Homeಮುಖಪುಟಪಂಜಾಬ್‌: ಹಲವಾರು ಪತ್ರಕರ್ತರು, ಬರಹಗಾರರ ಟ್ವಿಟರ್‌ ಖಾತೆಗೆ ನಿರ್ಬಂಧ

ಪಂಜಾಬ್‌: ಹಲವಾರು ಪತ್ರಕರ್ತರು, ಬರಹಗಾರರ ಟ್ವಿಟರ್‌ ಖಾತೆಗೆ ನಿರ್ಬಂಧ

- Advertisement -
- Advertisement -

ವಾರಿಸ್ ಪಂಜಾಬ್ ಡಿ ಸಂಘಟನೆಯ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರನ್ನು ಬಂಧಿಸಿದ ವಿದ್ಯಮಾನದ ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಮಾನವ ಹಕ್ಕುಗಳ ದಮನ ಆಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪಂಜಾಬ್‌ನಲ್ಲಿ ಇಂಟರ್ನೆಟ್ ಸ್ಥಗಿತವು ಮಧ್ಯೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕೆಲವು ಪತ್ರಕರ್ತರು, ಬರಹಗಾರರ ಟ್ವಿಟರ್‌ ಖಾತೆಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಕೆನಡಾದ ಲೇಖಕಿ ರೂಪಿ ಕೌರ್‌ಗೆ ಸೇರಿದ ಖಾತೆಯನ್ನು  ಟ್ವಿಟರ್ ಖಾತೆಗೂ ತಡೆ ನೀಡಲಾಗಿದೆ.

ಸಂಘಟನೆಗೆ ಸಂಬಂಧಿಸಿದ 100ಕ್ಕೂ ಹೆಚ್ಚು ಶಂಕಿತರನ್ನು ಇದುವರೆಗೆ ರಾಜ್ಯದಾದ್ಯಂತ ಬಂಧಿಸಲಾಗಿದೆ. ಆಮ್ ಆದ್ಮಿ ಪಕ್ಷದ ಸರ್ಕಾರವು ‘ಮುಗ್ಧ ಸಿಖ್ ಯುವಕ’ರನ್ನು ಟಾರ್ಗೆಟ್ ಮಾಡಬಾರದು ಎಂದು ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿಯ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಾಮಿ ಒತ್ತಾಯಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಕಮಲ್‌ದೀಪ್ ಸಿಂಗ್ ಬ್ರಾರ್, ಪ್ರೊ ಪಂಜಾಬ್ ಟಿವಿ ಬ್ಯೂರೋ ಮುಖ್ಯಸ್ಥ ಗಗನ್‌ದೀಪ್ ಸಿಂಗ್, ಸ್ವತಂತ್ರ ಪತ್ರಕರ್ತ ಸಂದೀಪ್ ಸಿಂಗ್ ಮತ್ತು ಡಿಜಿಟಲ್ ಕಾರ್ಯಕರ್ತ ಪೀಟರ್ ಫ್ರೆಡ್ರಿಕ್ ಅವರ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲಾಗಿದೆ. ಹಾಗೆಯೇ ಕೆನಡಾದ ರಾಜಕಾರಣಿ ಜಗ್ಮೀತ್ ಸಿಂಗ್ ಮತ್ತು ಎಸ್‌ಎಡಿ ಸಂಗ್ರೂರ್ ಸಂಸದ ಸಿಮ್ರಂಜೀತ್ ಸಿಂಗ್ ಮಾನ್ ಅವರ ಖಾತೆಗಳನ್ನು ತಡೆಹಿಡಿಯಲಾಗಿದೆ.

“ಈ ಖಾತೆಗಳನ್ನು ಕಾನೂನು ಪ್ರತಿಕ್ರಿಯೆಯ ಭಾಗವಾಗಿ ಭಾರತದಲ್ಲಿ ನಿರ್ಬಂಧಿಸಲಾಗಿದೆ” ಎಂದು ವಿವರಣೆಯಲ್ಲಿ ತಿಳಿಸಲಾಗಿದೆ. ಆದಾಗ್ಯೂ, ಪತ್ರಕರ್ತರಲ್ಲಿ ಒಬ್ಬರು ಮಾತ್ರ ಈ ಕ್ರಿಯೆಗೆ ಸಂಬಂಧಿಸಿದಂತೆ ಇಮೇಲ್ ಸಂದೇಶವನ್ನು ಟ್ವಿಟರ್‌ ಸಂಸ್ಥೆಯಿಂದ ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟ್ವಿಟರ್‌ ಸಂಸ್ಥೆಯನ್ನು ಸಂಪರ್ಕಿಸಿರುವ ‘ನ್ಯೂಸ್‌ಲಾಂಡ್ರಿ’ ಜಾಲತಾಣ, “ಕಾನೂನು ವಿಚಾರವೇನು? ಯಾರು ಅವುಗಳನ್ನು ಪ್ರಸ್ತಾಪಿಸಿದ್ದಾರೆ? ಎಷ್ಟು ಸಮಯದವರೆಗೆ ಈ ಖಾತೆಗಳನ್ನು ತಡೆಹಿಡಿಯಲಾಗುತ್ತದೆ” ಎಂದು ಪ್ರಶ್ನಿಸಿದೆ. “ಟ್ವಿಟರ್‌ನ ಪತ್ರಿಕಾ ತಂಡದಿಂದ ಇಲ್ಲಿಯವರೆಗೆ ಇಮೋಜಿಯೊಂದನ್ನು ಮಾತ್ರ ಪ್ರತಿಕ್ರಿಯೆಯಾಗಿ ಸ್ವೀಕರಿಸಿದ್ದೇವೆ. ನಿಜವಾದ ಪ್ರತಿಕ್ರಿಯೆಯನ್ನು ಸ್ವೀಕರಿಸಿದಾಗ ವರದಿಯನ್ನು ನವೀಕರಿಸುತ್ತೇವೆ” ಎಂದು ‘ನ್ಯೂಸ್‌ಲಾಂಡ್ರಿ’ ಬರೆದುಕೊಂಡಿದೆ.

ಅಮೃತಪಾಲ್ ಅವರನ್ನು ಪೊಲೀಸರು ಬೆನ್ನಟ್ಟುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಗಗನ್‌ದೀಪ್ ಅವರ ಖಾತೆಯನ್ನು ಸೋಮವಾರ ತಡೆಹಿಡಿಯಲಾಗಿದೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ. ಗಗನ್‌ದೀಪ್ ಅವರು ಹಂಚಿಕೊಳ್ಳುವ ಮುನ್ನವೇ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ಒಂದು ವರದಿಯನ್ನು ಹೊರತುಪಡಿಸಿ, ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಕಮಲ್‌ದೀಪ್ ಅವರು ಶನಿವಾರ ಪೋಸ್ಟ್ ಮಾಡಿದ ಎಲ್ಲಾ ಟ್ವೀಟ್‌ಗಳು ಮತ್ತು ವರದಿಗಳು ಪಂಜಾಬ್‌ನಲ್ಲಿನ ವಿದ್ಯಮಾನಕ್ಕೆ ಸಂಬಂಧಿಸಿವೆ. ಅವರು ಭಾನುವಾರ ಯಾವುದೇ ಅಪ್‌ಡೇಟ್‌ ಪೋಸ್ಟ್ ಮಾಡಿಲ್ಲ.

ಪಂಜಾಬ್‌ನಲ್ಲಿ ಜಿ 20 ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡುವಾಗ ಎಸ್‌ಜಿಪಿಸಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಾಮಿ ಸಿಖ್ ಅವರು ಮಾನವ ಹಕ್ಕುಗಳ ವಿಷಯವನ್ನು ಪ್ರಸ್ತಾಪಿಸಿರುವ ವರದಿಯನ್ನು ಕಮಲ್‌ದೀಪ್‌ ಶನಿವಾರ ಟ್ವೀಟ್ ಮಾಡಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಳೊಂದಿಗೆ ಎರಡು ಟ್ವೀಟ್‌ಗಳನ್ನು ಅವರು ಪೋಸ್ಟ್ ಮಾಡಿದ್ದಾರೆ. ಪಂಜಾಬ್‌ನಲ್ಲಿನ ಮಾನವ ಹಕ್ಕುಗಳ ದಮನಕ್ಕೆ ಸಂಬಂಧಿಸಿದ ಅವರ ವರದಿ ಹಾಗೂ ಸಂಬಂಧಿಸಿದ ಟ್ವಿಟರ್‌ ಥ್ರೆಡ್‌ಗಳನ್ನು ಶನಿವಾರ ಪೋಸ್ಟ್ ಮಾಡಿದ್ದಾರೆ.

ಭಾನುವಾರದ ಪರಿಸ್ಥಿತಿಯ ಕುರಿತು ಟ್ವೀಟ್ ಮಾಡಿದ ಡಿಜಿಟಲ್ ಕಾರ್ಯಕರ್ತ ಪೀಟರ್ ಫ್ರೆಡ್ರಿಕ್, “ನನಗೆ ಸ್ವಲ್ಪವೇ ತಿಳಿದಿರುವ ಅಮೃತಪಾಲ್ ಸಿಂಗ್ ಬಗ್ಗೆ ನಿಮ್ಮ ಅಭಿಪ್ರಾಯ ಏನೇ ಇರಲಿ, ಪಂಜಾಬ್‌ನಲ್ಲಿ ಮೂಲಭೂತ ನಾಗರಿಕ ಸ್ವಾತಂತ್ರ್ಯಗಳ ಮೇಲೆ ಸಾಮೂಹಿಕ ನಿರ್ಬಂಧ ನಿರಂಕುಶ ದುಃಸ್ವಪ್ನವಾಗಿದೆ. ಇಂಟರ್ನೆಟ್ ಮತ್ತು ಮೊಬೈಲ್ ಸೇವೆಗಳನ್ನು ನಿಷೇಧಿಸಲಾಗಿದೆ, ಅಸೆಂಬ್ಲಿಯನ್ನು ನಿಷೇಧಿಸಲಾಗಿದೆ, ಮಾಧ್ಯಮಗಳಿಗೆ ಸೆನ್ಸಾರ್‌ಶಿಪ್‌ ಅನ್ವಯಿಸಲಾಗಿದೆ. ಕಾಶ್ಮೀರದಿಂದ ಪಂಜಾಬ್‌ವರೆಗೆ ಆಜಾದಿ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.

ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಎಎಪಿ ಸರ್ಕಾರ ಶನಿವಾರ ಸ್ಥಗಿತಗೊಳಿಸಿದೆ. ಆರಂಭದಲ್ಲಿ ಸೋಮವಾರ ಮಧ್ಯಾಹ್ನದವರೆಗೆ ಮತ್ತು ಮತ್ತೆ ಮಂಗಳವಾರದವರೆಗೆ ಅಮಾನತುಗೊಳಿಸಿ ಆದೇಶಿಸಲಾಗಿದೆ.

ಸೋಮವಾರದಂದು ಇಂಟರ್ನೆಟ್ ಸೇವೆಗಳ ಮೇಲಿನ ನಿರ್ಬಂಧಗಳನ್ನು ವಿಸ್ತರಿಸುವ ಆದೇಶದಲ್ಲಿ ಗೃಹ ವ್ಯವಹಾರಗಳು ಮತ್ತು ನ್ಯಾಯ ಇಲಾಖೆಯು, “ಎಲ್ಲಾ ಮೊಬೈಲ್ ಇಂಟರ್ನೆಟ್ ಸೇವೆಗಳು, ಎಸ್‌ಎಂಎಸ್‌ ಸೇವೆಗಳು ಮತ್ತು ಮೊಬೈಲ್ ನೆಟ್‌ವರ್ಕ್‌ಗಳಲ್ಲಿನ ಎಲ್ಲಾ ಡಾಂಗಲ್ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಯಾವುದೇ ಪ್ರಚೋದನೆಯನ್ನು ತಡೆಯಲು, ಹಿಂಸಾಚಾರವನ್ನು ನಿರ್ಬಂಧಿಸಲು, ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಯಾವುದೇ ಭಂಗ ಉಂಟಾಗದಂತೆ ತಡೆಯಲು ಈ ಕ್ರಮ ಜರುಗಿಸಲಾಗಿದೆ” ಎಂದು ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...