Homeಮುಖಪುಟಪಂಜಾಬ್‌: ಹಲವಾರು ಪತ್ರಕರ್ತರು, ಬರಹಗಾರರ ಟ್ವಿಟರ್‌ ಖಾತೆಗೆ ನಿರ್ಬಂಧ

ಪಂಜಾಬ್‌: ಹಲವಾರು ಪತ್ರಕರ್ತರು, ಬರಹಗಾರರ ಟ್ವಿಟರ್‌ ಖಾತೆಗೆ ನಿರ್ಬಂಧ

- Advertisement -
- Advertisement -

ವಾರಿಸ್ ಪಂಜಾಬ್ ಡಿ ಸಂಘಟನೆಯ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರನ್ನು ಬಂಧಿಸಿದ ವಿದ್ಯಮಾನದ ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಮಾನವ ಹಕ್ಕುಗಳ ದಮನ ಆಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪಂಜಾಬ್‌ನಲ್ಲಿ ಇಂಟರ್ನೆಟ್ ಸ್ಥಗಿತವು ಮಧ್ಯೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕೆಲವು ಪತ್ರಕರ್ತರು, ಬರಹಗಾರರ ಟ್ವಿಟರ್‌ ಖಾತೆಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಕೆನಡಾದ ಲೇಖಕಿ ರೂಪಿ ಕೌರ್‌ಗೆ ಸೇರಿದ ಖಾತೆಯನ್ನು  ಟ್ವಿಟರ್ ಖಾತೆಗೂ ತಡೆ ನೀಡಲಾಗಿದೆ.

ಸಂಘಟನೆಗೆ ಸಂಬಂಧಿಸಿದ 100ಕ್ಕೂ ಹೆಚ್ಚು ಶಂಕಿತರನ್ನು ಇದುವರೆಗೆ ರಾಜ್ಯದಾದ್ಯಂತ ಬಂಧಿಸಲಾಗಿದೆ. ಆಮ್ ಆದ್ಮಿ ಪಕ್ಷದ ಸರ್ಕಾರವು ‘ಮುಗ್ಧ ಸಿಖ್ ಯುವಕ’ರನ್ನು ಟಾರ್ಗೆಟ್ ಮಾಡಬಾರದು ಎಂದು ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿಯ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಾಮಿ ಒತ್ತಾಯಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಕಮಲ್‌ದೀಪ್ ಸಿಂಗ್ ಬ್ರಾರ್, ಪ್ರೊ ಪಂಜಾಬ್ ಟಿವಿ ಬ್ಯೂರೋ ಮುಖ್ಯಸ್ಥ ಗಗನ್‌ದೀಪ್ ಸಿಂಗ್, ಸ್ವತಂತ್ರ ಪತ್ರಕರ್ತ ಸಂದೀಪ್ ಸಿಂಗ್ ಮತ್ತು ಡಿಜಿಟಲ್ ಕಾರ್ಯಕರ್ತ ಪೀಟರ್ ಫ್ರೆಡ್ರಿಕ್ ಅವರ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲಾಗಿದೆ. ಹಾಗೆಯೇ ಕೆನಡಾದ ರಾಜಕಾರಣಿ ಜಗ್ಮೀತ್ ಸಿಂಗ್ ಮತ್ತು ಎಸ್‌ಎಡಿ ಸಂಗ್ರೂರ್ ಸಂಸದ ಸಿಮ್ರಂಜೀತ್ ಸಿಂಗ್ ಮಾನ್ ಅವರ ಖಾತೆಗಳನ್ನು ತಡೆಹಿಡಿಯಲಾಗಿದೆ.

“ಈ ಖಾತೆಗಳನ್ನು ಕಾನೂನು ಪ್ರತಿಕ್ರಿಯೆಯ ಭಾಗವಾಗಿ ಭಾರತದಲ್ಲಿ ನಿರ್ಬಂಧಿಸಲಾಗಿದೆ” ಎಂದು ವಿವರಣೆಯಲ್ಲಿ ತಿಳಿಸಲಾಗಿದೆ. ಆದಾಗ್ಯೂ, ಪತ್ರಕರ್ತರಲ್ಲಿ ಒಬ್ಬರು ಮಾತ್ರ ಈ ಕ್ರಿಯೆಗೆ ಸಂಬಂಧಿಸಿದಂತೆ ಇಮೇಲ್ ಸಂದೇಶವನ್ನು ಟ್ವಿಟರ್‌ ಸಂಸ್ಥೆಯಿಂದ ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟ್ವಿಟರ್‌ ಸಂಸ್ಥೆಯನ್ನು ಸಂಪರ್ಕಿಸಿರುವ ‘ನ್ಯೂಸ್‌ಲಾಂಡ್ರಿ’ ಜಾಲತಾಣ, “ಕಾನೂನು ವಿಚಾರವೇನು? ಯಾರು ಅವುಗಳನ್ನು ಪ್ರಸ್ತಾಪಿಸಿದ್ದಾರೆ? ಎಷ್ಟು ಸಮಯದವರೆಗೆ ಈ ಖಾತೆಗಳನ್ನು ತಡೆಹಿಡಿಯಲಾಗುತ್ತದೆ” ಎಂದು ಪ್ರಶ್ನಿಸಿದೆ. “ಟ್ವಿಟರ್‌ನ ಪತ್ರಿಕಾ ತಂಡದಿಂದ ಇಲ್ಲಿಯವರೆಗೆ ಇಮೋಜಿಯೊಂದನ್ನು ಮಾತ್ರ ಪ್ರತಿಕ್ರಿಯೆಯಾಗಿ ಸ್ವೀಕರಿಸಿದ್ದೇವೆ. ನಿಜವಾದ ಪ್ರತಿಕ್ರಿಯೆಯನ್ನು ಸ್ವೀಕರಿಸಿದಾಗ ವರದಿಯನ್ನು ನವೀಕರಿಸುತ್ತೇವೆ” ಎಂದು ‘ನ್ಯೂಸ್‌ಲಾಂಡ್ರಿ’ ಬರೆದುಕೊಂಡಿದೆ.

ಅಮೃತಪಾಲ್ ಅವರನ್ನು ಪೊಲೀಸರು ಬೆನ್ನಟ್ಟುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಗಗನ್‌ದೀಪ್ ಅವರ ಖಾತೆಯನ್ನು ಸೋಮವಾರ ತಡೆಹಿಡಿಯಲಾಗಿದೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ. ಗಗನ್‌ದೀಪ್ ಅವರು ಹಂಚಿಕೊಳ್ಳುವ ಮುನ್ನವೇ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ಒಂದು ವರದಿಯನ್ನು ಹೊರತುಪಡಿಸಿ, ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಕಮಲ್‌ದೀಪ್ ಅವರು ಶನಿವಾರ ಪೋಸ್ಟ್ ಮಾಡಿದ ಎಲ್ಲಾ ಟ್ವೀಟ್‌ಗಳು ಮತ್ತು ವರದಿಗಳು ಪಂಜಾಬ್‌ನಲ್ಲಿನ ವಿದ್ಯಮಾನಕ್ಕೆ ಸಂಬಂಧಿಸಿವೆ. ಅವರು ಭಾನುವಾರ ಯಾವುದೇ ಅಪ್‌ಡೇಟ್‌ ಪೋಸ್ಟ್ ಮಾಡಿಲ್ಲ.

ಪಂಜಾಬ್‌ನಲ್ಲಿ ಜಿ 20 ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡುವಾಗ ಎಸ್‌ಜಿಪಿಸಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಾಮಿ ಸಿಖ್ ಅವರು ಮಾನವ ಹಕ್ಕುಗಳ ವಿಷಯವನ್ನು ಪ್ರಸ್ತಾಪಿಸಿರುವ ವರದಿಯನ್ನು ಕಮಲ್‌ದೀಪ್‌ ಶನಿವಾರ ಟ್ವೀಟ್ ಮಾಡಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಳೊಂದಿಗೆ ಎರಡು ಟ್ವೀಟ್‌ಗಳನ್ನು ಅವರು ಪೋಸ್ಟ್ ಮಾಡಿದ್ದಾರೆ. ಪಂಜಾಬ್‌ನಲ್ಲಿನ ಮಾನವ ಹಕ್ಕುಗಳ ದಮನಕ್ಕೆ ಸಂಬಂಧಿಸಿದ ಅವರ ವರದಿ ಹಾಗೂ ಸಂಬಂಧಿಸಿದ ಟ್ವಿಟರ್‌ ಥ್ರೆಡ್‌ಗಳನ್ನು ಶನಿವಾರ ಪೋಸ್ಟ್ ಮಾಡಿದ್ದಾರೆ.

ಭಾನುವಾರದ ಪರಿಸ್ಥಿತಿಯ ಕುರಿತು ಟ್ವೀಟ್ ಮಾಡಿದ ಡಿಜಿಟಲ್ ಕಾರ್ಯಕರ್ತ ಪೀಟರ್ ಫ್ರೆಡ್ರಿಕ್, “ನನಗೆ ಸ್ವಲ್ಪವೇ ತಿಳಿದಿರುವ ಅಮೃತಪಾಲ್ ಸಿಂಗ್ ಬಗ್ಗೆ ನಿಮ್ಮ ಅಭಿಪ್ರಾಯ ಏನೇ ಇರಲಿ, ಪಂಜಾಬ್‌ನಲ್ಲಿ ಮೂಲಭೂತ ನಾಗರಿಕ ಸ್ವಾತಂತ್ರ್ಯಗಳ ಮೇಲೆ ಸಾಮೂಹಿಕ ನಿರ್ಬಂಧ ನಿರಂಕುಶ ದುಃಸ್ವಪ್ನವಾಗಿದೆ. ಇಂಟರ್ನೆಟ್ ಮತ್ತು ಮೊಬೈಲ್ ಸೇವೆಗಳನ್ನು ನಿಷೇಧಿಸಲಾಗಿದೆ, ಅಸೆಂಬ್ಲಿಯನ್ನು ನಿಷೇಧಿಸಲಾಗಿದೆ, ಮಾಧ್ಯಮಗಳಿಗೆ ಸೆನ್ಸಾರ್‌ಶಿಪ್‌ ಅನ್ವಯಿಸಲಾಗಿದೆ. ಕಾಶ್ಮೀರದಿಂದ ಪಂಜಾಬ್‌ವರೆಗೆ ಆಜಾದಿ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.

ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಎಎಪಿ ಸರ್ಕಾರ ಶನಿವಾರ ಸ್ಥಗಿತಗೊಳಿಸಿದೆ. ಆರಂಭದಲ್ಲಿ ಸೋಮವಾರ ಮಧ್ಯಾಹ್ನದವರೆಗೆ ಮತ್ತು ಮತ್ತೆ ಮಂಗಳವಾರದವರೆಗೆ ಅಮಾನತುಗೊಳಿಸಿ ಆದೇಶಿಸಲಾಗಿದೆ.

ಸೋಮವಾರದಂದು ಇಂಟರ್ನೆಟ್ ಸೇವೆಗಳ ಮೇಲಿನ ನಿರ್ಬಂಧಗಳನ್ನು ವಿಸ್ತರಿಸುವ ಆದೇಶದಲ್ಲಿ ಗೃಹ ವ್ಯವಹಾರಗಳು ಮತ್ತು ನ್ಯಾಯ ಇಲಾಖೆಯು, “ಎಲ್ಲಾ ಮೊಬೈಲ್ ಇಂಟರ್ನೆಟ್ ಸೇವೆಗಳು, ಎಸ್‌ಎಂಎಸ್‌ ಸೇವೆಗಳು ಮತ್ತು ಮೊಬೈಲ್ ನೆಟ್‌ವರ್ಕ್‌ಗಳಲ್ಲಿನ ಎಲ್ಲಾ ಡಾಂಗಲ್ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಯಾವುದೇ ಪ್ರಚೋದನೆಯನ್ನು ತಡೆಯಲು, ಹಿಂಸಾಚಾರವನ್ನು ನಿರ್ಬಂಧಿಸಲು, ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಯಾವುದೇ ಭಂಗ ಉಂಟಾಗದಂತೆ ತಡೆಯಲು ಈ ಕ್ರಮ ಜರುಗಿಸಲಾಗಿದೆ” ಎಂದು ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...