Homeಅಂತರಾಷ್ಟ್ರೀಯ30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

- Advertisement -
- Advertisement -

ಕಳೆದ ಮೂರು ದಶಕಗಳಿಗೂ ಹೆಚ್ಚು ಸಮಯದಿಂದ ಅಮೆರಿಕದಲ್ಲಿ ನೆಲೆಸಿದ್ದ 73 ವರ್ಷದ ಪಂಜಾಬಿ ಮಹಿಳೆ
ಹರ್ಜಿತ್ ಕೌರ್ ಅವರನ್ನು ಈ ವಾರ ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಇದನ್ನು ವಲಸಿಗರ ಹಕ್ಕುಗಳ ಕಾರ್ಯಕರ್ತರು ‘ಕ್ರೂರ ಮತ್ತು ಅನಗತ್ಯ’ ಎಂದು ಕರೆದಿದ್ದಾರೆ.

ಕೌರ್ ಸೆಪ್ಟೆಂಬರ್ 23ರಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ ಎಂದು indianexpress.com ವರದಿ ಮಾಡಿದೆ.

ಭಾನುವಾರ (ಸೆ.21) ರಾತ್ರಿ ಕೌರ್ ಅವರನ್ನು ಯುಎಸ್ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಅಧಿಕಾರಿಗಳು ಅಮೆರಿಕದ ಬೇಕರ್ಸ್‌ಫೀಲ್ಡ್‌ನಿಂದ ಲಾಸ್ ಏಂಜಲೀಸ್‌ಗೆ ಇದ್ದಕ್ಕಿದ್ದಂತೆ ಕರೆದೊಯ್ದರು. ನಂತರ ಚಾರ್ಟರ್ಡ್ ವಿಮಾನದಲ್ಲಿ ಜಾರ್ಜಿಯಾಕ್ಕೆ ಕಳುಹಿಸಿದರು. ಅಲ್ಲಿಂದ ಭಾರತಕ್ಕೆ ಗಡಿಪಾರು ಮಾಡಿದರು ಎಂದು ಕೌರ್ ಪರ ವಕೀಲ ದೀಪಕ್ ಅಹ್ಲುವಾಲಿಯಾ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕೌರ್ ಅವರ ಗಡಿಪಾರು ಬಹಳ ಕ್ರೂರವಾಗಿ ನಡೆದಿದೆ. ಅವರನ್ನು ದೀರ್ಘ ಸಮಯ ಸಂಕೋಲೆ, ಬರಿಯ ಕಾಂಕ್ರೀಟ್ ಕೊಠಡಿಗಳಲ್ಲಿ ಬಂಧಿಸಲಾಗಿತ್ತು. ಮೂಲಭೂತ ಸೌಕರ್ಯಗಳನ್ನು ನಿರಾಕರಿಸಲಾಗಿತ್ತು. ಕೊನೆಯದಾಗಿ ಆಕೆಗೆ ತನ್ನ ಕುಟುಂಬಕ್ಕೆ ವಿದಾಯ ಹೇಳಲು, ಆಕೆಯ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಕೂಡ ಅವಕಾಶ ನೀಡಿರಲಿಲ್ಲ. ಈ ಗಡಿಪಾರು ಅಮಾನವೀಯ ಎಂದು ಅಹ್ಲುವಾಲಿಯಾ ವಿವರಿಸಿದ್ದಾರೆ.

ಕೌರ್ ಅವರ ಕುಟುಂಬವು ಅವರ ಪ್ರಯಾಣದ ದಾಖಲೆಗಳನ್ನು ಸಿದ್ದಗೊಳಿಸಿ ಅವರನ್ನು ವಾಣಿಜ್ಯ ವಿಮಾನದಲ್ಲಿ ವಾಪಸ್ ಕಳುಹಿಸುವಂತೆ ವಿನಂತಿಸಿತ್ತು. ಕೌರ್ ಅವರನ್ನು ವಾಣಿಜ್ಯ ವಿಮಾನದಲ್ಲಿ ಕಳುಹಿಸಿ, ಕೊನೆಯದಾಗಿ ಕೆಲ ಗಂಟೆಗಳ ಕಾಲ ಕುಟುಂಬಕ್ಕೆ ಭೇಟಿಯಾಗಲು ಅವಕಾಶ ಮಾಡಿಕೊಡಿ ಎಂದು ಎರಡು ಬೇಡಿಕೆಗಳನ್ನು ಅಧಿಕಾರಿಗಳ ಮುಂದೆ ಇಡಲಾಗಿತ್ತು. ಆದರೆ, ಅಧಿಕಾರಿಗಳು ಅವುಗಳನ್ನು ತಿರಸ್ಕರಿಸಿದರು ಎಂದು ಅಹ್ಲುವಾಲಿಯಾ ತಿಳಿಸಿದ್ದಾರೆ.

ಹರ್ಜಿತ್ ಕೌರ್ ಅವರ ಗಡಿಪಾರಿಗೆ ವಿರೋಧ ವ್ಯಕ್ತಪಡಿಸಿದ್ದ ಸಿಖ್ ಒಕ್ಕೂಟ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿರುವ ವೃದ್ಧ ವಿಧವೆಯ ಗಡಿಪಾರು ಸ್ವೀಕಾರ್ಹವಲ್ಲ ಎಂದಿತ್ತು.

ಸೆಪ್ಟೆಂಬರ್ 8ರಂದು ಕೌರ್ ಅವರನ್ನು ಬಂಧಿಸಲಾಗಿತ್ತು. ಸ್ಯಾನ್ ಫ್ರಾನ್ಸಿಸ್ಕೋ ಐಸಿಇ ಕಚೇರಿಯಲ್ಲಿ ನಿಯಮಿತ ತಪಾಸಣೆಗಾಗಿ ಹೋಗಿದ್ದಾಗ ಬಂಧಿಸಿ, ಫ್ರೆಸ್ನೋ ಮತ್ತು ಬೇಕರ್ಸ್‌ಫೀಲ್ಡ್‌ನಲ್ಲಿರುವ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಈ ವೇಳೆ ಅವರಿಗೆ ವೈದ್ಯರು ನಿರಂತರವಾಗಿ ತೆಗೆದುಕೊಳ್ಳಲು ಸೂಚಿಸಿರುವ ಔಷಧಿಗಳನ್ನು ಎರಡು ವಾರಗಳ ನಿರಾಕರಿಸಿಲಾಗಿತ್ತು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಕೌರ್ 1992ರಲ್ಲಿ ಒಂಟಿ ತಾಯಿಯಾಗಿ ಅಮೆರಿಕಕ್ಕೆ ವಲಸೆ ಹೋದವರು. ಭಾರತೀಯ ಸೀರೆ ಅಂಗಡಿಯಲ್ಲಿ ಹೊಲಿಗೆಗಾರ್ತಿಯಾಗಿ ಕೆಲಸ ಮಾಡಿದವರು. ಅಮೆರಿಕ ಸರ್ಕಾರಕ್ಕೆ ತೆರಿಗೆಗಳನ್ನೂ ಪಾವತಿಸಿದವರು. ಅಲ್ಲಿನ ಗುರುದ್ವಾರಗಳಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡಿದವರು.

ಅವರ ಆಶ್ರಯ ಕೋರಿಕೆಯನ್ನು ತಿರಸ್ಕರಿಸಿ 2005 ರಲ್ಲಿ ಗಡಿಪಾರು ಆದೇಶ ಹೊರಡಿಸಲಾಗಿತ್ತು. ಆದರೂ, 13 ವರ್ಷಗಳಿಗಿಂತ ಹೆಚ್ಚು ಕಾಲ ಅವರು ಐಸಿಇ ನಿಯಮಗಳನ್ನು ಪಾಲಿಸಿಕೊಂಡು, ಚೆಕ್-ಇನ್‌ಗಳಿಗೆ ಹಾಜರಾಗಿಕೊಂಡು ಹಾಗೂ ಭಾರತೀಯ ಕಾನ್ಸುಲೇಟ್‌ನಿಂದ ವಿಳಂಬವಾದ ಪ್ರಯಾಣ ದಾಖಲೆಗಳಿಗಾಗಿ ಕಾಯುತ್ತಾ ಕೆಲಸದ ಪರವಾನಗಿಗಳನ್ನು ನವೀಕರಿಸಿಕೊಂಡು ಇದ್ದರು.

ಅಮೆರಿಕದೊಂದಿಗಿನ ದೀರ್ಘಕಾಲದ ಸಂಬಂಧ ಮತ್ತು ಶುದ್ಧ ದಾಖಲೆಯ ಹೊರತಾಗಿಯೂ, ಹರ್ಜಿತ್ ಕೌರ್ ಅವರ ಅನಿರೀಕ್ಷಿತ ಗಡಿಪಾರು ವಿರೋಧಿಸಿ ಕ್ಯಾಲಿಫೋರ್ನಿಯಾದಲ್ಲಿ ಪ್ರತಿಭಟನೆಗಳು ನಡೆದಿವೆ. ಎಲ್ ಸೋಬ್ರಾಂಟೆಯಲ್ಲಿ ನೂರಾರು ಜನರು ಒಟ್ಟುಗೂಡಿ, “ನಮ್ಮ ಅಜ್ಜಿಯನ್ನು ಬಿಟ್ಟು ಬಿಡಿ, ಹರ್ಜಿತ್ ಕೌರ್ ಇಲ್ಲಿಗೆ ಸೇರಿದವರು” ಎಂದು ಬರೆದಿರುವ ಫಲಕಗಳನ್ನು ಹಿಡಿದು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಯುಎಸ್‌ ಕಾಂಗ್ರೆಸ್ ಸದಸ್ಯ ಜಾನ್ ಗರಮೆಂಡಿ, ಕ್ಯಾಲಿಫೋರ್ನಿಯಾ ಸೆನೆಟರ್ ಜೆಸ್ಸಿ ಅರೆಗ್ವಿನ್ ಮತ್ತು ಸ್ಥಳೀಯ ನಾಯಕರು ಐಸಿಇಗೆ ತನ್ನ ಕ್ರಮವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. ಕೌರ್ ಅವರ ಬಂಧನ ‘ತಪ್ಪಾದ ಆದ್ಯತೆ’ ಎಂದು ಹೇಳಿದ್ದಾರೆ.

Courtesy : indianexpress.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...