಎಂ) ಸರ್ವಾನ್ ಸಿಂಗ್ ಪಂಧೇರ್ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಜಗಜಿತ್ ಸಿಂಗ್ ದಲ್ಲೆವಾಲ್ ಕೇಂದ್ರ ಸರ್ಕಾರದ ಜೊತೆ ಏಳನೇ ಸುತ್ತಿನ ಮಾತುಕತೆ ನಡೆಸಿ ಶಂಭು, ಖಾನೌರಿ ಗಡಿಗಳಿಗೆ ವಾಪಾಸ್ಸಾಗುವಾಗ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಬಳಿಕ ಪ್ರತಿಭಟನಾ ಸ್ಥಳದಲ್ಲಿ ರೈತರು ನಿರ್ಮಿಸಿಕೊಂಡಿದ್ದ ತಾತ್ಕಾಲಿಕ ವೇದಿಕೆಗಳನ್ನು ಕೆಡವಿದ್ದಾರೆ. ಟ್ರ್ಯಾಕ್ಟರ್ ಸೇರಿದಂತೆ ಇತರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ರೈತ ನಾಯಕರ ಬಂಧನ ಬಳಿಕ ಶಂಭು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಆಗಮಿಸಿದ ಪೊಲೀಸರು, ರೈತರನ್ನು ವಶಕ್ಕೆ ಪಡೆದು ತಮ್ಮ ವಾಹನಗಳಲ್ಲಿ ಕುಳಿತುಕೊಳ್ಳುವಂತೆ ಸೂಚಿಸಿದ್ದಾರೆ. ಖಾನೌರಿ ಗಡಿಯಲ್ಲಿ ರೈತರು ವಿರೋಧ ವ್ಯಕ್ತಪಡಿಸಿದ ಕಾರಣ ಪೊಲೀಸರು ಬಲ ಪ್ರಯೋಗಿಸಿದ್ದಾರೆ. ನಂತರ ಎರಡೂ ಕಡೆಗಳಲ್ಲಿ ಜೆಸಿಬಿಗಳ ಸಹಾಯದಿಂದ ರೈತರ ತಾತ್ಕಾಲಿಕ ಪ್ರತಿಭಟನಾ ವೇದಿಕೆ ಮತ್ತು ಡೇರೆಗಳನ್ನು ತೆರವುಗೊಳಿಸಿ, ಅವರ ಟ್ರ್ಯಾಕ್ಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ಹೇಳಿವೆ.

ರೈತ ನಾಯಕರು ಮತ್ತು ಕೇಂದ್ರ ಸರ್ಕಾರದ ನಡುವಿನ 7ನೇ ಸುತ್ತಿನ ಮಾತುಕತೆಯೂ ವಿಫಲವಾಗಿದೆ ಎನ್ನಲಾಗಿದೆ. ಈ ಬೆನ್ನಲ್ಲೇ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಲಾಗಿದೆ.

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ವರ್ಷದ ಫೆಬ್ರವರಿ 13ರಿಂದ ರೈತರು ಶಂಭು, ಖಾನೌರಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ನವೆಂಬರ್‌ನಿಂದ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ರೈತರನ್ನು ತೆರವುಗೊಳಿಸಿದ ಬಳಿಕವೂ ಬ್ಯಾರಿಕೇಡ್‌ ಮತ್ತು ಇತರ ವಸ್ತುಗಳಿಂದ ಗಡಿಗಳನ್ನು ಮುಚ್ಚಿರುವ ಪೊಲೀಸರು, ರೈತರು ದೆಹಲಿ ಕಡೆ ಹೋಗದಂತೆ ನಿಗಾ ಇಟ್ಟಿದ್ದಾರೆ.

ಬಂಧನದ ಬಳಿಕ ಸರ್ವಾನ್ ಸಿಂಗ್ ಪಂಧೇರ್‌ ಅವರನ್ನು ಪಟಿಯಾಲಾದ ಬಹದ್ದೂರ್‌ಗಢ ಫೋರ್ಟ್ ಕಮಾಂಡೋ ಪೊಲೀಸ್ ತರಬೇತಿ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಇದನ್ನು ತಾತ್ಕಾಲಿಕ ಬಂಧನ ಕೇಂದ್ರವಾಗಿ ಪರಿವರ್ತಿಸಲಾಗಿದ್ದು, ದಲ್ಲೆವಾಲ್ ಹೊರತುಪಡಿಸಿ ಹೆಚ್ಚಿನ ರೈತ ಮುಖಂಡರು ಮತ್ತು ಪ್ರತಿಭಟನಾ ನಿರತ ರೈತರನ್ನು ಅಲ್ಲಿಗೆ ಕರೆದೊಯ್ಯಲಾಗಿದೆ.

ಖಾನೌರಿಯಲ್ಲಿ ಸುಮಾರು 200 ರೈತರನ್ನು ಮತ್ತು ಶಂಭುವಿನಲ್ಲಿ ಸುಮಾರು 40 ರೈತರನ್ನು ಬಂಧಿಸಲಾಗಿದೆ. ಶಂಭು ಗಡಿಯ ಸುತ್ತಮುತ್ತಲಿನ ಅನೇಕ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಹತ್ತಿರದ ಹಳ್ಳಿಗಳಲ್ಲಿ ಭಾರೀ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ಪ್ರತಿಭಟನೆಗಳಿಂದ ಗಣನೀಯ ವೆಚ್ಚವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಎಎಪಿಯ ಉನ್ನತ ಪದಾಧಿಕಾರಿಗಳು ಮತ್ತು ಕೈಗಾರಿಕೋದ್ಯಮಿಗಳ ನಡುವಿನ ಸಭೆಯ ನಂತರ, ಪ್ರತಿಭಟನಾ ನಿರತ ರೈತ ಸಂಘಗಳ ವಿರುದ್ಧ ಕ್ರಮ ಕೈಗೊಳ್ಳುವ ನಿರ್ಧಾರವನ್ನು ಮಂಗಳವಾರ ರಾತ್ರಿ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

ರಾಜ್ಯದ ಆರ್ಥಿಕ ಬೆಳವಣಿಗೆಗೆ ಈ ಕ್ರಮ ಅಗತ್ಯವಾಗಿತ್ತು ಎಂದು ಪಂಜಾಬ್ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಹೇಳಿದ್ದಾರೆ.

ಖಾನೌರಿ ಗಡಿಯಲ್ಲಿದ್ದ ಪೊಲೀಸ್ ಉಪ ನಿರೀಕ್ಷಕ (ಪಟಿಯಾಲ ವಲಯ) ಮಂದೀಪ್ ಸಿಂಗ್ ಸಿಧು ಮತ್ತು ಶಂಭು ಗಡಿಯಲ್ಲಿದ್ದ ಪಟಿಯಾಲದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ನಾನಕ್ ಸಿಂಗ್ ಅವರು, “ನಮ್ಮೊಂದಿಗೆ ಸಹಕರಿಸಲು ಮತ್ತು ರಸ್ತೆಯನ್ನು ತೆರವುಗೊಳಿಸಲು ವಿನಂತಿಸಲಾಗಿದೆ” ಎಂದು ಹೇಳಿದ್ದಾರೆ.

“ತಮ್ಮ ಸ್ವಂತ ಸ್ಥಳಗಳಿಗೆ ಹೋಗಲು ಇಚ್ಛಿಸುವ ರೈತರನ್ನು ಕಳುಹಿಸಲಾಗಿದೆ” ಎಂದು ನಾನಕ್ ಸಿಂಗ್ ತಿಳಿಸಿದ್ದು, ರಸ್ತೆಯನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದಿದ್ದಾರೆ.

“ನಾವೆಲ್ಲರೂ ರೈತರ ಮಕ್ಕಳು, ಪ್ರತಿಭಟನಾ ಸ್ಥಳಗಳನ್ನು ತೆರವುಗೊಳಿಸಲು ಸಹಕರಿಸುವಂತೆ ಅವರಿಗೆ ಹೇಳಿದ್ದೇವೆ” ಎಂದು ಸಿಧು ತಿಳಿಸಿದ್ದಾರೆ.

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ವರ್ಷದ ಫೆಬ್ರವರಿ 13ರಂದು ರೈತರು ದೆಹಲಿ ಚಲೋ ಹೆಸರಿನಲ್ಲಿ ದೆಹಲಿಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು. ಅದನ್ನು ಭದ್ರತಾ ಪಡೆಗಳು ವಿಫಲಗೊಳಿಸಿದಾಗಿನಿಂದ ರೈತರು ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು (ಶಂಭು-ಅಂಬಾಲಾ) ಮತ್ತು ಖಾನೌರಿ (ಸಂಗ್ರೂರ್-ಜಿಂದ್) ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿದ್ದರು.

ರೈತರನ್ನು ಬಂಧಿಸಿ, ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದ ಪೊಲೀಸರ ಕ್ರಮವನ್ನು ಖಂಡಿಸಿರುವ ಪಂಜಾಬ್‌ನ ವಿರೋಧ ಪಕ್ಷದ ನಾಯಕರು, ಎಎಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರೈತರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಬಿಟ್ಟು ತೀವ್ರವಾಗಿ ಖಂಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಚರಣ್‌ಜಿತ್ ಸಿಂಗ್ ಚನ್ನಿ, ಎಎಪಿ ಸರ್ಕಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ರೈತರ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಕೇಂದ್ರ ಬಿಜೆಪಿ ಸರ್ಕಾರ ಮತ್ತು ರಾಜ್ಯದ ಎಎಪಿ ಸರ್ಕಾರಗಳ ವಿರುದ್ದ ವಾಗ್ದಾಳಿ ನಡೆಸಿದ್ದು, “ಅವರು ರೈತರಿಗೆ ದ್ರೋಹ ಬಗೆದು ಬೆನ್ನಿಗೆ ಇರಿದಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಈಗಾಗಲೇ ಮಾತುಕತೆ ನಡೆಯುತ್ತಿರುವಾಗ ಪಂಜಾಬ್ ಪೊಲೀಸರು ರೈತ ನಾಯಕರನ್ನು ಬಂಧಿಸುವ ಅಗತ್ಯವೇನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.

ನಿಂದನೀಯ ಪದ ಬಳಕೆ | ಗ್ರೋಕ್ ಎಐಯನ್ನು ಪರಿಶೀಲಿಸುತ್ತಿರುವ ಕೇಂದ್ರ ಐಟಿ ಸಚಿವಾಲಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...