Homeಮುಖಪುಟಪಂಜಾಬ್‌: ಹಲವಾರು ಪತ್ರಕರ್ತರು, ಬರಹಗಾರರ ಟ್ವಿಟರ್‌ ಖಾತೆಗೆ ನಿರ್ಬಂಧ

ಪಂಜಾಬ್‌: ಹಲವಾರು ಪತ್ರಕರ್ತರು, ಬರಹಗಾರರ ಟ್ವಿಟರ್‌ ಖಾತೆಗೆ ನಿರ್ಬಂಧ

- Advertisement -
- Advertisement -

ವಾರಿಸ್ ಪಂಜಾಬ್ ಡಿ ಸಂಘಟನೆಯ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರನ್ನು ಬಂಧಿಸಿದ ವಿದ್ಯಮಾನದ ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಮಾನವ ಹಕ್ಕುಗಳ ದಮನ ಆಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪಂಜಾಬ್‌ನಲ್ಲಿ ಇಂಟರ್ನೆಟ್ ಸ್ಥಗಿತವು ಮಧ್ಯೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕೆಲವು ಪತ್ರಕರ್ತರು, ಬರಹಗಾರರ ಟ್ವಿಟರ್‌ ಖಾತೆಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಕೆನಡಾದ ಲೇಖಕಿ ರೂಪಿ ಕೌರ್‌ಗೆ ಸೇರಿದ ಖಾತೆಯನ್ನು  ಟ್ವಿಟರ್ ಖಾತೆಗೂ ತಡೆ ನೀಡಲಾಗಿದೆ.

ಸಂಘಟನೆಗೆ ಸಂಬಂಧಿಸಿದ 100ಕ್ಕೂ ಹೆಚ್ಚು ಶಂಕಿತರನ್ನು ಇದುವರೆಗೆ ರಾಜ್ಯದಾದ್ಯಂತ ಬಂಧಿಸಲಾಗಿದೆ. ಆಮ್ ಆದ್ಮಿ ಪಕ್ಷದ ಸರ್ಕಾರವು ‘ಮುಗ್ಧ ಸಿಖ್ ಯುವಕ’ರನ್ನು ಟಾರ್ಗೆಟ್ ಮಾಡಬಾರದು ಎಂದು ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿಯ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಾಮಿ ಒತ್ತಾಯಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಕಮಲ್‌ದೀಪ್ ಸಿಂಗ್ ಬ್ರಾರ್, ಪ್ರೊ ಪಂಜಾಬ್ ಟಿವಿ ಬ್ಯೂರೋ ಮುಖ್ಯಸ್ಥ ಗಗನ್‌ದೀಪ್ ಸಿಂಗ್, ಸ್ವತಂತ್ರ ಪತ್ರಕರ್ತ ಸಂದೀಪ್ ಸಿಂಗ್ ಮತ್ತು ಡಿಜಿಟಲ್ ಕಾರ್ಯಕರ್ತ ಪೀಟರ್ ಫ್ರೆಡ್ರಿಕ್ ಅವರ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲಾಗಿದೆ. ಹಾಗೆಯೇ ಕೆನಡಾದ ರಾಜಕಾರಣಿ ಜಗ್ಮೀತ್ ಸಿಂಗ್ ಮತ್ತು ಎಸ್‌ಎಡಿ ಸಂಗ್ರೂರ್ ಸಂಸದ ಸಿಮ್ರಂಜೀತ್ ಸಿಂಗ್ ಮಾನ್ ಅವರ ಖಾತೆಗಳನ್ನು ತಡೆಹಿಡಿಯಲಾಗಿದೆ.

“ಈ ಖಾತೆಗಳನ್ನು ಕಾನೂನು ಪ್ರತಿಕ್ರಿಯೆಯ ಭಾಗವಾಗಿ ಭಾರತದಲ್ಲಿ ನಿರ್ಬಂಧಿಸಲಾಗಿದೆ” ಎಂದು ವಿವರಣೆಯಲ್ಲಿ ತಿಳಿಸಲಾಗಿದೆ. ಆದಾಗ್ಯೂ, ಪತ್ರಕರ್ತರಲ್ಲಿ ಒಬ್ಬರು ಮಾತ್ರ ಈ ಕ್ರಿಯೆಗೆ ಸಂಬಂಧಿಸಿದಂತೆ ಇಮೇಲ್ ಸಂದೇಶವನ್ನು ಟ್ವಿಟರ್‌ ಸಂಸ್ಥೆಯಿಂದ ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟ್ವಿಟರ್‌ ಸಂಸ್ಥೆಯನ್ನು ಸಂಪರ್ಕಿಸಿರುವ ‘ನ್ಯೂಸ್‌ಲಾಂಡ್ರಿ’ ಜಾಲತಾಣ, “ಕಾನೂನು ವಿಚಾರವೇನು? ಯಾರು ಅವುಗಳನ್ನು ಪ್ರಸ್ತಾಪಿಸಿದ್ದಾರೆ? ಎಷ್ಟು ಸಮಯದವರೆಗೆ ಈ ಖಾತೆಗಳನ್ನು ತಡೆಹಿಡಿಯಲಾಗುತ್ತದೆ” ಎಂದು ಪ್ರಶ್ನಿಸಿದೆ. “ಟ್ವಿಟರ್‌ನ ಪತ್ರಿಕಾ ತಂಡದಿಂದ ಇಲ್ಲಿಯವರೆಗೆ ಇಮೋಜಿಯೊಂದನ್ನು ಮಾತ್ರ ಪ್ರತಿಕ್ರಿಯೆಯಾಗಿ ಸ್ವೀಕರಿಸಿದ್ದೇವೆ. ನಿಜವಾದ ಪ್ರತಿಕ್ರಿಯೆಯನ್ನು ಸ್ವೀಕರಿಸಿದಾಗ ವರದಿಯನ್ನು ನವೀಕರಿಸುತ್ತೇವೆ” ಎಂದು ‘ನ್ಯೂಸ್‌ಲಾಂಡ್ರಿ’ ಬರೆದುಕೊಂಡಿದೆ.

ಅಮೃತಪಾಲ್ ಅವರನ್ನು ಪೊಲೀಸರು ಬೆನ್ನಟ್ಟುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಗಗನ್‌ದೀಪ್ ಅವರ ಖಾತೆಯನ್ನು ಸೋಮವಾರ ತಡೆಹಿಡಿಯಲಾಗಿದೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ. ಗಗನ್‌ದೀಪ್ ಅವರು ಹಂಚಿಕೊಳ್ಳುವ ಮುನ್ನವೇ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ಒಂದು ವರದಿಯನ್ನು ಹೊರತುಪಡಿಸಿ, ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಕಮಲ್‌ದೀಪ್ ಅವರು ಶನಿವಾರ ಪೋಸ್ಟ್ ಮಾಡಿದ ಎಲ್ಲಾ ಟ್ವೀಟ್‌ಗಳು ಮತ್ತು ವರದಿಗಳು ಪಂಜಾಬ್‌ನಲ್ಲಿನ ವಿದ್ಯಮಾನಕ್ಕೆ ಸಂಬಂಧಿಸಿವೆ. ಅವರು ಭಾನುವಾರ ಯಾವುದೇ ಅಪ್‌ಡೇಟ್‌ ಪೋಸ್ಟ್ ಮಾಡಿಲ್ಲ.

ಪಂಜಾಬ್‌ನಲ್ಲಿ ಜಿ 20 ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡುವಾಗ ಎಸ್‌ಜಿಪಿಸಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಾಮಿ ಸಿಖ್ ಅವರು ಮಾನವ ಹಕ್ಕುಗಳ ವಿಷಯವನ್ನು ಪ್ರಸ್ತಾಪಿಸಿರುವ ವರದಿಯನ್ನು ಕಮಲ್‌ದೀಪ್‌ ಶನಿವಾರ ಟ್ವೀಟ್ ಮಾಡಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಳೊಂದಿಗೆ ಎರಡು ಟ್ವೀಟ್‌ಗಳನ್ನು ಅವರು ಪೋಸ್ಟ್ ಮಾಡಿದ್ದಾರೆ. ಪಂಜಾಬ್‌ನಲ್ಲಿನ ಮಾನವ ಹಕ್ಕುಗಳ ದಮನಕ್ಕೆ ಸಂಬಂಧಿಸಿದ ಅವರ ವರದಿ ಹಾಗೂ ಸಂಬಂಧಿಸಿದ ಟ್ವಿಟರ್‌ ಥ್ರೆಡ್‌ಗಳನ್ನು ಶನಿವಾರ ಪೋಸ್ಟ್ ಮಾಡಿದ್ದಾರೆ.

ಭಾನುವಾರದ ಪರಿಸ್ಥಿತಿಯ ಕುರಿತು ಟ್ವೀಟ್ ಮಾಡಿದ ಡಿಜಿಟಲ್ ಕಾರ್ಯಕರ್ತ ಪೀಟರ್ ಫ್ರೆಡ್ರಿಕ್, “ನನಗೆ ಸ್ವಲ್ಪವೇ ತಿಳಿದಿರುವ ಅಮೃತಪಾಲ್ ಸಿಂಗ್ ಬಗ್ಗೆ ನಿಮ್ಮ ಅಭಿಪ್ರಾಯ ಏನೇ ಇರಲಿ, ಪಂಜಾಬ್‌ನಲ್ಲಿ ಮೂಲಭೂತ ನಾಗರಿಕ ಸ್ವಾತಂತ್ರ್ಯಗಳ ಮೇಲೆ ಸಾಮೂಹಿಕ ನಿರ್ಬಂಧ ನಿರಂಕುಶ ದುಃಸ್ವಪ್ನವಾಗಿದೆ. ಇಂಟರ್ನೆಟ್ ಮತ್ತು ಮೊಬೈಲ್ ಸೇವೆಗಳನ್ನು ನಿಷೇಧಿಸಲಾಗಿದೆ, ಅಸೆಂಬ್ಲಿಯನ್ನು ನಿಷೇಧಿಸಲಾಗಿದೆ, ಮಾಧ್ಯಮಗಳಿಗೆ ಸೆನ್ಸಾರ್‌ಶಿಪ್‌ ಅನ್ವಯಿಸಲಾಗಿದೆ. ಕಾಶ್ಮೀರದಿಂದ ಪಂಜಾಬ್‌ವರೆಗೆ ಆಜಾದಿ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.

ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಎಎಪಿ ಸರ್ಕಾರ ಶನಿವಾರ ಸ್ಥಗಿತಗೊಳಿಸಿದೆ. ಆರಂಭದಲ್ಲಿ ಸೋಮವಾರ ಮಧ್ಯಾಹ್ನದವರೆಗೆ ಮತ್ತು ಮತ್ತೆ ಮಂಗಳವಾರದವರೆಗೆ ಅಮಾನತುಗೊಳಿಸಿ ಆದೇಶಿಸಲಾಗಿದೆ.

ಸೋಮವಾರದಂದು ಇಂಟರ್ನೆಟ್ ಸೇವೆಗಳ ಮೇಲಿನ ನಿರ್ಬಂಧಗಳನ್ನು ವಿಸ್ತರಿಸುವ ಆದೇಶದಲ್ಲಿ ಗೃಹ ವ್ಯವಹಾರಗಳು ಮತ್ತು ನ್ಯಾಯ ಇಲಾಖೆಯು, “ಎಲ್ಲಾ ಮೊಬೈಲ್ ಇಂಟರ್ನೆಟ್ ಸೇವೆಗಳು, ಎಸ್‌ಎಂಎಸ್‌ ಸೇವೆಗಳು ಮತ್ತು ಮೊಬೈಲ್ ನೆಟ್‌ವರ್ಕ್‌ಗಳಲ್ಲಿನ ಎಲ್ಲಾ ಡಾಂಗಲ್ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಯಾವುದೇ ಪ್ರಚೋದನೆಯನ್ನು ತಡೆಯಲು, ಹಿಂಸಾಚಾರವನ್ನು ನಿರ್ಬಂಧಿಸಲು, ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಯಾವುದೇ ಭಂಗ ಉಂಟಾಗದಂತೆ ತಡೆಯಲು ಈ ಕ್ರಮ ಜರುಗಿಸಲಾಗಿದೆ” ಎಂದು ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...