Homeರಾಷ್ಟ್ರೀಯಪಂಜಾಬ್‌: ಸರ್ಕಾರ ಭದ್ರತೆ ಹಿಂತೆಗೆದುಕೊಂಡ ಒಂದೇ ದಿನದಲ್ಲಿ ಕಾಂಗ್ರೆಸ್‌‌ ನಾಯಕನ ಗುಂಡಿಕ್ಕಿ ಹತ್ಯೆ

ಪಂಜಾಬ್‌: ಸರ್ಕಾರ ಭದ್ರತೆ ಹಿಂತೆಗೆದುಕೊಂಡ ಒಂದೇ ದಿನದಲ್ಲಿ ಕಾಂಗ್ರೆಸ್‌‌ ನಾಯಕನ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಕಾಂಗ್ರೆಸ್ ನಾಯಕ ಮತ್ತು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಅಪರಿಚಿತರು ಗುಂಡಿಕ್ಕಿ ಕೊಂದಿರುವ ಘಟನೆ ಭಾನುವಾರ ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ನಡೆದಿದೆ. ಗುಂಡಿನ ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

“ಸಿಧು ಮೂಸೆವಾಲಾ ಅವರು ಮೃತಪಟ್ಟಿದ್ದಾರೆ” ಎಂದು ಮಾನ್ಸಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ ರಂಜಿತ್ ರೈ ಖಚಿತಪಡಿಸಿದ್ದಾರೆ. ಪಂಜಾಬ್ ಸರ್ಕಾರ ಅವರ ಭದ್ರತೆಯನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ. ಅವರ ಜೊತೆಗೆ 424 ಜನರ ಭದ್ರತೆಯನ್ನು ಪಂಜಾಬ್ ಪೊಲೀಸರು ಹಿಂತೆಗೆದುಕೊಂಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಿಧು ಮೂಸೆವಾಲಾ ಈ ವರ್ಷದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮಾನಸಾದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ, ಎಎಪಿ ಅಭ್ಯರ್ಥಿ ವಿಜಯ್ ಸಿಂಗ್ಲಾ ವಿರುದ್ಧ 63,000 ಮತಗಳ ಭಾರೀ ಅಂತರದಿಂದ ಪರಾಭವಗೊಂಡಿದ್ದರು. ಪಂಜಾಬ್‌‌ ಸರ್ಕಾರವು ಭ್ರಷ್ಟಾಚಾರದ ಆರೋಪದ ಮೇಲೆ ವಿಜಯ್ ಸಿಂಗ್ಲಾ ಅವರನ್ನು ಇತ್ತೀಚೆಗೆ ಸಚಿವ ಸಂಪುಟದಿಂದ ಸಿಎಂ ಭಗವಂತ್ ಮಾನ್ ವಜಾಗೊಳಿಸಿದ್ದರು.

ಇದನ್ನೂ ಓದಿ: 1% ಕಮಿಷನ್‌‌‌ ಲಂಚ ಆರೋಪ: ಆರೋಗ್ಯ ಸಚಿವನನ್ನು ವಜಾಗೊಳಿಸಿದ ಪಂಜಾಬ್ ಸಿಎಂ!

ಕಳೆದ ತಿಂಗಳು, ಸಿಧು ಮೂಸೆ ವಾಲಾ ಅವರು ತಮ್ಮ ‘ಬಲಿಪಶು'(‘Scapegoat’) ಎಂಬ ಹಾಡಿನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಅದರ ಬೆಂಬಲಿಗರನ್ನು ಗುರಿಯಾಗಿಸಿ ವಿವಾದ ಎಬ್ಬಿಸಿದ್ದರು. ಗಾಯಕ ತನ್ನ ಹಾಡಿನಲ್ಲಿ ಎಎಪಿ ಬೆಂಬಲಿಗರನ್ನು ‘ಗದ್ದರ್’ (ದೇಶದ್ರೋಹಿ) ಎಂದು ಕರೆದಿದ್ದರು.

ತಮ್ಮ ಪಕ್ಷದ ನಾಯಕನ ಸಾವಿಗೆ ಸಂತಾಪ ಸೂಚಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ, “ಸಿಧು ಮೂಸೆವಾಲಾ ಅವರನ್ನು ಹಾಡಹಗಲೇ ಹತ್ಯೆ ಮಾಡಿರುವುದು ತೀವ್ರ ಆಘಾತವಾಗಿದೆ. ಪ್ರಪಂಚದಾದ್ಯಂತ ಇರುವ ಪಂಜಾಬಿಗಳು, ಪಂಜಾಬ್‌ ಜನರ ನಾಡಿಮಿಡಿತ ತಿಳಿದಿರುವ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿದ್ದಾರೆ. ಪ್ರಪಂಚದಾದ್ಯಂತ ಇರುವ ಅವರ ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...