Homeಮುಖಪುಟಹೊಸ ಯೋಜನೆಯಡಿ ಉಚಿತ ‘ಸ್ಯಾನಿಟರಿ ಪ್ಯಾಡ್‌‌’ ಒದಗಿಸಲಿರುವ ಪಂಜಾಬ್

ಹೊಸ ಯೋಜನೆಯಡಿ ಉಚಿತ ‘ಸ್ಯಾನಿಟರಿ ಪ್ಯಾಡ್‌‌’ ಒದಗಿಸಲಿರುವ ಪಂಜಾಬ್

- Advertisement -
- Advertisement -

‘ಅಂತರರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ದಿನಾಚರಣೆ’ಯ ಸಂದರ್ಭದಲ್ಲಿ ಪಂಜಾಬ್ ಸರ್ಕಾರವು ರಾಜ್ಯದಾದ್ಯಂತ ಅಗತ್ಯವಿರುವ ಹೆಣ್ಣುಮಕ್ಕಳಿಗೆ ಮತ್ತು ಮಹಿಳೆಯರಿಗೆ ಉಚಿತ ‘ಸ್ಯಾನಿಟರಿ ನ್ಯಾಪ್‌ಕಿನ್‌’ ನೀಡುವ ಯೋಜನೆಯನ್ನು ಶುಕ್ರವಾರ ಪ್ರಾರಂಭಿಸಿತು.

‘ಉದಾನ್’ ಎಂದು ಕರೆಯಲ್ಪಡುವ ಈ ಯೋಜನೆಗೆ ವರ್ಷಕ್ಕೆ 40.55 ಕೋಟಿ ರೂ ಬೇಕಾಗುತ್ತದೆ ಎಂದು ಪಂಜಾಬ್ ಸಾಮಾಜಿಕ ಭದ್ರತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅರುಣಾ ಚೌಧರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಮತ್ತು ಅವರ ಪುತ್ರನ ಕಾಲು ಹಿಡಿದು ಸಿ.ಪಿ. ಯೋಗೇಶ್ವರ್‌‌ ಸಚಿವರಾಗಿದ್ದು: ರೇಣುಕಾಚಾರ್ಯ

ಹೊಸ ಯೋಜನೆಯು ಶಾಲೆಯಿಂದ ಹೊರಗುಳಿಯುವ ಹುಡುಗಿಯರು, ಕಾಲೇಜಿಗೆ ಹಾಜರಾಗದ ಯುವತಿಯರು, ಬಿಪಿಎಲ್ ಕುಟುಂಬಗಳ ಮಹಿಳೆಯರು, ಮನೆಯಿಲ್ಲದ ಮಹಿಳೆಯರು, ಕೊಳೆಗೇರಿ ಪ್ರದೇಶದ ನಿವಾಸಿಗಳು ಮತ್ತು ಇತರ ಇಲಾಖೆಗಳ ಯಾವುದೇ ಯೋಜನೆಯಡಿ ಉಚಿತ ಅಥವಾ ಸಬ್ಸಿಡಿಯ ರೂಪದಲ್ಲಿ ಸ್ಯಾನಿಟರಿ ಪ್ಯಾಡ್‌‌‌‌ಗಳನ್ನು ಪಡೆಯದವರನ್ನು ಒಳಗೊಳ್ಳುತ್ತದೆ ಅವರು ಹೇಳಿದ್ದಾರೆ.

ಪ್ರತಿ ಫಲಾನುಭವಿಗೆ ತಿಂಗಳಿಗೆ ಗರಿಷ್ಠ ಒಂಬತ್ತು ಪ್ಯಾಡ್‌ಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಒಟ್ಟು 1,22,91,300 ಸ್ಯಾನಿಟರಿ ಪ್ಯಾಡ್‌ಗಳನ್ನು 13,65,700 ಫಲಾನುಭವಿಗಳಿಗೆ 27,314 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರು ಮತ್ತು ಸಹಾಯಕರ ಮೂಲಕ ವಿತರಿಸಲಾಗುವುದು ಎಂದು ಅರುಣಾ ಹೇಳಿದ್ದಾರೆ.

ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದು, ಮೂಲಭೂತ ಉತ್ಪನ್ನಗಳ ಲಭ್ಯತೆಯನ್ನು ಸುಧಾರಿಸುವುದು, ಉತ್ತಮ ಜೀವನ ಮಟ್ಟವನ್ನು ಉತ್ತೇಜಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ಮಹಿಳಾ ಆಧಾರಿತ ಯೋಜನೆಯು ಅವರ ಜೀವನದ ಗುಣಮಟ್ಟವನ್ನು ಸುಧಾರಿಸುವುದು, ಅವರ ಸ್ವಾಭಿಮಾನವನ್ನು ಹೆಚ್ಚಿಸುವುದು ಮತ್ತು ಸ್ಯಾನಿಟರಿ ಪ್ಯಾಡ್‌ಗಳ ಸುರಕ್ಷಿತವಾಗಿ ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಯೋಜನೆಯ ಉಧ್ಘಾಟನಾ ಸಮಾರಂಭದಲ್ಲಿ 1,500 ಸ್ಥಳಗಳಲ್ಲಿ ಮತ್ತು ರಾಜ್ಯದ ಇತರ ಅಂಗನವಾಡಿ ಕೇಂದ್ರಗಳಲ್ಲಿ ಒಂದು ಲಕ್ಷ ಪ್ಯಾಕೆಟ್ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಯೋಜನೆಯ ಒಟ್ಟಾರೆ ಪ್ರಗತಿ ಮತ್ತು ಸುಗಮ ಅನುಷ್ಠಾನದ ಮೇಲ್ವಿಚಾರಣೆಗಾಗಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಒಳಗೊಂಡ ರಾಜ್ಯ ಕಾರ್ಯಪಡೆ ರಚಿಸಲಾಗಿದೆ ಎಂದು ಸಚಿವೆ ಹೇಳಿದ್ದಾರೆ.

ಪ್ರತಿ ತಿಂಗಳು, ಸರ್ಕಾರದಿಂದ ಅನುಮೋದಿತ ಎಂಪನೇಲ್ಡ್ ಪ್ರಯೋಗಾಲಯಗಳು ಸ್ಯಾನಿಟರಿ ಪ್ಯಾಡ್‌‌ ಗುಣಮಟ್ಟದ ಪರೀಕ್ಷೆಯನ್ನು ನಡೆಸುತ್ತವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...