Homeಮುಖಪುಟಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬುಧವಾರದಂದು ಪ್ರತಿಭಟನೆಗಳ ಮಧ್ಯೆ ಪಂಜಾಬ್‌‌ ಚುನಾವಣಾ ರ್ಯಾಲಿಯನ್ನು ರದ್ದುಗೊಳಿಸಿ ವಾಪಾಸಾಗಿದ್ದಾರೆ. ಒಕ್ಕೂಟ ಸರ್ಕಾರದ ಗೃಹ ಸಚಿವಾಲಯ ಇದನ್ನು ‘ಭದ್ರತಾ ಲೋಪ’ ಎಂದು ಕರೆದಿದ್ದು, ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ದೂರಿದೆ. ಆದರೆ ಇದನ್ನು ನಿರಾಕರಿಸಿರುವ ಪಂಜಾಬ್‌ ಮುಖ್ಯಮಂತ್ರಿ, ತಮ್ಮ ಸರ್ಕಾರದ ಕಡೆಯಿಂದ ಯಾವುದೇ ಭದ್ರತಾ ಲೋಪ ಆಗಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಭದ್ರತಾ ಲೋಪದ ಬಗ್ಗೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಒಕ್ಕೂಟ ಸರ್ಕಾರವು ಕಾಂಗ್ರೆಸ್ ಮೇಲೆ ಆರೋಪಿಸುತ್ತಿದ್ದರೆ, ಕಾಂಗ್ರೆಸ್ ತಮ್ಮ ಸರ್ಕಾರದ ಕಡೆಯಿಂದ ಯಾವುದೇ ಲೋಪ ಆಗಿಲ್ಲ ಎಂದು ಪ್ರತಿಪಾದಿಸುತ್ತಿದೆ.

ಇದನ್ನೂ ಓದಿ:Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ಹರಿದಾಡುತ್ತಿದ್ದು, ಅದರಲ್ಲಿ ಪ್ರಧಾನಿಯ ಕಾರು ತಡೆದಿದ್ದಾರೆ ಎನ್ನಲಾಗಿರುವ ಫ್ಲೈಓವರ್‌ನಲ್ಲಿ ಬಿಜೆಪಿ ಧ್ವಜ ಹಿಡಿದುಕೊಂಡು, ಪ್ರಧಾನಿಯ ಕಾರಿನ ತೀರಾ ಹತ್ತಿರ ಒಂದಷ್ಟು ಜನರು ಶ್ರೀ ನರೇಂದ್ರ ಮೋದಿ ಜಿಂದಾಬಾದ್ ಎಂದು ಘೋಷಣೆ ಕೂಗುವುದನ್ನು ಕಾಣಬಹುದು.

ಈ ಬಗ್ಗೆಗಿನ ಹಲವಾರು ಪ್ರಶ್ನೆಗಳನ್ನು ಪತ್ರಕರ್ತೆ ಮೀತೂ ಜೈನ್‌ ಪ್ರಶ್ನಿಸಿದ್ದಾರೆ.

ಮೀತು ಜೈನ್ ಅವರ ಪ್ರಕಾರ, “ಪ್ರಧಾನ ಮಂತ್ರಿಯ ಯಾವುದೇ ಪ್ರಯಾಣದ ಯೋಜನೆಗಳನ್ನು ವಿಶೇಷ ರಕ್ಷಣಾ ಗುಂಪಿನ (SPG) ಬ್ಲೂಬುಕ್‌ ಪ್ರಕಾರ ನಡೆಯುತ್ತದೆ. ಆಕಸ್ಮಿಕವಾಗಿ ಬದಲಾಗುವ ಮಾರ್ಗ ಸೇರಿದಂತೆ ಪ್ರಧಾನಿ ಸುರಕ್ಷಿತವಾಗಿ ತಲುಪುವವರೆಗಿನ ಎಲ್ಲವನ್ನೂ SPG, ಗುಪ್ತಚರ ವಿಭಾಗ (IB) ಮತ್ತು ರಾಜ್ಯ ಪೊಲೀಸರನ್ನು ಒಳಗೊಂಡ ‘ಸುಧಾರಿತ ಭದ್ರತಾ ಸಂಪರ್ಕ’(ASL) ಚರ್ಚಿಸುತ್ತದೆ. ಒಂದು ವೇಳೆ ಪ್ರಧಾನಿಯನ್ನು ಒಂದು ಸ್ಥಳದಿಂದ ಸ್ಥಳಾಂತರಿಸಬೇಕಾದರೂ ಕೂಡಾ. ಇದರ ನಂತರ ASL ಕನಿಷ್ಠ 200 ಪುಟಗಳ ಕಿರುಪುಸ್ತಕವನ್ನು ಪ್ರಕಟಿಸುತ್ತದೆ”

“ಇದೀಗ ಪ್ರಧಾನ ಮಂತ್ರಿ ಕಚೇರಿ ಮತ್ತು SPG ಉತ್ತರಿಸಬೇಕಾದ ಪ್ರಶ್ನೆಗಳು ಹೀಗಿವೆ. ಹವಾಮಾನವು ಪ್ರತಿಕೂಲವಾಗಿರುತ್ತದೆ ಎಂದು ಮೊದಲೇ ತಿಳಿದಿರಲಿಲ್ಲವೆ?. ಬ್ಲೂಬುಕ್ ಪ್ರಕಾರ ಕನಿಷ್ಠ ಭೇಟಿಗೆ 48 ಗಂಟೆಗಳ ಮುಂಚಿತವಾಗಿ ಭೇಟಿಯ ಇಲಾಖೆಯಿಂದ ಯಾವುದೆ ಆಂತರಿಕ ಮಾಹಿತಿಯನ್ನು ತೆಗೆದುಕೊಳ್ಳಲಾಗಿಲ್ಲವೆ?” ಎಂದು ಮೀತೂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವೈರಲ್‌ ವಿಡಿಯೊ: ಘರ್ಜಿಸುತ್ತಿರುವ ಸಿಂಹವನ್ನು ಹೊತ್ತೊಯ್ದ ಮಹಿಳೆ!

“ಒಂದು ವೇಳೆ ಹವಾಮಾನವು ಪ್ರತಿಕೂಲವಾಗಿದ್ದರೆ ಮತ್ತು ಪ್ರಧಾನಿ ಭೇಟಿ ನೀಡುವ ಸ್ಥಳಕ್ಕೆ ಹೆಲಿಕಾಪ್ಟರ್‌‌‌‌ ತೆರಳಲು ಸಾಧ್ಯವಾಗದಿದ್ದರೆ, ASL ಪ್ರಕಾರ ಆಕಸ್ಮಿಕ ಮಾರ್ಗವನ್ನು ನಿರ್ಧರಿಸಲಾಗಲಿಲ್ಲವೇ? ಅಥವಾ ಎರಡು ಗಂಟೆಗಳ ಪ್ರಯಾಣವಿರುವ 111 ಕಿ.ಮೀ ದೂರದ ಈ ಆಕಸ್ಮಿಕ ಮಾರ್ಗವನ್ನು, ಪ್ರಧಾನಮಂತ್ರಿಯವರು ಆಯ್ದುಕೊಂಡರೇ?” ಎಂದು ಪ್ರಶ್ನಿಸಲಾಗಿದೆ.

“ಭದ್ರತಾ ಅನುಮತಿಯಿಲ್ಲದೆ ಎರಡು ಗಂಟೆಗಳ ಕಾಲ ಝೀರೋ ಟ್ರಾಫಿಕ್ ಇಲ್ಲದ ಮಾರ್ಗದಲ್ಲಿ ಪ್ರಯಾಣಿಸಲು ಎಸ್‌ಪಿಜಿ ನಿಜವಾಗಿಯೂ ಪ್ರಧಾನಿಗೆ ಅವಕಾಶ ನೀಡಿದೆಯೇ? ಬ್ಲೂಬುಕ್‌ ನಿಯಮಗಳ ಪ್ರಕಾರ, ಸಂಪೂರ್ಣ ಮಾರ್ಗವನ್ನು ಕ್ಲಿಯರ್‌ ಮಾಡಲಾಗಿದೆ ಎಂದು ರಾಜ್ಯ ಪೊಲೀಸರು ಹೇಳುವವರೆಗೂ ಎಸ್‌ಪಿಜಿ ಪ್ರಧಾನಿಯನ್ನು ಕಡೆದುಕೊಂಡು ಹೋಗುವಂತಿಲ್ಲ. ಒಂದು ವೇಳೆ ಎಸ್‌ಪಿಜಿ ರಸ್ತೆ ಮೂಲಕ ಪ್ರಯಾಣಿಸಲು ನಿರ್ಧರಿಸಿದ್ದರೆ, ಅದು ಯೋಜನೆಯ ಪ್ರಕಾರವೇ ಆಗಿರಬೇಕು. ಒಂದು ವೇಳೆ ಯೋಜನೆ ಪ್ರಕಾರ ಎಸ್‌ಪಿಜಿ ನಡೆದಕೊಳ್ಳದೆ ಇದ್ದರೆ ಅದರ ಮುಖ್ಯಸ್ಥರನ್ನು ವಜಾಗೊಳಿಸಬೇಕಾಗುತ್ತದೆ. ಇಲ್ಲವೆಂದರೆ, ರಾಜ್ಯದ ಡಿಜಿಪಿ ಪ್ರಧಾನಿ ತೆರಳುವ ಮಾರ್ಗವನ್ನು ಕ್ಲಿಯರ್‌ ಮಾಡದೆ ಕ್ಲಿಯರೆನ್ಸ್ ಮಾಡಲಾಗಿದೆ ಎಂದು ಎಸ್‌ಪಿಜಿಗೆ ತಪ್ಪು ಮಾಹಿತಿ ನೀಡಿದರೆ, ಎಸ್‌ಪಿಜಿಯನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಿದ್ದಕ್ಕಾಗಿ ಅವರ ವಿರುದ್ದ ಕ್ರಮಕೈಗೊಳ್ಳಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ಧ್ವಜಗಳನ್ನು ಬೀಸುತ್ತಾ, ಪ್ರಧಾನಿಯ ಕಾರಿನ ಹತ್ತಿರವೇ ಇದ್ದ ಗುಂಪು, ಪ್ರಧಾನಿಯ ಬೆಂಗಾವಲು ವಾಪಾಸು ಹೊರಟ ನಂತರ ಸ್ಥಳಕ್ಕೆ ಬಂದಿದೆ ಎಂದು ಎಂದು ಬಿಜೆಪಿ ಹೇಳುತ್ತದೆ. ಆದರೆ, ಕ್ಲಿಯರ್‌ ಮಾಡಿದ್ದ ಮಾರ್ಗದಲ್ಲಿ ನಾಗರಿಕರಿಗೆ ಹೇಗೆ ಅವಕಾಶ ನೀಡಲಾಯಿತು? ಅದೂ ಕೂಡಾ ಪ್ರಧಾನಿ ಕಣ್ಣಳತೆ ದೂರದಲ್ಲಿ ಟೆಂಪೋಗಳು ಮತ್ತು ಬಸ್‌ಗಳು ಕೂಡಾ ಗೋಚರಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಓಮಿಕ್ರಾನ್ ಆತಂಕ: ಅಂತರರಾಜ್ಯ ಗಡಿ ಬಂದ್ ಇಲ್ಲ- ಸಚಿವ ಡಾ.ಅಶ್ವತ್ಥನಾರಾಯಣ

“ಅದಲ್ಲದೆ, ಪ್ರಧಾನಿಯ ಬೆಂಗಾವಲಿನಲ್ಲಿ ವಾರ್ನಿಂಗ್‌ ಕಾರು ಮತ್ತು ಮತ್ತು ಪೈಲಟ್ ಕಾರು ಒಳಗೊಂಡಿದೆ. ಇದು ಪ್ರಧಾನಿಗಿಂದ ಮೊದಲು ಚಲಿಸುತ್ತದೆ. ಈ ಕಾರು ಮಾರ್ಗದಲ್ಲಿ ಜನಸಂದಣಿಯನ್ನು ಗಮನಿಸಿ ಬೆಂಗಾವಲು ಪಡೆಯನ್ನು ಎಚ್ಚರಿಸಬಹುದಿತ್ತಲ್ಲವೇ?. ಹಾಗಾದರೆ 20 ಮೀಟರ್ ಅಂತರದಲ್ಲಿ ಪ್ರತಿಭಟನಾಕಾರರ ಹತ್ತಿರವೇ ಬೆಂಗಾವಲು ಹೇಗೆ ನಿಲ್ಲಲು ಸಾಧ್ಯ? ಎಸ್‌ಪಿಜಿ 20 ನಿಮಿಷ ಕಾಯುವ ಬದಲು ತಕ್ಷಣವೇ ವಾಪಸ್ ತೆರಳಬೇಕಿತ್ತಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ನರೇಂದ್ರ ಮೋದಿ ಅವರು ANI ಜೊತೆಗೆ ಮಾತನಾಡುತ್ತಾ, ಜೀವಂತವಾಗಿ ಹಿಂತಿರುಗಿದ್ದರ ಬಗ್ಗೆ ಹೇಳಿಕೊಂಡಿದ್ದಾರೆ. ಒಂದು ವೇಳೆ ಪ್ರಧಾನಿಯ ಜೀವಕ್ಕೆ ಅಪಾಯವಿದ್ದರೆ, ಅದಕ್ಕೆ ಉತ್ತರಿಸಬೇಕಾದವರು, ಅವರಿಗೆ ಆಂತರಿಕ ರಕ್ಷಣೆಯನ್ನು ಒದಗಿಸುವ ಎಸ್‌ಪಿಜಿ” ಎಂದು ಪತ್ರಕರ್ತೆ ಮೀತೂ ಜೈನ್ ಹೇಳಿದ್ದಾರೆ.

ಈ ನಡುವೆ ಪಂಜಾನ್ ಮುಖ್ಯಮಂತ್ರಿ ಚರನ್‌ಜಿತ್‌ ಚನ್ನಿ ಅವರು ಪತ್ರಿಕಾಗೋಷ್ಠಿ ನಡೆಸಿ, ರಾಜ್ಯ ಸರ್ಕಾರದಿಂದ ಯಾವುದೆ ಲೋಪ ಆಗಿಲ್ಲ, ಪ್ರಧಾನಿಯ ಕಾರ್ಯಕ್ರಮದಲ್ಲಿ ರಸ್ತೆ ಮಾರ್ಗದಲ್ಲಿ ಭೇಟಿಮಾಡುವ ಉಲ್ಲೇಖ ಇರಲಿಲ್ಲ. ಸಧ್ಯದಲ್ಲೇ ಚುನಾವಣೆಯಿದೆ ಮತ್ತು ಜನರು ರಸ್ತೆಗಳನ್ನು ನಿರ್ಬಂಧಿಸುವುದು ಸಾಮಾನ್ಯವಾಗಿದೆ. ಇಲ್ಲಿ ಯಾವುದೇ ದಾಳಿಯೂ ನಡೆದಿಲ್ಲ, ಬೆದರಿಕೆಯೂ ಇಲ್ಲ. ಪ್ರಧಾನಿಗೆ ಅಪಾಯವಿದೆ ಎಂದು ಹೇಳುವುದು ತಪ್ಪು’’ ಎಂದು ಹೇಳಿದ್ದಾರೆ.

“ಅವರು ಅರ್ಧ ದಾರಿಯಲ್ಲೇ ಹೊರಡಬೇಕಾಯಿತು ಎಂಬುವುದಕ್ಕೆ ನಾವು ವಿಷಾದಿಸುತ್ತೇವೆ. ಅವರ ಜೀವಕ್ಕೆ ಬೆಲೆಕಟ್ಟಲಾವುದಿಲ್ಲ. ಪ್ರತಿಭಟನಾಕಾರರನ್ನು ರಸ್ತೆಯಿಂದ ತೆರವುಗೊಳಿಸುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಾ ತಿಳಿಸಿದ್ದರು. ಹೀಗಾಗಿ, ಪ್ರತಿಭಟನಾಕಾರರನ್ನು ತೆರವುಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಬೆಳಿಗ್ಗೆ 3 ಗಂಟೆಯವರೆಗೆ ಕೆಲಸ ಮಾಡಿದ್ದೇವೆ” ಎಂದು ಚನ್ನಿ ಹೇಳಿದ್ದಾರೆ. ಏನೇ ಲೋಪ ನಡೆದಿದ್ದರೂ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮೂರ್ತಿ ಭಂಜನೆ ಎಂಬ ರಾಜಕೀಯ ಇತಿಹಾಸದ ಪಳೆಯುಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...