Homeಮುಖಪುಟಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬುಧವಾರದಂದು ಪ್ರತಿಭಟನೆಗಳ ಮಧ್ಯೆ ಪಂಜಾಬ್‌‌ ಚುನಾವಣಾ ರ್ಯಾಲಿಯನ್ನು ರದ್ದುಗೊಳಿಸಿ ವಾಪಾಸಾಗಿದ್ದಾರೆ. ಒಕ್ಕೂಟ ಸರ್ಕಾರದ ಗೃಹ ಸಚಿವಾಲಯ ಇದನ್ನು ‘ಭದ್ರತಾ ಲೋಪ’ ಎಂದು ಕರೆದಿದ್ದು, ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ದೂರಿದೆ. ಆದರೆ ಇದನ್ನು ನಿರಾಕರಿಸಿರುವ ಪಂಜಾಬ್‌ ಮುಖ್ಯಮಂತ್ರಿ, ತಮ್ಮ ಸರ್ಕಾರದ ಕಡೆಯಿಂದ ಯಾವುದೇ ಭದ್ರತಾ ಲೋಪ ಆಗಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಭದ್ರತಾ ಲೋಪದ ಬಗ್ಗೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಒಕ್ಕೂಟ ಸರ್ಕಾರವು ಕಾಂಗ್ರೆಸ್ ಮೇಲೆ ಆರೋಪಿಸುತ್ತಿದ್ದರೆ, ಕಾಂಗ್ರೆಸ್ ತಮ್ಮ ಸರ್ಕಾರದ ಕಡೆಯಿಂದ ಯಾವುದೇ ಲೋಪ ಆಗಿಲ್ಲ ಎಂದು ಪ್ರತಿಪಾದಿಸುತ್ತಿದೆ.

ಇದನ್ನೂ ಓದಿ:Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ಹರಿದಾಡುತ್ತಿದ್ದು, ಅದರಲ್ಲಿ ಪ್ರಧಾನಿಯ ಕಾರು ತಡೆದಿದ್ದಾರೆ ಎನ್ನಲಾಗಿರುವ ಫ್ಲೈಓವರ್‌ನಲ್ಲಿ ಬಿಜೆಪಿ ಧ್ವಜ ಹಿಡಿದುಕೊಂಡು, ಪ್ರಧಾನಿಯ ಕಾರಿನ ತೀರಾ ಹತ್ತಿರ ಒಂದಷ್ಟು ಜನರು ಶ್ರೀ ನರೇಂದ್ರ ಮೋದಿ ಜಿಂದಾಬಾದ್ ಎಂದು ಘೋಷಣೆ ಕೂಗುವುದನ್ನು ಕಾಣಬಹುದು.

ಈ ಬಗ್ಗೆಗಿನ ಹಲವಾರು ಪ್ರಶ್ನೆಗಳನ್ನು ಪತ್ರಕರ್ತೆ ಮೀತೂ ಜೈನ್‌ ಪ್ರಶ್ನಿಸಿದ್ದಾರೆ.

ಮೀತು ಜೈನ್ ಅವರ ಪ್ರಕಾರ, “ಪ್ರಧಾನ ಮಂತ್ರಿಯ ಯಾವುದೇ ಪ್ರಯಾಣದ ಯೋಜನೆಗಳನ್ನು ವಿಶೇಷ ರಕ್ಷಣಾ ಗುಂಪಿನ (SPG) ಬ್ಲೂಬುಕ್‌ ಪ್ರಕಾರ ನಡೆಯುತ್ತದೆ. ಆಕಸ್ಮಿಕವಾಗಿ ಬದಲಾಗುವ ಮಾರ್ಗ ಸೇರಿದಂತೆ ಪ್ರಧಾನಿ ಸುರಕ್ಷಿತವಾಗಿ ತಲುಪುವವರೆಗಿನ ಎಲ್ಲವನ್ನೂ SPG, ಗುಪ್ತಚರ ವಿಭಾಗ (IB) ಮತ್ತು ರಾಜ್ಯ ಪೊಲೀಸರನ್ನು ಒಳಗೊಂಡ ‘ಸುಧಾರಿತ ಭದ್ರತಾ ಸಂಪರ್ಕ’(ASL) ಚರ್ಚಿಸುತ್ತದೆ. ಒಂದು ವೇಳೆ ಪ್ರಧಾನಿಯನ್ನು ಒಂದು ಸ್ಥಳದಿಂದ ಸ್ಥಳಾಂತರಿಸಬೇಕಾದರೂ ಕೂಡಾ. ಇದರ ನಂತರ ASL ಕನಿಷ್ಠ 200 ಪುಟಗಳ ಕಿರುಪುಸ್ತಕವನ್ನು ಪ್ರಕಟಿಸುತ್ತದೆ”

“ಇದೀಗ ಪ್ರಧಾನ ಮಂತ್ರಿ ಕಚೇರಿ ಮತ್ತು SPG ಉತ್ತರಿಸಬೇಕಾದ ಪ್ರಶ್ನೆಗಳು ಹೀಗಿವೆ. ಹವಾಮಾನವು ಪ್ರತಿಕೂಲವಾಗಿರುತ್ತದೆ ಎಂದು ಮೊದಲೇ ತಿಳಿದಿರಲಿಲ್ಲವೆ?. ಬ್ಲೂಬುಕ್ ಪ್ರಕಾರ ಕನಿಷ್ಠ ಭೇಟಿಗೆ 48 ಗಂಟೆಗಳ ಮುಂಚಿತವಾಗಿ ಭೇಟಿಯ ಇಲಾಖೆಯಿಂದ ಯಾವುದೆ ಆಂತರಿಕ ಮಾಹಿತಿಯನ್ನು ತೆಗೆದುಕೊಳ್ಳಲಾಗಿಲ್ಲವೆ?” ಎಂದು ಮೀತೂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವೈರಲ್‌ ವಿಡಿಯೊ: ಘರ್ಜಿಸುತ್ತಿರುವ ಸಿಂಹವನ್ನು ಹೊತ್ತೊಯ್ದ ಮಹಿಳೆ!

“ಒಂದು ವೇಳೆ ಹವಾಮಾನವು ಪ್ರತಿಕೂಲವಾಗಿದ್ದರೆ ಮತ್ತು ಪ್ರಧಾನಿ ಭೇಟಿ ನೀಡುವ ಸ್ಥಳಕ್ಕೆ ಹೆಲಿಕಾಪ್ಟರ್‌‌‌‌ ತೆರಳಲು ಸಾಧ್ಯವಾಗದಿದ್ದರೆ, ASL ಪ್ರಕಾರ ಆಕಸ್ಮಿಕ ಮಾರ್ಗವನ್ನು ನಿರ್ಧರಿಸಲಾಗಲಿಲ್ಲವೇ? ಅಥವಾ ಎರಡು ಗಂಟೆಗಳ ಪ್ರಯಾಣವಿರುವ 111 ಕಿ.ಮೀ ದೂರದ ಈ ಆಕಸ್ಮಿಕ ಮಾರ್ಗವನ್ನು, ಪ್ರಧಾನಮಂತ್ರಿಯವರು ಆಯ್ದುಕೊಂಡರೇ?” ಎಂದು ಪ್ರಶ್ನಿಸಲಾಗಿದೆ.

“ಭದ್ರತಾ ಅನುಮತಿಯಿಲ್ಲದೆ ಎರಡು ಗಂಟೆಗಳ ಕಾಲ ಝೀರೋ ಟ್ರಾಫಿಕ್ ಇಲ್ಲದ ಮಾರ್ಗದಲ್ಲಿ ಪ್ರಯಾಣಿಸಲು ಎಸ್‌ಪಿಜಿ ನಿಜವಾಗಿಯೂ ಪ್ರಧಾನಿಗೆ ಅವಕಾಶ ನೀಡಿದೆಯೇ? ಬ್ಲೂಬುಕ್‌ ನಿಯಮಗಳ ಪ್ರಕಾರ, ಸಂಪೂರ್ಣ ಮಾರ್ಗವನ್ನು ಕ್ಲಿಯರ್‌ ಮಾಡಲಾಗಿದೆ ಎಂದು ರಾಜ್ಯ ಪೊಲೀಸರು ಹೇಳುವವರೆಗೂ ಎಸ್‌ಪಿಜಿ ಪ್ರಧಾನಿಯನ್ನು ಕಡೆದುಕೊಂಡು ಹೋಗುವಂತಿಲ್ಲ. ಒಂದು ವೇಳೆ ಎಸ್‌ಪಿಜಿ ರಸ್ತೆ ಮೂಲಕ ಪ್ರಯಾಣಿಸಲು ನಿರ್ಧರಿಸಿದ್ದರೆ, ಅದು ಯೋಜನೆಯ ಪ್ರಕಾರವೇ ಆಗಿರಬೇಕು. ಒಂದು ವೇಳೆ ಯೋಜನೆ ಪ್ರಕಾರ ಎಸ್‌ಪಿಜಿ ನಡೆದಕೊಳ್ಳದೆ ಇದ್ದರೆ ಅದರ ಮುಖ್ಯಸ್ಥರನ್ನು ವಜಾಗೊಳಿಸಬೇಕಾಗುತ್ತದೆ. ಇಲ್ಲವೆಂದರೆ, ರಾಜ್ಯದ ಡಿಜಿಪಿ ಪ್ರಧಾನಿ ತೆರಳುವ ಮಾರ್ಗವನ್ನು ಕ್ಲಿಯರ್‌ ಮಾಡದೆ ಕ್ಲಿಯರೆನ್ಸ್ ಮಾಡಲಾಗಿದೆ ಎಂದು ಎಸ್‌ಪಿಜಿಗೆ ತಪ್ಪು ಮಾಹಿತಿ ನೀಡಿದರೆ, ಎಸ್‌ಪಿಜಿಯನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಿದ್ದಕ್ಕಾಗಿ ಅವರ ವಿರುದ್ದ ಕ್ರಮಕೈಗೊಳ್ಳಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ಧ್ವಜಗಳನ್ನು ಬೀಸುತ್ತಾ, ಪ್ರಧಾನಿಯ ಕಾರಿನ ಹತ್ತಿರವೇ ಇದ್ದ ಗುಂಪು, ಪ್ರಧಾನಿಯ ಬೆಂಗಾವಲು ವಾಪಾಸು ಹೊರಟ ನಂತರ ಸ್ಥಳಕ್ಕೆ ಬಂದಿದೆ ಎಂದು ಎಂದು ಬಿಜೆಪಿ ಹೇಳುತ್ತದೆ. ಆದರೆ, ಕ್ಲಿಯರ್‌ ಮಾಡಿದ್ದ ಮಾರ್ಗದಲ್ಲಿ ನಾಗರಿಕರಿಗೆ ಹೇಗೆ ಅವಕಾಶ ನೀಡಲಾಯಿತು? ಅದೂ ಕೂಡಾ ಪ್ರಧಾನಿ ಕಣ್ಣಳತೆ ದೂರದಲ್ಲಿ ಟೆಂಪೋಗಳು ಮತ್ತು ಬಸ್‌ಗಳು ಕೂಡಾ ಗೋಚರಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಓಮಿಕ್ರಾನ್ ಆತಂಕ: ಅಂತರರಾಜ್ಯ ಗಡಿ ಬಂದ್ ಇಲ್ಲ- ಸಚಿವ ಡಾ.ಅಶ್ವತ್ಥನಾರಾಯಣ

“ಅದಲ್ಲದೆ, ಪ್ರಧಾನಿಯ ಬೆಂಗಾವಲಿನಲ್ಲಿ ವಾರ್ನಿಂಗ್‌ ಕಾರು ಮತ್ತು ಮತ್ತು ಪೈಲಟ್ ಕಾರು ಒಳಗೊಂಡಿದೆ. ಇದು ಪ್ರಧಾನಿಗಿಂದ ಮೊದಲು ಚಲಿಸುತ್ತದೆ. ಈ ಕಾರು ಮಾರ್ಗದಲ್ಲಿ ಜನಸಂದಣಿಯನ್ನು ಗಮನಿಸಿ ಬೆಂಗಾವಲು ಪಡೆಯನ್ನು ಎಚ್ಚರಿಸಬಹುದಿತ್ತಲ್ಲವೇ?. ಹಾಗಾದರೆ 20 ಮೀಟರ್ ಅಂತರದಲ್ಲಿ ಪ್ರತಿಭಟನಾಕಾರರ ಹತ್ತಿರವೇ ಬೆಂಗಾವಲು ಹೇಗೆ ನಿಲ್ಲಲು ಸಾಧ್ಯ? ಎಸ್‌ಪಿಜಿ 20 ನಿಮಿಷ ಕಾಯುವ ಬದಲು ತಕ್ಷಣವೇ ವಾಪಸ್ ತೆರಳಬೇಕಿತ್ತಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ನರೇಂದ್ರ ಮೋದಿ ಅವರು ANI ಜೊತೆಗೆ ಮಾತನಾಡುತ್ತಾ, ಜೀವಂತವಾಗಿ ಹಿಂತಿರುಗಿದ್ದರ ಬಗ್ಗೆ ಹೇಳಿಕೊಂಡಿದ್ದಾರೆ. ಒಂದು ವೇಳೆ ಪ್ರಧಾನಿಯ ಜೀವಕ್ಕೆ ಅಪಾಯವಿದ್ದರೆ, ಅದಕ್ಕೆ ಉತ್ತರಿಸಬೇಕಾದವರು, ಅವರಿಗೆ ಆಂತರಿಕ ರಕ್ಷಣೆಯನ್ನು ಒದಗಿಸುವ ಎಸ್‌ಪಿಜಿ” ಎಂದು ಪತ್ರಕರ್ತೆ ಮೀತೂ ಜೈನ್ ಹೇಳಿದ್ದಾರೆ.

ಈ ನಡುವೆ ಪಂಜಾನ್ ಮುಖ್ಯಮಂತ್ರಿ ಚರನ್‌ಜಿತ್‌ ಚನ್ನಿ ಅವರು ಪತ್ರಿಕಾಗೋಷ್ಠಿ ನಡೆಸಿ, ರಾಜ್ಯ ಸರ್ಕಾರದಿಂದ ಯಾವುದೆ ಲೋಪ ಆಗಿಲ್ಲ, ಪ್ರಧಾನಿಯ ಕಾರ್ಯಕ್ರಮದಲ್ಲಿ ರಸ್ತೆ ಮಾರ್ಗದಲ್ಲಿ ಭೇಟಿಮಾಡುವ ಉಲ್ಲೇಖ ಇರಲಿಲ್ಲ. ಸಧ್ಯದಲ್ಲೇ ಚುನಾವಣೆಯಿದೆ ಮತ್ತು ಜನರು ರಸ್ತೆಗಳನ್ನು ನಿರ್ಬಂಧಿಸುವುದು ಸಾಮಾನ್ಯವಾಗಿದೆ. ಇಲ್ಲಿ ಯಾವುದೇ ದಾಳಿಯೂ ನಡೆದಿಲ್ಲ, ಬೆದರಿಕೆಯೂ ಇಲ್ಲ. ಪ್ರಧಾನಿಗೆ ಅಪಾಯವಿದೆ ಎಂದು ಹೇಳುವುದು ತಪ್ಪು’’ ಎಂದು ಹೇಳಿದ್ದಾರೆ.

“ಅವರು ಅರ್ಧ ದಾರಿಯಲ್ಲೇ ಹೊರಡಬೇಕಾಯಿತು ಎಂಬುವುದಕ್ಕೆ ನಾವು ವಿಷಾದಿಸುತ್ತೇವೆ. ಅವರ ಜೀವಕ್ಕೆ ಬೆಲೆಕಟ್ಟಲಾವುದಿಲ್ಲ. ಪ್ರತಿಭಟನಾಕಾರರನ್ನು ರಸ್ತೆಯಿಂದ ತೆರವುಗೊಳಿಸುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಾ ತಿಳಿಸಿದ್ದರು. ಹೀಗಾಗಿ, ಪ್ರತಿಭಟನಾಕಾರರನ್ನು ತೆರವುಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಬೆಳಿಗ್ಗೆ 3 ಗಂಟೆಯವರೆಗೆ ಕೆಲಸ ಮಾಡಿದ್ದೇವೆ” ಎಂದು ಚನ್ನಿ ಹೇಳಿದ್ದಾರೆ. ಏನೇ ಲೋಪ ನಡೆದಿದ್ದರೂ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮೂರ್ತಿ ಭಂಜನೆ ಎಂಬ ರಾಜಕೀಯ ಇತಿಹಾಸದ ಪಳೆಯುಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....