Homeಮುಖಪುಟಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನದಿ ನೀರು ಹಂಚಿಕೆ ವಿವಾದದಿಂದಾಗಿ ಸಂಬಂಧ ಹದಗೆಟ್ಟಿತ್ತು. ಆದರೆ ರೈತ ಹೋರಾಟ ಅದನ್ನು ಮರೆಸಿ ಹೊಸ ಭಾಂದವ್ಯ ಬರೆದಿದೆ.

- Advertisement -
- Advertisement -

ಪ್ರತಿಭಟನಾ ನಿರತ ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆಯನ್ನು ನೀಡಿದೆ. ಹಾಗಾಗಿ ಟಿಕ್ರಿ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದ ಪಂಜಾಬಿನ ರೈತರು ಅಲ್ಲಿಂದ ನಿರ್ಗಮಿಸುತ್ತಿದ್ದು ಅದಕ್ಕೂ ಮೊದಲು ಹರಿಯಾಣದ ನಿವಾಸಿಗಳೊಂದಿಗಿನ ಬಾಂಧವ್ಯವನ್ನು ಬಲಪಡಿಸುವಂತಹ ವಿಶೇಷ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೇಕಾದ ಆಹಾರ ಪದಾರ್ಥಗಳು ಮತ್ತು ಉಚಿತ ವಸತಿ ಸೌಕರ್ಯವನ್ನು ಒದಗಿಸಿದವರನ್ನು ಗೌರವಿಸಲು, ಪಂಜಾಬಿನ ರೈತರು ಟಿಕ್ರಿ ಗಡಿ ಹತ್ತಿರದ ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದಾರೆ. ಧನ್ಯವಾದ ಅರ್ಪಿಸಿ ಪಂಜಾಬ್‌ಗೆ ಭೇಟಿ ನೀಡುವಂತೆಯೂ ಆಹ್ವಾನ ನೀಡುತ್ತಿದ್ದಾರೆ.

ಪಂಜಾಬ್ ರೈತ ಸಂಘಟನೆಗಳ ಸಮಿತಿಯು ಹೋರಾಟವನ್ನು ಬೆಂಬಲಿಸಿದ ಹರಿಯಾಣ ಮತ್ತು ಪಂಜಾಬ್‌ನ ಜನರಿಗೆ ಕೃತಜ್ಞತೆ ವ್ಯಕ್ತಪಡಿಸಲು ಬಿಕೆಯು (ಸಿಧುಪುರ್) ಮುಖಂಡರು ಟಿಕ್ರಿ ಬಳಿಯ ಬರಾಹಿ ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿನ ಕೆಲವು ಗ್ರಾಮಸ್ಥರಿಗೆ  ಸ್ಮರಣಿಕೆಗಳನ್ನು ನೀಡಿದರು. ರೈತ ಸಂಘಟನೆಗಳ ಜಂಟಿ ಸಮಿತಿಯು ಸುಮಾರು 20 ಸ್ಥಳೀಯರನ್ನು ಮತ್ತು ಪಂಜಾಬ್‌ನ ಅನೇಕರನ್ನು ಮುಖ್ಯ ಪ್ರತಿಭಟನಾ ಸ್ಥಳದಲ್ಲಿ ಅವರ ನಿರಂತರ ಪ್ರತಿಭಟನೆಯ ಯಶಸ್ಸಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಗೌರವಿಸಿತು.

‘ಪ್ರತಿಭಟನೆಯು ಈಗ ಕೊನೆಗೊಳ್ಳಲಿದೆ. ಆದ್ದರಿಂದ ನಮ್ಮೊಂದಿಗೆ ಬೆಂಬಲವಾಗಿ ನಿಂತ ಎಲ್ಲರಿಗೂ ಕೃತಜ್ಞತೆಯನ್ನು ವ್ಯಕ್ತಪಡಿಸುವುದು ನಮ್ಮ ಕರ್ತವ್ಯವಾಗಿದೆ. ಬರಾಹಿ ಗ್ರಾಮದ ನಿವಾಸಿಗಳು ಹಾಲು, ತರಕಾರಿಗಳು, ಹಣ್ಣುಗಳು ಮತ್ತು ಇತರ ಆಹಾರ ಪದಾರ್ಥಗಳ ನಿರಂತರ ಪೂರೈಕೆಯನ್ನು ಮಾಡಿದ್ದಾರೆ. ಈ ಸಹೋದರತ್ವದ ಬಾಂಧವ್ಯವನ್ನು ಬಲಪಡಿಸಲು ನಾವು ಅವರನ್ನು ಪಂಜಾಬ್‌ಗೆ ಆಹ್ವಾನಿಸಿದ್ದೇವೆ’ ಎಂದು ಬಿಕೆಯು ನಾಯಕ ಲಖ್ವಿಂದರ್ ಸಿಂಗ್ ಹೇಳಿದರು.

ವಕೀಲ ಅಮರವೀರ್ ಸಿಂಗ್ ಭುಲ್ಲಾರ್ ಅವರು ಪಂಜಾಬ್ ರೈತರಿಗೆ ಉಚಿತ ವಸತಿ ಒದಗಿಸಿದ್ದಕ್ಕಾಗಿ ಬಹದ್ದೂರ್ಗಡದ ವ್ಯಕ್ತಿಯನ್ನು ಗೌರವಿಸಿ, ‘ನಮಗೆ ಸಹಾಯ ಮಾಡಿದ ಕೊನೆಯ ವ್ಯಕ್ತಿಯನ್ನು ಗೌರವಿಸುವವರೆಗೂ ಇದು ಮುಂದುವರಿಯುತ್ತದೆ. ನಾವು ನಾಳೆ ಬೇರೆ ಹಳ್ಳಿಗೆ ಹೋಗುತ್ತೇವೆ’ ಎಂದು ತಿಳಿಸಿದರು.

ಬಿಕೆಯು (ರಾಜೇವಾಲ್) ನಾಯಕ ಪರ್ಗತ್ ಸಿಂಗ್, ‘ನಮ್ಮ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಹರಿಯಾಣ ನಿವಾಸಿಗಳು ನೀಡಿದ ಬೆಂಬಲವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ, ಆದ್ದರಿಂದ ಅಂತಹ ವ್ಯಕ್ತಿಗಳನ್ನು ಗೌರವಿಸಲಾಗುತ್ತಿದೆ. ಪಂಜಾಬ್ ಮತ್ತು ಹರಿಯಾಣ ರೈತರ ಒಗ್ಗಟ್ಟು ನಮ್ಮ ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ’ ಎಂದು ಅವರು ಹೇಳಿದರು.

ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನದಿ ನೀರು ಹಂಚಿಕೆ ವಿವಾದದಿಂದಾಗಿ ಸಂಬಂಧ ಹದಗೆಟ್ಟಿತ್ತು. ಆದರೆ ರೈತ ಹೋರಾಟ ಅದನ್ನು ಮರೆಸಿ ಹೊಸ ಭಾಂದವ್ಯ ಬರೆದಿದೆ.


ಇದನ್ನೂ ಓದಿ: ಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...