Homeರಾಷ್ಟ್ರೀಯಪಂಜಾಬ್‌: ಸರ್ಕಾರ ಭದ್ರತೆ ಹಿಂತೆಗೆದುಕೊಂಡ ಒಂದೇ ದಿನದಲ್ಲಿ ಕಾಂಗ್ರೆಸ್‌‌ ನಾಯಕನ ಗುಂಡಿಕ್ಕಿ ಹತ್ಯೆ

ಪಂಜಾಬ್‌: ಸರ್ಕಾರ ಭದ್ರತೆ ಹಿಂತೆಗೆದುಕೊಂಡ ಒಂದೇ ದಿನದಲ್ಲಿ ಕಾಂಗ್ರೆಸ್‌‌ ನಾಯಕನ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಕಾಂಗ್ರೆಸ್ ನಾಯಕ ಮತ್ತು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಅಪರಿಚಿತರು ಗುಂಡಿಕ್ಕಿ ಕೊಂದಿರುವ ಘಟನೆ ಭಾನುವಾರ ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ನಡೆದಿದೆ. ಗುಂಡಿನ ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

“ಸಿಧು ಮೂಸೆವಾಲಾ ಅವರು ಮೃತಪಟ್ಟಿದ್ದಾರೆ” ಎಂದು ಮಾನ್ಸಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ ರಂಜಿತ್ ರೈ ಖಚಿತಪಡಿಸಿದ್ದಾರೆ. ಪಂಜಾಬ್ ಸರ್ಕಾರ ಅವರ ಭದ್ರತೆಯನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ. ಅವರ ಜೊತೆಗೆ 424 ಜನರ ಭದ್ರತೆಯನ್ನು ಪಂಜಾಬ್ ಪೊಲೀಸರು ಹಿಂತೆಗೆದುಕೊಂಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಿಧು ಮೂಸೆವಾಲಾ ಈ ವರ್ಷದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮಾನಸಾದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ, ಎಎಪಿ ಅಭ್ಯರ್ಥಿ ವಿಜಯ್ ಸಿಂಗ್ಲಾ ವಿರುದ್ಧ 63,000 ಮತಗಳ ಭಾರೀ ಅಂತರದಿಂದ ಪರಾಭವಗೊಂಡಿದ್ದರು. ಪಂಜಾಬ್‌‌ ಸರ್ಕಾರವು ಭ್ರಷ್ಟಾಚಾರದ ಆರೋಪದ ಮೇಲೆ ವಿಜಯ್ ಸಿಂಗ್ಲಾ ಅವರನ್ನು ಇತ್ತೀಚೆಗೆ ಸಚಿವ ಸಂಪುಟದಿಂದ ಸಿಎಂ ಭಗವಂತ್ ಮಾನ್ ವಜಾಗೊಳಿಸಿದ್ದರು.

ಇದನ್ನೂ ಓದಿ: 1% ಕಮಿಷನ್‌‌‌ ಲಂಚ ಆರೋಪ: ಆರೋಗ್ಯ ಸಚಿವನನ್ನು ವಜಾಗೊಳಿಸಿದ ಪಂಜಾಬ್ ಸಿಎಂ!

ಕಳೆದ ತಿಂಗಳು, ಸಿಧು ಮೂಸೆ ವಾಲಾ ಅವರು ತಮ್ಮ ‘ಬಲಿಪಶು'(‘Scapegoat’) ಎಂಬ ಹಾಡಿನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಅದರ ಬೆಂಬಲಿಗರನ್ನು ಗುರಿಯಾಗಿಸಿ ವಿವಾದ ಎಬ್ಬಿಸಿದ್ದರು. ಗಾಯಕ ತನ್ನ ಹಾಡಿನಲ್ಲಿ ಎಎಪಿ ಬೆಂಬಲಿಗರನ್ನು ‘ಗದ್ದರ್’ (ದೇಶದ್ರೋಹಿ) ಎಂದು ಕರೆದಿದ್ದರು.

ತಮ್ಮ ಪಕ್ಷದ ನಾಯಕನ ಸಾವಿಗೆ ಸಂತಾಪ ಸೂಚಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ, “ಸಿಧು ಮೂಸೆವಾಲಾ ಅವರನ್ನು ಹಾಡಹಗಲೇ ಹತ್ಯೆ ಮಾಡಿರುವುದು ತೀವ್ರ ಆಘಾತವಾಗಿದೆ. ಪ್ರಪಂಚದಾದ್ಯಂತ ಇರುವ ಪಂಜಾಬಿಗಳು, ಪಂಜಾಬ್‌ ಜನರ ನಾಡಿಮಿಡಿತ ತಿಳಿದಿರುವ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿದ್ದಾರೆ. ಪ್ರಪಂಚದಾದ್ಯಂತ ಇರುವ ಅವರ ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು” ಎಂದು ಅವರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...