Homeಮುಖಪುಟಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನದಿ ನೀರು ಹಂಚಿಕೆ ವಿವಾದದಿಂದಾಗಿ ಸಂಬಂಧ ಹದಗೆಟ್ಟಿತ್ತು. ಆದರೆ ರೈತ ಹೋರಾಟ ಅದನ್ನು ಮರೆಸಿ ಹೊಸ ಭಾಂದವ್ಯ ಬರೆದಿದೆ.

- Advertisement -
- Advertisement -

ಪ್ರತಿಭಟನಾ ನಿರತ ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆಯನ್ನು ನೀಡಿದೆ. ಹಾಗಾಗಿ ಟಿಕ್ರಿ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದ ಪಂಜಾಬಿನ ರೈತರು ಅಲ್ಲಿಂದ ನಿರ್ಗಮಿಸುತ್ತಿದ್ದು ಅದಕ್ಕೂ ಮೊದಲು ಹರಿಯಾಣದ ನಿವಾಸಿಗಳೊಂದಿಗಿನ ಬಾಂಧವ್ಯವನ್ನು ಬಲಪಡಿಸುವಂತಹ ವಿಶೇಷ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೇಕಾದ ಆಹಾರ ಪದಾರ್ಥಗಳು ಮತ್ತು ಉಚಿತ ವಸತಿ ಸೌಕರ್ಯವನ್ನು ಒದಗಿಸಿದವರನ್ನು ಗೌರವಿಸಲು, ಪಂಜಾಬಿನ ರೈತರು ಟಿಕ್ರಿ ಗಡಿ ಹತ್ತಿರದ ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದಾರೆ. ಧನ್ಯವಾದ ಅರ್ಪಿಸಿ ಪಂಜಾಬ್‌ಗೆ ಭೇಟಿ ನೀಡುವಂತೆಯೂ ಆಹ್ವಾನ ನೀಡುತ್ತಿದ್ದಾರೆ.

ಪಂಜಾಬ್ ರೈತ ಸಂಘಟನೆಗಳ ಸಮಿತಿಯು ಹೋರಾಟವನ್ನು ಬೆಂಬಲಿಸಿದ ಹರಿಯಾಣ ಮತ್ತು ಪಂಜಾಬ್‌ನ ಜನರಿಗೆ ಕೃತಜ್ಞತೆ ವ್ಯಕ್ತಪಡಿಸಲು ಬಿಕೆಯು (ಸಿಧುಪುರ್) ಮುಖಂಡರು ಟಿಕ್ರಿ ಬಳಿಯ ಬರಾಹಿ ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿನ ಕೆಲವು ಗ್ರಾಮಸ್ಥರಿಗೆ  ಸ್ಮರಣಿಕೆಗಳನ್ನು ನೀಡಿದರು. ರೈತ ಸಂಘಟನೆಗಳ ಜಂಟಿ ಸಮಿತಿಯು ಸುಮಾರು 20 ಸ್ಥಳೀಯರನ್ನು ಮತ್ತು ಪಂಜಾಬ್‌ನ ಅನೇಕರನ್ನು ಮುಖ್ಯ ಪ್ರತಿಭಟನಾ ಸ್ಥಳದಲ್ಲಿ ಅವರ ನಿರಂತರ ಪ್ರತಿಭಟನೆಯ ಯಶಸ್ಸಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಗೌರವಿಸಿತು.

‘ಪ್ರತಿಭಟನೆಯು ಈಗ ಕೊನೆಗೊಳ್ಳಲಿದೆ. ಆದ್ದರಿಂದ ನಮ್ಮೊಂದಿಗೆ ಬೆಂಬಲವಾಗಿ ನಿಂತ ಎಲ್ಲರಿಗೂ ಕೃತಜ್ಞತೆಯನ್ನು ವ್ಯಕ್ತಪಡಿಸುವುದು ನಮ್ಮ ಕರ್ತವ್ಯವಾಗಿದೆ. ಬರಾಹಿ ಗ್ರಾಮದ ನಿವಾಸಿಗಳು ಹಾಲು, ತರಕಾರಿಗಳು, ಹಣ್ಣುಗಳು ಮತ್ತು ಇತರ ಆಹಾರ ಪದಾರ್ಥಗಳ ನಿರಂತರ ಪೂರೈಕೆಯನ್ನು ಮಾಡಿದ್ದಾರೆ. ಈ ಸಹೋದರತ್ವದ ಬಾಂಧವ್ಯವನ್ನು ಬಲಪಡಿಸಲು ನಾವು ಅವರನ್ನು ಪಂಜಾಬ್‌ಗೆ ಆಹ್ವಾನಿಸಿದ್ದೇವೆ’ ಎಂದು ಬಿಕೆಯು ನಾಯಕ ಲಖ್ವಿಂದರ್ ಸಿಂಗ್ ಹೇಳಿದರು.

ವಕೀಲ ಅಮರವೀರ್ ಸಿಂಗ್ ಭುಲ್ಲಾರ್ ಅವರು ಪಂಜಾಬ್ ರೈತರಿಗೆ ಉಚಿತ ವಸತಿ ಒದಗಿಸಿದ್ದಕ್ಕಾಗಿ ಬಹದ್ದೂರ್ಗಡದ ವ್ಯಕ್ತಿಯನ್ನು ಗೌರವಿಸಿ, ‘ನಮಗೆ ಸಹಾಯ ಮಾಡಿದ ಕೊನೆಯ ವ್ಯಕ್ತಿಯನ್ನು ಗೌರವಿಸುವವರೆಗೂ ಇದು ಮುಂದುವರಿಯುತ್ತದೆ. ನಾವು ನಾಳೆ ಬೇರೆ ಹಳ್ಳಿಗೆ ಹೋಗುತ್ತೇವೆ’ ಎಂದು ತಿಳಿಸಿದರು.

ಬಿಕೆಯು (ರಾಜೇವಾಲ್) ನಾಯಕ ಪರ್ಗತ್ ಸಿಂಗ್, ‘ನಮ್ಮ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಹರಿಯಾಣ ನಿವಾಸಿಗಳು ನೀಡಿದ ಬೆಂಬಲವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ, ಆದ್ದರಿಂದ ಅಂತಹ ವ್ಯಕ್ತಿಗಳನ್ನು ಗೌರವಿಸಲಾಗುತ್ತಿದೆ. ಪಂಜಾಬ್ ಮತ್ತು ಹರಿಯಾಣ ರೈತರ ಒಗ್ಗಟ್ಟು ನಮ್ಮ ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ’ ಎಂದು ಅವರು ಹೇಳಿದರು.

ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನದಿ ನೀರು ಹಂಚಿಕೆ ವಿವಾದದಿಂದಾಗಿ ಸಂಬಂಧ ಹದಗೆಟ್ಟಿತ್ತು. ಆದರೆ ರೈತ ಹೋರಾಟ ಅದನ್ನು ಮರೆಸಿ ಹೊಸ ಭಾಂದವ್ಯ ಬರೆದಿದೆ.


ಇದನ್ನೂ ಓದಿ: ಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...