Homeಮುಖಪುಟಪಂಜಾಬ್‌ ಭದ್ರತಾ ಲೋಪ ಆರೋಪ: 100 ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಎಫ್‌ಐಆರ್

ಪಂಜಾಬ್‌ ಭದ್ರತಾ ಲೋಪ ಆರೋಪ: 100 ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಎಫ್‌ಐಆರ್

- Advertisement -
- Advertisement -

ಬುಧವಾರ ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಪ್ರವಾಸದ ವೇಳೆ ಫಿರೋಜ್‌ಪುರ-ಮೊಗಾ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಭದ್ರತಾ ಲೋಪಕ್ಕೆ ಕಾರಣವಾದ ಅಪರಿಚಿತ ವ್ಯಕ್ತಿಗಳ ವಿರುದ್ಧ ಫಿರೋಜ್‌ಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

100 ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕುಲ್ಗರ್ಹಿ ಸ್ಟೇಷನ್ ಹೌಸ್ ಆಫೀಸರ್ ಬೀರಬಲ್ ಸಿಂಗ್ ಶುಕ್ರವಾರ ತಿಳಿಸಿದ್ದು, ಬೇರೆ ಯಾವುದೇ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸಿದ್ದಾರೆ.

“ಇದು ಸೂಕ್ಷ್ಮ ಪ್ರಕರಣವಾಗಿದ್ದು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸದಂತೆ ನಮಗೆ ಸೂಚನೆಗಳು ಬಂದಿವೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಯಾವುದೇ ವ್ಯಕ್ತಿಯನ್ನು ಬಂಧಿಸಿಲ್ಲ ಮತ್ತು ವಶಕ್ಕೆ ಪಡೆದಿಲ್ಲ” ಎಂದು ಎಸ್‌ಎಚ್‌ಒ ಹೇಳಿದ್ದಾರೆ.

ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೂ, ಬುಧವಾರ ಸಂಜೆ ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಸದಸ್ಯರು ಪ್ರಧಾನಿ ಬೆಂಗಾವಲು ಪಡೆ ಸಂಚಾರವನ್ನು ಸ್ಥಗಿತಗೊಳಿಸಿದ್ದು ನಾವೇ ಎಂದು ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಇದನ್ನೂ ಓದಿ: ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಇದರ ನಡುವೆಯೇ ಘಟನೆಯ ಸಮಯದಲ್ಲಿ ಮಾಡಲಾಗಿರುವ ಹೊಸ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವಿವಾದದ ಬಗ್ಗೆ ಆಡಳಿತರೂಢ ಬಿಜೆಪಿಯ ಸಚಿವರು ಮತ್ತು ನಾಯಕರ ಹೇಳಿಕೆಗಳ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪ್ರಧಾನಿ ಮೋದಿಯ ಕಾರು ಫ್ಲೈಓವರ್‌ನಲ್ಲಿ ನಿಂತಿರುವಾಗ, ಅವರ ಕಾರಿನ ತೀರಾ ಹತ್ತಿರದಲ್ಲೇ ಒಂದಷ್ಟು ಜನರು ಬಿಜೆಪಿ ಧ್ವಜವನ್ನು ಬೀಸುತ್ತಾ, ಘೋಷಣೆ ಕೂಗುವುದನ್ನು ಪ್ರತಿಭಟನಾ ನಿರತ ರೈತರು ಪ್ರಧಾನಿಯನ್ನು ತಡೆದಿದ್ದಾರೆ ಎಂದು ಮಾಧ್ಯಮಗಳು ಬುಧವಾರ ಸುದ್ದಿ ಮಾಡಿದ್ದವು. ಆದರೆ ಡಿಜಿಟಲ್‌ ಮಾಧ್ಯಮಗಳು, ಪ್ರಧಾನಿಯ ಕಾರಿನ ತೀರಾ ಹತ್ತಿರದಲ್ಲಿ ಇದ್ದ ಗುಂಪು ರೈತರ ಗುಂಪಲ್ಲ, ಬಿಜೆಪಿ ಕಾರ್ಯಕರ್ತರಾಗಿದ್ದು ಅವರ ಕೈಯ್ಯಲ್ಲಿ ಇದ್ದಿದ್ದು, ಬಿಜೆಪಿ ಧ್ವಜ ಎಂದು ಸ್ಪಷ್ಟವಾಗಿ ತೋರಿಸಿವೆ.

ವಿಡಿಯೊದಲ್ಲಿ, ಬಿಜೆಪಿ ಕಾರ್ಯಕರ್ತರು ಪ್ರಧಾನಿಯ ಕಾರಿಗಿಂತ ಕೆಲವೇ ಮೀಟರ್‌ ಅಂತರದಲ್ಲಿ ನಿಂತು ಧ್ವಜವನ್ನು ಬೀಸುತ್ತಾ ಘೋಷಣೆ ಕೂಗುತ್ತಿದ್ದಾರೆ. ಜನರು ಹಿಡಿದಿರುವ ಧ್ವಜವು ಬಿಜೆಪಿಯದ್ದಾಗಿದ್ದು, ನರೇಂದ್ರ ಮೋದಿ ಜಿಂದಾಬಾದ್‌ ಎಂದು ಘೋಷಣೆ ಕೂಗುತ್ತಿದ್ದಾರೆ. ಎರಡು ರಸ್ತೆಗಳಿರುವ ಫ್ಲೈಓವರ್‌ನಲ್ಲಿ ಒಂದು ರಸ್ತೆಯಲ್ಲಿ ಪ್ರಧಾನಿಯ ಕಾರು ಮತ್ತು ಅವರ ಬೆಂಗಾವಲು ಇದ್ದು, ಇನ್ನೊಂದು ರಸ್ತೆಯಲ್ಲಿ ಜನರು ಘೋಷಣೆ ಕೂಗುತ್ತಿದ್ದಾರೆ.

ಈ ರಸ್ತೆಯಲ್ಲಿ ಬಸ್ಸು ಮತ್ತು ಇತರ ವಾಹನ ನಿಂತಿರುವುದು ಕೂಡಾ ಕಾಣುತ್ತದೆ. ಜೊತೆಗೆ ಘೋಷಣೆ ಕೂಗುತ್ತಿರುವ ವ್ಯಕ್ತಿಗಳ ಮುಖವೂ ಸ್ಪಷ್ಟವಾಗಿದೆ. ಆದರೆ ಯಾರೊಬ್ಬರೂ ಅವರನ್ನು ಚದುರಿಸುವುದಾಗಲಿ, ದೂರ ಕಳಿಸುವುದಾಗಲಿ ಮಾಡುತ್ತಿಲ್ಲ. ಹೊಸ ವೈರಲ್ ವಿಡಿಯೊವನ್ನು ಹಲವಾರು ಜನರು ಹಂಚಿ ಕೊಂಡಿದ್ದು, ಅಲ್ಲಿಗೆ ಬಿಜೆಪಿ ಕಾರ್ಯಕರ್ತರು ಹೇಗೆ ಬಂದರು? ಇದು ಭದ್ರತಾ ಲೋಪವಲ್ಲವೇ? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...