Homeಮುಖಪುಟಪಂಜಾಬ್‌ ಭದ್ರತಾ ಲೋಪ ಆರೋಪ: 100 ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಎಫ್‌ಐಆರ್

ಪಂಜಾಬ್‌ ಭದ್ರತಾ ಲೋಪ ಆರೋಪ: 100 ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಎಫ್‌ಐಆರ್

- Advertisement -
- Advertisement -

ಬುಧವಾರ ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಪ್ರವಾಸದ ವೇಳೆ ಫಿರೋಜ್‌ಪುರ-ಮೊಗಾ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಭದ್ರತಾ ಲೋಪಕ್ಕೆ ಕಾರಣವಾದ ಅಪರಿಚಿತ ವ್ಯಕ್ತಿಗಳ ವಿರುದ್ಧ ಫಿರೋಜ್‌ಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

100 ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕುಲ್ಗರ್ಹಿ ಸ್ಟೇಷನ್ ಹೌಸ್ ಆಫೀಸರ್ ಬೀರಬಲ್ ಸಿಂಗ್ ಶುಕ್ರವಾರ ತಿಳಿಸಿದ್ದು, ಬೇರೆ ಯಾವುದೇ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸಿದ್ದಾರೆ.

“ಇದು ಸೂಕ್ಷ್ಮ ಪ್ರಕರಣವಾಗಿದ್ದು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸದಂತೆ ನಮಗೆ ಸೂಚನೆಗಳು ಬಂದಿವೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಯಾವುದೇ ವ್ಯಕ್ತಿಯನ್ನು ಬಂಧಿಸಿಲ್ಲ ಮತ್ತು ವಶಕ್ಕೆ ಪಡೆದಿಲ್ಲ” ಎಂದು ಎಸ್‌ಎಚ್‌ಒ ಹೇಳಿದ್ದಾರೆ.

ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೂ, ಬುಧವಾರ ಸಂಜೆ ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಸದಸ್ಯರು ಪ್ರಧಾನಿ ಬೆಂಗಾವಲು ಪಡೆ ಸಂಚಾರವನ್ನು ಸ್ಥಗಿತಗೊಳಿಸಿದ್ದು ನಾವೇ ಎಂದು ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಇದನ್ನೂ ಓದಿ: ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಇದರ ನಡುವೆಯೇ ಘಟನೆಯ ಸಮಯದಲ್ಲಿ ಮಾಡಲಾಗಿರುವ ಹೊಸ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವಿವಾದದ ಬಗ್ಗೆ ಆಡಳಿತರೂಢ ಬಿಜೆಪಿಯ ಸಚಿವರು ಮತ್ತು ನಾಯಕರ ಹೇಳಿಕೆಗಳ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪ್ರಧಾನಿ ಮೋದಿಯ ಕಾರು ಫ್ಲೈಓವರ್‌ನಲ್ಲಿ ನಿಂತಿರುವಾಗ, ಅವರ ಕಾರಿನ ತೀರಾ ಹತ್ತಿರದಲ್ಲೇ ಒಂದಷ್ಟು ಜನರು ಬಿಜೆಪಿ ಧ್ವಜವನ್ನು ಬೀಸುತ್ತಾ, ಘೋಷಣೆ ಕೂಗುವುದನ್ನು ಪ್ರತಿಭಟನಾ ನಿರತ ರೈತರು ಪ್ರಧಾನಿಯನ್ನು ತಡೆದಿದ್ದಾರೆ ಎಂದು ಮಾಧ್ಯಮಗಳು ಬುಧವಾರ ಸುದ್ದಿ ಮಾಡಿದ್ದವು. ಆದರೆ ಡಿಜಿಟಲ್‌ ಮಾಧ್ಯಮಗಳು, ಪ್ರಧಾನಿಯ ಕಾರಿನ ತೀರಾ ಹತ್ತಿರದಲ್ಲಿ ಇದ್ದ ಗುಂಪು ರೈತರ ಗುಂಪಲ್ಲ, ಬಿಜೆಪಿ ಕಾರ್ಯಕರ್ತರಾಗಿದ್ದು ಅವರ ಕೈಯ್ಯಲ್ಲಿ ಇದ್ದಿದ್ದು, ಬಿಜೆಪಿ ಧ್ವಜ ಎಂದು ಸ್ಪಷ್ಟವಾಗಿ ತೋರಿಸಿವೆ.

ವಿಡಿಯೊದಲ್ಲಿ, ಬಿಜೆಪಿ ಕಾರ್ಯಕರ್ತರು ಪ್ರಧಾನಿಯ ಕಾರಿಗಿಂತ ಕೆಲವೇ ಮೀಟರ್‌ ಅಂತರದಲ್ಲಿ ನಿಂತು ಧ್ವಜವನ್ನು ಬೀಸುತ್ತಾ ಘೋಷಣೆ ಕೂಗುತ್ತಿದ್ದಾರೆ. ಜನರು ಹಿಡಿದಿರುವ ಧ್ವಜವು ಬಿಜೆಪಿಯದ್ದಾಗಿದ್ದು, ನರೇಂದ್ರ ಮೋದಿ ಜಿಂದಾಬಾದ್‌ ಎಂದು ಘೋಷಣೆ ಕೂಗುತ್ತಿದ್ದಾರೆ. ಎರಡು ರಸ್ತೆಗಳಿರುವ ಫ್ಲೈಓವರ್‌ನಲ್ಲಿ ಒಂದು ರಸ್ತೆಯಲ್ಲಿ ಪ್ರಧಾನಿಯ ಕಾರು ಮತ್ತು ಅವರ ಬೆಂಗಾವಲು ಇದ್ದು, ಇನ್ನೊಂದು ರಸ್ತೆಯಲ್ಲಿ ಜನರು ಘೋಷಣೆ ಕೂಗುತ್ತಿದ್ದಾರೆ.

ಈ ರಸ್ತೆಯಲ್ಲಿ ಬಸ್ಸು ಮತ್ತು ಇತರ ವಾಹನ ನಿಂತಿರುವುದು ಕೂಡಾ ಕಾಣುತ್ತದೆ. ಜೊತೆಗೆ ಘೋಷಣೆ ಕೂಗುತ್ತಿರುವ ವ್ಯಕ್ತಿಗಳ ಮುಖವೂ ಸ್ಪಷ್ಟವಾಗಿದೆ. ಆದರೆ ಯಾರೊಬ್ಬರೂ ಅವರನ್ನು ಚದುರಿಸುವುದಾಗಲಿ, ದೂರ ಕಳಿಸುವುದಾಗಲಿ ಮಾಡುತ್ತಿಲ್ಲ. ಹೊಸ ವೈರಲ್ ವಿಡಿಯೊವನ್ನು ಹಲವಾರು ಜನರು ಹಂಚಿ ಕೊಂಡಿದ್ದು, ಅಲ್ಲಿಗೆ ಬಿಜೆಪಿ ಕಾರ್ಯಕರ್ತರು ಹೇಗೆ ಬಂದರು? ಇದು ಭದ್ರತಾ ಲೋಪವಲ್ಲವೇ? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...