Homeಮುಖಪುಟಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

- Advertisement -
- Advertisement -

ಬುಧವಾರದಂದು ಪ್ರಧಾನಿ ಮೋದಿ ಪಂಜಾಬ್‌ಗೆ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ ಉಂಟಾದ ಭದ್ರತಾ ಲೋಪದ ಪ್ರಕರಣವನ್ನು ಸುಪ್ರೀಂಕೋರ್ಟ್‌ ಇಂದು(ಶುಕ್ರವಾರ) ವಿಚಾರಣೆ ನಡೆಸಲಿದೆ. ಆದರೆ ಘಟನೆಯ ಸಮಯದಲ್ಲಿ ಮಾಡಲಾಗಿರುವ ಹೊಸ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವಿವಾದದ ಬಗ್ಗೆ ಆಡಳಿತರೂಢ ಬಿಜೆಪಿಯ ಸಚಿವರು ಮತ್ತು ನಾಯಕರ ಹೇಳಿಕೆಗಳ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪ್ರಧಾನಿ ಮೋದಿಯ ಕಾರು ಫ್ಲೈಓವರ್‌ನಲ್ಲಿ ನಿಂತಿರುವಾಗ, ಅವರ ಕಾರಿನ ತೀರಾ ಹತ್ತಿರದಲ್ಲೇ ಒಂದಷ್ಟು ಜನರು ಬಿಜೆಪಿ ಧ್ವಜವನ್ನು ಬೀಸುತ್ತಾ, ಘೋಷಣೆ ಕೂಗುವುದನ್ನು ಪ್ರತಿಭಟನಾ ನಿರತ ರೈತರು ಪ್ರಧಾನಿಯನ್ನು ತಡೆದಿದ್ದಾರೆ ಎಂದು ಮಾಧ್ಯಮಗಳು ಬುಧವಾರ ಸುದ್ದಿ ಮಾಡಿದ್ದವು. ಆದರೆ ಡಿಜಿಟಲ್‌ ಮಾಧ್ಯಮಗಳು, ಪ್ರಧಾನಿಯ ಕಾರಿನ ತೀರಾ ಹತ್ತಿರದಲ್ಲಿ ಇದ್ದ ಗುಂಪು ರೈತರ ಗುಂಪಲ್ಲ, ಬಿಜೆಪಿ ಕಾರ್ಯಕರ್ತರಾಗಿದ್ದು ಅವರ ಕೈಯ್ಯಲ್ಲಿ ಇದ್ದಿದ್ದು, ಬಿಜೆಪಿ ಧ್ವಜ ಎಂದು ಸ್ಪಷ್ಟವಾಗಿ ತೋರಿಸಿದ್ದವು.

ಇದನ್ನೂ ಓದಿ:ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

ಇದೀಗ ಅದೇ ಘಟನೆಯ ಸ್ಪಷ್ಟ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಈ ವಿಡಿಯೊವನ್ನು ಪ್ರಧಾನಿಯ ಕಾರು ನಿಂತಿದ್ದ ಫ್ಲೈಓವರ್‌ನಲ್ಲೇ ಶೂಟ್ ಮಾಡಲಾಗಿದೆ.

ವಿಡಿಯೊದಲ್ಲಿ, ಬಿಜೆಪಿ ಕಾರ್ಯಕರ್ತರು ಪ್ರಧಾನಿಯ ಕಾರಿಗಿಂತ ಕೆಲವೇ ಮೀಟರ್‌ ಅಂತರದಲ್ಲಿ ನಿಂತು ಧ್ವಜವನ್ನು ಬೀಸುತ್ತಾ ಘೋಷಣೆ ಕೂಗುತ್ತಿದ್ದಾರೆ. ಜನರು ಹಿಡಿದಿರುವ ಧ್ವಜವು ಬಿಜೆಪಿಯದ್ದಾಗಿದ್ದು, ನರೇಂದ್ರ ಮೋದಿ ಜಿಂದಾಬಾದ್‌ ಎಂದು ಘೋಷಣೆ ಕೂಗುತ್ತಿದ್ದಾರೆ.

ಎರಡು ರಸ್ತೆಗಳಿರುವ ಫ್ಲೈಓವರ್‌ನಲ್ಲಿ ಒಂದು ರಸ್ತೆಯಲ್ಲಿ ಪ್ರಧಾನಿಯ ಕಾರು ಮತ್ತು ಅವರ ಬೆಂಗಾವಲು ಇದ್ದು, ಇನ್ನೊಂದು ರಸ್ತೆಯಲ್ಲಿ ಜನರು ಘೋಷಣೆ ಕೂಗುತ್ತಿದ್ದಾರೆ. ಈ ರಸ್ತೆಯಲ್ಲಿ ಬಸ್ಸು ಮತ್ತು ಇತರ ವಾಹನ ನಿಂತಿರುವುದು ಕೂಡಾ ಕಾಣುತ್ತದೆ. ಜೊತೆಗೆ ಘೋಷಣೆ ಕೂಗುತ್ತಿರುವ ವ್ಯಕ್ತಿಗಳ ಮುಖವೂ ಸ್ಪಷ್ಟವಾಗಿದೆ. ಆದರೆ ಯಾರೊಬ್ಬರೂ ಅವರನ್ನು ಚದುರಿಸುವುದಾಗಲಿ, ದೂರ ಕಳಿಸುವುದಾಗಲಿ ಮಾಡುತ್ತಿಲ್ಲ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ಪ್ರಧಾನಿ ಮೋದಿ ಈ ಫ್ಲೈಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ನಿಂತು, ನಂತರ ತನ್ನ ಚುನಾವಣಾ ರ್‍ಯಾಲಿಯನ್ನು ರದ್ದುಗೊಳಿಸಿ ವಿಮಾನ ನಿಲ್ದಾಣಕ್ಕೆ ವಾಪಾಸಾಗಿದ್ದಾರೆ. ಈ ವೇಳೆ “ತನ್ನನ್ನು ಜೀವ ಸಹಿತ ವಿಮಾನ ನಿಲ್ದಾಣಕ್ಕೆ ತಲುಪಿಸಿದ್ದಕ್ಕೆ ಪಂಜಾಬ್‌ ಸಿಎಂಗೆ ಧನ್ಯವಾದ ತಿಳಿಸಿ” ಎಂದು ಅಧಿಕಾರಿಗಳೊಂದಿಗೆ ಹೇಳಿದ್ದಾಗಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಈ ಹೇಳಿಕೆಯಲ್ಲಿ ಅವರು, ತನ್ನ ಜೀವಕ್ಕೆ ಅಪಾಯ ಇತ್ತು ಎಂದು ಸಂದೇಶ ಹರಡಿದ್ದರು. ಅವರ ಹೇಳಿಕೆಯ ಹಿನ್ನಲೆಯಲ್ಲೇ ಕೇಂದ್ರ ಮಂತ್ರಿ ಸೃತಿ ಇರಾನಿ ಅವರು ಪ್ರಧಾನಿಯನ್ನು ಕೊಲ್ಲಲು ಸಂಚು ಹೂಡಲಾಗಿದೆ ಎಂದು ಹೇಳಿಕೆ ನೀಡಿದ್ದರು.

ಇದೀಗ ಹೊಸದಾಗಿ ಬಂದ ವಿಡಿಯೊದಲ್ಲಿ ಫ್ಲೈಓವರ್‌ ಮೇಲೆ ಇದ್ದ ಜನರು ಯಾರು ಎಂದು ಸ್ಪಷ್ಟವಾಗಿ ತಿಳಿದು ಬರುತ್ತದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರೈತ ಹೋರಾಟದ ಸುದ್ದಿಗಳನ್ನು ನೀಡುತ್ತಿದ್ದ ಟ್ವಿಟರ್‌ ಖಾತೆ ಟ್ರಾಕ್ಟರ್‌ ಟು ಟ್ವಿಟರ್‌‌, “ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷದ ಕಾರ್ಯಕರ್ತರಿಂದ ಮತ್ತು ಅವರ ಪರವಾಗಿ ನಿಂತ ಕೆಲವೇ ಜನರಿಂದ ತಪ್ಪಿಸಿಕೊಂಡಿದ್ದಾರೆಯೇ?” ಎಂದು ಪ್ರಶ್ನಿಸಿದ್ದು, ಪಂಜಾಬ್‌ಅನ್ನು ಕೆಟ್ಟದಾಗಿ ಬಿಂಬಿಸುವುದನ್ನು ನಿಲ್ಲಿಸಿ ಎಂದು ಹೇಳಿದೆ. ಜೊತೆಗೆ ವೈರಲ್‌ ವಿಡಿಯೋವನ್ನು ಕೂಡಾ ಅದು ಟ್ವಿಟರ್‌ಗೆ ಅಪ್‌ಲೋಡ್ ಮಾಡಿದೆ.

ಇದನ್ನೂ ಓದಿ:ಪಂಜಾಬ್: ಪ್ರಧಾನಿ ಕಾರ್ಯಕ್ರಮ ರದ್ದು; ಏನಂತಾರೆ ನೆಟ್ಟಿಗರು?

ಬಿಜೆಪಿ ಮತ್ತು ಒಕ್ಕೂಟ ಸರ್ಕಾರವು ಭದ್ರತಾ ಲೋಪ ಎಂದು ರಾಜ್ಯದ ಕಾಂಗ್ರೆಸ್ ಸರ್ಕಾರ ಮೇಲೆ ಮುಗಿಬಿದ್ದಿದೆ. ಇದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಚನ್ನಿ ಅವರು, “ರಾಜ್ಯ ಸರ್ಕಾರದಿಂದ ಯಾವುದೆ ಲೋಪ ಆಗಿಲ್ಲ. ಆದರೆ ಪ್ರಧಾನಿ ಮೋದಿ ಅವರು ರಸ್ತೆ ಮೂಲಕ ತೆರಳಲಿದ್ದಾರೆ ಎಂದು ನಿಗದಿಯಾಗಿರಲಿಲ್ಲ. ಪ್ರಧಾನಿ ಮೋದಿ ಜೀವಕ್ಕೆ ಯಾವುದೆ ಬೆದರಿಕೆ ಇಲ್ಲ. ಒಬ್ಬ ಪಂಜಾಬಿಯಾಗಿ ಅವರ ಜೀವವನ್ನು ರಕ್ಷಿಸಲು ನಾನು ಜೀವ ಪಣಕ್ಕಿಡಲೂ ಸಿದ್ದ” ಎಂದು ಹೇಳಿದ್ದರು.

ಹೊಸ ವೈರಲ್ ವಿಡಿಯೊವನ್ನು ಹಲವಾರು ಜನರು ಹಂಚಿ ಕೊಂಡಿದ್ದು, ಅಲ್ಲಿಗೆ ಬಿಜೆಪಿ ಕಾರ್ಯಕರ್ತರು ಹೇಗೆ ಬಂದರು? ಇದು ಭದ್ರತಾ ಲೋಪವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಅವರು ತನ್ನ ಚುನಾವಣ ಭಾಷಣಕ್ಕೆ ವಾಯು ಮಾರ್ಗದ ಮೂಲಕ ತೆರಳುವುದು ಎಂದು ಮೊದಲಿಗೆ ನಿಗದಿಯಾಗಿತ್ತು. ಆದರೆ ಹವಾಮಾನ ವೈಪರೀತ್ಯದ ಕಾರಣ ನೀಡಿ, ಎರಡು ಗಂಟೆಗಳ 111 ಕಿ.ಮಿ. ರಸ್ತೆ ಮಾರ್ಗವನ್ನು ಅನಿರೀಕ್ಷಿತವಾಗಿ ಆಯ್ಕೆ ಮಾಡಲಾಗಿತ್ತು. ಹೀಗೆ ಆಕಸ್ಮಿಕವಾಗಿ ರಸ್ತೆ ಬದಲಾಗಿದ್ದು ಬಿಜೆಪಿ ಕಾರ್ಯಕರ್ತರಿಗೆ ಹೇಗೆ ತಿಳಿಯಿತು ಎಂದು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಲಾಗಿದೆ. ಅಷ್ಟೇ ಅಲ್ಲದೆ, ಫ್ಲೈಓವರ್‌ನಲ್ಲಿದ್ದ ಬಿಜೆಪಿ ಕಾರ್ಯಕರ್ತರು ಧ್ವಜದೊಂದಿಗೆ ಅಲ್ಲಿಗೆ ತಯಾರಾಗಿಯೇ ಬಂದಿದ್ದರು ಎಂದು ಅವರ ವೇಷಭೂಷಣಗಳನ್ನು ನೋಡಿದರೆ ತಿಳಿಯುತ್ತದೆ, ಹಾಗಾದರೆ ಅವರಿಗೆ ಅಲ್ಲಿ ಪ್ರಧಾನಿ ತಲುಪುತ್ತಾರೆ ಎಂದು ಹೇಗೆ ತಿಳಿಯಿತು ಎಂದು ಕೂಡಾ ಪ್ರಶ್ನಿಸಲಾಗಿದೆ.

ಇದನ್ನೂ ಓದಿ:ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲ ರೈತ ಸಂಘಟನೆಗಳ ನಿರ್ಧಾರ: ಅಂತರ ಕಾಯ್ದುಕೊಂಡ SKM

ಈ ಮಧ್ಯೆ, 2018ರಲ್ಲಿ ಬಿಜೆಪಿ ತನ್ನ ಅಧೀಕೃತ ಖಾತೆಯಲ್ಲಿ ಹಂಚಿರುವ ವಿಡಿಯೊವನ್ನು ಪಂಜಾಬ್ ಕಾಂಗ್ರಸ್‌ ಇಂದು ಹಂಚಿಕೊಂಡಿದ್ದು, “ನರೇಂದ್ರ ಮೋದಿ ಅವರ ಈ ನಡೆ ಏನು ಹೇಳುತ್ತದೆ? ಪಂಜಾಬ್‌ನಲ್ಲಿರುವಾಗ ನೀವು ನಿಮ್ಮ ಅಡ್ಡದಾರಿ ದುಸ್ಸಾಹಸಗಳನ್ನು ‘ಭದ್ರತಾ ಲೋಪ’ ಎಂದು ಕರೆಯುತ್ತೀರಿ. ಬಿಜೆಪಿ ಸರ್ಕಾರ ಇರುವ ಬೇರೆ ಕಡೆ ಇದನ್ನು ಶ್ರಮದಾನ ಎಂದು ಕರೆಯುತ್ತಾರೆಯೇ?” ಎಂದು ಪ್ರಶ್ನಿಸಿದೆ.

ಇದನ್ನೂ ಓದಿ:ಪಂಜಾಬ್ ಕೋರ್ಟ್ ಸ್ಪೋಟ ಪ್ರಕರಣಕ್ಕೆ ತಿರುವು: ಮೃತಪಟ್ಟ ಮಾಜಿ ಪೊಲೀಸ್ ಆರೋಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...