Homeಮುಖಪುಟಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನದಿ ನೀರು ಹಂಚಿಕೆ ವಿವಾದದಿಂದಾಗಿ ಸಂಬಂಧ ಹದಗೆಟ್ಟಿತ್ತು. ಆದರೆ ರೈತ ಹೋರಾಟ ಅದನ್ನು ಮರೆಸಿ ಹೊಸ ಭಾಂದವ್ಯ ಬರೆದಿದೆ.

- Advertisement -
- Advertisement -

ಪ್ರತಿಭಟನಾ ನಿರತ ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆಯನ್ನು ನೀಡಿದೆ. ಹಾಗಾಗಿ ಟಿಕ್ರಿ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದ ಪಂಜಾಬಿನ ರೈತರು ಅಲ್ಲಿಂದ ನಿರ್ಗಮಿಸುತ್ತಿದ್ದು ಅದಕ್ಕೂ ಮೊದಲು ಹರಿಯಾಣದ ನಿವಾಸಿಗಳೊಂದಿಗಿನ ಬಾಂಧವ್ಯವನ್ನು ಬಲಪಡಿಸುವಂತಹ ವಿಶೇಷ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೇಕಾದ ಆಹಾರ ಪದಾರ್ಥಗಳು ಮತ್ತು ಉಚಿತ ವಸತಿ ಸೌಕರ್ಯವನ್ನು ಒದಗಿಸಿದವರನ್ನು ಗೌರವಿಸಲು, ಪಂಜಾಬಿನ ರೈತರು ಟಿಕ್ರಿ ಗಡಿ ಹತ್ತಿರದ ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದಾರೆ. ಧನ್ಯವಾದ ಅರ್ಪಿಸಿ ಪಂಜಾಬ್‌ಗೆ ಭೇಟಿ ನೀಡುವಂತೆಯೂ ಆಹ್ವಾನ ನೀಡುತ್ತಿದ್ದಾರೆ.

ಪಂಜಾಬ್ ರೈತ ಸಂಘಟನೆಗಳ ಸಮಿತಿಯು ಹೋರಾಟವನ್ನು ಬೆಂಬಲಿಸಿದ ಹರಿಯಾಣ ಮತ್ತು ಪಂಜಾಬ್‌ನ ಜನರಿಗೆ ಕೃತಜ್ಞತೆ ವ್ಯಕ್ತಪಡಿಸಲು ಬಿಕೆಯು (ಸಿಧುಪುರ್) ಮುಖಂಡರು ಟಿಕ್ರಿ ಬಳಿಯ ಬರಾಹಿ ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿನ ಕೆಲವು ಗ್ರಾಮಸ್ಥರಿಗೆ  ಸ್ಮರಣಿಕೆಗಳನ್ನು ನೀಡಿದರು. ರೈತ ಸಂಘಟನೆಗಳ ಜಂಟಿ ಸಮಿತಿಯು ಸುಮಾರು 20 ಸ್ಥಳೀಯರನ್ನು ಮತ್ತು ಪಂಜಾಬ್‌ನ ಅನೇಕರನ್ನು ಮುಖ್ಯ ಪ್ರತಿಭಟನಾ ಸ್ಥಳದಲ್ಲಿ ಅವರ ನಿರಂತರ ಪ್ರತಿಭಟನೆಯ ಯಶಸ್ಸಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಗೌರವಿಸಿತು.

‘ಪ್ರತಿಭಟನೆಯು ಈಗ ಕೊನೆಗೊಳ್ಳಲಿದೆ. ಆದ್ದರಿಂದ ನಮ್ಮೊಂದಿಗೆ ಬೆಂಬಲವಾಗಿ ನಿಂತ ಎಲ್ಲರಿಗೂ ಕೃತಜ್ಞತೆಯನ್ನು ವ್ಯಕ್ತಪಡಿಸುವುದು ನಮ್ಮ ಕರ್ತವ್ಯವಾಗಿದೆ. ಬರಾಹಿ ಗ್ರಾಮದ ನಿವಾಸಿಗಳು ಹಾಲು, ತರಕಾರಿಗಳು, ಹಣ್ಣುಗಳು ಮತ್ತು ಇತರ ಆಹಾರ ಪದಾರ್ಥಗಳ ನಿರಂತರ ಪೂರೈಕೆಯನ್ನು ಮಾಡಿದ್ದಾರೆ. ಈ ಸಹೋದರತ್ವದ ಬಾಂಧವ್ಯವನ್ನು ಬಲಪಡಿಸಲು ನಾವು ಅವರನ್ನು ಪಂಜಾಬ್‌ಗೆ ಆಹ್ವಾನಿಸಿದ್ದೇವೆ’ ಎಂದು ಬಿಕೆಯು ನಾಯಕ ಲಖ್ವಿಂದರ್ ಸಿಂಗ್ ಹೇಳಿದರು.

ವಕೀಲ ಅಮರವೀರ್ ಸಿಂಗ್ ಭುಲ್ಲಾರ್ ಅವರು ಪಂಜಾಬ್ ರೈತರಿಗೆ ಉಚಿತ ವಸತಿ ಒದಗಿಸಿದ್ದಕ್ಕಾಗಿ ಬಹದ್ದೂರ್ಗಡದ ವ್ಯಕ್ತಿಯನ್ನು ಗೌರವಿಸಿ, ‘ನಮಗೆ ಸಹಾಯ ಮಾಡಿದ ಕೊನೆಯ ವ್ಯಕ್ತಿಯನ್ನು ಗೌರವಿಸುವವರೆಗೂ ಇದು ಮುಂದುವರಿಯುತ್ತದೆ. ನಾವು ನಾಳೆ ಬೇರೆ ಹಳ್ಳಿಗೆ ಹೋಗುತ್ತೇವೆ’ ಎಂದು ತಿಳಿಸಿದರು.

ಬಿಕೆಯು (ರಾಜೇವಾಲ್) ನಾಯಕ ಪರ್ಗತ್ ಸಿಂಗ್, ‘ನಮ್ಮ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಹರಿಯಾಣ ನಿವಾಸಿಗಳು ನೀಡಿದ ಬೆಂಬಲವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ, ಆದ್ದರಿಂದ ಅಂತಹ ವ್ಯಕ್ತಿಗಳನ್ನು ಗೌರವಿಸಲಾಗುತ್ತಿದೆ. ಪಂಜಾಬ್ ಮತ್ತು ಹರಿಯಾಣ ರೈತರ ಒಗ್ಗಟ್ಟು ನಮ್ಮ ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ’ ಎಂದು ಅವರು ಹೇಳಿದರು.

ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನದಿ ನೀರು ಹಂಚಿಕೆ ವಿವಾದದಿಂದಾಗಿ ಸಂಬಂಧ ಹದಗೆಟ್ಟಿತ್ತು. ಆದರೆ ರೈತ ಹೋರಾಟ ಅದನ್ನು ಮರೆಸಿ ಹೊಸ ಭಾಂದವ್ಯ ಬರೆದಿದೆ.


ಇದನ್ನೂ ಓದಿ: ಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...