Homeಮುಖಪುಟಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬುಧವಾರದಂದು ಪ್ರತಿಭಟನೆಗಳ ಮಧ್ಯೆ ಪಂಜಾಬ್‌‌ ಚುನಾವಣಾ ರ್ಯಾಲಿಯನ್ನು ರದ್ದುಗೊಳಿಸಿ ವಾಪಾಸಾಗಿದ್ದಾರೆ. ಒಕ್ಕೂಟ ಸರ್ಕಾರದ ಗೃಹ ಸಚಿವಾಲಯ ಇದನ್ನು ‘ಭದ್ರತಾ ಲೋಪ’ ಎಂದು ಕರೆದಿದ್ದು, ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ದೂರಿದೆ. ಆದರೆ ಇದನ್ನು ನಿರಾಕರಿಸಿರುವ ಪಂಜಾಬ್‌ ಮುಖ್ಯಮಂತ್ರಿ, ತಮ್ಮ ಸರ್ಕಾರದ ಕಡೆಯಿಂದ ಯಾವುದೇ ಭದ್ರತಾ ಲೋಪ ಆಗಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಭದ್ರತಾ ಲೋಪದ ಬಗ್ಗೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಒಕ್ಕೂಟ ಸರ್ಕಾರವು ಕಾಂಗ್ರೆಸ್ ಮೇಲೆ ಆರೋಪಿಸುತ್ತಿದ್ದರೆ, ಕಾಂಗ್ರೆಸ್ ತಮ್ಮ ಸರ್ಕಾರದ ಕಡೆಯಿಂದ ಯಾವುದೇ ಲೋಪ ಆಗಿಲ್ಲ ಎಂದು ಪ್ರತಿಪಾದಿಸುತ್ತಿದೆ.

ಇದನ್ನೂ ಓದಿ:Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ಹರಿದಾಡುತ್ತಿದ್ದು, ಅದರಲ್ಲಿ ಪ್ರಧಾನಿಯ ಕಾರು ತಡೆದಿದ್ದಾರೆ ಎನ್ನಲಾಗಿರುವ ಫ್ಲೈಓವರ್‌ನಲ್ಲಿ ಬಿಜೆಪಿ ಧ್ವಜ ಹಿಡಿದುಕೊಂಡು, ಪ್ರಧಾನಿಯ ಕಾರಿನ ತೀರಾ ಹತ್ತಿರ ಒಂದಷ್ಟು ಜನರು ಶ್ರೀ ನರೇಂದ್ರ ಮೋದಿ ಜಿಂದಾಬಾದ್ ಎಂದು ಘೋಷಣೆ ಕೂಗುವುದನ್ನು ಕಾಣಬಹುದು.

ಈ ಬಗ್ಗೆಗಿನ ಹಲವಾರು ಪ್ರಶ್ನೆಗಳನ್ನು ಪತ್ರಕರ್ತೆ ಮೀತೂ ಜೈನ್‌ ಪ್ರಶ್ನಿಸಿದ್ದಾರೆ.

ಮೀತು ಜೈನ್ ಅವರ ಪ್ರಕಾರ, “ಪ್ರಧಾನ ಮಂತ್ರಿಯ ಯಾವುದೇ ಪ್ರಯಾಣದ ಯೋಜನೆಗಳನ್ನು ವಿಶೇಷ ರಕ್ಷಣಾ ಗುಂಪಿನ (SPG) ಬ್ಲೂಬುಕ್‌ ಪ್ರಕಾರ ನಡೆಯುತ್ತದೆ. ಆಕಸ್ಮಿಕವಾಗಿ ಬದಲಾಗುವ ಮಾರ್ಗ ಸೇರಿದಂತೆ ಪ್ರಧಾನಿ ಸುರಕ್ಷಿತವಾಗಿ ತಲುಪುವವರೆಗಿನ ಎಲ್ಲವನ್ನೂ SPG, ಗುಪ್ತಚರ ವಿಭಾಗ (IB) ಮತ್ತು ರಾಜ್ಯ ಪೊಲೀಸರನ್ನು ಒಳಗೊಂಡ ‘ಸುಧಾರಿತ ಭದ್ರತಾ ಸಂಪರ್ಕ’(ASL) ಚರ್ಚಿಸುತ್ತದೆ. ಒಂದು ವೇಳೆ ಪ್ರಧಾನಿಯನ್ನು ಒಂದು ಸ್ಥಳದಿಂದ ಸ್ಥಳಾಂತರಿಸಬೇಕಾದರೂ ಕೂಡಾ. ಇದರ ನಂತರ ASL ಕನಿಷ್ಠ 200 ಪುಟಗಳ ಕಿರುಪುಸ್ತಕವನ್ನು ಪ್ರಕಟಿಸುತ್ತದೆ”

“ಇದೀಗ ಪ್ರಧಾನ ಮಂತ್ರಿ ಕಚೇರಿ ಮತ್ತು SPG ಉತ್ತರಿಸಬೇಕಾದ ಪ್ರಶ್ನೆಗಳು ಹೀಗಿವೆ. ಹವಾಮಾನವು ಪ್ರತಿಕೂಲವಾಗಿರುತ್ತದೆ ಎಂದು ಮೊದಲೇ ತಿಳಿದಿರಲಿಲ್ಲವೆ?. ಬ್ಲೂಬುಕ್ ಪ್ರಕಾರ ಕನಿಷ್ಠ ಭೇಟಿಗೆ 48 ಗಂಟೆಗಳ ಮುಂಚಿತವಾಗಿ ಭೇಟಿಯ ಇಲಾಖೆಯಿಂದ ಯಾವುದೆ ಆಂತರಿಕ ಮಾಹಿತಿಯನ್ನು ತೆಗೆದುಕೊಳ್ಳಲಾಗಿಲ್ಲವೆ?” ಎಂದು ಮೀತೂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವೈರಲ್‌ ವಿಡಿಯೊ: ಘರ್ಜಿಸುತ್ತಿರುವ ಸಿಂಹವನ್ನು ಹೊತ್ತೊಯ್ದ ಮಹಿಳೆ!

“ಒಂದು ವೇಳೆ ಹವಾಮಾನವು ಪ್ರತಿಕೂಲವಾಗಿದ್ದರೆ ಮತ್ತು ಪ್ರಧಾನಿ ಭೇಟಿ ನೀಡುವ ಸ್ಥಳಕ್ಕೆ ಹೆಲಿಕಾಪ್ಟರ್‌‌‌‌ ತೆರಳಲು ಸಾಧ್ಯವಾಗದಿದ್ದರೆ, ASL ಪ್ರಕಾರ ಆಕಸ್ಮಿಕ ಮಾರ್ಗವನ್ನು ನಿರ್ಧರಿಸಲಾಗಲಿಲ್ಲವೇ? ಅಥವಾ ಎರಡು ಗಂಟೆಗಳ ಪ್ರಯಾಣವಿರುವ 111 ಕಿ.ಮೀ ದೂರದ ಈ ಆಕಸ್ಮಿಕ ಮಾರ್ಗವನ್ನು, ಪ್ರಧಾನಮಂತ್ರಿಯವರು ಆಯ್ದುಕೊಂಡರೇ?” ಎಂದು ಪ್ರಶ್ನಿಸಲಾಗಿದೆ.

“ಭದ್ರತಾ ಅನುಮತಿಯಿಲ್ಲದೆ ಎರಡು ಗಂಟೆಗಳ ಕಾಲ ಝೀರೋ ಟ್ರಾಫಿಕ್ ಇಲ್ಲದ ಮಾರ್ಗದಲ್ಲಿ ಪ್ರಯಾಣಿಸಲು ಎಸ್‌ಪಿಜಿ ನಿಜವಾಗಿಯೂ ಪ್ರಧಾನಿಗೆ ಅವಕಾಶ ನೀಡಿದೆಯೇ? ಬ್ಲೂಬುಕ್‌ ನಿಯಮಗಳ ಪ್ರಕಾರ, ಸಂಪೂರ್ಣ ಮಾರ್ಗವನ್ನು ಕ್ಲಿಯರ್‌ ಮಾಡಲಾಗಿದೆ ಎಂದು ರಾಜ್ಯ ಪೊಲೀಸರು ಹೇಳುವವರೆಗೂ ಎಸ್‌ಪಿಜಿ ಪ್ರಧಾನಿಯನ್ನು ಕಡೆದುಕೊಂಡು ಹೋಗುವಂತಿಲ್ಲ. ಒಂದು ವೇಳೆ ಎಸ್‌ಪಿಜಿ ರಸ್ತೆ ಮೂಲಕ ಪ್ರಯಾಣಿಸಲು ನಿರ್ಧರಿಸಿದ್ದರೆ, ಅದು ಯೋಜನೆಯ ಪ್ರಕಾರವೇ ಆಗಿರಬೇಕು. ಒಂದು ವೇಳೆ ಯೋಜನೆ ಪ್ರಕಾರ ಎಸ್‌ಪಿಜಿ ನಡೆದಕೊಳ್ಳದೆ ಇದ್ದರೆ ಅದರ ಮುಖ್ಯಸ್ಥರನ್ನು ವಜಾಗೊಳಿಸಬೇಕಾಗುತ್ತದೆ. ಇಲ್ಲವೆಂದರೆ, ರಾಜ್ಯದ ಡಿಜಿಪಿ ಪ್ರಧಾನಿ ತೆರಳುವ ಮಾರ್ಗವನ್ನು ಕ್ಲಿಯರ್‌ ಮಾಡದೆ ಕ್ಲಿಯರೆನ್ಸ್ ಮಾಡಲಾಗಿದೆ ಎಂದು ಎಸ್‌ಪಿಜಿಗೆ ತಪ್ಪು ಮಾಹಿತಿ ನೀಡಿದರೆ, ಎಸ್‌ಪಿಜಿಯನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಿದ್ದಕ್ಕಾಗಿ ಅವರ ವಿರುದ್ದ ಕ್ರಮಕೈಗೊಳ್ಳಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ಧ್ವಜಗಳನ್ನು ಬೀಸುತ್ತಾ, ಪ್ರಧಾನಿಯ ಕಾರಿನ ಹತ್ತಿರವೇ ಇದ್ದ ಗುಂಪು, ಪ್ರಧಾನಿಯ ಬೆಂಗಾವಲು ವಾಪಾಸು ಹೊರಟ ನಂತರ ಸ್ಥಳಕ್ಕೆ ಬಂದಿದೆ ಎಂದು ಎಂದು ಬಿಜೆಪಿ ಹೇಳುತ್ತದೆ. ಆದರೆ, ಕ್ಲಿಯರ್‌ ಮಾಡಿದ್ದ ಮಾರ್ಗದಲ್ಲಿ ನಾಗರಿಕರಿಗೆ ಹೇಗೆ ಅವಕಾಶ ನೀಡಲಾಯಿತು? ಅದೂ ಕೂಡಾ ಪ್ರಧಾನಿ ಕಣ್ಣಳತೆ ದೂರದಲ್ಲಿ ಟೆಂಪೋಗಳು ಮತ್ತು ಬಸ್‌ಗಳು ಕೂಡಾ ಗೋಚರಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಓಮಿಕ್ರಾನ್ ಆತಂಕ: ಅಂತರರಾಜ್ಯ ಗಡಿ ಬಂದ್ ಇಲ್ಲ- ಸಚಿವ ಡಾ.ಅಶ್ವತ್ಥನಾರಾಯಣ

“ಅದಲ್ಲದೆ, ಪ್ರಧಾನಿಯ ಬೆಂಗಾವಲಿನಲ್ಲಿ ವಾರ್ನಿಂಗ್‌ ಕಾರು ಮತ್ತು ಮತ್ತು ಪೈಲಟ್ ಕಾರು ಒಳಗೊಂಡಿದೆ. ಇದು ಪ್ರಧಾನಿಗಿಂದ ಮೊದಲು ಚಲಿಸುತ್ತದೆ. ಈ ಕಾರು ಮಾರ್ಗದಲ್ಲಿ ಜನಸಂದಣಿಯನ್ನು ಗಮನಿಸಿ ಬೆಂಗಾವಲು ಪಡೆಯನ್ನು ಎಚ್ಚರಿಸಬಹುದಿತ್ತಲ್ಲವೇ?. ಹಾಗಾದರೆ 20 ಮೀಟರ್ ಅಂತರದಲ್ಲಿ ಪ್ರತಿಭಟನಾಕಾರರ ಹತ್ತಿರವೇ ಬೆಂಗಾವಲು ಹೇಗೆ ನಿಲ್ಲಲು ಸಾಧ್ಯ? ಎಸ್‌ಪಿಜಿ 20 ನಿಮಿಷ ಕಾಯುವ ಬದಲು ತಕ್ಷಣವೇ ವಾಪಸ್ ತೆರಳಬೇಕಿತ್ತಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ನರೇಂದ್ರ ಮೋದಿ ಅವರು ANI ಜೊತೆಗೆ ಮಾತನಾಡುತ್ತಾ, ಜೀವಂತವಾಗಿ ಹಿಂತಿರುಗಿದ್ದರ ಬಗ್ಗೆ ಹೇಳಿಕೊಂಡಿದ್ದಾರೆ. ಒಂದು ವೇಳೆ ಪ್ರಧಾನಿಯ ಜೀವಕ್ಕೆ ಅಪಾಯವಿದ್ದರೆ, ಅದಕ್ಕೆ ಉತ್ತರಿಸಬೇಕಾದವರು, ಅವರಿಗೆ ಆಂತರಿಕ ರಕ್ಷಣೆಯನ್ನು ಒದಗಿಸುವ ಎಸ್‌ಪಿಜಿ” ಎಂದು ಪತ್ರಕರ್ತೆ ಮೀತೂ ಜೈನ್ ಹೇಳಿದ್ದಾರೆ.

ಈ ನಡುವೆ ಪಂಜಾನ್ ಮುಖ್ಯಮಂತ್ರಿ ಚರನ್‌ಜಿತ್‌ ಚನ್ನಿ ಅವರು ಪತ್ರಿಕಾಗೋಷ್ಠಿ ನಡೆಸಿ, ರಾಜ್ಯ ಸರ್ಕಾರದಿಂದ ಯಾವುದೆ ಲೋಪ ಆಗಿಲ್ಲ, ಪ್ರಧಾನಿಯ ಕಾರ್ಯಕ್ರಮದಲ್ಲಿ ರಸ್ತೆ ಮಾರ್ಗದಲ್ಲಿ ಭೇಟಿಮಾಡುವ ಉಲ್ಲೇಖ ಇರಲಿಲ್ಲ. ಸಧ್ಯದಲ್ಲೇ ಚುನಾವಣೆಯಿದೆ ಮತ್ತು ಜನರು ರಸ್ತೆಗಳನ್ನು ನಿರ್ಬಂಧಿಸುವುದು ಸಾಮಾನ್ಯವಾಗಿದೆ. ಇಲ್ಲಿ ಯಾವುದೇ ದಾಳಿಯೂ ನಡೆದಿಲ್ಲ, ಬೆದರಿಕೆಯೂ ಇಲ್ಲ. ಪ್ರಧಾನಿಗೆ ಅಪಾಯವಿದೆ ಎಂದು ಹೇಳುವುದು ತಪ್ಪು’’ ಎಂದು ಹೇಳಿದ್ದಾರೆ.

“ಅವರು ಅರ್ಧ ದಾರಿಯಲ್ಲೇ ಹೊರಡಬೇಕಾಯಿತು ಎಂಬುವುದಕ್ಕೆ ನಾವು ವಿಷಾದಿಸುತ್ತೇವೆ. ಅವರ ಜೀವಕ್ಕೆ ಬೆಲೆಕಟ್ಟಲಾವುದಿಲ್ಲ. ಪ್ರತಿಭಟನಾಕಾರರನ್ನು ರಸ್ತೆಯಿಂದ ತೆರವುಗೊಳಿಸುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಾ ತಿಳಿಸಿದ್ದರು. ಹೀಗಾಗಿ, ಪ್ರತಿಭಟನಾಕಾರರನ್ನು ತೆರವುಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಬೆಳಿಗ್ಗೆ 3 ಗಂಟೆಯವರೆಗೆ ಕೆಲಸ ಮಾಡಿದ್ದೇವೆ” ಎಂದು ಚನ್ನಿ ಹೇಳಿದ್ದಾರೆ. ಏನೇ ಲೋಪ ನಡೆದಿದ್ದರೂ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮೂರ್ತಿ ಭಂಜನೆ ಎಂಬ ರಾಜಕೀಯ ಇತಿಹಾಸದ ಪಳೆಯುಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...