Homeಮುಖಪುಟಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನದಿ ನೀರು ಹಂಚಿಕೆ ವಿವಾದದಿಂದಾಗಿ ಸಂಬಂಧ ಹದಗೆಟ್ಟಿತ್ತು. ಆದರೆ ರೈತ ಹೋರಾಟ ಅದನ್ನು ಮರೆಸಿ ಹೊಸ ಭಾಂದವ್ಯ ಬರೆದಿದೆ.

- Advertisement -
- Advertisement -

ಪ್ರತಿಭಟನಾ ನಿರತ ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆಯನ್ನು ನೀಡಿದೆ. ಹಾಗಾಗಿ ಟಿಕ್ರಿ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದ ಪಂಜಾಬಿನ ರೈತರು ಅಲ್ಲಿಂದ ನಿರ್ಗಮಿಸುತ್ತಿದ್ದು ಅದಕ್ಕೂ ಮೊದಲು ಹರಿಯಾಣದ ನಿವಾಸಿಗಳೊಂದಿಗಿನ ಬಾಂಧವ್ಯವನ್ನು ಬಲಪಡಿಸುವಂತಹ ವಿಶೇಷ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೇಕಾದ ಆಹಾರ ಪದಾರ್ಥಗಳು ಮತ್ತು ಉಚಿತ ವಸತಿ ಸೌಕರ್ಯವನ್ನು ಒದಗಿಸಿದವರನ್ನು ಗೌರವಿಸಲು, ಪಂಜಾಬಿನ ರೈತರು ಟಿಕ್ರಿ ಗಡಿ ಹತ್ತಿರದ ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದಾರೆ. ಧನ್ಯವಾದ ಅರ್ಪಿಸಿ ಪಂಜಾಬ್‌ಗೆ ಭೇಟಿ ನೀಡುವಂತೆಯೂ ಆಹ್ವಾನ ನೀಡುತ್ತಿದ್ದಾರೆ.

ಪಂಜಾಬ್ ರೈತ ಸಂಘಟನೆಗಳ ಸಮಿತಿಯು ಹೋರಾಟವನ್ನು ಬೆಂಬಲಿಸಿದ ಹರಿಯಾಣ ಮತ್ತು ಪಂಜಾಬ್‌ನ ಜನರಿಗೆ ಕೃತಜ್ಞತೆ ವ್ಯಕ್ತಪಡಿಸಲು ಬಿಕೆಯು (ಸಿಧುಪುರ್) ಮುಖಂಡರು ಟಿಕ್ರಿ ಬಳಿಯ ಬರಾಹಿ ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿನ ಕೆಲವು ಗ್ರಾಮಸ್ಥರಿಗೆ  ಸ್ಮರಣಿಕೆಗಳನ್ನು ನೀಡಿದರು. ರೈತ ಸಂಘಟನೆಗಳ ಜಂಟಿ ಸಮಿತಿಯು ಸುಮಾರು 20 ಸ್ಥಳೀಯರನ್ನು ಮತ್ತು ಪಂಜಾಬ್‌ನ ಅನೇಕರನ್ನು ಮುಖ್ಯ ಪ್ರತಿಭಟನಾ ಸ್ಥಳದಲ್ಲಿ ಅವರ ನಿರಂತರ ಪ್ರತಿಭಟನೆಯ ಯಶಸ್ಸಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಗೌರವಿಸಿತು.

‘ಪ್ರತಿಭಟನೆಯು ಈಗ ಕೊನೆಗೊಳ್ಳಲಿದೆ. ಆದ್ದರಿಂದ ನಮ್ಮೊಂದಿಗೆ ಬೆಂಬಲವಾಗಿ ನಿಂತ ಎಲ್ಲರಿಗೂ ಕೃತಜ್ಞತೆಯನ್ನು ವ್ಯಕ್ತಪಡಿಸುವುದು ನಮ್ಮ ಕರ್ತವ್ಯವಾಗಿದೆ. ಬರಾಹಿ ಗ್ರಾಮದ ನಿವಾಸಿಗಳು ಹಾಲು, ತರಕಾರಿಗಳು, ಹಣ್ಣುಗಳು ಮತ್ತು ಇತರ ಆಹಾರ ಪದಾರ್ಥಗಳ ನಿರಂತರ ಪೂರೈಕೆಯನ್ನು ಮಾಡಿದ್ದಾರೆ. ಈ ಸಹೋದರತ್ವದ ಬಾಂಧವ್ಯವನ್ನು ಬಲಪಡಿಸಲು ನಾವು ಅವರನ್ನು ಪಂಜಾಬ್‌ಗೆ ಆಹ್ವಾನಿಸಿದ್ದೇವೆ’ ಎಂದು ಬಿಕೆಯು ನಾಯಕ ಲಖ್ವಿಂದರ್ ಸಿಂಗ್ ಹೇಳಿದರು.

ವಕೀಲ ಅಮರವೀರ್ ಸಿಂಗ್ ಭುಲ್ಲಾರ್ ಅವರು ಪಂಜಾಬ್ ರೈತರಿಗೆ ಉಚಿತ ವಸತಿ ಒದಗಿಸಿದ್ದಕ್ಕಾಗಿ ಬಹದ್ದೂರ್ಗಡದ ವ್ಯಕ್ತಿಯನ್ನು ಗೌರವಿಸಿ, ‘ನಮಗೆ ಸಹಾಯ ಮಾಡಿದ ಕೊನೆಯ ವ್ಯಕ್ತಿಯನ್ನು ಗೌರವಿಸುವವರೆಗೂ ಇದು ಮುಂದುವರಿಯುತ್ತದೆ. ನಾವು ನಾಳೆ ಬೇರೆ ಹಳ್ಳಿಗೆ ಹೋಗುತ್ತೇವೆ’ ಎಂದು ತಿಳಿಸಿದರು.

ಬಿಕೆಯು (ರಾಜೇವಾಲ್) ನಾಯಕ ಪರ್ಗತ್ ಸಿಂಗ್, ‘ನಮ್ಮ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಹರಿಯಾಣ ನಿವಾಸಿಗಳು ನೀಡಿದ ಬೆಂಬಲವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ, ಆದ್ದರಿಂದ ಅಂತಹ ವ್ಯಕ್ತಿಗಳನ್ನು ಗೌರವಿಸಲಾಗುತ್ತಿದೆ. ಪಂಜಾಬ್ ಮತ್ತು ಹರಿಯಾಣ ರೈತರ ಒಗ್ಗಟ್ಟು ನಮ್ಮ ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ’ ಎಂದು ಅವರು ಹೇಳಿದರು.

ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನದಿ ನೀರು ಹಂಚಿಕೆ ವಿವಾದದಿಂದಾಗಿ ಸಂಬಂಧ ಹದಗೆಟ್ಟಿತ್ತು. ಆದರೆ ರೈತ ಹೋರಾಟ ಅದನ್ನು ಮರೆಸಿ ಹೊಸ ಭಾಂದವ್ಯ ಬರೆದಿದೆ.


ಇದನ್ನೂ ಓದಿ: ಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...