Homeಮುಖಪುಟಪಂಜಾಬ್‌ ಭದ್ರತಾ ಲೋಪ ಆರೋಪ: 100 ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಎಫ್‌ಐಆರ್

ಪಂಜಾಬ್‌ ಭದ್ರತಾ ಲೋಪ ಆರೋಪ: 100 ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಎಫ್‌ಐಆರ್

- Advertisement -
- Advertisement -

ಬುಧವಾರ ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಪ್ರವಾಸದ ವೇಳೆ ಫಿರೋಜ್‌ಪುರ-ಮೊಗಾ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಭದ್ರತಾ ಲೋಪಕ್ಕೆ ಕಾರಣವಾದ ಅಪರಿಚಿತ ವ್ಯಕ್ತಿಗಳ ವಿರುದ್ಧ ಫಿರೋಜ್‌ಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

100 ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕುಲ್ಗರ್ಹಿ ಸ್ಟೇಷನ್ ಹೌಸ್ ಆಫೀಸರ್ ಬೀರಬಲ್ ಸಿಂಗ್ ಶುಕ್ರವಾರ ತಿಳಿಸಿದ್ದು, ಬೇರೆ ಯಾವುದೇ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸಿದ್ದಾರೆ.

“ಇದು ಸೂಕ್ಷ್ಮ ಪ್ರಕರಣವಾಗಿದ್ದು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸದಂತೆ ನಮಗೆ ಸೂಚನೆಗಳು ಬಂದಿವೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಯಾವುದೇ ವ್ಯಕ್ತಿಯನ್ನು ಬಂಧಿಸಿಲ್ಲ ಮತ್ತು ವಶಕ್ಕೆ ಪಡೆದಿಲ್ಲ” ಎಂದು ಎಸ್‌ಎಚ್‌ಒ ಹೇಳಿದ್ದಾರೆ.

ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೂ, ಬುಧವಾರ ಸಂಜೆ ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಸದಸ್ಯರು ಪ್ರಧಾನಿ ಬೆಂಗಾವಲು ಪಡೆ ಸಂಚಾರವನ್ನು ಸ್ಥಗಿತಗೊಳಿಸಿದ್ದು ನಾವೇ ಎಂದು ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಇದನ್ನೂ ಓದಿ: ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಇದರ ನಡುವೆಯೇ ಘಟನೆಯ ಸಮಯದಲ್ಲಿ ಮಾಡಲಾಗಿರುವ ಹೊಸ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವಿವಾದದ ಬಗ್ಗೆ ಆಡಳಿತರೂಢ ಬಿಜೆಪಿಯ ಸಚಿವರು ಮತ್ತು ನಾಯಕರ ಹೇಳಿಕೆಗಳ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪ್ರಧಾನಿ ಮೋದಿಯ ಕಾರು ಫ್ಲೈಓವರ್‌ನಲ್ಲಿ ನಿಂತಿರುವಾಗ, ಅವರ ಕಾರಿನ ತೀರಾ ಹತ್ತಿರದಲ್ಲೇ ಒಂದಷ್ಟು ಜನರು ಬಿಜೆಪಿ ಧ್ವಜವನ್ನು ಬೀಸುತ್ತಾ, ಘೋಷಣೆ ಕೂಗುವುದನ್ನು ಪ್ರತಿಭಟನಾ ನಿರತ ರೈತರು ಪ್ರಧಾನಿಯನ್ನು ತಡೆದಿದ್ದಾರೆ ಎಂದು ಮಾಧ್ಯಮಗಳು ಬುಧವಾರ ಸುದ್ದಿ ಮಾಡಿದ್ದವು. ಆದರೆ ಡಿಜಿಟಲ್‌ ಮಾಧ್ಯಮಗಳು, ಪ್ರಧಾನಿಯ ಕಾರಿನ ತೀರಾ ಹತ್ತಿರದಲ್ಲಿ ಇದ್ದ ಗುಂಪು ರೈತರ ಗುಂಪಲ್ಲ, ಬಿಜೆಪಿ ಕಾರ್ಯಕರ್ತರಾಗಿದ್ದು ಅವರ ಕೈಯ್ಯಲ್ಲಿ ಇದ್ದಿದ್ದು, ಬಿಜೆಪಿ ಧ್ವಜ ಎಂದು ಸ್ಪಷ್ಟವಾಗಿ ತೋರಿಸಿವೆ.

ವಿಡಿಯೊದಲ್ಲಿ, ಬಿಜೆಪಿ ಕಾರ್ಯಕರ್ತರು ಪ್ರಧಾನಿಯ ಕಾರಿಗಿಂತ ಕೆಲವೇ ಮೀಟರ್‌ ಅಂತರದಲ್ಲಿ ನಿಂತು ಧ್ವಜವನ್ನು ಬೀಸುತ್ತಾ ಘೋಷಣೆ ಕೂಗುತ್ತಿದ್ದಾರೆ. ಜನರು ಹಿಡಿದಿರುವ ಧ್ವಜವು ಬಿಜೆಪಿಯದ್ದಾಗಿದ್ದು, ನರೇಂದ್ರ ಮೋದಿ ಜಿಂದಾಬಾದ್‌ ಎಂದು ಘೋಷಣೆ ಕೂಗುತ್ತಿದ್ದಾರೆ. ಎರಡು ರಸ್ತೆಗಳಿರುವ ಫ್ಲೈಓವರ್‌ನಲ್ಲಿ ಒಂದು ರಸ್ತೆಯಲ್ಲಿ ಪ್ರಧಾನಿಯ ಕಾರು ಮತ್ತು ಅವರ ಬೆಂಗಾವಲು ಇದ್ದು, ಇನ್ನೊಂದು ರಸ್ತೆಯಲ್ಲಿ ಜನರು ಘೋಷಣೆ ಕೂಗುತ್ತಿದ್ದಾರೆ.

ಈ ರಸ್ತೆಯಲ್ಲಿ ಬಸ್ಸು ಮತ್ತು ಇತರ ವಾಹನ ನಿಂತಿರುವುದು ಕೂಡಾ ಕಾಣುತ್ತದೆ. ಜೊತೆಗೆ ಘೋಷಣೆ ಕೂಗುತ್ತಿರುವ ವ್ಯಕ್ತಿಗಳ ಮುಖವೂ ಸ್ಪಷ್ಟವಾಗಿದೆ. ಆದರೆ ಯಾರೊಬ್ಬರೂ ಅವರನ್ನು ಚದುರಿಸುವುದಾಗಲಿ, ದೂರ ಕಳಿಸುವುದಾಗಲಿ ಮಾಡುತ್ತಿಲ್ಲ. ಹೊಸ ವೈರಲ್ ವಿಡಿಯೊವನ್ನು ಹಲವಾರು ಜನರು ಹಂಚಿ ಕೊಂಡಿದ್ದು, ಅಲ್ಲಿಗೆ ಬಿಜೆಪಿ ಕಾರ್ಯಕರ್ತರು ಹೇಗೆ ಬಂದರು? ಇದು ಭದ್ರತಾ ಲೋಪವಲ್ಲವೇ? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...