Homeಮುಖಪುಟಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬುಧವಾರದಂದು ಪ್ರತಿಭಟನೆಗಳ ಮಧ್ಯೆ ಪಂಜಾಬ್‌‌ ಚುನಾವಣಾ ರ್ಯಾಲಿಯನ್ನು ರದ್ದುಗೊಳಿಸಿ ವಾಪಾಸಾಗಿದ್ದಾರೆ. ಒಕ್ಕೂಟ ಸರ್ಕಾರದ ಗೃಹ ಸಚಿವಾಲಯ ಇದನ್ನು ‘ಭದ್ರತಾ ಲೋಪ’ ಎಂದು ಕರೆದಿದ್ದು, ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ದೂರಿದೆ. ಆದರೆ ಇದನ್ನು ನಿರಾಕರಿಸಿರುವ ಪಂಜಾಬ್‌ ಮುಖ್ಯಮಂತ್ರಿ, ತಮ್ಮ ಸರ್ಕಾರದ ಕಡೆಯಿಂದ ಯಾವುದೇ ಭದ್ರತಾ ಲೋಪ ಆಗಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಭದ್ರತಾ ಲೋಪದ ಬಗ್ಗೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಒಕ್ಕೂಟ ಸರ್ಕಾರವು ಕಾಂಗ್ರೆಸ್ ಮೇಲೆ ಆರೋಪಿಸುತ್ತಿದ್ದರೆ, ಕಾಂಗ್ರೆಸ್ ತಮ್ಮ ಸರ್ಕಾರದ ಕಡೆಯಿಂದ ಯಾವುದೇ ಲೋಪ ಆಗಿಲ್ಲ ಎಂದು ಪ್ರತಿಪಾದಿಸುತ್ತಿದೆ.

ಇದನ್ನೂ ಓದಿ:Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ಹರಿದಾಡುತ್ತಿದ್ದು, ಅದರಲ್ಲಿ ಪ್ರಧಾನಿಯ ಕಾರು ತಡೆದಿದ್ದಾರೆ ಎನ್ನಲಾಗಿರುವ ಫ್ಲೈಓವರ್‌ನಲ್ಲಿ ಬಿಜೆಪಿ ಧ್ವಜ ಹಿಡಿದುಕೊಂಡು, ಪ್ರಧಾನಿಯ ಕಾರಿನ ತೀರಾ ಹತ್ತಿರ ಒಂದಷ್ಟು ಜನರು ಶ್ರೀ ನರೇಂದ್ರ ಮೋದಿ ಜಿಂದಾಬಾದ್ ಎಂದು ಘೋಷಣೆ ಕೂಗುವುದನ್ನು ಕಾಣಬಹುದು.

ಈ ಬಗ್ಗೆಗಿನ ಹಲವಾರು ಪ್ರಶ್ನೆಗಳನ್ನು ಪತ್ರಕರ್ತೆ ಮೀತೂ ಜೈನ್‌ ಪ್ರಶ್ನಿಸಿದ್ದಾರೆ.

ಮೀತು ಜೈನ್ ಅವರ ಪ್ರಕಾರ, “ಪ್ರಧಾನ ಮಂತ್ರಿಯ ಯಾವುದೇ ಪ್ರಯಾಣದ ಯೋಜನೆಗಳನ್ನು ವಿಶೇಷ ರಕ್ಷಣಾ ಗುಂಪಿನ (SPG) ಬ್ಲೂಬುಕ್‌ ಪ್ರಕಾರ ನಡೆಯುತ್ತದೆ. ಆಕಸ್ಮಿಕವಾಗಿ ಬದಲಾಗುವ ಮಾರ್ಗ ಸೇರಿದಂತೆ ಪ್ರಧಾನಿ ಸುರಕ್ಷಿತವಾಗಿ ತಲುಪುವವರೆಗಿನ ಎಲ್ಲವನ್ನೂ SPG, ಗುಪ್ತಚರ ವಿಭಾಗ (IB) ಮತ್ತು ರಾಜ್ಯ ಪೊಲೀಸರನ್ನು ಒಳಗೊಂಡ ‘ಸುಧಾರಿತ ಭದ್ರತಾ ಸಂಪರ್ಕ’(ASL) ಚರ್ಚಿಸುತ್ತದೆ. ಒಂದು ವೇಳೆ ಪ್ರಧಾನಿಯನ್ನು ಒಂದು ಸ್ಥಳದಿಂದ ಸ್ಥಳಾಂತರಿಸಬೇಕಾದರೂ ಕೂಡಾ. ಇದರ ನಂತರ ASL ಕನಿಷ್ಠ 200 ಪುಟಗಳ ಕಿರುಪುಸ್ತಕವನ್ನು ಪ್ರಕಟಿಸುತ್ತದೆ”

“ಇದೀಗ ಪ್ರಧಾನ ಮಂತ್ರಿ ಕಚೇರಿ ಮತ್ತು SPG ಉತ್ತರಿಸಬೇಕಾದ ಪ್ರಶ್ನೆಗಳು ಹೀಗಿವೆ. ಹವಾಮಾನವು ಪ್ರತಿಕೂಲವಾಗಿರುತ್ತದೆ ಎಂದು ಮೊದಲೇ ತಿಳಿದಿರಲಿಲ್ಲವೆ?. ಬ್ಲೂಬುಕ್ ಪ್ರಕಾರ ಕನಿಷ್ಠ ಭೇಟಿಗೆ 48 ಗಂಟೆಗಳ ಮುಂಚಿತವಾಗಿ ಭೇಟಿಯ ಇಲಾಖೆಯಿಂದ ಯಾವುದೆ ಆಂತರಿಕ ಮಾಹಿತಿಯನ್ನು ತೆಗೆದುಕೊಳ್ಳಲಾಗಿಲ್ಲವೆ?” ಎಂದು ಮೀತೂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವೈರಲ್‌ ವಿಡಿಯೊ: ಘರ್ಜಿಸುತ್ತಿರುವ ಸಿಂಹವನ್ನು ಹೊತ್ತೊಯ್ದ ಮಹಿಳೆ!

“ಒಂದು ವೇಳೆ ಹವಾಮಾನವು ಪ್ರತಿಕೂಲವಾಗಿದ್ದರೆ ಮತ್ತು ಪ್ರಧಾನಿ ಭೇಟಿ ನೀಡುವ ಸ್ಥಳಕ್ಕೆ ಹೆಲಿಕಾಪ್ಟರ್‌‌‌‌ ತೆರಳಲು ಸಾಧ್ಯವಾಗದಿದ್ದರೆ, ASL ಪ್ರಕಾರ ಆಕಸ್ಮಿಕ ಮಾರ್ಗವನ್ನು ನಿರ್ಧರಿಸಲಾಗಲಿಲ್ಲವೇ? ಅಥವಾ ಎರಡು ಗಂಟೆಗಳ ಪ್ರಯಾಣವಿರುವ 111 ಕಿ.ಮೀ ದೂರದ ಈ ಆಕಸ್ಮಿಕ ಮಾರ್ಗವನ್ನು, ಪ್ರಧಾನಮಂತ್ರಿಯವರು ಆಯ್ದುಕೊಂಡರೇ?” ಎಂದು ಪ್ರಶ್ನಿಸಲಾಗಿದೆ.

“ಭದ್ರತಾ ಅನುಮತಿಯಿಲ್ಲದೆ ಎರಡು ಗಂಟೆಗಳ ಕಾಲ ಝೀರೋ ಟ್ರಾಫಿಕ್ ಇಲ್ಲದ ಮಾರ್ಗದಲ್ಲಿ ಪ್ರಯಾಣಿಸಲು ಎಸ್‌ಪಿಜಿ ನಿಜವಾಗಿಯೂ ಪ್ರಧಾನಿಗೆ ಅವಕಾಶ ನೀಡಿದೆಯೇ? ಬ್ಲೂಬುಕ್‌ ನಿಯಮಗಳ ಪ್ರಕಾರ, ಸಂಪೂರ್ಣ ಮಾರ್ಗವನ್ನು ಕ್ಲಿಯರ್‌ ಮಾಡಲಾಗಿದೆ ಎಂದು ರಾಜ್ಯ ಪೊಲೀಸರು ಹೇಳುವವರೆಗೂ ಎಸ್‌ಪಿಜಿ ಪ್ರಧಾನಿಯನ್ನು ಕಡೆದುಕೊಂಡು ಹೋಗುವಂತಿಲ್ಲ. ಒಂದು ವೇಳೆ ಎಸ್‌ಪಿಜಿ ರಸ್ತೆ ಮೂಲಕ ಪ್ರಯಾಣಿಸಲು ನಿರ್ಧರಿಸಿದ್ದರೆ, ಅದು ಯೋಜನೆಯ ಪ್ರಕಾರವೇ ಆಗಿರಬೇಕು. ಒಂದು ವೇಳೆ ಯೋಜನೆ ಪ್ರಕಾರ ಎಸ್‌ಪಿಜಿ ನಡೆದಕೊಳ್ಳದೆ ಇದ್ದರೆ ಅದರ ಮುಖ್ಯಸ್ಥರನ್ನು ವಜಾಗೊಳಿಸಬೇಕಾಗುತ್ತದೆ. ಇಲ್ಲವೆಂದರೆ, ರಾಜ್ಯದ ಡಿಜಿಪಿ ಪ್ರಧಾನಿ ತೆರಳುವ ಮಾರ್ಗವನ್ನು ಕ್ಲಿಯರ್‌ ಮಾಡದೆ ಕ್ಲಿಯರೆನ್ಸ್ ಮಾಡಲಾಗಿದೆ ಎಂದು ಎಸ್‌ಪಿಜಿಗೆ ತಪ್ಪು ಮಾಹಿತಿ ನೀಡಿದರೆ, ಎಸ್‌ಪಿಜಿಯನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಿದ್ದಕ್ಕಾಗಿ ಅವರ ವಿರುದ್ದ ಕ್ರಮಕೈಗೊಳ್ಳಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ಧ್ವಜಗಳನ್ನು ಬೀಸುತ್ತಾ, ಪ್ರಧಾನಿಯ ಕಾರಿನ ಹತ್ತಿರವೇ ಇದ್ದ ಗುಂಪು, ಪ್ರಧಾನಿಯ ಬೆಂಗಾವಲು ವಾಪಾಸು ಹೊರಟ ನಂತರ ಸ್ಥಳಕ್ಕೆ ಬಂದಿದೆ ಎಂದು ಎಂದು ಬಿಜೆಪಿ ಹೇಳುತ್ತದೆ. ಆದರೆ, ಕ್ಲಿಯರ್‌ ಮಾಡಿದ್ದ ಮಾರ್ಗದಲ್ಲಿ ನಾಗರಿಕರಿಗೆ ಹೇಗೆ ಅವಕಾಶ ನೀಡಲಾಯಿತು? ಅದೂ ಕೂಡಾ ಪ್ರಧಾನಿ ಕಣ್ಣಳತೆ ದೂರದಲ್ಲಿ ಟೆಂಪೋಗಳು ಮತ್ತು ಬಸ್‌ಗಳು ಕೂಡಾ ಗೋಚರಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಓಮಿಕ್ರಾನ್ ಆತಂಕ: ಅಂತರರಾಜ್ಯ ಗಡಿ ಬಂದ್ ಇಲ್ಲ- ಸಚಿವ ಡಾ.ಅಶ್ವತ್ಥನಾರಾಯಣ

“ಅದಲ್ಲದೆ, ಪ್ರಧಾನಿಯ ಬೆಂಗಾವಲಿನಲ್ಲಿ ವಾರ್ನಿಂಗ್‌ ಕಾರು ಮತ್ತು ಮತ್ತು ಪೈಲಟ್ ಕಾರು ಒಳಗೊಂಡಿದೆ. ಇದು ಪ್ರಧಾನಿಗಿಂದ ಮೊದಲು ಚಲಿಸುತ್ತದೆ. ಈ ಕಾರು ಮಾರ್ಗದಲ್ಲಿ ಜನಸಂದಣಿಯನ್ನು ಗಮನಿಸಿ ಬೆಂಗಾವಲು ಪಡೆಯನ್ನು ಎಚ್ಚರಿಸಬಹುದಿತ್ತಲ್ಲವೇ?. ಹಾಗಾದರೆ 20 ಮೀಟರ್ ಅಂತರದಲ್ಲಿ ಪ್ರತಿಭಟನಾಕಾರರ ಹತ್ತಿರವೇ ಬೆಂಗಾವಲು ಹೇಗೆ ನಿಲ್ಲಲು ಸಾಧ್ಯ? ಎಸ್‌ಪಿಜಿ 20 ನಿಮಿಷ ಕಾಯುವ ಬದಲು ತಕ್ಷಣವೇ ವಾಪಸ್ ತೆರಳಬೇಕಿತ್ತಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ನರೇಂದ್ರ ಮೋದಿ ಅವರು ANI ಜೊತೆಗೆ ಮಾತನಾಡುತ್ತಾ, ಜೀವಂತವಾಗಿ ಹಿಂತಿರುಗಿದ್ದರ ಬಗ್ಗೆ ಹೇಳಿಕೊಂಡಿದ್ದಾರೆ. ಒಂದು ವೇಳೆ ಪ್ರಧಾನಿಯ ಜೀವಕ್ಕೆ ಅಪಾಯವಿದ್ದರೆ, ಅದಕ್ಕೆ ಉತ್ತರಿಸಬೇಕಾದವರು, ಅವರಿಗೆ ಆಂತರಿಕ ರಕ್ಷಣೆಯನ್ನು ಒದಗಿಸುವ ಎಸ್‌ಪಿಜಿ” ಎಂದು ಪತ್ರಕರ್ತೆ ಮೀತೂ ಜೈನ್ ಹೇಳಿದ್ದಾರೆ.

ಈ ನಡುವೆ ಪಂಜಾನ್ ಮುಖ್ಯಮಂತ್ರಿ ಚರನ್‌ಜಿತ್‌ ಚನ್ನಿ ಅವರು ಪತ್ರಿಕಾಗೋಷ್ಠಿ ನಡೆಸಿ, ರಾಜ್ಯ ಸರ್ಕಾರದಿಂದ ಯಾವುದೆ ಲೋಪ ಆಗಿಲ್ಲ, ಪ್ರಧಾನಿಯ ಕಾರ್ಯಕ್ರಮದಲ್ಲಿ ರಸ್ತೆ ಮಾರ್ಗದಲ್ಲಿ ಭೇಟಿಮಾಡುವ ಉಲ್ಲೇಖ ಇರಲಿಲ್ಲ. ಸಧ್ಯದಲ್ಲೇ ಚುನಾವಣೆಯಿದೆ ಮತ್ತು ಜನರು ರಸ್ತೆಗಳನ್ನು ನಿರ್ಬಂಧಿಸುವುದು ಸಾಮಾನ್ಯವಾಗಿದೆ. ಇಲ್ಲಿ ಯಾವುದೇ ದಾಳಿಯೂ ನಡೆದಿಲ್ಲ, ಬೆದರಿಕೆಯೂ ಇಲ್ಲ. ಪ್ರಧಾನಿಗೆ ಅಪಾಯವಿದೆ ಎಂದು ಹೇಳುವುದು ತಪ್ಪು’’ ಎಂದು ಹೇಳಿದ್ದಾರೆ.

“ಅವರು ಅರ್ಧ ದಾರಿಯಲ್ಲೇ ಹೊರಡಬೇಕಾಯಿತು ಎಂಬುವುದಕ್ಕೆ ನಾವು ವಿಷಾದಿಸುತ್ತೇವೆ. ಅವರ ಜೀವಕ್ಕೆ ಬೆಲೆಕಟ್ಟಲಾವುದಿಲ್ಲ. ಪ್ರತಿಭಟನಾಕಾರರನ್ನು ರಸ್ತೆಯಿಂದ ತೆರವುಗೊಳಿಸುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಾ ತಿಳಿಸಿದ್ದರು. ಹೀಗಾಗಿ, ಪ್ರತಿಭಟನಾಕಾರರನ್ನು ತೆರವುಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಬೆಳಿಗ್ಗೆ 3 ಗಂಟೆಯವರೆಗೆ ಕೆಲಸ ಮಾಡಿದ್ದೇವೆ” ಎಂದು ಚನ್ನಿ ಹೇಳಿದ್ದಾರೆ. ಏನೇ ಲೋಪ ನಡೆದಿದ್ದರೂ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮೂರ್ತಿ ಭಂಜನೆ ಎಂಬ ರಾಜಕೀಯ ಇತಿಹಾಸದ ಪಳೆಯುಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...