Homeಮುಖಪುಟಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬುಧವಾರದಂದು ಪ್ರತಿಭಟನೆಗಳ ಮಧ್ಯೆ ಪಂಜಾಬ್‌‌ ಚುನಾವಣಾ ರ್ಯಾಲಿಯನ್ನು ರದ್ದುಗೊಳಿಸಿ ವಾಪಾಸಾಗಿದ್ದಾರೆ. ಒಕ್ಕೂಟ ಸರ್ಕಾರದ ಗೃಹ ಸಚಿವಾಲಯ ಇದನ್ನು ‘ಭದ್ರತಾ ಲೋಪ’ ಎಂದು ಕರೆದಿದ್ದು, ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ದೂರಿದೆ. ಆದರೆ ಇದನ್ನು ನಿರಾಕರಿಸಿರುವ ಪಂಜಾಬ್‌ ಮುಖ್ಯಮಂತ್ರಿ, ತಮ್ಮ ಸರ್ಕಾರದ ಕಡೆಯಿಂದ ಯಾವುದೇ ಭದ್ರತಾ ಲೋಪ ಆಗಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಭದ್ರತಾ ಲೋಪದ ಬಗ್ಗೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಒಕ್ಕೂಟ ಸರ್ಕಾರವು ಕಾಂಗ್ರೆಸ್ ಮೇಲೆ ಆರೋಪಿಸುತ್ತಿದ್ದರೆ, ಕಾಂಗ್ರೆಸ್ ತಮ್ಮ ಸರ್ಕಾರದ ಕಡೆಯಿಂದ ಯಾವುದೇ ಲೋಪ ಆಗಿಲ್ಲ ಎಂದು ಪ್ರತಿಪಾದಿಸುತ್ತಿದೆ.

ಇದನ್ನೂ ಓದಿ:Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ಹರಿದಾಡುತ್ತಿದ್ದು, ಅದರಲ್ಲಿ ಪ್ರಧಾನಿಯ ಕಾರು ತಡೆದಿದ್ದಾರೆ ಎನ್ನಲಾಗಿರುವ ಫ್ಲೈಓವರ್‌ನಲ್ಲಿ ಬಿಜೆಪಿ ಧ್ವಜ ಹಿಡಿದುಕೊಂಡು, ಪ್ರಧಾನಿಯ ಕಾರಿನ ತೀರಾ ಹತ್ತಿರ ಒಂದಷ್ಟು ಜನರು ಶ್ರೀ ನರೇಂದ್ರ ಮೋದಿ ಜಿಂದಾಬಾದ್ ಎಂದು ಘೋಷಣೆ ಕೂಗುವುದನ್ನು ಕಾಣಬಹುದು.

ಈ ಬಗ್ಗೆಗಿನ ಹಲವಾರು ಪ್ರಶ್ನೆಗಳನ್ನು ಪತ್ರಕರ್ತೆ ಮೀತೂ ಜೈನ್‌ ಪ್ರಶ್ನಿಸಿದ್ದಾರೆ.

ಮೀತು ಜೈನ್ ಅವರ ಪ್ರಕಾರ, “ಪ್ರಧಾನ ಮಂತ್ರಿಯ ಯಾವುದೇ ಪ್ರಯಾಣದ ಯೋಜನೆಗಳನ್ನು ವಿಶೇಷ ರಕ್ಷಣಾ ಗುಂಪಿನ (SPG) ಬ್ಲೂಬುಕ್‌ ಪ್ರಕಾರ ನಡೆಯುತ್ತದೆ. ಆಕಸ್ಮಿಕವಾಗಿ ಬದಲಾಗುವ ಮಾರ್ಗ ಸೇರಿದಂತೆ ಪ್ರಧಾನಿ ಸುರಕ್ಷಿತವಾಗಿ ತಲುಪುವವರೆಗಿನ ಎಲ್ಲವನ್ನೂ SPG, ಗುಪ್ತಚರ ವಿಭಾಗ (IB) ಮತ್ತು ರಾಜ್ಯ ಪೊಲೀಸರನ್ನು ಒಳಗೊಂಡ ‘ಸುಧಾರಿತ ಭದ್ರತಾ ಸಂಪರ್ಕ’(ASL) ಚರ್ಚಿಸುತ್ತದೆ. ಒಂದು ವೇಳೆ ಪ್ರಧಾನಿಯನ್ನು ಒಂದು ಸ್ಥಳದಿಂದ ಸ್ಥಳಾಂತರಿಸಬೇಕಾದರೂ ಕೂಡಾ. ಇದರ ನಂತರ ASL ಕನಿಷ್ಠ 200 ಪುಟಗಳ ಕಿರುಪುಸ್ತಕವನ್ನು ಪ್ರಕಟಿಸುತ್ತದೆ”

“ಇದೀಗ ಪ್ರಧಾನ ಮಂತ್ರಿ ಕಚೇರಿ ಮತ್ತು SPG ಉತ್ತರಿಸಬೇಕಾದ ಪ್ರಶ್ನೆಗಳು ಹೀಗಿವೆ. ಹವಾಮಾನವು ಪ್ರತಿಕೂಲವಾಗಿರುತ್ತದೆ ಎಂದು ಮೊದಲೇ ತಿಳಿದಿರಲಿಲ್ಲವೆ?. ಬ್ಲೂಬುಕ್ ಪ್ರಕಾರ ಕನಿಷ್ಠ ಭೇಟಿಗೆ 48 ಗಂಟೆಗಳ ಮುಂಚಿತವಾಗಿ ಭೇಟಿಯ ಇಲಾಖೆಯಿಂದ ಯಾವುದೆ ಆಂತರಿಕ ಮಾಹಿತಿಯನ್ನು ತೆಗೆದುಕೊಳ್ಳಲಾಗಿಲ್ಲವೆ?” ಎಂದು ಮೀತೂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವೈರಲ್‌ ವಿಡಿಯೊ: ಘರ್ಜಿಸುತ್ತಿರುವ ಸಿಂಹವನ್ನು ಹೊತ್ತೊಯ್ದ ಮಹಿಳೆ!

“ಒಂದು ವೇಳೆ ಹವಾಮಾನವು ಪ್ರತಿಕೂಲವಾಗಿದ್ದರೆ ಮತ್ತು ಪ್ರಧಾನಿ ಭೇಟಿ ನೀಡುವ ಸ್ಥಳಕ್ಕೆ ಹೆಲಿಕಾಪ್ಟರ್‌‌‌‌ ತೆರಳಲು ಸಾಧ್ಯವಾಗದಿದ್ದರೆ, ASL ಪ್ರಕಾರ ಆಕಸ್ಮಿಕ ಮಾರ್ಗವನ್ನು ನಿರ್ಧರಿಸಲಾಗಲಿಲ್ಲವೇ? ಅಥವಾ ಎರಡು ಗಂಟೆಗಳ ಪ್ರಯಾಣವಿರುವ 111 ಕಿ.ಮೀ ದೂರದ ಈ ಆಕಸ್ಮಿಕ ಮಾರ್ಗವನ್ನು, ಪ್ರಧಾನಮಂತ್ರಿಯವರು ಆಯ್ದುಕೊಂಡರೇ?” ಎಂದು ಪ್ರಶ್ನಿಸಲಾಗಿದೆ.

“ಭದ್ರತಾ ಅನುಮತಿಯಿಲ್ಲದೆ ಎರಡು ಗಂಟೆಗಳ ಕಾಲ ಝೀರೋ ಟ್ರಾಫಿಕ್ ಇಲ್ಲದ ಮಾರ್ಗದಲ್ಲಿ ಪ್ರಯಾಣಿಸಲು ಎಸ್‌ಪಿಜಿ ನಿಜವಾಗಿಯೂ ಪ್ರಧಾನಿಗೆ ಅವಕಾಶ ನೀಡಿದೆಯೇ? ಬ್ಲೂಬುಕ್‌ ನಿಯಮಗಳ ಪ್ರಕಾರ, ಸಂಪೂರ್ಣ ಮಾರ್ಗವನ್ನು ಕ್ಲಿಯರ್‌ ಮಾಡಲಾಗಿದೆ ಎಂದು ರಾಜ್ಯ ಪೊಲೀಸರು ಹೇಳುವವರೆಗೂ ಎಸ್‌ಪಿಜಿ ಪ್ರಧಾನಿಯನ್ನು ಕಡೆದುಕೊಂಡು ಹೋಗುವಂತಿಲ್ಲ. ಒಂದು ವೇಳೆ ಎಸ್‌ಪಿಜಿ ರಸ್ತೆ ಮೂಲಕ ಪ್ರಯಾಣಿಸಲು ನಿರ್ಧರಿಸಿದ್ದರೆ, ಅದು ಯೋಜನೆಯ ಪ್ರಕಾರವೇ ಆಗಿರಬೇಕು. ಒಂದು ವೇಳೆ ಯೋಜನೆ ಪ್ರಕಾರ ಎಸ್‌ಪಿಜಿ ನಡೆದಕೊಳ್ಳದೆ ಇದ್ದರೆ ಅದರ ಮುಖ್ಯಸ್ಥರನ್ನು ವಜಾಗೊಳಿಸಬೇಕಾಗುತ್ತದೆ. ಇಲ್ಲವೆಂದರೆ, ರಾಜ್ಯದ ಡಿಜಿಪಿ ಪ್ರಧಾನಿ ತೆರಳುವ ಮಾರ್ಗವನ್ನು ಕ್ಲಿಯರ್‌ ಮಾಡದೆ ಕ್ಲಿಯರೆನ್ಸ್ ಮಾಡಲಾಗಿದೆ ಎಂದು ಎಸ್‌ಪಿಜಿಗೆ ತಪ್ಪು ಮಾಹಿತಿ ನೀಡಿದರೆ, ಎಸ್‌ಪಿಜಿಯನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಿದ್ದಕ್ಕಾಗಿ ಅವರ ವಿರುದ್ದ ಕ್ರಮಕೈಗೊಳ್ಳಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ಧ್ವಜಗಳನ್ನು ಬೀಸುತ್ತಾ, ಪ್ರಧಾನಿಯ ಕಾರಿನ ಹತ್ತಿರವೇ ಇದ್ದ ಗುಂಪು, ಪ್ರಧಾನಿಯ ಬೆಂಗಾವಲು ವಾಪಾಸು ಹೊರಟ ನಂತರ ಸ್ಥಳಕ್ಕೆ ಬಂದಿದೆ ಎಂದು ಎಂದು ಬಿಜೆಪಿ ಹೇಳುತ್ತದೆ. ಆದರೆ, ಕ್ಲಿಯರ್‌ ಮಾಡಿದ್ದ ಮಾರ್ಗದಲ್ಲಿ ನಾಗರಿಕರಿಗೆ ಹೇಗೆ ಅವಕಾಶ ನೀಡಲಾಯಿತು? ಅದೂ ಕೂಡಾ ಪ್ರಧಾನಿ ಕಣ್ಣಳತೆ ದೂರದಲ್ಲಿ ಟೆಂಪೋಗಳು ಮತ್ತು ಬಸ್‌ಗಳು ಕೂಡಾ ಗೋಚರಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಓಮಿಕ್ರಾನ್ ಆತಂಕ: ಅಂತರರಾಜ್ಯ ಗಡಿ ಬಂದ್ ಇಲ್ಲ- ಸಚಿವ ಡಾ.ಅಶ್ವತ್ಥನಾರಾಯಣ

“ಅದಲ್ಲದೆ, ಪ್ರಧಾನಿಯ ಬೆಂಗಾವಲಿನಲ್ಲಿ ವಾರ್ನಿಂಗ್‌ ಕಾರು ಮತ್ತು ಮತ್ತು ಪೈಲಟ್ ಕಾರು ಒಳಗೊಂಡಿದೆ. ಇದು ಪ್ರಧಾನಿಗಿಂದ ಮೊದಲು ಚಲಿಸುತ್ತದೆ. ಈ ಕಾರು ಮಾರ್ಗದಲ್ಲಿ ಜನಸಂದಣಿಯನ್ನು ಗಮನಿಸಿ ಬೆಂಗಾವಲು ಪಡೆಯನ್ನು ಎಚ್ಚರಿಸಬಹುದಿತ್ತಲ್ಲವೇ?. ಹಾಗಾದರೆ 20 ಮೀಟರ್ ಅಂತರದಲ್ಲಿ ಪ್ರತಿಭಟನಾಕಾರರ ಹತ್ತಿರವೇ ಬೆಂಗಾವಲು ಹೇಗೆ ನಿಲ್ಲಲು ಸಾಧ್ಯ? ಎಸ್‌ಪಿಜಿ 20 ನಿಮಿಷ ಕಾಯುವ ಬದಲು ತಕ್ಷಣವೇ ವಾಪಸ್ ತೆರಳಬೇಕಿತ್ತಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ನರೇಂದ್ರ ಮೋದಿ ಅವರು ANI ಜೊತೆಗೆ ಮಾತನಾಡುತ್ತಾ, ಜೀವಂತವಾಗಿ ಹಿಂತಿರುಗಿದ್ದರ ಬಗ್ಗೆ ಹೇಳಿಕೊಂಡಿದ್ದಾರೆ. ಒಂದು ವೇಳೆ ಪ್ರಧಾನಿಯ ಜೀವಕ್ಕೆ ಅಪಾಯವಿದ್ದರೆ, ಅದಕ್ಕೆ ಉತ್ತರಿಸಬೇಕಾದವರು, ಅವರಿಗೆ ಆಂತರಿಕ ರಕ್ಷಣೆಯನ್ನು ಒದಗಿಸುವ ಎಸ್‌ಪಿಜಿ” ಎಂದು ಪತ್ರಕರ್ತೆ ಮೀತೂ ಜೈನ್ ಹೇಳಿದ್ದಾರೆ.

ಈ ನಡುವೆ ಪಂಜಾನ್ ಮುಖ್ಯಮಂತ್ರಿ ಚರನ್‌ಜಿತ್‌ ಚನ್ನಿ ಅವರು ಪತ್ರಿಕಾಗೋಷ್ಠಿ ನಡೆಸಿ, ರಾಜ್ಯ ಸರ್ಕಾರದಿಂದ ಯಾವುದೆ ಲೋಪ ಆಗಿಲ್ಲ, ಪ್ರಧಾನಿಯ ಕಾರ್ಯಕ್ರಮದಲ್ಲಿ ರಸ್ತೆ ಮಾರ್ಗದಲ್ಲಿ ಭೇಟಿಮಾಡುವ ಉಲ್ಲೇಖ ಇರಲಿಲ್ಲ. ಸಧ್ಯದಲ್ಲೇ ಚುನಾವಣೆಯಿದೆ ಮತ್ತು ಜನರು ರಸ್ತೆಗಳನ್ನು ನಿರ್ಬಂಧಿಸುವುದು ಸಾಮಾನ್ಯವಾಗಿದೆ. ಇಲ್ಲಿ ಯಾವುದೇ ದಾಳಿಯೂ ನಡೆದಿಲ್ಲ, ಬೆದರಿಕೆಯೂ ಇಲ್ಲ. ಪ್ರಧಾನಿಗೆ ಅಪಾಯವಿದೆ ಎಂದು ಹೇಳುವುದು ತಪ್ಪು’’ ಎಂದು ಹೇಳಿದ್ದಾರೆ.

“ಅವರು ಅರ್ಧ ದಾರಿಯಲ್ಲೇ ಹೊರಡಬೇಕಾಯಿತು ಎಂಬುವುದಕ್ಕೆ ನಾವು ವಿಷಾದಿಸುತ್ತೇವೆ. ಅವರ ಜೀವಕ್ಕೆ ಬೆಲೆಕಟ್ಟಲಾವುದಿಲ್ಲ. ಪ್ರತಿಭಟನಾಕಾರರನ್ನು ರಸ್ತೆಯಿಂದ ತೆರವುಗೊಳಿಸುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಾ ತಿಳಿಸಿದ್ದರು. ಹೀಗಾಗಿ, ಪ್ರತಿಭಟನಾಕಾರರನ್ನು ತೆರವುಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಬೆಳಿಗ್ಗೆ 3 ಗಂಟೆಯವರೆಗೆ ಕೆಲಸ ಮಾಡಿದ್ದೇವೆ” ಎಂದು ಚನ್ನಿ ಹೇಳಿದ್ದಾರೆ. ಏನೇ ಲೋಪ ನಡೆದಿದ್ದರೂ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮೂರ್ತಿ ಭಂಜನೆ ಎಂಬ ರಾಜಕೀಯ ಇತಿಹಾಸದ ಪಳೆಯುಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...